Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಜ್ವಲ್‌ ರೇವಣ್ಣ ಜೀವಾವಧಿ ಶಿಕ್ಷೆ ಬಗ್ಗೆ H.D.ರೇವಣ್ಣ ಕುಟುಂಬದಿಂದ ಫಸ್ಟ್ ರಿಯಾಕ್ಷನ್

08/08/2025 6:16 PM

ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿ ನಾಯಕರ ಪಾತ್ರವೇ ಇಲ್ಲ: ಆರ್‌.ಅಶೋಕ

08/08/2025 5:56 PM

ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಸಹಾಯವಾಣಿಗೆ ಭರ್ಜರಿ ರೆಸ್ಪಾನ್ಸ್: ಪ್ರತಿನಿತ್ಯ 1000ಕ್ಕೂ ಹೆಚ್ಚು ನಾಗರಿಕರ ಕರೆ

08/08/2025 5:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿ ನಾಯಕರ ಪಾತ್ರವೇ ಇಲ್ಲ: ಆರ್‌.ಅಶೋಕ
KARNATAKA

ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿ ನಾಯಕರ ಪಾತ್ರವೇ ಇಲ್ಲ: ಆರ್‌.ಅಶೋಕ

By kannadanewsnow0908/08/2025 5:56 PM

ಬೆಂಗಳೂರು: ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಥವಾ ಬಿಜೆಪಿ ನಾಯಕರ ಪಾತ್ರವೇ ಇಲ್ಲ. ಇದನ್ನು ಅಧಿಕಾರಿಗಳೇ ತಯಾರು ಮಾಡುತ್ತಾರೆ. ಆದ್ದರಿಂದ ರಾಹುಲ್‌ ಗಾಂಧಿಯದ್ದು ಟುಸ್‌ ಪಟಾಕಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್‌ ಗಾಂಧಿ ಬಾಂಬ್‌ ಹಾಕಿಲ್ಲ. ಅದು ಟುಸ್‌ ಪಟಾಕಿಯಾಗಿದೆ. ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಪ್ರತಿ ಬೂತ್‌ಗೆ ಬಿಎಲ್‌ಎಗಳನ್ನು (ಬೂತ್‌ ಲೆವೆಲ್‌ ಏಜೆಂಟ್‌) ಕಾಂಗ್ರೆಸ್‌ ನೀಡಿದೆ. ಮತದಾರರ ಪಟ್ಟಿಯ ಮೊದಲ ಪ್ರತಿಯನ್ನು ಬಿಎಲ್‌ಎಗೆ ನೀಡಲಾಗುತ್ತದೆ. ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರೇ ನೇಮಿಸಿದ್ದಾರೆ. ಮತದಾರರ ಪಟ್ಟಿಯಲ್ಲಿ ಸತ್ತವರ ಹೆಸರು ತೆಗೆದುಹಾಕುವುದು, ಹೊಸಬರನ್ನು ಸೇರಿಸುವುದು ಮೊದಲಾದ ಕೆಲಸವನ್ನು ಬಿಎಲ್‌ಎ ಮಾಡುತ್ತಾರೆ. ಇಂತಹ ಬಿಎಲ್‌ಎಗಳನ್ನು ನೇಮಿಸಿದ ಕಾಂಗ್ರೆಸ್‌ ಏನು ತಪ್ಪು ಮಾಡಿಲ್ಲವೇ? ಎಂದು ಪ್ರಶ್ನೆ ಮಾಡಿದರು.

ಡಿ.ಕೆ.ಶಿವಕುಮಾರ್‌ ಅವರ ಬಳಿಯೇ ಮತದಾರರ ಪಟ್ಟಿ ಇದ್ದಾಗ, ಆಗಲೇ ಅಕ್ರಮದ ಬಗ್ಗೆ ದೂರು ನೀಡಬೇಕಿತ್ತು. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರವೇ ಇಲ್ಲ. ಅಥವಾ ಬಿಜೆಪಿ ನಾಯಕರ ಪಾತ್ರವೇ ಇಲ್ಲ. ಪಂಚಾಯಿತಿ ಕಾರ್ಯದರ್ಶಿ, ಅಂಚೆಯವರು, ತೆರಿಗೆ ಸಂಗ್ರಹ ಮಾಡುವವರು, ಆರೋಗ್ಯ ಸಿಬ್ಬಂದಿ ಹೀಗೆ ಇವರೆಲ್ಲರೂ ಮತದಾರರ ಪಟ್ಟಿಗೆ ತಯಾರಿಯಲ್ಲಿ ಭಾಗವಹಿಸುತ್ತಾರೆ. ಇವರೆಲ್ಲರೂ ಬಿಜೆಪಿಯವರಾ? ಪಟ್ಟಿಗೆ ಅಕ್ರಮವಾಗಿ ಹೆಸರನ್ನು ಬಿಜೆಪಿಯವರು ಹೇಗೆ ಸೇರಿಸಲು ಸಾಧ್ಯ? ಎಂದು ಪ್ರಶ್ನಿಸಿದರು.

ಕೆಲವು ರಾಜ್ಯಗಳಲ್ಲಿ ಕಾಂಗ್ರೆಸ್‌ ನಾಯಕರು ಬೋಗಸ್‌ ವೋಟ್‌ಗಳ ಅಕ್ರಮ ಮಾಡಿದ್ದಕ್ಕೆ ಬಂಧಿತರಾಗಿದ್ದಾರೆ. ಬೆಂಗಳೂರಿನ ಗಾಂಧಿನಗರದ ಒಂದು ಚಿಕ್ಕ ಮನೆಯಲ್ಲಿ 18 ಮುಸ್ಲಿಂ ಮತದಾರರಿದ್ದಾರೆ. ಒಂದೇ ಮನೆಯಲ್ಲಿ ಇಷ್ಟೊಂದು ವೋಟು ಇರಲು ಹೇಗೆ ಸಾಧ್ಯ? ಸರ್ವಜ್ಞನಗರ ಕ್ಷೇತ್ರದ ನಾಗವಾರ ವಾರ್ಡ್‌ನಲ್ಲಿ ಕಾಂಗ್ರೆಸ್‌ ಶಾಸಕರಿಗಿಂತಲೂ ಸಂಸದರಿಗೆ 5,965 ಹೆಚ್ಚುವರಿ ಮತ ಸಿಕ್ಕಿದೆ. ಹಾಗಾದರೆ ಕಾಂಗ್ರೆಸ್‌ಗೆ ಹೆಚ್ಚು ಮತ ಸಿಕ್ಕಿದ್ದು ಹೇಗೆ? ಎಚ್‌ಬಿಆರ್‌ ಲೇಔಟ್‌ನಲ್ಲಿ ಶಾಸಕರಿಗಿಂತಲೂ ಸಂಸದರಿಗೆ 3,646 ಮತ ಹೆಚ್ಚಾಗಿ ಸಿಕ್ಕಿದೆ. ಕಾಡುಗೊಂಡನಹಳ್ಳಿಯಲ್ಲಿ 3432 ಹೆಚ್ಚು ಮತ ಸಿಕ್ಕಿದೆ. ಹಾಗಾದರೆ ಇವೆಲ್ಲವನ್ನೂ ಸೇರಿಸಿದ್ದು ಯಾರು? ಸೋತ ಕೂಡಲೇ ಚುನಾವಣಾ ಆಯೋಗ ಸರಿ ಇಲ್ಲ ಎನ್ನುತ್ತಾರೆ ಎಂದರು.

2023 ರ ವಿಧಾನಸಭಾ ಚುನಾವಣೆ ಬಳಿಕ, 2024 ರಲ್ಲಿ ಲೋಕಸಭಾ ಚುನಾವಣೆ ನಡೆಯಿತು. ಒಂದೇ ವರ್ಷದಲ್ಲಿ ಕೆಲವು ಹೊಸ ಮತದಾರರು ಬಂದಿದ್ದಾರೆ. ಪದ್ಮನಾಭನಗರದಲ್ಲಿ 57,000 ಮತ ನನಗೆ ಬಂದಿದೆ. ಇನ್ನೂ 20,000 ಬರಬೇಕಿತ್ತು. ಆದರೆ ಬೇರೆ ಕಡೆಯಿಂದ ಮುಸ್ಲಿಮರನ್ನು ತಂದು ಇಲ್ಲಿಗೆ ಸೇರಿಸಿದ್ದಾರೆ. ಕಂದಾಯ ಇಲಾಖೆ ಎಲ್ಲ ಚುನಾವಣೆ ನಡೆಸುತ್ತದೆ. ಎಲ್ಲರೂ ಕಾಂಗ್ರೆಸ್‌ ಸರ್ಕಾರದವರೇ ಆಗಿರುವಾಗ ಅಕ್ರಮವಾಗಲು ಹೇಗೆ ಸಾಧ್ಯ? ಈ ಹಿಂದೆ ಕಾಂಗ್ರೆಸ್‌ ಎಲ್ಲ ಕಡೆ ಅಧಿಕಾರದಲ್ಲಿದ್ದಾಗ ಕಳ್ಳ ಮತದಾನ ಸಾಮಾನ್ಯವಾಗಿತ್ತು. ಮತ ಪೆಟ್ಟಿಗೆಗಳನ್ನು ಎತ್ತಿಕೊಂಡು ಹೋಗುತ್ತಿದ್ದರು. ಪೂಲನ್‌ ದೇವಿಯಂತಹ ಡಕಾಯಿತರ ಆಡಳಿತವೇ ಎಲ್ಲ ಕಡೆ ನಡೆಯುತ್ತಿತ್ತು. ಅಂತಹ ಚುನಾವಣೆ ರಾಹುಲ್‌ ಗಾಂಧಿಗೆ ಈಗ ಬೇಕಿದೆ ಎಂದರು.

ಇಂದಿರಾಗಾಂಧಿ ಚುನಾವಣಾ ಅಕ್ರಮ ಮಾಡಿ ಗೆದ್ದು ಅನರ್ಹರಾಗಿದ್ದರು. ಅದೇ ರೀತಿ ನರೇಂದ್ರ ಮೋದಿಗೆ ಆಗಿಲ್ಲ. ಗಾಂಧಿ ಕುಟುಂಬದ ಇತಿಹಾಸವೇ ಅಕ್ರಮ. ಚುನಾವಣೆಯಲ್ಲಿ ಅಕ್ರಮ ಮಾಡಿಯೇ ಎಲ್ಲರೂ ಗೆದ್ದಿದ್ದಾರೆ ಎಂದರು.

Share. Facebook Twitter LinkedIn WhatsApp Email

Related Posts

ಪ್ರಜ್ವಲ್‌ ರೇವಣ್ಣ ಜೀವಾವಧಿ ಶಿಕ್ಷೆ ಬಗ್ಗೆ H.D.ರೇವಣ್ಣ ಕುಟುಂಬದಿಂದ ಫಸ್ಟ್ ರಿಯಾಕ್ಷನ್

08/08/2025 6:16 PM1 Min Read

ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಸಹಾಯವಾಣಿಗೆ ಭರ್ಜರಿ ರೆಸ್ಪಾನ್ಸ್: ಪ್ರತಿನಿತ್ಯ 1000ಕ್ಕೂ ಹೆಚ್ಚು ನಾಗರಿಕರ ಕರೆ

08/08/2025 5:49 PM1 Min Read

ಮುರಿದು ಬಿದ್ದ ವಿದ್ಯುತ್ ಕಂಬ, ಹಾನಿಗೊಳಗಾದ ಸೈನ್ ಬೋರ್ಡ್ ತೆರವಿಗೆ ಬಿಬಿಎಂಪಿ ಆದೇಶ

08/08/2025 5:43 PM2 Mins Read
Recent News

ಪ್ರಜ್ವಲ್‌ ರೇವಣ್ಣ ಜೀವಾವಧಿ ಶಿಕ್ಷೆ ಬಗ್ಗೆ H.D.ರೇವಣ್ಣ ಕುಟುಂಬದಿಂದ ಫಸ್ಟ್ ರಿಯಾಕ್ಷನ್

08/08/2025 6:16 PM

ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿ ನಾಯಕರ ಪಾತ್ರವೇ ಇಲ್ಲ: ಆರ್‌.ಅಶೋಕ

08/08/2025 5:56 PM

ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಸಹಾಯವಾಣಿಗೆ ಭರ್ಜರಿ ರೆಸ್ಪಾನ್ಸ್: ಪ್ರತಿನಿತ್ಯ 1000ಕ್ಕೂ ಹೆಚ್ಚು ನಾಗರಿಕರ ಕರೆ

08/08/2025 5:49 PM

ಮುರಿದು ಬಿದ್ದ ವಿದ್ಯುತ್ ಕಂಬ, ಹಾನಿಗೊಳಗಾದ ಸೈನ್ ಬೋರ್ಡ್ ತೆರವಿಗೆ ಬಿಬಿಎಂಪಿ ಆದೇಶ

08/08/2025 5:43 PM
State News
KARNATAKA

ಪ್ರಜ್ವಲ್‌ ರೇವಣ್ಣ ಜೀವಾವಧಿ ಶಿಕ್ಷೆ ಬಗ್ಗೆ H.D.ರೇವಣ್ಣ ಕುಟುಂಬದಿಂದ ಫಸ್ಟ್ ರಿಯಾಕ್ಷನ್

By kannadanewsnow0908/08/2025 6:16 PM KARNATAKA 1 Min Read

ಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಆಗಿದೆ. ಈ ಬಗ್ಗೆ ಎಚ್‌ಡಿ ರೇವಣ್ಣ ಕುಟುಂಬದಿಂದ…

ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿ ನಾಯಕರ ಪಾತ್ರವೇ ಇಲ್ಲ: ಆರ್‌.ಅಶೋಕ

08/08/2025 5:56 PM

ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಸಹಾಯವಾಣಿಗೆ ಭರ್ಜರಿ ರೆಸ್ಪಾನ್ಸ್: ಪ್ರತಿನಿತ್ಯ 1000ಕ್ಕೂ ಹೆಚ್ಚು ನಾಗರಿಕರ ಕರೆ

08/08/2025 5:49 PM

ಮುರಿದು ಬಿದ್ದ ವಿದ್ಯುತ್ ಕಂಬ, ಹಾನಿಗೊಳಗಾದ ಸೈನ್ ಬೋರ್ಡ್ ತೆರವಿಗೆ ಬಿಬಿಎಂಪಿ ಆದೇಶ

08/08/2025 5:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.