Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

21/12/2025 4:03 PM

ಸೊರಬದ ಉಳವಿಯಲ್ಲಿ ನೂತನ KSRTC ಬಸ್ ನಿಲ್ದಾಣ, ಆಸ್ಪತ್ರೆ ಕ್ವಾಟ್ರಾಸ್ ನಿರ್ಮಾಣ: ಸಚಿವ ಮಧು ಬಂಗಾರಪ್ಪ

21/12/2025 3:58 PM

BREAKING : ರಾಜ್ಯದ ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನದಂದು ಗೃಹಲಕ್ಷ್ಮಿ 24ನೇ ಕಂತಿನ ಹಣ ಖಾತೆಗೆ ಜಮೆ!

21/12/2025 3:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕಾಂಗ್ರೆಸ್ ಶಾಸಕ’ರಲ್ಲಿ ಅತೃಪ್ತಿಯ ಬೇಗುದಿ ಇದೆ, ಅದು ಯಾವಾಗ ಅಸ್ಫೋಟಿಸುತ್ತೋ ಗೊತ್ತಿಲ್ಲ- HDK ಭವಿಷ್ಯ
KARNATAKA

‘ಕಾಂಗ್ರೆಸ್ ಶಾಸಕ’ರಲ್ಲಿ ಅತೃಪ್ತಿಯ ಬೇಗುದಿ ಇದೆ, ಅದು ಯಾವಾಗ ಅಸ್ಫೋಟಿಸುತ್ತೋ ಗೊತ್ತಿಲ್ಲ- HDK ಭವಿಷ್ಯ

By kannadanewsnow0919/10/2024 6:28 PM

ಮಂಡ್ಯ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯಲಿಲ್ಲ. ಜನರು ಮತ್ತು ಆ ಪಕ್ಷದ ಶಾಸಕರೇ ಸರ್ಕಾರವನ್ನು ತೆಗೆಯುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಭವಿಷ್ಯ ನುಡಿದರು.

ಮಂಡ್ಯದಲ್ಲಿ ಉದ್ಯೋಗ ಮೇಳದ ಸಮಾರೋಪದ ನಂತರ ಮಾಧ್ಯಮಗಳ ಜತೆ ಅವರು ಮಾತನಾಡಿದರು.

2028ರವರೆಗೆ ಈ ಸರ್ಕಾರ ನಡೆಯಲ್ಲ. ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನದ ಬೇಗುದಿ ಇದೆ. ಅದು ಯಾವಾಗ ಅಸ್ಪೋಟ ಆಗುತ್ತದೆ ಎನ್ನುವುದು ಗೊತ್ತಿಲ್ಲ. ಕಾದು ನೋಡೋಣ. ನಾವು ಅವರ ಸರ್ಕಾರ ಅಲ್ಲಾಡಿಸುತ್ತೇವೆ ಎನ್ನುವುದು ಸರಿಯಲ್ಲ, ಅವರ ಶಾಸಕರು ಮತ್ತು ಜನರೇ ಸರ್ಕಾರದ ಬುಡ ಅಲ್ಲಾಡಿಸುತ್ತಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದರು ಸಚಿವರು.

ಸರ್ಕಾರದ ನಿಷ್ಕ್ರಿಯತೆಯಿಂದ ಶಾಸಕರು ಹಳ್ಳಿಗೆ ಹೋಗಿ ಜನರನ್ನು ಭೇಟಿ ಮಾಡದಂತಹ ವಾತಾವರಣ ಸೃಷ್ಟಿಯಾಗಿದೆ. ಸರ್ಕಾರದ ನಡವಳಿಕೆ ಬಗ್ಗೆ ಅವರಲ್ಲೇ ವಿಪರೀತ ಅಸಮಾಧಾನ ಇದೆ, ಅದು ಸ್ಪೋಟವಾಗುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

2028ರ ವರೆಗೆ ಈ ಸರ್ಕಾರ ನಡೆಯಲ್ಲ ಎನ್ನುವುದು ಖಚಿತ. ಮತ್ತೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಜನರು ಒಂದು ಅವಕಾಶ ಕೊಡುತ್ತಾರೆ ಸಿಗುವ ವಿಶ್ವಾಸ ಇದೆ. 2028ರ ಒಳಗೆ ಆ ಅವಕಾಶ ಬರುತ್ತದೆ. ನಾನು ಜ್ಯೋತಿಷ್ಯಗಾರನಲ್ಲ‌, ಆದರೂ ಹೇಳುತ್ತಿದ್ದೇನೆ ಎಂದರು ಸಚಿವರು.

ಜನ ಮತ್ತೆ ತೀರ್ಮಾನ ಮಾಡ್ತಾರೆ ಅನ್ನುವ ವಿಶ್ವಾಸದಲ್ಲಿದ್ದೇನೆ. ಜನ ಬಯಸಿದರೆ ಯಾಕೆ ಆಗಬಾರದು‌? ನಾನು ಮುಖ್ಯಮಂತ್ರಿ ಸ್ಥಾನ ಐದು ವರ್ಷಗಳ ಸರ್ಕಾರ ಕೊಡಿ ಅಂತ ಜನತೆಗೆ ಈಗಲೂ ಮನವಿ ಮಾಡುತ್ತೇನೆ. ನನ್ನ 14 ತಿಂಗಳ ಆಡಳಿತ, ಬೇರೆಯವರ ಹಂಗಿನಲ್ಲಿ ಮಾಡಿದ್ದು. ಇನ್ನೊಬ್ಬರ ಹಂಗಿನಲ್ಲಿ ಸರ್ಕಾರ ಮಾಡಿದಾಗಲೂ ನಾಡಿಗೆ ಕೊಟ್ಟ ಜನಪರ ಕಾರ್ಯಕ್ರಮಗಳ ಬಗ್ಗೆ ಜನ ಮರೆತಿಲ್ಲ ಎಂದರು ಅವರು.

ಕರ್ನಾಟಕ ಸಮೃದ್ಧಿಯ ನಾಡು. ಒಂದು ಅವಕಾಶ ಕೊಟ್ಟರೆ ನಾನು ಉತ್ತಮ ಕೆಲಸ ಮಾಡುತ್ತೇನೆ. ಯಾವ ಕುಟುಂಬವೂ ತಮ್ಮ ಬದುಕಿಗಾಗಿ ಕೈ ಒಡ್ಡುವ ಪರಿಸ್ಥಿತಿ ಬರಬಾರದು. ಇನ್ನೊಬ್ಬರಿಗೆ ಕೈ ಎತ್ತಿ ಕೊಡುವ ಆರ್ಥಿಕ ಶಕ್ತಿ ಕೊಡುವ ರಾಜ್ಯ ಇದು. ಹಣ ಇವತ್ತು ಲೂಟಿಯಾಗುತ್ತಿದೆ. ಸರ್ಕಾರದ ಆಸ್ತಿ ಕಬಳಿಕೆ ಆಗುತ್ತಿದೆ. ಇದಕ್ಕೆ ಕಡಿವಾಣ ಹಾಕಿದರೆ ಇವರು ಕೊಡುವ 2 ಸಾವಿರ ಅಲ್ಲ, ಕನಿಷ್ಠ 10 ಸಾವಿರ ಸಂಪಾದನೆ ಮಾಡುವ ಕಾರ್ಯಕ್ರಮಗಳನ್ನು ಜಾರಿ ಮಾಡಬಹುದು. ಮುಂದೆ ಜನರು ಒಂದು ಅವಕಾಶ ನೀಡುತ್ತಾರೆ ಎನ್ನುವ ವಿಶ್ವಾಸ ಇದೆ. 2028ರ ಒಳಗೆ ಆ ಅವಕಾಶ ಬರುತ್ತದೆ ಎಂದು ನಂಬಿದ್ದೇನೆ. ನಾನು ಜ್ಯೋತಿಷ್ಯಗಾರನಲ್ಲ‌, ಆಶಾವಾದಿ ಅಷ್ಟೇ. ಈ ಸರ್ಕಾರದ ನಡವಳಿಕೆಯ ಬಗ್ಗೆ ಜನರು ಬೇಸತ್ತಿದ್ದಾರೆ ಎಂದರು ಅವರು.

ಯಾರನ್ನೋ ಮೆಚ್ಚಿಸಲಿಕ್ಕೆ ಉದ್ಯೋಗ ಮೇಳ ಮಾಡಿಲ್ಲ

ಕುಮಾರಸ್ವಾಮಿ ಜನರಿಗೆ ಕೊಡಿಸಲಿ, ಕೈಗಾರಿಕೆಗಳನ್ನು ಸ್ಥಾಪನೆ ಮಾಡಲಿ ಎಂದು ಕೆಲ ಕಾಂಗ್ರೆಸ್ ಸಚಿವರು ಹೇಳಿದ್ದಾರೆ ಎಂದು ವರದಿಗಾರರು ಗಮನ ಸೆಳೆದಾಗ ಸಚಿವರು ಹೇಳಿದ್ದಿಷ್ಟು; ಟಕ್ಕರ್ ಕೊಡುವುದಲ್ಲ ನನ್ನ ಜವಾಬ್ದಾರಿ, ನನ್ನ ಕೆಲಸ ನಾನು ನಿರ್ವಹಣೆ ಮಾಡಿದ್ದೇನೆ. ಇನ್ನೊಬ್ಬರ ಮೆಚ್ಚಿಸಲು ನಾನು ಕೆಲಸ ಮಾಡಲ್ಲ, ಜನರು ನಂಬಿ ಮತ ಕೊಟ್ಟಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡ್ತಿದ್ದೇನೆ. ಇನ್ನೊಬ್ಬರ ಸರ್ಟಿಫಿಕೇಟ್ ಗೆ ನಾನು ಕೆಲಸ ಮಾಡುವವನಲ್ಲ ನಾನು. ಸಣ್ಣದಾಗಿ ಮಾತನಾಡುವವರಿಗೆ ಇದೆ ತಕ್ಕ ಉತ್ತರ ಎಂದರು ಅವರು.

2018ರಲ್ಲಿ ನಾನು ಸಿಎಂ ಆಗಿದ್ದಾಗ 50 ಸಾವಿರ ಉದ್ಯೋಗ ಸೃಷ್ಟಿಸಲು ಡಿಸ್ನಿಲ್ಯಾಂಡ್ ಯೋಜನೆ ರೂಪಿಸಲಾಗಿತ್ತು. ಕಾವೇರಿ ಪ್ರತಿಮೆ ಸ್ಥಾಪಿಸುವ ಉದ್ದೇಶ ಇತ್ತು. ನನ್ನ ಸರಕಾರ ಹೋಯಿತು, ಅದು ಅಲ್ಲಿಗೇ ನಿಂತಿತು. ಇವರು ಏನು ಮಾಡುತ್ತಾರೆ ಎನ್ನುವುದನ್ನು ನೋಡೋಣ. ರೈತ ವಿರೋಧಿ ನೀತಿ ಅನುಸರಿಸಿ ಯಾವುದೇ ಕಾರ್ಯಕ್ರಮ ಆಗಬಾರದು. ನಮ್ಮ ರೈತರ ಹೊಲಕ್ಕೆ ನೀರು ಬಿಡಬೇಕು. ರೈತರನ್ನು ಕರೆದು ಅವರ ಅನುಮಾನಗಳನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.

BREAKING: ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪೊಲೀಸರು ವಶಕ್ಕೆ | Union Minister Bandi Sanjay Kumar

BREAKING: ಜಮೀನು ವಿಚಾರಕ್ಕೆ ದಾಂಧಲೆ: ‘ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್’ ವಿರುದ್ಧ ‘FIR’ ದಾಖಲು

BREAKING : ಜಪಾನ್‌ನ ಆಡಳಿತ ಪಕ್ಷದ ಪ್ರಧಾನ ಕಛೇರಿಯ ಮೇಲೆ ಬಾಂಬ್ ದಾಳಿ : ಸ್ಥಳದಲ್ಲೇ ಶಂಕಿತ ಅರೆಸ್ಟ್!

Share. Facebook Twitter LinkedIn WhatsApp Email

Related Posts

5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

21/12/2025 4:03 PM1 Min Read

ಸೊರಬದ ಉಳವಿಯಲ್ಲಿ ನೂತನ KSRTC ಬಸ್ ನಿಲ್ದಾಣ, ಆಸ್ಪತ್ರೆ ಕ್ವಾಟ್ರಾಸ್ ನಿರ್ಮಾಣ: ಸಚಿವ ಮಧು ಬಂಗಾರಪ್ಪ

21/12/2025 3:58 PM2 Mins Read

BREAKING : ರಾಜ್ಯದ ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನದಂದು ಗೃಹಲಕ್ಷ್ಮಿ 24ನೇ ಕಂತಿನ ಹಣ ಖಾತೆಗೆ ಜಮೆ!

21/12/2025 3:21 PM1 Min Read
Recent News

5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

21/12/2025 4:03 PM

ಸೊರಬದ ಉಳವಿಯಲ್ಲಿ ನೂತನ KSRTC ಬಸ್ ನಿಲ್ದಾಣ, ಆಸ್ಪತ್ರೆ ಕ್ವಾಟ್ರಾಸ್ ನಿರ್ಮಾಣ: ಸಚಿವ ಮಧು ಬಂಗಾರಪ್ಪ

21/12/2025 3:58 PM

BREAKING : ರಾಜ್ಯದ ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನದಂದು ಗೃಹಲಕ್ಷ್ಮಿ 24ನೇ ಕಂತಿನ ಹಣ ಖಾತೆಗೆ ಜಮೆ!

21/12/2025 3:21 PM

ಕೊಲ್ಲೂರು ದೇವಸ್ಥಾನ ಹೆಸರಲ್ಲಿ ನಕಲಿ ವೆಬ್ ಸೈಟ್ ತೆರೆದು ವಂಚಿಸಿದ ಆರೋಪಿ ಅರೆಸ್ಟ್

21/12/2025 3:19 PM
State News
KARNATAKA

5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

By kannadanewsnow0921/12/2025 4:03 PM KARNATAKA 1 Min Read

ಬೆಂಗಳೂರು: ಇಂದಿನಿಂದ ರಾಜ್ಯಾಧ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯುತ್ತಿದೆ. ಪೋಷಕರು ತಮ್ಮ 5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ…

ಸೊರಬದ ಉಳವಿಯಲ್ಲಿ ನೂತನ KSRTC ಬಸ್ ನಿಲ್ದಾಣ, ಆಸ್ಪತ್ರೆ ಕ್ವಾಟ್ರಾಸ್ ನಿರ್ಮಾಣ: ಸಚಿವ ಮಧು ಬಂಗಾರಪ್ಪ

21/12/2025 3:58 PM

BREAKING : ರಾಜ್ಯದ ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನದಂದು ಗೃಹಲಕ್ಷ್ಮಿ 24ನೇ ಕಂತಿನ ಹಣ ಖಾತೆಗೆ ಜಮೆ!

21/12/2025 3:21 PM

ಕೊಲ್ಲೂರು ದೇವಸ್ಥಾನ ಹೆಸರಲ್ಲಿ ನಕಲಿ ವೆಬ್ ಸೈಟ್ ತೆರೆದು ವಂಚಿಸಿದ ಆರೋಪಿ ಅರೆಸ್ಟ್

21/12/2025 3:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.