Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೆಹಲಿ ಕೆಂಪುಕೋಟೆ ಬಾಂಬ್ ಸ್ಫೋಟ: 9 ಎಂಎಂ ಕಾರ್ಟ್ರಿಡ್ಜ್ ಪತ್ತೆ, ಭಯೋತ್ಪಾದಕರ ನಂಟು ದೃಢಪಡಿಸಿದ NIA | Red Fort blast

16/11/2025 9:01 AM

ಬೆಂಗಳೂರು ಕನ್ಸರ್ಟ್‌ನಲ್ಲಿ ಅಕಾನ್ ಪ್ಯಾಂಟ್ ಕೆಳಕ್ಕೆ ಎಳೆದ ಅಭಿಮಾನಿಗಳು | Watch video

16/11/2025 8:51 AM

‘RSS’ ಗೆ ಸೆಡ್ಡು ಹೊಡೆದಿದ್ದ ಸಚಿವ ಪ್ರಿಯಾಂಕ್ ಖರ್ಗೆ ತವರಲ್ಲಿ ಇಂದು ‘ಪಥ ಸಂಚಲನ’ : 1000 ಪೊಲೀಸ್ ಸಿಬ್ಬಂದಿ ನಿಯೋಜನೆ

16/11/2025 8:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾಗಿಲ್ಲ: ಸಚಿವ ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟನೆ
KARNATAKA

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾಗಿಲ್ಲ: ಸಚಿವ ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟನೆ

By kannadanewsnow0919/08/2025 6:54 PM

ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿಲ್ಲ. ಹಾಗಾಗಿ ಜನರು ಆತಂಕಪಡುವ ಅಗತ್ಯವಿಲ್ಲ. ಬದಲಾದ ಜೀವನಶೈಲಿ ಹಾಗೂ ಆಹಾರ ಕ್ರಮ ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗಿದ್ದು, ಜನರಲ್ಲಿ ಜಾಗೃತಿ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿಲ್ಲ. ಹಾಗಾಗಿ ಜನರು ಆತಂಕಪಡುವ ಅಗತ್ಯವಿಲ್ಲ. ಬದಲಾದ ಜೀವನಶೈಲಿ ಹಾಗೂ ಆಹಾರ ಕ್ರಮ ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗಿದ್ದು, ಜನರಲ್ಲಿ ಜಾಗೃತಿ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ… pic.twitter.com/HAysSxeHRT

— DIPR Karnataka (@KarnatakaVarthe) August 19, 2025

ವಿಧಾನ ಪರಿಷದ್ ನಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರ ಪ್ರಶ್ನೆ ಉತ್ತರಿಸಿದ ಅವರು, ಇತ್ತೀಚೆಗೆ ಹೃದಯಾಘಾತ, ಪ್ರಕರಣಗಳ ಸಂಖ್ಯೆ ಹೆಚ್ಚಳದ ಆತಂಕ ಎಲ್ಲರಲ್ಲೂ ಮನೆ ಮಾಡಿದೆ. ಜಯದೇವ ಆಸ್ಪತ್ರೆಯಲ್ಲಿ ಜನರು ಪ್ರತಿನಿತ್ಯ ಬಂದು ಹೃದಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಇದರ ಪ್ರಮಾಣ ಶೇ.25ರಷ್ಟು ಏರಿಕೆಯಾಗಿದೆ ಎಂದು ಪಾಟೀಲ್ ಮಾಹಿತಿ ನೀಡಿದರು.

ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಹೃದಯಘಾತಗಳ ಸಂಖ್ಯೆ ಹೆಚ್ಚಳವಾಗಿದೆ ಎಂಬ ಆತಂಕ ಜನರಲ್ಲಿ ಮೂಡಿದೆ. ಇದು ತಪ್ಪು ಗ್ರಹಿಕೆ. ವಾಸ್ತವವಾಗಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಸರಾಸರಿ ಪ್ರಮಾಣದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಶೇ.5ರಿಂದ 6ರಷ್ಟು ಪ್ರಕರಣಗಳು ಹೃದಯಾಘಾತಕ್ಕೆ ಸಂಬಂಧಿಸಿದವು. ಈ ವರ್ಷವು ಇಷ್ಟೇ ಪ್ರಮಾಣದಲ್ಲಿ ಇದೆ ಎಂದು ಸಚಿವರು ಹೇಳಿದರು.

ಬದಲಾದ ಜೀವನಶೈಲಿ, ಅಧಿಕ ಒತ್ತಡ, ಬೊಜ್ಜು, ಮದ್ಯಪಾನ, ಧೂಮಪಾನ, ಡ್ರಗ್ ಸೇವನೆ, ಕುಟುಂಬದ ಹಿನ್ನಲೆ ಇತ್ಯಾದಿ ಕಾರಣಗಳಿಂದ ಹೃದಯಘಾತಗಳು ಸಂಭವಿಸಿವೆ. ಯಾವುದೋ ಒಂದು ಪ್ರಕರಣವನ್ನು ಆಧಾರವಾಗಿಟ್ಟುಕೊಂಡು ಜನತೆ ಆತಂಕಕ್ಕೆ ಒಳಗಾಗಬಾರದು ಎಂದು ಪಾಟೀಲ್ ಸಲಹೆ ಮಾಡಿದರು.

ಕೋವಿಡ್ ನಂತರ ಹೃದಯಘಾತ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಗುಮಾನಿಯೂ ಇದೆ. ವಾಸ್ತವವಾಗಿ ಇದಕ್ಕೂ ಅದಕ್ಕೂ ಸಂಬಂಧವೇ ಇಲ್ಲ. ಪ್ರತಿದಿನ ವ್ಯಾಯಾಮ, ಪ್ರಾಣಯಾಮ, ಸರಿಯಾದ ಸಮಯಕ್ಕೆ ನಿದ್ದೆ, ಒತ್ತಡ ಇಲ್ಲದಿರುವುದು, ಖಿನ್ನತೆ ಒಳಗಾಗದೆ ಸಮತೋಲನ ಕಾಯ್ದುಕೊಂಡರೆ ಯಾವುದೇ ಆರೋಗ್ಯ ಸಮಸ್ಯೆಗಳು ಬರುವುದಿಲ್ಲ ಎಂದು ಸಚಿವರು ಸಲಹೆ ಕೊಟ್ಟರು.

ಈ ಪ್ರಕರಣಗಳ ಕುರಿತಂತೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾದ ಡಾ.ಕೆ ಎಸ್ ರವೀಂದ್ರನಾಥ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಾರ್ಯಪಡೆಯನ್ನು ಸಹ ರಚಿಸಿತ್ತು. ಸರ್ಕಾರಕ್ಕೆ ನೀಡಿರುವ ವರದಿಯಲ್ಲಿ ಜನರ ಊಹೆಗೂ ಇದಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಜನರು ಮೊದಲು ವದಂತಿಗಳಿಗೆ ಕಿವಿಗೊಡುವುದನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದರು.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಜೊತೆ ಕಡ್ಡಾಯವಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ತೆರೆಯಬೇಕೆಂಬುದು ನಮ ಸರ್ಕಾರದ ಸಿದ್ದಾಂತವಾಗಿದೆ. ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಈ ಆಸ್ಪತ್ರೆಗಳು ಕಾರ್ಯಾರಂಭ ಮಾಡಿವೆ.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಸ್ಥಾಪನೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚನೆ ಕೊಟ್ಟಿದ್ದಾರೆ. ಈ ನಿಯಮವನ್ನು ನಾವು ಈಗಾಗಲೇ ಅಳವಡಿಸಿಕೊಂಡು ಕಾರ್ಯಾರಂಭ ಮಾಡಿದ್ದೇವೆ. ಎಲ್ಲಾ ಜಿಲ್ಲೆಗಳಲ್ಲೂ ಸೂಪರ್ ಸ್ಪೆಷಾಲಿಟಿ ಜೊತೆಗೆ ಟ್ರಾಮಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದರು.

ಬೆಂಗಳೂರು-ಮೈಸೂರು, ಕಲಬುರಗಿ,ಹುಬ್ಬಳ್ಳಿಯ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭವಾಗಿದೆ. ಇದೇ ರೀತಿ ಬಾಗಲಕೋಟೆ, ಯಾದಗಿರಿ, ರಾಯಚೂರಿನಲ್ಲೂ ಶೀಘ್ರದಲ್ಲೇ ಕಾರ್ಯಾರಂಭ ಮಾಡಲಾಗುವುದು. ಬೀದರ್, ಕೊಪ್ಪಳ, ಬೆಳಗಾವಿಯಲ್ಲಿ ಎರಡರಿಂದ ಮೂರು ತಿಂಗಳೊಳಗೆ ಈ ಆಸ್ಪತ್ರೆಗಳು ಲೋಕಾರ್ಪಣೆಗೊಳ್ಳಲಿವೆ ಎಂದು ಪಾಟೀಲ್ ತಿಳಿಸಿದರು.

ರಾಜ್ಯದಲ್ಲಿ ಹೃದ್ರೋಗ ತಡೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

BREAKING: ಇಂದು ಸಂಜೆ 5ಕ್ಕೆ ನಡೆಯಬೇಕಿದ್ದ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ 7.30ಕ್ಕೆ ಮುಂದೂಡಿಕೆ

Share. Facebook Twitter LinkedIn WhatsApp Email

Related Posts

‘RSS’ ಗೆ ಸೆಡ್ಡು ಹೊಡೆದಿದ್ದ ಸಚಿವ ಪ್ರಿಯಾಂಕ್ ಖರ್ಗೆ ತವರಲ್ಲಿ ಇಂದು ‘ಪಥ ಸಂಚಲನ’ : 1000 ಪೊಲೀಸ್ ಸಿಬ್ಬಂದಿ ನಿಯೋಜನೆ

16/11/2025 8:41 AM1 Min Read

SHOCKING : ಬೆಂಗಳೂರಲ್ಲಿ ಮನೆ ಮಾಲೀಕನಿಂದಲೇ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ : ಇಬ್ಬರು ಆರೋಪಿಗಳು ಅರೆಸ್ಟ್!

16/11/2025 8:10 AM1 Min Read

BREAKING : ಮೈಸೂರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ‘ಲೈಂಗಿಕ ಕಿರುಕುಳ’ : ಉಪನ್ಯಾಸಕನ ವಿರುದ್ಧ ‘FIR’ ದಾಖಲು

16/11/2025 7:35 AM1 Min Read
Recent News

ದೆಹಲಿ ಕೆಂಪುಕೋಟೆ ಬಾಂಬ್ ಸ್ಫೋಟ: 9 ಎಂಎಂ ಕಾರ್ಟ್ರಿಡ್ಜ್ ಪತ್ತೆ, ಭಯೋತ್ಪಾದಕರ ನಂಟು ದೃಢಪಡಿಸಿದ NIA | Red Fort blast

16/11/2025 9:01 AM

ಬೆಂಗಳೂರು ಕನ್ಸರ್ಟ್‌ನಲ್ಲಿ ಅಕಾನ್ ಪ್ಯಾಂಟ್ ಕೆಳಕ್ಕೆ ಎಳೆದ ಅಭಿಮಾನಿಗಳು | Watch video

16/11/2025 8:51 AM

‘RSS’ ಗೆ ಸೆಡ್ಡು ಹೊಡೆದಿದ್ದ ಸಚಿವ ಪ್ರಿಯಾಂಕ್ ಖರ್ಗೆ ತವರಲ್ಲಿ ಇಂದು ‘ಪಥ ಸಂಚಲನ’ : 1000 ಪೊಲೀಸ್ ಸಿಬ್ಬಂದಿ ನಿಯೋಜನೆ

16/11/2025 8:41 AM

‘ಲಾಲು ಜೀವ ಉಳಿಸಿದಳು ಈಗ ನೋವಿನಿಂದ ಹೊರಟಿದ್ದಾಳೆ’: ಯಾದವ್ ಕುಟುಂಬದ ಬಿಕ್ಕಟ್ಟಿಗೆ ಪ್ರತಿಕ್ರಿಯಿಸಿದ JDU

16/11/2025 8:40 AM
State News
KARNATAKA

‘RSS’ ಗೆ ಸೆಡ್ಡು ಹೊಡೆದಿದ್ದ ಸಚಿವ ಪ್ರಿಯಾಂಕ್ ಖರ್ಗೆ ತವರಲ್ಲಿ ಇಂದು ‘ಪಥ ಸಂಚಲನ’ : 1000 ಪೊಲೀಸ್ ಸಿಬ್ಬಂದಿ ನಿಯೋಜನೆ

By kannadanewsnow0516/11/2025 8:41 AM KARNATAKA 1 Min Read

ಕಲಬುರ್ಗಿ : ದೇಶ ಹಾಗೂ ರಾಜ್ಯದಲ್ಲಿ ಭಾರಿ ಚರ್ಚಿತವಾಗಿ ಜಿದ್ದಾ ಜಿದ್ದಿಗೆ ಕಾರಣವಾಗಿದ್ದ ಅರ್‌ಎಸ್‌ಎಸ್‌ ಪಥಸಂಚಲನವು ಹೈಕೋರ್ಟ್ ಅನುಮತಿ ಯೊಂದಿಗೆ…

SHOCKING : ಬೆಂಗಳೂರಲ್ಲಿ ಮನೆ ಮಾಲೀಕನಿಂದಲೇ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ : ಇಬ್ಬರು ಆರೋಪಿಗಳು ಅರೆಸ್ಟ್!

16/11/2025 8:10 AM

BREAKING : ಮೈಸೂರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ‘ಲೈಂಗಿಕ ಕಿರುಕುಳ’ : ಉಪನ್ಯಾಸಕನ ವಿರುದ್ಧ ‘FIR’ ದಾಖಲು

16/11/2025 7:35 AM

BREAKING : ಕರ್ನಾಟಕ ಎರಡು ಭಾಗ ಆಗುತ್ತೆ, ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ತಾರೆ : ಖ್ಯಾತ ಜೋತಿಷಿ ಸ್ಪೋಟಕ ಭವಿಷ್ಯ!

16/11/2025 7:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.