Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಅನಾಮಿಕನ ಹಿಂದಿರುವ ವ್ಯಕ್ತಿಗಳಿಗೆ ನೋಟಿಸ್‌ ನೀಡಲು ‘SIT’ ಸಿದ್ಧತೆ

17/08/2025 9:54 PM

‘ಛಾಯಾಗ್ರಾಹಕರ ಕಲ್ಯಾಣ ಮಂಡಳಿ’ ಸ್ಥಾಪಿಸಲು ಆಗ್ರಹ

17/08/2025 9:42 PM

ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

17/08/2025 9:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜನಪರ ಉದ್ದೇಶವಿಲ್ಲದ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಜನರ ಸ್ಪಂದನೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಜನಪರ ಉದ್ದೇಶವಿಲ್ಲದ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಜನರ ಸ್ಪಂದನೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0908/08/2024 4:31 PM

ಬೆಂಗಳೂರು: “ಜನಪರ ಉದ್ದೇಶ, ಅರ್ಥಗರ್ಭಿತ ಕಾರಣವಿಲ್ಲದ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಜನರ ಸ್ಪಂದನೆಯಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.

“ಎಸ್.ಎಂ ಕೃಷ್ಣ ಅವರು ಕಾವೇರಿ ನೀರಿಗಾಗಿ ಪಾದಯಾತ್ರೆ ಮಾಡಿದ್ದರು. ಭಾರತವನ್ನು ಒಂದುಗೂಡಿಸಲು, ಬೆಲೆ ಏರಿಕೆ, ನಿರುದ್ಯೋಗ ಖಂಡಿಸಿ, ಭ್ರಷ್ಟಾಚಾರ ವಿರುದ್ಧ ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮಾಡಿದ್ದರು. ನಾವು ಗಣಿ ಲೂಟಿ ಖಂಡಿಸಿ ರಾಜ್ಯ ಹಾಗೂ ದೇಶದ ಸಂಪತ್ತು ರಕ್ಷಣೆಗೆ ಬಳ್ಳಾರಿ ಪಾದಯಾತ್ರೆ ಮಾಡಿದೆವು. ಕಾವೇರಿ ಜಲಾನಯನದ 10 ಜಿಲ್ಲೆಗಳಿಗೆ ನೀರು ಒದಗಿಸುವ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ಪಾದಯಾತ್ರೆ ಮಾಡಿದ್ದೆವು” ಎಂದು ತಿಳಿಸಿದರು.

“ಈಗ ಬಿಜೆಪಿ, ಜೆಡಿಎಸ್ ಮಾಡುತ್ತಿರುವ ಪಾದಯಾತ್ರೆ ಸದ್ದಿದೆಯಾ? ಅವರ ಪಾದಯಾತ್ರೆಯ ವಿಚಾರವೇನು? ಹಿಂದುಳಿದ ವರ್ಗದ ನಾಯಕ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದನ್ನು ಸಹಿಸಲಾಗದೇ ಅವರು ಪಾದಯಾತ್ರೆ ಮಾಡುತ್ತಿದ್ದಾರೆ. ಅವರ ಪಾದಯಾತ್ರೆಯಲ್ಲಿ ಬೇರೆ ಏನಾದರೂ ಮಹತ್ವದ ವಿಚಾರವಿದೆಯೇ? ಅವರ ತಟ್ಟೆಯಲ್ಲೇ ಹೆಗ್ಗಣ ಬಿದ್ದಿದ್ದರೂ ಬೇರೆಯವರ ತಟ್ಟೆ ನೋಡುತ್ತಿದ್ದಾರೆ. ಅವರ ಪಾದಯಾತ್ರೆಗೆ ಜನರಿಂದ ಸ್ಪಂದನೆಯಿಲ್ಲ. ಪಾದಯಾತ್ರೆಯಲ್ಲಿ ಜನತಾದಳದ ಕಾರ್ಯಕರ್ತರೇ ಇಲ್ಲ. ಅವರು ಪಾದಯಾತ್ರೆಯಲ್ಲಿ ಹೊಡೆದಾಡಲಿ ಏನಾದರೂ ಮಾಡಿಕೊಳ್ಳಲಿ” ಎಂದು ತಿಳಿಸಿದರು.

“ರಾಮನಗರ ಮತ್ತು ಮಂಡ್ಯ ಜಿಲ್ಲೆಯಲ್ಲಿ ನಡೆದ ಪಾದಯಾತ್ರೆಯಲ್ಲಿ ಎಷ್ಟು ಜನ ಜೆಡಿಎಸ್ ಕಾರ್ಯಕರ್ತರು ಇದ್ದರು ಎಂಬುದನ್ನು ಮಾಧ್ಯಮಗಳ ಬಳಿ ಇರುವ ವಿಡಿಯೋಗಳಲ್ಲಿ ನೋಡಿ. ರಾಜ್ಯದ ಬೇರೆ ಬೇರೆ ಭಾಗಗಳಿಂದ ಬಿಜೆಪಿ ಕಾರ್ಯಕರ್ತರನ್ನು ಪಾದಯಾತ್ರೆಗೆ ಕರೆಸಲಾಗಿದೆ. ಅವರಲ್ಲಿ ಹೊಂದಾಣಿಕೆ ಎಲ್ಲಿದೆ? ಒಗ್ಗಟ್ಟು ಎಲ್ಲಿದೆ? ಅವರ ನಡುವೆ ಸಮನ್ವಯತೆ ಇಲ್ಲ ಎಂದು ಅವರೇ ಹೇಳಿದ್ದಾರೆ. ಅವರು ಒಂದಾಗಿರಲಿ ಅಥವಾ ಬೇರೆಯಾಗಿರಲಿ ನಮಗೆ ಯಾವುದೇ ಅಭ್ಯಂತರವಿಲ್ಲ” ಎಂದು ತಿಳಿಸಿದರು.

ಕುಮಾರಸ್ವಾಮಿ ವಿಚಾರದಲ್ಲಿ ರಾಜ್ಯಪಾಲರ ನಡೆ ಏನೆಂದು ಕಾದು ನೋಡಬೇಕು:

ಕುಮಾರಸ್ವಾಮಿ ಅವರು 2007ರಲ್ಲಿ ಸಿಎಂ ಆಗಿದ್ದಾಗ ಸಂಡೂರು 550 ಎಕರೆ ಅಕ್ರಮವಾಗಿ ಗಣಿಗಾರಿಕೆಗೆ ನೀಡಿದ ಬಗ್ಗೆ ರಾಜ್ಯಪಾಲರು ವಿಚಾರಣೆಗೆ ನೀಡಲು ಹಿಂದೇಟು ನೀಡುತ್ತಿದ್ದಾರೆ ಎಂದು ಕೇಳಿದಾಗ, “ಈ ವಿಚಾರವಾಗಿ ಮಾಧ್ಯಮ ವರದಿ ಬಂದಿದೆ ಎಂದು ಕೇಳಿದೆ. ನಾನು ಅದನ್ನು ನೋಡಿಲ್ಲ. ಆ ಪ್ರಕರಣದಲ್ಲಿ ಚಾರ್ಜ್ ಶೀಟ್ ಆಗಿದೆ, ಸುಪ್ರೀಂ ಕೋರ್ಟ್ ನಿಂದ ವಿಚಾರಣೆಗೆ ಬಂದಿದೆ, ಈ ಬಗ್ಗೆ ತನಿಖೆ ಮಾಡಲು ಹೇಳಿದ್ದರಂತೆ. ಸುಪ್ರೀಂ ಕೋರ್ಟ್ ವಿಚಾರಣೆ ನಂತರ ಲೋಕಾಯುಕ್ತ ತನಿಖೆ ಮಾಡಿ ಕುಮಾರಸ್ವಾಮಿ ಅವರ ವಿಚಾರಣೆಗೆ ರಾಜ್ಯಪಾಲರ ಅನುಮತಿ ಕೇಳಿದರಂತೆ. ರಾಜ್ಯಪಾಲರು ಆ ಕಡತವನ್ನು ತಮ್ಮಲ್ಲೇ ಇರಿಸಿಕೊಂಡಿದ್ದಾರೆ ಎಂದು ನನಗೆ ಮಾಹಿತಿ ನೀಡಿದರು. ಇದರಲ್ಲಿ ಎಷ್ಟು ಸತ್ಯಾಂಶವಿದೆ ಎಂಬುದನ್ನು ಪರಿಶೀಲಿಸಬೇಕು. ಜಂತಕಲ್ ಹಾಗೂ ಇತರೆ ಗಣಿ ವಿಚಾರವಾಗಿ ಮಧ್ಯಮ ಸ್ನೇಹಿತರೆ ನನಗೆ ಮಾಹಿತಿ ಕಳುಹಿಸಿದ್ದು, ಅದನ್ನು ಸಂಪೂರ್ಣವಾಗಿ ಪರಿಶೀಲಿಸಬೇಕಿದೆ. ಈ ವಿಚಾರವಾಗಿ ರಾಜ್ಯಪಾಲರು ಯಾವ ತೀರ್ಮಾನ ಮಾಡುತ್ತಾರೆ ಎಂದು ಕಾದುನೋಡೋಣ” ಎಂದು ತಿಳಿಸಿದರು.

ಕುಟುಂಬದವರ ರಕ್ಷಣೆ, ನಮ್ಮನ್ನು ಒಳಗೆ ಹಾಕಿಸಲು ಪ್ರಯತ್ನ ನಡೆಯುತ್ತಿದೆ:

ದೇವೇಗೌಡರು ನಿನ್ನೆ ಅಮಿತ್ ಶಾ ಅವರನ್ನು ಭೇಟಿ ಮಾಡಿರುವ ಬಗ್ಗೆ ಕೇಳಿದಾಗ, “ತಮ್ಮ ಕುಟುಂಬದವರನ್ನು ರಕ್ಷಣೆ ಮಾಡಿಕೊಳ್ಳಲು ಅವರು ಹೋಗಲೇ ಬೇಕಲ್ಲವೇ? ನಮ್ಮ ವಿರುದ್ಧ ದೂರು ನೀಡಿ, ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರನ್ನು ಒಳಗೆ ಹಾಕಲೇಬೇಕು ಎಂಬ ಪ್ರಯತ್ನಗಳು ನಡೆಯುತ್ತಲೇ ಇವೆ. ನಾನು ಎಲ್ಲದಕ್ಕೂ ಸಿದ್ಧವಿದ್ದೇನೆ” ಎಂದು ತಿಳಿಸಿದರು.

ದಿನಾ ಸಾಯುವವರಿಗೆ ಅಳುವವರಾರು?

ಸಿಎಂ ಹಾಗೂ ಡಿಸಿಎಂ ಅವರನ್ನು ಚಕ್ರವ್ಯೂಹಕ್ಕೆ ಸಿಲುಕಿಸಿದರೆ ಸರ್ಕಾರ ಪತನ ಸುಲಭ ಎಂಬುದು ಅವರ ಲೆಕ್ಕಾಚಾರವೇ ಎಂದು ಕೇಳಿದಾಗ, “ನಮ್ಮ ಹಳ್ಳಿ ಕಡೆ ಹೇಳುವಂತೆ ದಿನಾ ಸಾಯುವವರಿಗೆ ಅಳುವವರಾರು? ದಿನಾ ಬೆಳಗ್ಗೆ ಇವರ ಗೋಳು ಇದ್ದದ್ದೆ. ಮುಂಚೆಯಿಂದಲೂ ಇದರ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದು, ಈಗಲೂ ಹೋರಾಟ ಮುಂದುವರಿಸುತ್ತೇವೆ” ಎಂದು ತಿಳಿಸಿದರು.

ಶುಭ ದಿನ, ಗಳಿಗೆ, ನಕ್ಷೆತ್ರ ನೋಡಿ ಕುಮಾರಸ್ವಾಮಿ ಸಹೋದರನ ಆಸ್ತಿ ದಾಖಲೆ ಬಿಡುಗಡೆ: ಡಿಸಿಎಂ ಡಿ.ಕೆ ಶಿವಕುಮಾರ್

7ನೇ ವೇತನ ಆಯೋಗ : ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ | 7th Pay Commission

BREAKING :`PG’ ವೈದ್ಯರ ಕಡ್ಡಾಯ ಸೇವಾ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ | Karnataka High Court

Share. Facebook Twitter LinkedIn WhatsApp Email

Related Posts

ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಅನಾಮಿಕನ ಹಿಂದಿರುವ ವ್ಯಕ್ತಿಗಳಿಗೆ ನೋಟಿಸ್‌ ನೀಡಲು ‘SIT’ ಸಿದ್ಧತೆ

17/08/2025 9:54 PM1 Min Read

‘ಛಾಯಾಗ್ರಾಹಕರ ಕಲ್ಯಾಣ ಮಂಡಳಿ’ ಸ್ಥಾಪಿಸಲು ಆಗ್ರಹ

17/08/2025 9:42 PM3 Mins Read

ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

17/08/2025 9:22 PM2 Mins Read
Recent News

ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಅನಾಮಿಕನ ಹಿಂದಿರುವ ವ್ಯಕ್ತಿಗಳಿಗೆ ನೋಟಿಸ್‌ ನೀಡಲು ‘SIT’ ಸಿದ್ಧತೆ

17/08/2025 9:54 PM

‘ಛಾಯಾಗ್ರಾಹಕರ ಕಲ್ಯಾಣ ಮಂಡಳಿ’ ಸ್ಥಾಪಿಸಲು ಆಗ್ರಹ

17/08/2025 9:42 PM

ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

17/08/2025 9:22 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ DC ಆದೇಶ

17/08/2025 8:51 PM
State News
KARNATAKA

ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಅನಾಮಿಕನ ಹಿಂದಿರುವ ವ್ಯಕ್ತಿಗಳಿಗೆ ನೋಟಿಸ್‌ ನೀಡಲು ‘SIT’ ಸಿದ್ಧತೆ

By kannadanewsnow0917/08/2025 9:54 PM KARNATAKA 1 Min Read

ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿರುವುದಾಗಿ ದೂರುದಾರ ತಪ್ಪೊಪ್ಪಿಕೊಂಡ ನಂತ್ರ, ಅಸ್ಥಿ ಪಂಜರಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಎಸ್ಐಟಿ ಅಧಿಕಾರಿಗಳು ದೂರುದಾರ ತೋರಿಸಿದಂತ…

‘ಛಾಯಾಗ್ರಾಹಕರ ಕಲ್ಯಾಣ ಮಂಡಳಿ’ ಸ್ಥಾಪಿಸಲು ಆಗ್ರಹ

17/08/2025 9:42 PM

ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

17/08/2025 9:22 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ DC ಆದೇಶ

17/08/2025 8:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.