Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

09/05/2025 11:00 AM

BIG NEWS : ಇಂದು ನಡೆಯುವ ಸಂಪುಟ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಭವಿಷ್ಯ ನಿರ್ಧಾರ

09/05/2025 10:50 AM

BREAKING : ಸಚಿವ ಸಂಪುಟದಲ್ಲಿ ಹೆಚ್ಚಿನ ಭದ್ರತೆ ಕುರಿತು ಚರ್ಚಿಸಲಾಗುತ್ತೆ : ಗೃಹ ಸಚಿವ ಜಿ.ಪರಮೇಶ್ವರ್

09/05/2025 10:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದಲ್ಲಿ ‘393 ಹುಲಿ’ಗಳಿವೆ: ಸಮೀಕ್ಷೆ ವರದಿ | Tiger In Karnataka
KARNATAKA

ಕರ್ನಾಟಕದಲ್ಲಿ ‘393 ಹುಲಿ’ಗಳಿವೆ: ಸಮೀಕ್ಷೆ ವರದಿ | Tiger In Karnataka

By kannadanewsnow0927/03/2025 8:06 PM

ಬೆಂಗಳೂರು: ಕರ್ನಾಟಕದಲ್ಲಿ ಒಟ್ಟು 393 ಹುಲಿಗಳಿದ್ದಾವೆ ಎಂಬುದಾಗಿ ಕರ್ನಾಟಕ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳ ಹುಲಿಗಳ ಸಮೀಕ್ಷೆ- 2024ರ ವರದಿಯಿಂದ ತಿಳಿದು ಬಂದಿದೆ.

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ಇವರ ಮಾರ್ಗಸೂಚಿಗಳ ಪ್ರಕಾರ, ಅಖಿಲ ಭಾರತ ಹುಲಿ ಗಣತಿಯ (AITE) ಭಾಗವಾಗಿ, ಎಲ್ಲಾ ರಾಜ್ಯಗಳ ಹುಲಿ ವಾಸಸ್ಥಾನ ಪ್ರದೇಶಗಳಲ್ಲಿ ಪ್ರತಿ 4 ವರ್ಷಗಳಿಗೊಮ್ಮೆ ಹುಲಿ, ಆನೆ, ಇತರೆ ಬೇಟೆ ಹಾಗೂ ಸಸ್ಯಾಹಾರಿ ಪ್ರಾಣಿಗಳ ಗಣತಿಯನ್ನು ನಡೆಸಲಾಗುತ್ತದೆ. ದೇಶದ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಹುಲಿ ಮತ್ತು ಸಸ್ಯಾಹಾರಿ ಪ್ರಾಣಿಗಳ ವಾರ್ಷಿಕ ಮೇಲ್ವಿಚಾರಣೆಯ ಭಾಗವಾಗಿ, NTCA ಪ್ರತಿ ವರ್ಷ ಎಲ್ಲಾ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ Phase IV ಸಮೀಕ್ಷೆಗಳನ್ನು ನಡೆಸಲು ಸಲಹೆ ನೀಡಿದೆ.

ಹುಲಿ ಸಂರಕ್ಷಣದಲ್ಲಿ ಮುಂಚೂಣಿಯಲ್ಲಿರುವ ರಾಜ್ಯವಾಗಿರುವ ಕರ್ನಾಟಕ, ಮಾರ್ಗಸೂಚಿಗಳನ್ನು ನಿಷ್ಠೆಯಿಂದ ಅನುಸರಿಸಿ 2015ರಿಂದ ಈ ಸಮೀಕ್ಷೆಗಳನ್ನು ನಿರಂತರವಾಗಿ ನಡೆಸಿಕೊಂಡು ಬಂದಿದೆ. 2023ರ ನವೆಂಬರ್‌ನಿಂದ 2024ರ ಫೆಬ್ರವರಿಯವರೆಗೆ ಕರ್ನಾಟಕ ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ – ನಾಗರಹೊಳೆ, ಬಂಡೀಪುರ, ಭದ್ರ, ಬಿಳಿಗಿರಿರಂಗನಾಥ ಸ್ವಾಮಿ ಬೆಟ್ಟ (BRT) ಮತ್ತು ಕಾಳಿ (ದಾಂಡೇಲಿ-ಅಂಶಿ) ಪ್ರದೇಶಗಳಲ್ಲಿ ಈ Phase IV ಸಮೀಕ್ಷೆಗಳು ಕೈಗೊಳ್ಳಲಾಯಿತು

Phase IV ಸಮೀಕ್ಷೆಗಳು ಮುಖ್ಯವಾಗಿ ಕ್ಯಾಮೆರಾ (Camera Trap) ಸಮೀಕ್ಷೆಯನ್ನು ಒಳಗೊಂಡಿದ್ದು, ಇದು ಹುಲಿ ಹಾಗೂ ಇತರೆ ಬೇಟೆ ಪ್ರಾಣಿಗಳ ಸಂಖ್ಯೆ ಅಂದಾಜಿಗೆ ಉಪಯೋಗಿಸಲಾಗುತ್ತದೆ. ಸಸ್ಯಾಹಾರಿ ಪ್ರಾಣಿಗಳ ಸಂಖ್ಯೆ ಅಂದಾಜು ಮಾಡಲು ಲೈನ್ ಟ್ರಾನ್ಸೆಕ್ಟ್ (Line Transect) ಸಮೀಕ್ಷೆ ಬಳಸಲಾಗುತ್ತದೆ.

ಕರ್ನಾಟಕ ಅರಣ್ಯ ಇಲಾಖೆ, ಬೆಂಗಳೂರಿನ ಅರಣ್ಯ ಭವನದಲ್ಲಿ ಸ್ಥಾಪಿಸಿರುವ ಕರ್ನಾಟಕ ವನ್ಯಜೀವಿ ತಾಂತ್ರಿಕ ಘಟಕದ ಮೂಲಕ ಈ ಸಮೀಕ್ಷೆಯ ಮಾಹಿತಿಯನ್ನು ವಿಶ್ಲೇಷಿಸಿ, “ಕರ್ನಾಟಕ – 2024 ಹುಲಿಗಳ, ಸಸ್ಯಾಹಾರಿ ಹಾಗೂ ಇತರ ಪ್ರಾಣಿಗಳ ವಾರ್ಷಿಕ ವರದಿ” ಪ್ರಕಟಿಸಿದೆ.

ಒಟ್ಟು 2160 ಕ್ಯಾಮೆರಾ (Camera Trap) ಗಳನ್ನು ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಅಳವಡಿಸಲಾಗಿದ್ದು, ಇದರಿಂದ ಸುಮಾರು 61 ಲಕ್ಷ ವನ್ಯಜೀವಿ ಚಿತ್ರಗಳು ಪಡೆದುಕೊಳ್ಳಲಾಯಿತು. ಹುಲಿ ಚಿತ್ರಗಳನ್ನು AI ಆಧಾರಿತ ತಂತ್ರಾಂಶದ ಮೂಲಕ ಪ್ರತ್ಯೇಕಿಸಲಾಗಿದ್ದು, ಪ್ರತಿ ಹುಲಿಯ ಎರಡು ಬದಿಯಲ್ಲಿನ (Flanks) ವಿಭಿನ್ನ ಪಟ್ಟೆ ವಿನ್ಯಾಸವನ್ನು ಗುರುತಿಸುವ ಮೂಲಕ ಪ್ರತ್ಯೇಕ ಹುಲಿಗಳನ್ನು ಗುರುತಿಸಲಾಗುತ್ತದೆ.

ಕರ್ನಾಟಕದ 5 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಹುಲಿಗಳ ಸ್ಥಿತಿಯ ಹೋಲಿಕೆ (2014 ರಿಂದ 2024):

Year 2014 2018 2020 2022 2023 2024
Camera Points 578 1776 1818 2179 2162 2160
Unique Tigers Captured 226 332 365 376 384 373
Estimated Tiger Population 261 472 403 417 408 393

2024ರ Phase IV ಸಮೀಕ್ಷೆಯ ಪ್ರಕಾರ, ಕರ್ನಾಟಕದ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಟ್ಟು 393 ಹುಲಿಗಳ ಸಂಖ್ಯೆ ದಾಖಲಾಗಿದ್ದು, ಕೆಲವು ಹುಲಿಗಳು ಹುಲಿ ಸಂರಕ್ಷಿತ ಪ್ರದೇಶಗಳಿಂದ ಇತರ ಹುಲಿ ವಾಸಸ್ಥಾನ ಪ್ರದೇಶಗಳತ್ತ ವಲಸೆ ಹೋಗುತ್ತಿರುವುದು ಗಮನಿಸಲಾಗಿದೆ. ಹುಲಿಗಳ ಚಲನಚಟುವಟಿಕೆಗಳ ಕಾರಣದಿಂದ, 5 ಹುಲಿ ಸಂರಕ್ಷಣೆ ಪ್ರದೇಶಗಳ ವಾರ್ಷಿಕ ಹುಲಿ ಸಮೀಕ್ಷೆ ಫಲಿತಾಂಶದಲ್ಲಿ ಏರುಪೇರುಗಳನ್ನು ಕಾಣಬಹುದು. ಆದರೆ, ಇಡೀ ರಾಜ್ಯದಲ್ಲಿ ಪ್ರತಿ ನಾಲ್ಕು ವರ್ಷಕ್ಕೊಮ್ಮೆ ಸಮೀಕ್ಷೆ ಮಾಡಲಾಗುತ್ತಿದ್ದು, 5 ಹುಲಿ ಸಂರಕ್ಷಿತ ಪ್ರದೇಶಗಳು ಹಾಗೂ ಇತರ ಹುಲಿ ವಾಸಸ್ಥಾನಗಳಲ್ಲೂ ಹುಲಿಗಳ ಸಂಖ್ಯೆ ಕ್ರಮೇಣ ಏರಿಕೆಯಾಗಿದೆ. ಮುಂಬರುವ ಅಖಿಲ ಭಾರತ ಹುಲಿ ಗಣತಿ (AITE) – 2026, ಹುಲಿ ಸಂರಕ್ಷಿತ ಪ್ರದೇಶಗಳಿಂದ ವಲಸೆ ಹೋದ ಹುಲಿಗಳು ಇತರ ಸಂರಕ್ಷಿತ ಪ್ರದೇಶಗಳಲ್ಲಿ ಸ್ಥಾಪಿತವಾಗಿರುವ ಬಗ್ಗೆ ಸ್ಪಷ್ಟವಾದ ಚಿತ್ರಣವನ್ನು ನೀಡುವ ನಿರೀಕ್ಷೆಯಿದೆ.

ಕರ್ನಾಟಕ ಅರಣ್ಯ ಇಲಾಖೆ ತನ್ನ ರಾಜ್ಯಮಟ್ಟದ ವನ್ಯಜೀವಿ ತಾಂತ್ರಿಕ ಘಟಕ 2013ರಿಂದ ಪ್ರತಿ ವರ್ಷ ಕ್ಯಾಮೆರಾ ಸಮೀಕ್ಷೆಗಳಲ್ಲಿ ಸೆರೆಹಿಡಿದ ಹುಲಿಗಳ ಮಾಸ್ಟರ್ ಡೇಟಾಬೇಸ್ ಅನ್ನು ನಿರ್ವಹಿಸುತ್ತಿದ್ದು, ಇದು ಪ್ರತಿ ಹುಲಿಯ ವಿವರಗಳನ್ನು, ವಯಸ್ಸು, ಲಿಂಗ, ಕ್ಷೇತ್ರ ಪರಿಮಿತಿ (Territory), ವಲಸೆ ಚಲನ-ವಲನಗಳ ಬಗ್ಗೆ ಮಾಹಿತಿಯನ್ನು ಒಳಗೊಂಡಿದೆ. ಈ ಡೇಟಾಬೇಸ್ ಹುಲಿಗಳನ್ನು ಗುರುತಿಸಲು ಪ್ರಮುಖ ನಿರ್ವಹಣಾ ಉಪಕರಣವಾಗಿದ್ದು, ಮಾನವ-ಹುಲಿ ಸಂಘರ್ಷದಲ್ಲಿ ಭಾಗಿಯಾಗಿರುವ ಹುಲಿಗಳನ್ನು ಗುರುತಿಸುವುದು, ಗಾಯಗೊಂಡ ಅಥವಾ ಸಾವನ್ನಪ್ಪಿದ ಹುಲಿಗಳನ್ನು ಅವುಗಳ ಪಟ್ಟೆ ವಿನ್ಯಾಸಗಳನ್ನು ಹೊಂದಾಣಿಕೆ ಮಾಡುವ ಮೂಲಕ ಪತ್ತೆ ಹಚ್ಚುವುದು ಮುಂತಾದ ಕಾರ್ಯಗಳಿಗೆ ಸಹಾಯ ಮಾಡುತ್ತದೆ.

ರಾಜ್ಯದ ಜನತೆ ಗಮನಕ್ಕೆ: ಮಾ.31 ‘ಯಶಸ್ವಿನಿ ಯೋಜನೆ’ಯಡಿ ನೋಂದಣಿಗೆ ಕೊನೆ ದಿನ

ಜಾತಿಗಣತಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ: ಮಾಜಿ ಸಚಿವ ಹೆಚ್.ಆಂಜನೇಯ ಸ್ವಾಗತ

Share. Facebook Twitter LinkedIn WhatsApp Email

Related Posts

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

09/05/2025 11:00 AM4 Mins Read

BIG NEWS : ಇಂದು ನಡೆಯುವ ಸಂಪುಟ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಭವಿಷ್ಯ ನಿರ್ಧಾರ

09/05/2025 10:50 AM1 Min Read

BREAKING : ಸಚಿವ ಸಂಪುಟದಲ್ಲಿ ಹೆಚ್ಚಿನ ಭದ್ರತೆ ಕುರಿತು ಚರ್ಚಿಸಲಾಗುತ್ತೆ : ಗೃಹ ಸಚಿವ ಜಿ.ಪರಮೇಶ್ವರ್

09/05/2025 10:45 AM1 Min Read
Recent News

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

09/05/2025 11:00 AM

BIG NEWS : ಇಂದು ನಡೆಯುವ ಸಂಪುಟ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಭವಿಷ್ಯ ನಿರ್ಧಾರ

09/05/2025 10:50 AM

BREAKING : ಸಚಿವ ಸಂಪುಟದಲ್ಲಿ ಹೆಚ್ಚಿನ ಭದ್ರತೆ ಕುರಿತು ಚರ್ಚಿಸಲಾಗುತ್ತೆ : ಗೃಹ ಸಚಿವ ಜಿ.ಪರಮೇಶ್ವರ್

09/05/2025 10:45 AM

BREAKING: ಚಂಡೀಗಢದಲ್ಲಿ ಮೊಳಗಿದ ಏರ್ ರೈಡ್ ಸೈರನ್ , ಜನರು ಮನೆಯೊಳಗೆ ಇರಲು ಸೂಚನೆ

09/05/2025 10:38 AM
State News
KARNATAKA

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

By kannadanewsnow0509/05/2025 11:00 AM KARNATAKA 4 Mins Read

ಲಕ್ಷ್ಮಿಯನ್ನು ಯಾವೆಲ್ಲಾ ಮಂತ್ರಗಳ ಪಠಣೆಯಿಂದ ಆರಾಧಿಸಬೇಕು ಗೊತ್ತಾ..? ಲಕ್ಷ್ಮಿ ಮಂತ್ರಗಳೊಂದಿಗೆ ಲಕ್ಷ್ಮಿಯನ್ನು ಆರಾಧಿಸಿದರೆ ಸಿರಿ, ಸಂಪತ್ತು, ಅಷ್ಟೈಶ್ವರ್ಯ ನಿಮ್ಮದಾಗುತ್ತದೆ. ಯಾವುದೇ…

BIG NEWS : ಇಂದು ನಡೆಯುವ ಸಂಪುಟ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಭವಿಷ್ಯ ನಿರ್ಧಾರ

09/05/2025 10:50 AM

BREAKING : ಸಚಿವ ಸಂಪುಟದಲ್ಲಿ ಹೆಚ್ಚಿನ ಭದ್ರತೆ ಕುರಿತು ಚರ್ಚಿಸಲಾಗುತ್ತೆ : ಗೃಹ ಸಚಿವ ಜಿ.ಪರಮೇಶ್ವರ್

09/05/2025 10:45 AM

BREAKING : ಯುದ್ಧ ಯಾರಿಗೂ ಬೇಡ, ಯುದ್ಧ ಆಗಬೇಕು ಅಂತ ಬಯಸೋದು ಸರಿಯಲ್ಲ : ಸಚಿವ ದಿನೇಶ್ ಗುಂಡೂರಾವ್

09/05/2025 10:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.