Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ : ಓರ್ವ ಮಹಿಳೆಗೆ ಗಾಯ!

25/04/2026 9:43 AM

ಮತದಾನ ಮಾಡುವುದರಿಂದ ಆಯಸ್ಸು ಹೆಚ್ಚುತ್ತೆ! ಸಂಶೋಧನೆಯಿಂದ ಬಯಲಾಯ್ತು ಅಚ್ಚರಿಯ ಸತ್ಯ

25/04/2026 9:40 AM

ಭಾರತೀಯರಲ್ಲಿ ಹೆಚ್ಚುತ್ತಿದೆ ಅನಾರೋಗ್ಯ; ಆದರೆ ಆಸ್ಪತ್ರೆ ವೆಚ್ಚಕ್ಕೆ ಹೆದರಿ ಚಿಕಿತ್ಸೆಯಿಂದ ದೂರ ಉಳಿಯುತ್ತಿದ್ದಾರೆ ಜನ!

25/04/2026 9:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದ ಖಜಾನೆಯಲ್ಲಿ ಏನೂ ಇಲ್ಲ; ಸಾಹುಕಾರನ ಧಿಮಾಕು ಸಾಲಗಾರರು ಬಂದಾಗ ಗೊತ್ತೆ- ಬೊಮ್ಮಾಯಿ
KARNATAKA

ರಾಜ್ಯ ಸರ್ಕಾರದ ಖಜಾನೆಯಲ್ಲಿ ಏನೂ ಇಲ್ಲ; ಸಾಹುಕಾರನ ಧಿಮಾಕು ಸಾಲಗಾರರು ಬಂದಾಗ ಗೊತ್ತೆ- ಬೊಮ್ಮಾಯಿ

By kannadanewsnow0905/04/2026 5:25 PM

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ಪಾಪ‌ರ್ ಸರ್ಕಾರದ ಸಾಹುಕಾರ. ರಾಜ್ಯ ಸರ್ಕಾರದ ಕಿಸೆಯಲ್ಲಿ, ಖಜಾನೆಯಲ್ಲಿ ಏನೂ ಇಲ್ಲ. ಸಾಹುಕಾರನ ಧಿಮಾಕು ಸಾಲಗಾರರು ಬಂದಾಗ ಗೊತ್ತಾಗುತ್ತದೆ. ಈ ಸರ್ಕಾರದ ಬಂಡವಾಳ ಈ ಸರ್ಕಾರ ಹೋದಾಗ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಾಗಲಕೋಟೆಯ ಉಪಚುನಾವಣೆಯ ಹಿನ್ನೆಲೆಯಲ್ಲಿ ಇಂದು ನಗರದ ವಾರ್ಡ ನಂಬರ 29 ರಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮತಯಾಚನೆಯನ್ನು ಮಾಡಿದರು.

ಅಭಿವೃದ್ಧಿ ನಿರಂತರ ನಡೆಯುವ ಪ್ರಕ್ರಿಯೆ ಅದು ಹಳಿ ತಪ್ಪಿದರೆ ಅದನ್ನು ಹಳಿಗೆ ತರುವುದು ದುಬಾರಿಯಾಗುತ್ತದೆ. ಒಂದು ಕೆಲಸ ಈಗ ಮಾಡಿದರೆ 1 ಕೋಟಿ ರೂ. ಇರುತ್ತದೆ. ಅದನ್ನು ಎರಡು ವರ್ಷ ಬಿಟ್ಟರೆ ಎರಡು ಕೋಟಿ ಹೆಚ್ಚಾಗುತ್ತದೆ. ಮೂರು ವರ್ಷದಿಂದ ಯಾವುದೇ ಅಭಿವೃದ್ಧಿ ಕಾರ್ಯ ನಡೆಯದಿರುವುದರಿಂದ ಬಾಗಲಕೋಟೆಯ ವೆಚ್ಚ ಸಾವಿರ ಕೋಟಿ ಹೆಚ್ಚಾಗುತ್ತದೆ. ಬಾಗಲಕೋಟೆಯೊಂದಿಗೆ ನನ್ನ ಸಂಬಂಧ ದೈವಿಚ್ಚೆ. ನಾನು ನೀರಾವರಿ ಸಚಿವನಾಗಿದ್ದಾಗ ಸ್ಟೇಜ್ 1 ನಲ್ಲಿ ಅಭಿವೃದ್ದಿಗೆ 700 ಕೋಟಿ ಕೊಟ್ಟಿದ್ದೆ. ನಾನು ಸಿಎಂ ಆಗಿದ್ದಾಗ ಸ್ಟೇಜ್ 2ಗೆ ವೀರಣ್ಣ ಚರಂತಿ ಮಠ ಅವರ ಹಠ, ಸಂಸದ ಗೋವಿಂದ ಕಾರಜೋಳ ಅವರ ಛಲದಿಂದ 2300 ಕೋಟಿ ರೂ. ಬಿಡುಗಡೆ ಮಾಡಿದ್ದು, ಅದೇ ಕೆಲಸ ನಡೆಯುತ್ತಿದೆ. ಈ ಸರ್ಕಾರದ ಬಳಿ ಹಣ ಇಲ್ಲ. ಸಿದ್ದರಾಮಯ್ಯ ಪಾಪ‌ರ್ ಸರ್ಕಾರದ ಮುಖ್ಯಸ್ಥರು. ಕಿಸೆಯಲ್ಲಿಯೂ ಹಣ ಇಲ್ಲ. ಸರ್ಕಾರದ ಕಿಸೆಯಲ್ಲಿ, ಖಜಾನೆಯಲ್ಲಿ ಏನೂ ಇಲ್ಲ. ಸುಮ್ಮನೆ ಶ್ರೀಮಂತ ಅಪ್ಪ ಅಜ್ಜ ಮುತ್ತಜ್ಞ ಮಾಡಿರುವ ಆಸ್ತಿಯನ್ನು ಹಾಳು ಮಾಡಿ, ಶ್ರೀಮಂತ ಬಳಿ ಏನೂ ಇಲ್ಲ ಅಂತ ಹೇಳುವುದು ಕಷ್ಟ ಅದಕ್ಕಾಗಿ ಆತ ಗರಿ ಗರಿ ಅಂಗಿ ಹಾಕುತ್ತಾನೆ. ಸಾಹುಕಾರನ ಧಿಮಾಕು ಸಾಲಗಾರರು ಬಂದಾಗ ಗೊತ್ತಾಗುತ್ತದೆ. ಮನೆ ಮಂದಿಗಿಂತ ಸಾಲಗಾರರೇ ಹೆಚ್ಚಾಗುತ್ತಾರೆ. ಈ ಸರ್ಕಾರದ ಬಂಡವಾಳ ಈ ಸರ್ಕಾರ ಹೋದಾಗ ಗೊತ್ತಾಗುತ್ತದೆ. ಈಗ ಖಾಲಿ ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ. ಈಗ ಏನು ಕೇಳಿದರೂ ಕೊಡಲು ಅವರ ಬಳಿ ಏನೂ ಇಲ್ಲ ಎಂದರು.

ಬಾಗಲಕೋಟೆಗೆ ಮೆಡಿಕಲ್ ಕಾಲೇಜು ಘೋಷಣೆ ಮಾಡಿದ್ದಾರೆ ಅದಕ್ಕೆ ಹಣ ಕೊಡಲು ಹಣ ಇಲ್ಲ. ವಿದ್ಯಾರ್ಥಿಗಳು ಕಟ್ಟಿದ ಫೀ ಹಣದಲ್ಲಿ ಮೆಡಿಕಲ್ ಕಾಲೇಜು ಕಟ್ಟುತ್ತಾರಂತೆ ಅದು ಸಾಧ್ಯವಿಲ್ಲ. ಬಾಗಲಕೋಟೆ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದ್ದಾರೆ. ಬಾಗಲಕೋಟೆ ವ್ಯಾಪಾರಸ್ಥರಿಗೆ 200 ಎಕರೆ ಜಾಗ ಕೊಡುತ್ತೇನೆ ಎಂದು ಸುಳ್ಳು ಹೇಳಿದ್ದಾರೆ. ಬಾಗಲಕೋಟೆ ವ್ಯಾಪಾಸ್ಯರು ಬುದ್ಧಿವಂತರು ಎಂದು ತಿಳಿದುಕೊಂಡಿದ್ದೇನೆ. ಮೇ 4 ಕ್ಕೆ ಗೊತ್ತಾಗುತ್ತದೆ. ಅವರ ಬಳಿ 200 ಎಕರೆ ಕೊಡಲು ಜಮೀನು ಇಲ್ಲ. ಭೂಸ್ವಾಧೀನ ಮಾಡಿ, ಅಭಿವೃದ್ಧಿ ಮಾಡಿ ಕೊಡಬೇಕು. ಅವರು ಟೊಪ್ಪಿಗೆ ಹಾಕಲು ನೋಡುತ್ತಾರೆ. ಟೊಪಿಗೆ ಹಾಕಿಸಿಕೊಳ್ಳಬೇಡಿ ಎಂದು ಮನವಿ ಮಾಡಿದರು.

ಎಚ್. ವೈ. ಮೇಟಿಗೆ ಅವಮಾನ

2009 ರಲ್ಲಿ ತೋಟಗಾರಿಕೆ ವಿಶ್ವ ವಿದ್ಯಾಲಯ ಮಾಡಬೇಕಿತ್ತು. ನಾವು ನೀರಾವರಿ ಇಲಾಖೆ ಸಂತಸ್ಥರಿಗೆ ಕೊಡಬೇಕೆಂದು ಜಮೀನು ಇಟ್ಟಿದ್ದೇವು. ಅದನ್ನು ತೋಟಗಾರಿಕೆ ವಿಶ್ವ ವಿದ್ಯಾಲಯ ಮಾಡಲು ಕೊಟ್ಟಿದ್ದೇವೆ. ಮೆಡಿಕಲ್ ಕಾಲೇಜು ಎಚ್. ವೈ. ಮೇಟಿ ಕನಸಿತ್ತು ಅಂತ ಈಗ ಸಿಎಂ ಹೇಳುತ್ತಿದ್ದಾರೆ. ಹಿರಿಯ ಶಾಸಕರಾಗಿದ್ದ ಮೇಟಿಯವರಿಗೆ ಒಂದು ಸಚಿವ ಸ್ಥಾನ ನೀಡಿಲ್ಲ ಅವರಿಗೆ ಬಹಳ ಅಪಮಾನ ಆಗಿದೆ. ಅವರು ಹೇಳಿದ್ದ ಕೆಲಸ ಮಾಡಿಲ್ಲ. ಅವರನ್ನು ಗುರುತಿಸಲಿಲ್ಲ. ಈ ಚುನಾವನೆಯಲ್ಲಿ ಚರಂತಿ ಮಠ ಗೆಲ್ಲುವುದು ನಿಶ್ಚಿತ. ಸಿದ್ದರಾಮಯ್ಯ ಸುಳ್ಳಿನ ಸರಮಾಲೆ ಹೇಳಿದ್ದಾರೆ. ಬಾದಾಮಿಗೆ ಒಂದು ಸಣ್ಣ ಕೆಲಸ ಮಾಡಲಿಲ್ಲ, ಕೆರೂರು ಏತ ನೀರಾವರಿ ಮಾಡಿದರೆ ಬಾದಾಮಿ ತಾಲುಕಿನ ರೈತರಿಗೆ ಅನುಕೂಲವಾಗುತ್ತದೆ. ಅದನ್ನು ನಾನು 700 ಕೋಟಿ ರೂ. ಯೋಜನೆ ಪ್ರಾರಂಭಿಸಿ ಸಿದ್ದರಾಮಯ್ಯ ಅವರನ್ನು ಕರೆಯಿಸಿ ಉದ್ಘಾಟಿಸಿದ್ದೇನೆ. ಪತ್ರಕರ್ತರು ಸಿದ್ದರಾಮಯ್ಯ ಅವರನ್ನು ಬಾದಾಮಿ ಯಾಕೆ ಬಿಟ್ಟರಿ ಅಂತ ಕೇಳಿದರೆ ಬಾದಾಮಿ ಬಹಳ ದೂರ ಆಗುತ್ತದೆ ಎಂದು ಹೇಳಿದ್ದಾರೆ. ಮೈಸೂರಿನವರು ದೂರ ಮಾಡಿದಾಗ ಬಾದಾಮಿಯವರು ಹತ್ತಿರ ಆಗಿದ್ದರು. ಈಗ ಬಾದಾಮಿಯವರು ದೂರ ಆಗಿದ್ದಾರೆ ಎಂದರು.

ವೀರಣ್ಣ ಚರಂತಿಮಠ ಅವರು ಕ್ರಿಯಾಶೀಲ ಯುವಕ, ಸಮಯ ಪ್ರಜ್ಞೆ ಇರುವ ವ್ಯಕ್ತಿ. ಕೆಲಸಗಾರರು ಯಾರೂ ಕತೆ ಹೇಳುವುದಿಲ್ಲ. ಬಾಗಲಕೋಟೆ ಸಮಗ್ರ ಅಭಿವೃದ್ಧಿ ಆಗಬೇಕೆಂದರೆ ವೀರಣ್ಣ ಚರಂತಿಮಠ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಈ ಸಂಧರ್ಭದಲ್ಲಿ ಸಂಸದ ಗೋವಿಂದ ಕಾರಜೋಳ, ಶಿವಬಸವ ಬಳ್ಳಾರಿ ಸೇರಿದಂತೆ ವಾರ್ಡಿನ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಹುಡುಗಿಯರಿಗೆ ಹುಡುಗರಲ್ಲಿ ಇಷ್ಟವಾಗುವ ಆ ‘ಒಂದು’ ಗುಣ ಯಾವುದು? ಆಕರ್ಷಣೆಯ ಹಿಂದಿನ ಸೈಕಾಲಜಿ ಇಲ್ಲಿದೆ!

Share. Facebook Twitter LinkedIn WhatsApp Email

Related Posts

BREAKING : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ : ಓರ್ವ ಮಹಿಳೆಗೆ ಗಾಯ!

25/04/2026 9:43 AM1 Min Read

BREAKING : ಹೋಟೆಲ್ ಗೆ ನುಗ್ಗಿ ಮೀಟರ್ ಬಡ್ಡಿ ದಂಧೆ ಕಿಂಗ್ ಪಿನ್ ಬರ್ಬರ ಹತ್ಯೆ : ಬೆಚ್ಚಿಬಿದ್ದ ಉತ್ತರಕನ್ನಡ ಜನತೆ!

25/04/2026 9:20 AM1 Min Read

BREAKING : ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡಗೆ ಬಿಗ್ ಶಾಕ್ : ಶೃಂಗೇರಿ ಚುನಾವಣೆ ಅಂಚೆ ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ!

25/04/2026 8:34 AM1 Min Read
Recent News

BREAKING : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ : ಓರ್ವ ಮಹಿಳೆಗೆ ಗಾಯ!

25/04/2026 9:43 AM

ಮತದಾನ ಮಾಡುವುದರಿಂದ ಆಯಸ್ಸು ಹೆಚ್ಚುತ್ತೆ! ಸಂಶೋಧನೆಯಿಂದ ಬಯಲಾಯ್ತು ಅಚ್ಚರಿಯ ಸತ್ಯ

25/04/2026 9:40 AM

ಭಾರತೀಯರಲ್ಲಿ ಹೆಚ್ಚುತ್ತಿದೆ ಅನಾರೋಗ್ಯ; ಆದರೆ ಆಸ್ಪತ್ರೆ ವೆಚ್ಚಕ್ಕೆ ಹೆದರಿ ಚಿಕಿತ್ಸೆಯಿಂದ ದೂರ ಉಳಿಯುತ್ತಿದ್ದಾರೆ ಜನ!

25/04/2026 9:32 AM

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಸಂಚಲನ: ರಷ್ಯಾ ಮತ್ತು ಇರಾನ್ ತೈಲ ಆಮದು ರಿಯಾಯಿತಿ ವಿಸ್ತರಿಸಲು ಅಮೆರಿಕ ನಕಾರ!

25/04/2026 9:21 AM
State News
KARNATAKA

BREAKING : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ : ಓರ್ವ ಮಹಿಳೆಗೆ ಗಾಯ!

By kannadanewsnow0525/04/2026 9:43 AM KARNATAKA 1 Min Read

ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ…

BREAKING : ಹೋಟೆಲ್ ಗೆ ನುಗ್ಗಿ ಮೀಟರ್ ಬಡ್ಡಿ ದಂಧೆ ಕಿಂಗ್ ಪಿನ್ ಬರ್ಬರ ಹತ್ಯೆ : ಬೆಚ್ಚಿಬಿದ್ದ ಉತ್ತರಕನ್ನಡ ಜನತೆ!

25/04/2026 9:20 AM

BREAKING : ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡಗೆ ಬಿಗ್ ಶಾಕ್ : ಶೃಂಗೇರಿ ಚುನಾವಣೆ ಅಂಚೆ ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ!

25/04/2026 8:34 AM

BREAKING : ಮೈಸೂರು ಚಾಮುಂಡಿ ಬೆಟ್ಟದಲ್ಲಿ ಭೀಕರ ಕೊಲೆ : ಕುಡಿತದ ಚಟದಿಂದ ಬೇಸತ್ತು ಮಗನನ್ನೆ ಕೊಂದ ತಾಯಿ!

25/04/2026 8:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.