ಬೆಳ್ತಂಗಡಿ: ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡವಿದೆ. ಈ ಕುರಿತಂತೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದೂ ಹೋರಾಟಗಾರ ಪ್ರಶಾಂತ್ ಸಂಬರಗಿ ಎಸ್ಐಟಿಗೆ ದೂರು ನೀಡಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅನುಮತಿ ಇಲ್ಲದೆ ಯಾವುದೇ ಸುದ್ದಿ ಮತ್ತು ಪ್ರಸ್ತುತ ಘಟನೆಗಳ ಮಾಹಿತಿ ಮತ್ತು ಸುದ್ದಿಯನ್ನು ಬಿತ್ತರಿಸುವಂತಿಲ್ಲ. ರಾಷ್ಟ್ರದ ಹಿತಾಸಕ್ತಿಯಿಂದ ಸುದ್ದಿ ಪ್ರಸಾರಕ್ಕೆ ಸಚಿವಾಲಯದ ಅನುಮತಿ ಅಗತ್ಯ. ಆದರೆ ಯೂಟ್ಯೂಬ್ ಚಾನೆಲ್ ಗಳಾದ ಡಿ ಟಾಕ್ಸ್ , ಕುಡ್ಲ ರ್ಯಾಂಪೇಜ್, ಮಹಮ್ಮದ ಸಮೀರ್, ವಾರ್ತಾ ಭಾರತಿ, ಕನ್ನಡ ಪ್ಲಾನೆಟ್ ಇವರುಗಳು ಸುದ್ದಿಯನ್ನು ಮತ್ತು ಸುಳ್ಳು ಸುದ್ದಿಯನ್ನು ಬಿತ್ತರ ಮಾಡಿದಲ್ಲದೆ. ಪ್ರೊಟೆಕ್ಟೆಡ್ ವಿಟ್ನೆಸ್ ಸ್ಕೀಮ್ ಅಡಿಯಲ್ಲಿದ್ದ ಚಿನ್ನಯ್ಯನ ಕಾನೂನು ಬಾಹಿರವಾಗಿ ಸಂದರ್ಶನ ಮಾಡಿ ಎಂದಿದ್ದಾರೆ.
ಭಾರತೀಯ ಕಾನೂನನ್ನು ನಗೆಪಾಟಲಿ ಮಾಡಿದ್ದಾರೆ. ಚಿನ್ನಯ್ಯನ್ನ ಸಂದರ್ಶನವನ್ನು ದೂರು ದಾಖಲಾತಿಗೂ ಮುನ್ನ ಅಥವಾ ದೂರು ದಾಖಲಾದ ನಂತರ ಅಥವಾ ಆರೋಪಿಯಾದ ನಂತರ ಈ ಮೂರು ರೀತಿಯಲ್ಲಿಯೂ ಸಂದರ್ಶನ ತೆಗೆದುಕೊಂಡಿದ್ದರು ಅದು ಅಪರಾಧ. ಈ ಯೂಟ್ಯೂಬರ್ ಗಳ ಹಣಕಾಸಿನ ಬಗ್ಗೆ ತನಿಖೆ ಆಗಬೇಕು ಈ ನಿಟ್ಟಿನಲ್ಲಿ ಎಸ್.ಐಟಿಗೆ ದೂರು ನೀಡಲಾಗಿದೆ. ದೂರನ್ನು ಎಸ್.ಐ.ಟಿ ಅಧಿಕಾರಿ ಸೈಮನ್ ಅವರು ಸ್ವೀಕರಿಸಿ ಹಿಂಬರಹ ನೀಡಿದ್ದಾರೆ ಎಂಬುದಾಗಿ ಹಿಂದೂ ಹೋರಾಟಗಾರ, ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ತಿಳಿಸಿದ್ದಾರೆ.
ವಂಚನೆ, ದುರ್ವರ್ತನೆ ಆರೋಪ: ಸಂಜಯ್ ಲೀಲಾ ಬನ್ಸಾಲಿ ವಿರುದ್ಧ FIR ದಾಖಲು | Sanjay Leela Bhansali
BREAKING: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗೆ ಆಯುಕ್ತರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ