Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ | WATCH VIDEO

ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಸಮಾರಂಭ - Thalapathy Vijay Swearing-in Ceremony as Tamil Nadu CM

Breaking News: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ‘ದಳಪತಿ ವಿಜಯ್’ ಅಧಿಕಾರ ಸ್ವೀಕಾರ !

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಎಂ ಸಿದ್ಧರಾಮಯ್ಯ ಮೇಲೆ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ: ರಾಜಕುಮಾರ ಪಾಟೀಲ ತೇಲ್ಕೂರ
KARNATAKA

ಸಿಎಂ ಸಿದ್ಧರಾಮಯ್ಯ ಮೇಲೆ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ: ರಾಜಕುಮಾರ ಪಾಟೀಲ ತೇಲ್ಕೂರ

By kannadanewsnow09

ಕಲಬುರಗಿ : ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ; ರಾಜ್ಯದ ಜನರಿಗೂ ವಿಶ್ವಾಸ ಇಲ್ಲ ಎಂದು ಬಿಜೆಪಿ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ 15 ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಹಣಕಾಸು ವ್ಯವಸ್ಥೆ ಸಂಪೂರ್ಣ ಹಾಳಾಗಿದೆ.
ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ ಕಾಡುತ್ತಿದೆ. ಸುರ್ಜೇವಾಲಾ ಅವರು ಪದೇಪದೇ ಬೆಂಗಳೂರಿಗೆ ಬರುತ್ತಿದ್ದಾರೆ. ಶಾಸಕರ ಅಭಿಪ್ರಾಯ ಪಡೆದುಕೊಳ್ಳುತ್ತಿದ್ದಾರೆ. ಇವತ್ತು ಮತ್ತೆ ಬಂದಿದ್ದಾರೆ. 3 ದಿನಗಳ ಕಾಲ ಇರುತ್ತಾರೆ. ಡಿ.ಕೆ.ಶಿವಕುಮಾರ್ ಜೊತೆ 100 ಶಾಸಕರಿದ್ದಾರೆ. ಅವರಿಗೂ ಅವಕಾಶ ಕೊಡಬೇಕೆಂಬ ನಾನಾ ಹೇಳಿಕೆ ಬರುತ್ತಿದೆ. ಬಿ.ಆರ್.ಪಾಟೀಲರ ಹೇಳಿಕೆ, ರಾಜು ಕಾಗೆಯವರ ಹೇಳಿಕೆಗಳನ್ನು ಗಮನಿಸಿದರೆ ಆಡಳಿತ ಪಕ್ಷದಲ್ಲಿ ಶಾಸಕರು ಮುಖ್ಯಮಂತ್ರಿಗಳ ಮೇಲಿನ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣುತ್ತದೆ ಎಂದು ತಿಳಿಸಿದ್ದರು.

ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸರಿಯಾಗಿ ಇರಬಾರದು

ಎರಡು ಧರ್ಮಗಳ ನಡುವೆ ಸಂಘರ್ಷ ನಡೆಯುತ್ತಿರಬೇಕೆಂಬ ದುರುದ್ದೇಶದಿಂದ ಅಹಿತಕರ ಘಟನೆಗಳು ನಡೆಯುತ್ತಿವೆ. ರಾಜ್ಯ ಸರಕಾರವು ಇದನ್ನು ಗಂಭೀರವಾಗಿ ತೆಗೆದುಕೊಳ್ಳದೆ ಇರುವುದು ದುರಂತ ಎಂದು ಅವರು ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ನಡೆದಿದೆ. ಮೈಸೂರಿನಲ್ಲಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನೇ ಬೆದರಿಸಿದ ಷಡ್ಯಂತ್ರ ನಡೆಯುತ್ತಿದೆ. ಟಿಪ್ಪು ಜಯಂತಿ ಸಂದರ್ಭದಲ್ಲಿ ಸಮಸ್ಯೆ ಆಗಿದೆ. ಗಣೇಶ ಹಬ್ಬದ ಸಂದರ್ಭದಲ್ಲೂ ಸಮಸ್ಯೆಗಳು ಆಗುತ್ತಿವೆ. ಇದು ವ್ಯವಸ್ಥಿತ ಷಡ್ಯಂತ್ರ . ಈ ಷಡ್ಯಂತ್ರದ ವಿರುದ್ಧ ರಾಜ್ಯ ಸರಕಾರವು ಯಾವುದೇ ಕ್ರಮ ಕೈಗೊಳ್ಳದ ಕಾರಣ ಇಂಥ ದೇಶದ್ರೋಹಿಗಳಿಗೂ ಧೈರ್ಯ ಬರುತ್ತಿದೆ ಎಂದು ಆರೋಪಿಸಿದ್ದಾರೆ.

ಯಾರೇನೇ ಮಾಡಿದರೂ ರಾಜ್ಯ ಸರಕಾರ ನಮ್ಮನ್ನು ಬೆಂಬಲಿಸುತ್ತದೆ

ನಮ್ಮನ್ಯಾರೂ ಅಲ್ಲಾಡಿಸಲು ಆಗುವುದಿಲ್ಲ; ಯಾವುದೇ ಶಿಕ್ಷೆ ಕೊಡಲಾಗದು ಎಂಬಂತಿದೆ. ರಾಜ್ಯದಲ್ಲಿ ಬೇಲಿಯೇ ಎದ್ದು ಹೊಲ ಮೇಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ದುಷ್ಕøತ್ಯಗಳು ನಡೆಯುತ್ತಿವೆ. ಬಿಜೆಪಿ ಇದನ್ನು ಬಲವಾಗಿ ಖಂಡಿಸುತ್ತದೆ. ರಾಜ್ಯದ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಗಮನಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಆಡಳಿತ ಸಂಪೂರ್ಣ ಕುಸಿದು ಬಿದ್ದಿದೆ. ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಎಂಬುದಕ್ಕೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ರಸ್ತೆಗಳು, ಅಭಿವೃದ್ಧಿ ಕೆಲಸ ಆಗಬೇಕೆಂದಿದ್ದರೆ ಗ್ಯಾರಂಟಿಗಳನ್ನು ನಾವು ನಿಲ್ಲಿಸುತ್ತೇವೆ ಎಂದಿರುವುದೇ ಸ್ಪಷ್ಟ ಪುರಾವೆ ಎಂದು ತಿಳಿಸಿದರು.

ಬಿಜೆಪಿಯವರು ಆರ್ಥಿಕ ಪರಿಸ್ಥಿತಿ ಕುರಿತು ಹೇಳಿದರೆ, ಸರಕಾರಿ ನೌಕರರಿಗೆ ಸಂಬಳ ಕೊಡಲಾಗದ ಸ್ಥಿತಿ ಇದೆ ಎಂದು ಹೇಳಿದರೆ ಎಲ್ಲವೂ ಸರಿ ಇದೆ ಎಂದು ಸಿದ್ದರಾಮಯ್ಯನವರು ಹೇಳುತ್ತಾರೆ. ಅವರದೇ ಆರ್ಥಿಕ ಸಲಹೆಗಾರರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರೆ ಇದು ರಾಯರೆಡ್ಡಿ ಅವರ ಹೇಳಿಕೆ ಅಲ್ಲ; ಸ್ವತಃ ಮುಖ್ಯಮಂತ್ರಿಗಳೇ ಗ್ಯಾರಂಟಿ ಅನುಷ್ಠಾನಕ್ಕೆ ಹಣ ಕ್ರೋಡೀಕರಿಸಲು ಸಾಧ್ಯವಾಗದೇ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಎಂಬುದನ್ನು ಹಾಗೂ ಅಭಿವೃದ್ಧಿಗೆ ಹಣ ಕೊಡಲು ಸಾಧ್ಯವಿಲ್ಲ ಎಂಬುದನ್ನು ಅವರ ಮೂಲಕ ಹೇಳಿಸಿದ್ದಾರೆ ಎಂದು ತಿಳಿಸಿದರು.

ರಾಜ್ಯ ಸರಕಾರದ ಬಗ್ಗೆ ಜನರು ಬೇಸತ್ತಿದ್ದಾರೆ. ನಾಡಿನ ಜನರು ಭ್ರಷ್ಟ, ಜನವಿರೋಧಿ, ರೈತವಿರೋಧಿ ಸರಕಾರಕ್ಕೆ ಮತ ಕೊಟ್ಟು ಅಧಿಕಾರಕ್ಕೆ ತಂದಿರುವುದಕ್ಕೆ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು ತೇಲ್ಕೂರ ಹೇಳಿದರು.

ಡಿಸಿಇಟಿ ಪರೀಕ್ಷೆ ಬರೆದಿದ್ದವರ ಗಮನಕ್ಕೆ: ಆಪ್ಷನ್ಸ್ ದಾಖಲಿಸಲು ದಿನಾಂಕ ವಿಸ್ತರಣೆ | DCET Exam 2025

SHOCKING: ರಾಜ್ಯದಲ್ಲೊಂದು ‘ಪೈಶಾಚಿಕ ಕೃತ್ಯ’: ಮಂಡ್ಯದಲ್ಲಿ ವೃದ್ಧನಿಂದ ಅಪ್ರಾಪ್ತೆ ಮೇಲೆ ‘ಲೈಂಗಿಕ ದೌರ್ಜನ್ಯ’

Share. Facebook Twitter LinkedIn WhatsApp Email

Related Posts

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

1 Min Read

ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಸಾಧಿಸಿದ ಬೆಳಗಾವಿಯ ಪ್ರತಿಭೆ ಬಸವರಾಜ ಕೆಂಪವಾಡ

3 Mins Read

BIG NEWS : ಸಚಿವ ಡಿ. ಸುಧಾಕರ್, ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚನೆ

2 Mins Read
Recent News

BREAKING : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ | WATCH VIDEO

ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಸಮಾರಂಭ - Thalapathy Vijay Swearing-in Ceremony as Tamil Nadu CM

Breaking News: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ‘ದಳಪತಿ ವಿಜಯ್’ ಅಧಿಕಾರ ಸ್ವೀಕಾರ !

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಸಾಧಿಸಿದ ಬೆಳಗಾವಿಯ ಪ್ರತಿಭೆ ಬಸವರಾಜ ಕೆಂಪವಾಡ

State News
KARNATAKA

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

By kannadanewsnow05 KARNATAKA 1 Min Read

ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ…

ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಸಾಧಿಸಿದ ಬೆಳಗಾವಿಯ ಪ್ರತಿಭೆ ಬಸವರಾಜ ಕೆಂಪವಾಡ

BIG NEWS : ಸಚಿವ ಡಿ. ಸುಧಾಕರ್, ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚನೆ

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.