Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುದ್ಧದ ಮಧ್ಯೆ ‘LPG ಉತ್ಪಾದನೆ’ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಮಾಸ್ಟರ್ ಪ್ಲ್ಯಾನ್ ; ‘ತುರ್ತು ಕಾನೂನು’ ಜಾರಿ!

06/03/2026 6:41 PM

“ಯುದ್ಧಗಳಲ್ಲಿ ನಾಗರಿಕ ಸಾಯಬಾರದು” : ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಶ್ರೀಲಂಕಾ ಅಧ್ಯಕ್ಷ ಶಾಂತಿಯ ಕರೆ

06/03/2026 6:33 PM

ಕಣ್ಣಲ್ಲಿ ನೀರು ತರಿಸುವ ‘ಈರುಳ್ಳಿ’ ಆರೋಗ್ಯಕ್ಕೆ ವರದಾನ: ‘ಹಸಿ ಈರುಳ್ಳಿ ಸೇವನೆ’ಯಿಂದ ಹತ್ತಾರು ಲಾಭ!

06/03/2026 6:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್ ಸರಕಾರದಲ್ಲಿ ಅಭಿವೃದ್ಧಿ ಶೂನ್ಯ- ಬಿ.ವೈ ವಿಜಯೇಂದ್ರ ವಾಗ್ದಾಳಿ
KARNATAKA

ಕಾಂಗ್ರೆಸ್ ಸರಕಾರದಲ್ಲಿ ಅಭಿವೃದ್ಧಿ ಶೂನ್ಯ- ಬಿ.ವೈ ವಿಜಯೇಂದ್ರ ವಾಗ್ದಾಳಿ

By kannadanewsnow0917/04/2024 7:29 PM

ಬೆಂಗಳೂರು: ಕಳೆದ ಹನ್ನೊಂದು ತಿಂಗಳುಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ನಂತರ ಯಾವುದೇ ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ. ಮಾನ್ಯ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ 1,800 ಕೋಟಿ ರೂ ಅನುದಾನವನ್ನು ಮಂಡ್ಯದ ಅಭಿವೃದ್ಧಿಗೆ ನೀಡಿದ್ದಾರೆ. ಆದರೆ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಶೂನ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಎನ್‍ಡಿಎ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಅವರ ಪರವಾಗಿ ಕೆ.ಆರ್.ಪೇಟೆಯಲ್ಲಿ ಇಂದು ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರಕಾರ ಬಂದ ನಂತರ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ. ಭೀಕರ ಬರಗಾಲ ಇದ್ದರೂ, 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಈ ಸರಕಾರಕ್ಕೆ ಕನಿಕರ ಬರುತ್ತಿಲ್ಲ ಎಂದು ಟೀಕಿಸಿದರು.

ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದಾಗ ರೈತರ ಸಾಲಮನ್ನಾ ಮಾಡಿದ್ದರು. ಹಿಂದೆ ಭೀಕರ ಪ್ರವಾಹ ಆದಾಗ ಬಿಎಸ್‍ವೈ ಅವರು ಉತ್ತರ ಕರ್ನಾಟಕದ ರೈತರಿಗೆ ನ್ಯಾಯ ಕೊಡುವ ಕೆಲಸ ಮಾಡಿದರು. ಮನೆ ಕಳೆದುಕೊಂಡ ರೈತರಿಗೆ 5 ಲಕ್ಷ ರೂ ಪರಿಹಾರ ಕೊಟ್ಟಿದ್ದರು. ಬಡ ರೈತರ ಮನೆಯಲ್ಲಿ ದೀಪಾವಳಿ ಆಚರಣೆ ಮಾಡುತ್ತೇನೆ ಎಂದು ಹೇಳಿ ಅದರಂತೆ ಮಾಡಿದ್ದರು. ಬಿಎಸ್‍ವೈ ಅವರು ರೈತರ ಪಂಪ್ ಸೆಟ್‍ಗಳಿಗೆ ಉಚಿತ ವಿದ್ಯುತ್ ಕೊಟ್ಟಿದ್ದರು. ಒಂದು ಕಡೆ ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ಮಾಡಿದ್ದರೆ, ಯಡಿಯೂರಪ್ಪನವರು ಸಹ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ ಎಂದು ಹೇಳಿದರು.

ರೈತನಿಗೆ ಬರೆ ಎಳೆಯುವ ಕೆಲಸ..

ಈಗ ನಾಡಿನ ಮಖ್ಯಮಂತ್ರಿಗಳು ಬರಗಾಲದ ಸಂದರ್ಭದಲ್ಲಿ ರೈತನಿಗೆ ಬರೆ ಎಳೆಯುವ ಕೆಲಸ ಮಾಡುತ್ತಿದ್ದಾರೆ. ಹಿಂದೆ ಬಿಜೆಪಿ ಸರಕಾರವಿದ್ದಾಗ ರೈತನೊಬ್ಬ ತನ್ನ ಹೊಲಕ್ಕೆ ಟ್ರಾನ್ಸ್‍ಫಾರ್ಮರ್ ಹಾಕಿಸಿಕೊಳ್ಳಬೇಕಿದ್ದರೆ 25 ಸಾವಿರ ರೂ ಕಟ್ಟಿದ್ದರೆ ಸಾಕಿತ್ತು. ಆದರೆ ಈಗ ಸಿದ್ದರಾಮಯ್ಯ ಸರಕಾರ ಬಂದ ನಂತರ ರೈತರು 3 ಲಕ್ಷ ರೂ. ಶುಲ್ಕ ಕಟ್ಟ ಬೇಕಾಗಿದೆ. ಈ ಬರದ ಸಂದರ್ಭದಲ್ಲಿ ರೈತರಿಗೆ 3 ಲಕ್ಷ ಕಟ್ಟುವ ಸಂಕಷ್ಟವನ್ನು ಹೇಗೆ ತಾನೇ ನಿಭಾಯಿಸಲು ಸಾಧ್ಯ? ಕಾಂಗ್ರೆಸ್ ಸರಕಾರ ಬಡವರ ವಿರೋಧಿ ಸರಕಾರ ಎಂದು ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದರು.

ಗ್ಯಾರಂಟಿ ನೆಪ ಮಾಡಿಕೊಂಡು ಒಂದು ಕೈಯಲ್ಲಿ ಕಿತ್ತುಕೊಂಡು ಇನ್ನೊಂದು ಕೈಯಲ್ಲಿ ಕೊಡುವ ಕೆಲಸ ಮಾಡುತ್ತಿದೆ ಈ ಕಾಂಗ್ರೆಸ್ ಸರಕಾರ. ಉಚಿತ ವಿದ್ಯುತ್ ಎನ್ನುತ್ತಲೇ ಸಣ್ಣ ಸಣ್ಣ ವ್ಯಾಪಾರಿಗಳು 5ರಿಂದ 8000 ರೂ ವರೆಗೆ ಬಿಲ್ ಕಟ್ಟಬೇಕಾದ ಅನಿವಾರ್ಯತೆ ಬಂದಿದೆ. ಬಸ್ಸಲ್ಲಿ ಓಡಾಡಬೇಕಾದರೆ 30-40% ಟಿಕೆಟ್ ದರ ಜಾಸ್ತಿ. ಹಾಲಿನ ದರ ಜಾಸ್ತಿ ಆದರೂ ಅದರ ಲಾಭ ರೈತರಿಗೆ ಆಗುತ್ತಿಲ್ಲ. ಬಿಜೆಪಿ ಸರಕಾರ ಇದ್ದಾಗ ರೈತರಿಗೆ ಹಾಲಿನ ಪ್ರೋತ್ಸಾಹಧನ 5 ರೂ ನೀಡಲಾಗುತ್ತಿತ್ತು. ಆದರೆ ಕಾಂಗ್ರೆಸ್ ಸರಕಾರ ಬಂದ ಮೇಲೆ ಆ ಪ್ರೋತ್ಸಾಹಧನ ನಿಲ್ಲಿಸಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಲ್ಲಿ 4,000 ರೂ ಕೊಡುತ್ತಿದ್ದುದನ್ನು ಕೂಡ ನಿಲ್ಲಿಸಿದ್ದಾರೆ. ರೈತರಿಗೆ ನೆರವಾಗುವ ಎಲ್ಲ ಯೋಜನೆಗಳನ್ನು ಕಿತ್ತುಕೊಂಡಿರುವ ಕಾಂಗ್ರೆಸ್ ಸರಕಾರ ತಾನು ರೈತಪರ ಎಂದು ಯಾವ ಭಂಡ ಧೈರ್ಯದಿಂದ ಹೇಳಿಕೊಳ್ಳುತ್ತದೆ? ಎಂದು ಅವರು ಪ್ರಶ್ನಿಸಿದರು.

ಕೆ.ಆರ್ ಪೇಟೆಯ ವಿದ್ಯಾವಂತ ಮತದಾರರು ಯೋಚನೆ ಮಾಡಬೇಕಿದೆ. ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕು ಎಂದು ದೇಶದ ಜನತೆ ತೀರ್ಮಾನ ಮಾಡಿರುವ ಈ ಸಂದರ್ಭದಲ್ಲಿ ಬಡವರ ಪರ ಸದಾ ದುಡಿಯುವ ಎಚ್.ಡಿ ಕುಮಾರಸ್ವಾಮಿಯವರನ್ನು ಗೆಲ್ಲಿಸಬೇಕೇ ಹೊರತು ಜನರ ಕಿಸೆಗೆ ಕನ್ನ ಹಾಕುವವರನ್ನು ಗೆಲ್ಲಿಸಬಾರದು. ಹಣದ ದರ್ಪದಿಂದ ಗೆಲ್ಲುವ ಅಹಂಕಾರ ಪ್ರದರ್ಶಿಸುತ್ತಿರುವ ಕಾಂಗ್ರೆಸ್‍ನವರನ್ನು ಜನತೆ ತಿರಸ್ಕರಿಸಬೇಕು. ಮುಂದಿನ ದಿನಗಳಲ್ಲಿ ಮಂಡ್ಯದ ಸವಾರ್ಂಗೀಣ ಅಭಿವೃದ್ಧಿಗಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಮತಗಳ ಎಣಿಕೆಯ ದಿನದಂದು ದೇಶದ ಮೊದಲ ಫಲಿತಾಂಶ ಮಂಡ್ಯದಿಂದ ಬರಬೇಕು. ಎಚ್‍ಡಿಕೆ ಗೆಲ್ಲುವುದನ್ನು ಯಾವ ದುಷ್ಟ ಶಕ್ತಿಗಳೂ ತಡೆಯಲು ಸಾಧ್ಯವಿಲ್ಲ. ಮಂಡ್ಯದಿಂದ ಕುಮಾರಸ್ವಾಮಿಯವರು ಗೆದ್ದು ಮೋದಿಯವರ ಕೈ ಬಲಪಡಿಸುವ ಕೆಲಸ ಮಾಡುತ್ತಾರೆ. ಕರ್ನಾಟಕದ ಅಭಿವೃದ್ಧಿಗೂ ಕೈಜೋಡಿಸುತ್ತಾರೆ. ಅಂತಹ ಜನ ನಾಯಕನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡುವುದಾಗಿ ಹೇಳಿದರು.

BREAKING: ಬೆಂಗಳೂರಿನ ಮೆಜೆಸ್ಟಿಕ್ ಬಳಿ ಬೆಂಕಿಗೆ ಧಗಧಗಿಸಿ ಹೊತ್ತಿ ಉರಿದ ಖಾಸಗಿ ಬಸ್

BREAKING : ಪಶ್ಚಿಮ ಬಂಗಾಳ ರಾಜ್ಯಪಾಲರ ‘ಕೂಚ್ ಬೆಹಾರ್’ ಭೇಟಿಗೆ ‘ಚುನಾವಣಾ ಆಯೋಗ’ ತಡೆ

Share. Facebook Twitter LinkedIn WhatsApp Email

Related Posts

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 56,432 ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಎಂದ ಸಿಎಂ

06/03/2026 6:15 PM4 Mins Read

ನಾಳೆ ಬೆಂಗಳೂರಲ್ಲಿ ‘ಏಡ್ಸ್ ನಿಯಂತ್ರಣ’ ಸಂಬಂಧ ‘ಸುರಕ್ಷಾ ಸಂಕಲ್ಪ ಕಾರ್ಯಾಗಾರ’ ಆಯೋಜನೆ

06/03/2026 6:09 PM1 Min Read

ಕರ್ನಾಟಕ ಒನ್ ಕೇಂದ್ರಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

06/03/2026 5:37 PM1 Min Read
Recent News

ಯುದ್ಧದ ಮಧ್ಯೆ ‘LPG ಉತ್ಪಾದನೆ’ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಮಾಸ್ಟರ್ ಪ್ಲ್ಯಾನ್ ; ‘ತುರ್ತು ಕಾನೂನು’ ಜಾರಿ!

06/03/2026 6:41 PM

“ಯುದ್ಧಗಳಲ್ಲಿ ನಾಗರಿಕ ಸಾಯಬಾರದು” : ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಶ್ರೀಲಂಕಾ ಅಧ್ಯಕ್ಷ ಶಾಂತಿಯ ಕರೆ

06/03/2026 6:33 PM

ಕಣ್ಣಲ್ಲಿ ನೀರು ತರಿಸುವ ‘ಈರುಳ್ಳಿ’ ಆರೋಗ್ಯಕ್ಕೆ ವರದಾನ: ‘ಹಸಿ ಈರುಳ್ಳಿ ಸೇವನೆ’ಯಿಂದ ಹತ್ತಾರು ಲಾಭ!

06/03/2026 6:31 PM

ಚಾಣಕ್ಯ ನೀತಿ: ಇಂದಿನ ಸಂಕೀರ್ಣ ಬದುಕಿಗೂ ದಾರಿದೀಪ ಆಚಾರ್ಯರ ಅಮೂಲ್ಯ ಸೂತ್ರಗಳು | Chanakya Neeti

06/03/2026 6:23 PM
State News
KARNATAKA

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 56,432 ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಎಂದ ಸಿಎಂ

By kannadanewsnow0906/03/2026 6:15 PM KARNATAKA 4 Mins Read

ಬೆಂಗಳೂರು; 2026-27 ನೇ ಆಯವ್ಯಯದಲ್ಲಿ ರಾಜ್ಯದ ಜನರ ಭರವಸೆಗಳನ್ನು ಈಡೇರಿಸುವ ಜೊತೆಗೆ ವಿತ್ತೀಯ ಶಿಸ್ತನ್ನೂ ಪಾಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

ನಾಳೆ ಬೆಂಗಳೂರಲ್ಲಿ ‘ಏಡ್ಸ್ ನಿಯಂತ್ರಣ’ ಸಂಬಂಧ ‘ಸುರಕ್ಷಾ ಸಂಕಲ್ಪ ಕಾರ್ಯಾಗಾರ’ ಆಯೋಜನೆ

06/03/2026 6:09 PM

ಕರ್ನಾಟಕ ಒನ್ ಕೇಂದ್ರಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

06/03/2026 5:37 PM

ಕರ್ನಾಟಕ ಬಜೆಟ್ 2026-27: ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ಸುದ್ದಿಗೋಷ್ಠಿಯ ಪ್ರಮುಖ ಹೈಲೈಟ್ಸ್

06/03/2026 5:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.