Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಮೆದುಳಿನ ಜೀವಕೋಶಗಳ ಪುನರುಜ್ಜೀವನಕ್ಕೆ ವಿಟಮಿನ್ K ಆಧಾರಿತ ಹೊಸ ಸಂಯುಕ್ತಗಳ ಆವಿಷ್ಕಾರ!

Watch video: ಅಹ್ವಾನವಿಲ್ಲದೆ ಮದುವೆಗೆ ಬಂದು 10 ರೂಪಾಯಿ ಕಾಣಿಕೆ ನೀಡಿದ ವ್ಯಕ್ತಿ: ಅಸ್ಸಾಂನ ಈ ಹೃದಯಸ್ಪರ್ಶಿ ವಿಡಿಯೋ ವೈರಲ್!

QR Code Scam: ನಕಲಿ QR ಕೋಡ್ ಸ್ಕ್ಯಾನ್ ಮಾಡಿ ಹಣ ಕಳೆದುಕೊಂಡ್ರಾ? ಹೀಗೆ ಮಾಡಿದರೆ ನಿಮ್ಮ ಹಣ ವಾಪಸ್ ಸಿಗುತ್ತೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಒಬ್ಬ IAS ಅಧಿಕಾರಿ ಮನಸ್ಸು ಮಾಡಿದರೇ ಏನೆಲ್ಲಾ ಮಾಡಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ!
KARNATAKA

ಒಬ್ಬ IAS ಅಧಿಕಾರಿ ಮನಸ್ಸು ಮಾಡಿದರೇ ಏನೆಲ್ಲಾ ಮಾಡಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ!

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಒಬ್ಬ ಐಎಎಸ್ ಅಧಿಕಾರಿ ಮನಸ್ಸು ಮಾಡಿದರೇ ಏನೆಲ್ಲ ಮಾಡಬಹುದು ಎಂಬುದಕ್ಕೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರೇ ಸಾಕ್ಷಿಯಾಗಿದ್ದಾರೆ. ಅಷ್ಟಕ್ಕೂ ಅವರು ಮಾಡಿದ್ದೇನು ಅಂತ ಮುಂದೆ ಓದಿ.

2017 ನೆ ಬ್ಯಾಚ್ ನ IAS ಅಧಿಕಾರಿ ಪ್ರಸನ್ನ .ಹೆಚ್ ಅವರು ಪ್ರಸ್ತುತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ. ಅವರು ಕಳೆದ ಒಂದೆರೆಡು ವರ್ಷಗಳಲ್ಲಿ KEA ಅನ್ನು ವಿದ್ಯಾರ್ಥಿಗಳ ಪರವಾಗಿ ಇರುವಂತೆ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ ಎಂಬುದು ಸಾರ್ವಜನಿಕರ ಮಾತಾಗಿದೆ.

UGCET, PGCET ಸೇರಿದಂತೆ ಹಲವು ಪ್ರಮುಖ ಪರೀಕ್ಷೆಗಳನ್ನು ನಡೆಸುವ KEA ಕಳೆದ ವರ್ಷ ಡಿಸೆಂಬರ್ 27 ರಂದು 1000 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳಿಗೆ ಪರೀಕ್ಷೆಯನ್ನು ಕೂಡ ನಡೆಸಿತ್ತು. ಅದರ ಫಲಿತಾಂಶವನ್ನು 45 ದಿನಗಳಲ್ಲಿ ನೀಡಲಾಗಿದೆ.

ಈಗ ಒಂದು ಹೆಜ್ಜೆ ಮುಂದೆ ಹೋಗಿ ಇದೇ ತಿಂಗಳ ನವೆಂಬರ್.2ರಂದು ಕರ್ನಾಟಕ ರಾಜ್ಯ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು (KSET) ನಡೆಸಿದ್ದ KEA ಕೇವಲ 20 ದಿನಗಳಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ.

ಒಬ್ಬ IAS ಅಧಿಕಾರಿ ಮನಸ್ಸು ಮಾಡಿದರೆ ತನ್ನ ಕೆಳಗಿನ ಅಧಿಕಾರಿಗಳು ಮತ್ತು ನೌಕರರಿಂದ ಹೇಗೆ ಕೆಲಸ ಮಾಡಿಸಿಕೊಂಡು ಸಮಾಜಕ್ಕೆ ಒಳ್ಳೆಯದನ್ನ ಮಾಡಬಲ್ಲ ಅಂತ ಇವರು ತೋರಿಸಿಕೊಟ್ಟಿದ್ದಾರೆ.

KSET ಪರೀಕ್ಷೆಯನ್ನು 1,34,826 ಜನ ಬರೆದಿದ್ದರು. ಇಂತಹ ದೊಡ್ಡ ಮಟ್ಟದ ಪರೀಕ್ಷೆಯ ಫಲಿತಾಂಶವನ್ನು ಆ ಪರೀಕ್ಷೆ ನಡೆದ 20 ದಿನಗಳಲ್ಲಿ ಕೊಟ್ಟಿರುವುದನ್ನು ಇದೇ ಮೊದಲು ಆಗಿದೆ.. ತಾತ್ಕಾಲಿಕ ಕೀ ಉತ್ತರಗಳ ಪ್ರಕಟಣೆ ಹಾಗೂ ಆಕ್ಷೇಪಣೆಗೆ ಅವಕಾಶ, ಅಂತಿಮ ಕೀ ಉತ್ತರಗಳ ಪ್ರಕಟಣೆ, ತಾತ್ಕಾಲಿಕ ಅಂಕಪಟ್ಟಿ ಹೀಗೆ ಹಲವು ಹಂತಗಳ ನಂತರ ಅಂತಿಮ ಫಲಿತಾಂಶ ನೀಡಲಾಗಿದೆ.

ಒಟ್ಟಾರೆಯಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ.ಹೆಚ್ ಅವರ ಕೆಲಸಕ್ಕೆ ವಿದ್ಯಾರ್ಥಿಗಳು, ಪೋಷಕರು ಧನ್ಯವಾದವನ್ನು ಸಲ್ಲಿಸಿದ್ದಾರೆ. ಅವರ ಈ ಕೆಲಸ ಹೀಗೆ ಮುಂದುವರೆಯಲಿ. ಕೆಇಎ ಮತ್ತಷ್ಟು ವಿದ್ಯಾರ್ಥಿ ಸ್ನೇಹಿಯಾಗಲಿ ಎಂಬುದಾಗಿ ಆಶಿಸೋಣ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು..

ಹೀಗಿದೆ ‘ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ’ಯಡಿ ಕೈಗೊಳ್ಳಬಹುದಾದ ‘ಕಾಮಗಾರಿ’ಗಳ ಪಟ್ಟಿ

Share. Facebook Twitter LinkedIn WhatsApp Email

Related Posts

ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ: ಕುರಿಗಾಯಿಯಿಂದ ಸಿಎಂ ಪಟ್ಟದವರೆಗಿನ ಸ್ಫೂರ್ತಿದಾಯಕ ಪಯಣ

2 Mins Read

ಶಿವಮೊಗ್ಗ: ಮೇ.30ರಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

1 Min Read

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ಬಿಗ್ ರಿಲೀಫ್: ವಿದೇಶ ಪ್ರವಾಸಕ್ಕೆ ಅನುಮತಿ

1 Min Read
Recent News

​ಮೆದುಳಿನ ಜೀವಕೋಶಗಳ ಪುನರುಜ್ಜೀವನಕ್ಕೆ ವಿಟಮಿನ್ K ಆಧಾರಿತ ಹೊಸ ಸಂಯುಕ್ತಗಳ ಆವಿಷ್ಕಾರ!

Watch video: ಅಹ್ವಾನವಿಲ್ಲದೆ ಮದುವೆಗೆ ಬಂದು 10 ರೂಪಾಯಿ ಕಾಣಿಕೆ ನೀಡಿದ ವ್ಯಕ್ತಿ: ಅಸ್ಸಾಂನ ಈ ಹೃದಯಸ್ಪರ್ಶಿ ವಿಡಿಯೋ ವೈರಲ್!

QR Code Scam: ನಕಲಿ QR ಕೋಡ್ ಸ್ಕ್ಯಾನ್ ಮಾಡಿ ಹಣ ಕಳೆದುಕೊಂಡ್ರಾ? ಹೀಗೆ ಮಾಡಿದರೆ ನಿಮ್ಮ ಹಣ ವಾಪಸ್ ಸಿಗುತ್ತೆ!

20 ವರ್ಷಗಳ ಬಳಿಕ ಮತ್ತೆ ಜಪಾನ್‌ನಿಂದ ಭಾರತೀಯ ಮಾವಿನ ಹಣ್ಣುಗಳ ಆಮದಿಗೆ ತಡೆ: ಕಾರಣವೇನು?

State News
KARNATAKA

ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ: ಕುರಿಗಾಯಿಯಿಂದ ಸಿಎಂ ಪಟ್ಟದವರೆಗಿನ ಸ್ಫೂರ್ತಿದಾಯಕ ಪಯಣ

By ಗೋಪಾಲ್‌ ಎನ್‌ KARNATAKA 2 Mins Read

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ (ಮೇ 28, 2026) ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಉಪ…

ಶಿವಮೊಗ್ಗ: ಮೇ.30ರಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ಬಿಗ್ ರಿಲೀಫ್: ವಿದೇಶ ಪ್ರವಾಸಕ್ಕೆ ಅನುಮತಿ

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.