Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಈ ವರ್ಷ `ಶಿಕ್ಷಕರಿಂದ-ರೈಲ್ವೆ ಇಲಾಖೆ’ವರೆಗೆ `75,000′ ಹುದ್ದೆಗಳ ಭರ್ತಿ.!

03/01/2026 5:55 AM

ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ ಎಡದಂಡೆ, ಜ.8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು ಹರಿಸಲು ನಿರ್ಣಯ

03/01/2026 5:47 AM

BIG NEWS `ಗೃಹಲಕ್ಷ್ಮೀ’ ಸೇರಿ ವಿವಿಧ ಯೋಜನೆಗಳಿಗೆ 3 ಕಂತಿನ ಹಣ ಬಿಡುಗಡೆ : ಸರ್ಕಾರ ಮಹತ್ವದ ಆದೇಶ

03/01/2026 5:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರಿನ ಉದಯಗಿರಿ ಗಲಾಟೆ ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ, ಪರಿಸ್ಥಿತಿ ಉತ್ತಮವಾಗಿ ನಿಭಾಯಿಸಿದ್ದಾರೆ: ಡಿಕೆಶಿ
KARNATAKA

ಮೈಸೂರಿನ ಉದಯಗಿರಿ ಗಲಾಟೆ ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ, ಪರಿಸ್ಥಿತಿ ಉತ್ತಮವಾಗಿ ನಿಭಾಯಿಸಿದ್ದಾರೆ: ಡಿಕೆಶಿ

By kannadanewsnow0912/02/2025 9:02 PM

ಮೈಸೂರು/ ಬೆಂಗಳೂರು: “ಉದಯಗಿರಿಯಲ್ಲಿ ಕಲ್ಲು ತೂರಾಟ ಮಾಡಿರುವವರು 15- 16 ವರ್ಷದ ಹುಡುಗರು. ಈ ವೇಳೆ ಪೊಲೀಸರು ಅತ್ಯುತ್ತಮವಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಯಾರಿಗೂ ಅಪಾಯವಾಗದ ರೀತಿಯಲ್ಲಿ ಪರಿಸ್ಥಿತಿ ನಿಭಾಯಿಸಿದ ಎಲ್ಲ ಅಧಿಕಾರಿಗಳಿಗೆ ಅಭಿನಂದನೆ ತಿಳಿಸುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಮೈಸೂರಿನ ಗಲಭೆ ಪೀಡಿತ ಪ್ರದೇಶ ಉದಯಗಿರಿಗೆ ಬುಧವಾರ ಭೇಟಿ ನೀಡಿದ ನಂತರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಅವರು, “ಇಲ್ಲಿ ಯಾರೇ ತಪ್ಪು ಮಾಡಿದ್ದರೂ ತಪ್ಪು. ಯಾವುದೇ ರೀತಿಯ ತಪ್ಪು ನಡೆದಿದ್ದರೂ ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ನಾನು ಪೊಲೀಸರಿಂದ ವರದಿ ತರಿಸಿಕೊಂಡಿದ್ದೇನೆ. ಘಟನೆ ನಡೆದ ತಕ್ಷಣ ಮುಸಲ್ಮಾನ ಸಮುದಾಯದ ಹಿರಿಯ ಮುಖಂಡರುಗಳು ಬಂದು ಪರಿಸ್ಥಿತಿ ನಿಭಾಯಿಸಿದ್ದಾರೆ. ಗಲಾಟೆ ತಡೆಯಲು ಬಂದ ಮುಸ್ಲಿಂ ಮುಖಂಡರಿಗೂ ಏಟುಗಳು ಬಿದ್ದಿವೆ. ಪೊಲೀಸ್ ಅಧಿಕಾರಿ ಮುತ್ತುರಾಜ್ ಅವರ ಕಾಲಿಗೂ ಏಟಾಗಿದೆ. ಈ ವಿಡಿಯೋವನ್ನು ನಾನು ನೋಡಿದ್ದೇನೆ” ಎಂದು ಹೇಳಿದರು.

ಮೈಸೂರಿನ ಉದಯಗಿರಿಯಲ್ಲಿನ ಗಲಭೆ ಹಾಗೂ ಈ ಪ್ರಕರಣದಲ್ಲಿ ಪೊಲೀಸರದ್ದೇ ತಪ್ಪಿದೆ ಎನ್ನುವ ಸಚಿವ ಕೆ.ಎನ್.ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಸಚಿವರ ಹೇಳಿಕೆ ಕುರಿತು ಮುಖ್ಯಮಂತ್ರಿಗಳು, ಗೃಹಸಚಿವರು ಉತ್ತರಿಸಲಿದ್ದಾರೆ. ಉದಯಗಿರಿ ಪ್ರಕರಣದಲ್ಲಿ ಪೊಲೀಸ್ ನವರು ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಯಾರು ಏನು ಪದ ಬಳಸಿದ್ದಾರೆ ಎಂಬುದು ಗೊತ್ತಿಲ್ಲ. ಪೊಲೀಸ್ ಅವರಿಗಾದರೆ ರಕ್ಷಣೆಯಿತ್ತು, ಅಲ್ಲಿದ್ದ ಸಾರ್ವಜನಿಕರಿಗೆ ಅದೂ ಇರಲಿಲ್ಲ” ಎಂದರು.

ಪೊಲೀಸರ ಪರವಾಗಿ ಇಲ್ಲಿಯೇ ನಿಂತು ಮಾತನಾಡುತ್ತಿದ್ದೇನೆ

ಸರ್ಕಾರ ಪೊಲೀಸರ ಪರವಾಗಿ ನಿಲ್ಲುತ್ತದೆಯೇ ಎಂದು ಕೇಳಿದಾಗ, “ನಾನು ಡಿಸಿಎಂ ಆಗಿ ಘಟನೆ ನಡೆದ ಇದೇ ಭೂಮಿಯಲ್ಲಿ ನಿಂತು ಮಾತನಾಡುತ್ತಿದ್ದೇನೆ. ಇದಕ್ಕಿಂತ ಅಧಿಕೃತ ಹೇಳಿಕೆ ಇನ್ಯಾರದ್ದು ಬೇಕು? ಮುಖ್ಯಮಂತ್ರಿಗಳು ಚೇತರಿಸಿಕೊಳ್ಳಲು ಎಂಟತ್ತು ದಿನಗಳು ಬೇಕು, ಆನಂತರ ಅವರು ಇದರ ಬಗ್ಗೆ ಮಾತನಾಡುತ್ತಾರೆ” ಎಂದರು.

ಎಫ್ ಐಆರ್ ಹಾಕಲು ತಡವಾದ ಕಾರಣಕ್ಕೆ ಪೊಲೀಸರ ಮೇಲೆ ಹಲ್ಲೆ ಮಾಡುತ್ತಾರೆ ಎಂದಾದರೆ ಗಲಭೆಕೋರರ ಮನಸ್ಥಿತಿ ಎಂತಹದ್ದು ಎಂದು ಕೇಳಿದಾಗ, “ಪೊಲೀಸರು ತಕ್ಷಣ ಕ್ರಮ ತೆಗೆದುಕೊಂಡಿದ್ದಾರೆ. ಗಲಭೆಯಲ್ಲಿ ಉಂಟಾದ ಹಾನಿಗಳ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ. ಕ್ಯಾಮೆರಾದಲ್ಲಿ ದಾಖಲಾದ ವಿವರಗಳನ್ನು ಸಂಗ್ರಹಿಸುತ್ತಿದ್ದು, ತಪ್ಪು ಮಾಡಿದ ಎಲ್ಲರ ಮೇಲೆಯೂ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದರು.

ಅವರು ಹಿರಿಯ ನಾಯಕರು, ನಾನು ಕಾರ್ಯಕರ್ತ

ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ ಅವರ ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, “ಅವರು ದೊಡ್ಡವರು, ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಅವರೆಲ್ಲಾ ಪಕ್ಷದ ಹಿರಿಯ ನಾಯಕರು ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ” ಎಂದು ಕುಟುಕಿದರು.

ಕೆ.ಎನ್,ರಾಜಣ್ಣ ಅವರು ಸರ್ಕಾರಕ್ಕೆ ಮುಜುಗರವಾಗುವಂತಹ ಹೇಳಿಕೆಯನ್ನು ಪದೇ, ಪದೇ ನೀಡುತ್ತಿರುತ್ತಾರೆ ಎಂದು ಕೇಳಿದಾಗ, “ಇದರ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ನೀಡುತ್ತಾರೆ” ಎಂದರು.

Share. Facebook Twitter LinkedIn WhatsApp Email

Related Posts

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಈ ವರ್ಷ `ಶಿಕ್ಷಕರಿಂದ-ರೈಲ್ವೆ ಇಲಾಖೆ’ವರೆಗೆ `75,000′ ಹುದ್ದೆಗಳ ಭರ್ತಿ.!

03/01/2026 5:55 AM5 Mins Read

ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ ಎಡದಂಡೆ, ಜ.8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು ಹರಿಸಲು ನಿರ್ಣಯ

03/01/2026 5:47 AM2 Mins Read

BIG NEWS `ಗೃಹಲಕ್ಷ್ಮೀ’ ಸೇರಿ ವಿವಿಧ ಯೋಜನೆಗಳಿಗೆ 3 ಕಂತಿನ ಹಣ ಬಿಡುಗಡೆ : ಸರ್ಕಾರ ಮಹತ್ವದ ಆದೇಶ

03/01/2026 5:40 AM3 Mins Read
Recent News

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಈ ವರ್ಷ `ಶಿಕ್ಷಕರಿಂದ-ರೈಲ್ವೆ ಇಲಾಖೆ’ವರೆಗೆ `75,000′ ಹುದ್ದೆಗಳ ಭರ್ತಿ.!

03/01/2026 5:55 AM

ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ ಎಡದಂಡೆ, ಜ.8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು ಹರಿಸಲು ನಿರ್ಣಯ

03/01/2026 5:47 AM

BIG NEWS `ಗೃಹಲಕ್ಷ್ಮೀ’ ಸೇರಿ ವಿವಿಧ ಯೋಜನೆಗಳಿಗೆ 3 ಕಂತಿನ ಹಣ ಬಿಡುಗಡೆ : ಸರ್ಕಾರ ಮಹತ್ವದ ಆದೇಶ

03/01/2026 5:40 AM

ALERT : ಪೋಷಕರೇ ಎಚ್ಚರ : ನಿಮ್ಮ ಅಪ್ರಾಪ್ತ ಮಕ್ಕಳಿಗೆ ವಾಹನ ಕೊಟ್ರೆ 25,000 ರೂ. ದಂಡ ಫಿಕ್ಸ್.!

03/01/2026 5:40 AM
State News
KARNATAKA

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಈ ವರ್ಷ `ಶಿಕ್ಷಕರಿಂದ-ರೈಲ್ವೆ ಇಲಾಖೆ’ವರೆಗೆ `75,000′ ಹುದ್ದೆಗಳ ಭರ್ತಿ.!

By kannadanewsnow5703/01/2026 5:55 AM KARNATAKA 5 Mins Read

ಬೆಂಗಳೂರು : ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯ, ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಈ ವರ್ಷ…

ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ ಎಡದಂಡೆ, ಜ.8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು ಹರಿಸಲು ನಿರ್ಣಯ

03/01/2026 5:47 AM

BIG NEWS `ಗೃಹಲಕ್ಷ್ಮೀ’ ಸೇರಿ ವಿವಿಧ ಯೋಜನೆಗಳಿಗೆ 3 ಕಂತಿನ ಹಣ ಬಿಡುಗಡೆ : ಸರ್ಕಾರ ಮಹತ್ವದ ಆದೇಶ

03/01/2026 5:40 AM

ALERT : ಪೋಷಕರೇ ಎಚ್ಚರ : ನಿಮ್ಮ ಅಪ್ರಾಪ್ತ ಮಕ್ಕಳಿಗೆ ವಾಹನ ಕೊಟ್ರೆ 25,000 ರೂ. ದಂಡ ಫಿಕ್ಸ್.!

03/01/2026 5:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.