Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಡೇಟಿಂಗ್ ಆಪ್ ಬಳಸೋ ಮುನ್ನ ಎಚ್ಚರ : ‘AI’ ಹುಡುಗಿ ಮಾತಿಗೆ ಬೆತ್ತಲಾದ ಯುವಕನಿಂದ 1.5ಲಕ್ಷ ವಸೂಲಿ!

12/01/2026 7:23 AM

BIG NEWS : ಬೆಂಗಳೂರಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ, ಬ್ಯಾರಿಕೇಡ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

12/01/2026 7:14 AM

BREAKING : ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಗೈರು : ಶಾಸಕ ಯತ್ನಾಳ್ ವಿರುದ್ಧ ಬೇಲ್ ರಹಿತ ಬಂಧನ ವಾರೆಂಟ್

12/01/2026 7:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಬಡವಾಳ ಹೂಡಿಕೆ ಆಕರ್ಷಣೆ ಸಭೆ’ಯ ಪ್ರಮುಖ ಹೈಲೈಟ್ಸ್
KARNATAKA

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಬಡವಾಳ ಹೂಡಿಕೆ ಆಕರ್ಷಣೆ ಸಭೆ’ಯ ಪ್ರಮುಖ ಹೈಲೈಟ್ಸ್

By kannadanewsnow0924/10/2025 4:46 PM

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆ ನಡೆಯಿತು. ಈ ಸಭೆಯಲ್ಲಿ ನಿರ್ಣಯಗಳನ್ನು ಸಕಾಲದಲ್ಲಿ ಜಾರಿ ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆಯನ್ನು ಸಿಎಂ ಸಿದ್ಧರಾಮಯ್ಯ ನೀಡಿದರು. ಆ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯ ಮುಖ್ಯಾಂಶಗಳು

• ಕರ್ನಾಟಕ ದೇಶದಲ್ಲೇ ಪ್ರಗತಿಪರ ರಾಜ್ಯವಾಗಿದ್ದು, ಬಂಡವಾಳ ಹೂಡಿಕೆಗೆ ಪೂರಕವಾದ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಯಾವುದೇ ಕಾರಣಕ್ಕೂ ಅನುಮೋದನೆಗಳ ನೀಡಿಕೆಯಲ್ಲಿ ವಿಳಂಬಕ್ಕೆ ಅವಕಾಶ ನೀಡಬಾರದು. ಈ ಕುರಿತು ಮುಖ್ಯ ಕಾರ್ಯದರ್ಶಿಯವರು ಎಲ್ಲಾ ಇಲಾಖೆಗಳಿಗೆ ಸೂಕ್ತ ನಿರ್ದೇಶನಗಳನ್ನು ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

• ಕೈಗಾರಿಕಾ ಸ್ನೇಹಿ ವ್ಯವಸ್ಥೆಯನ್ನು ಉತ್ತಮಪಡಿಸಲು ಕಾನೂನು ಮತ್ತು ನಿಯಮಾವಳಿಗಳಿಗೆ ಅಗತ್ಯ ತಿದ್ದುಪಡಿಗಳನ್ನು ತರುವ ನಿಟ್ಟಿನಲ್ಲಿ ಸಚಿವ ಸಂಪುಟದಲ್ಲಿ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದರು.

• ಕೈಗಾರಿಕೆಗಳ ಆರಂಭಕ್ಕೆ ಅಗತ್ಯವಾದ ಭೂ ಬಳಕೆ ಬದಲಾವಣೆ ಪ್ರಕ್ರಿಯೆ ಸೇರಿದಂತೆ ವಿವಿಧ ಎನ್‌ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ ನೀಡಬಾರದು.

• ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅಗ್ನಿಶಾಮಕ ಇಲಾಖೆ ಅನುಮೋದನೆ ವಿಳಂಬವಾಗುತ್ತಿದ್ದು, ಇದನ್ನು ತ್ವರಿತಗೊಳಿಸಬೇಕು. ಇದಕ್ಕಾಗಿ ಮಂಡಳಿಯ ನಿಯಮಾವಳಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಬೇಕು. ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಅನುಮೋದನೆ ನೀಡುವ ಕಾಲಮಿತಿಯನ್ನು ಮರು ನಿಗದಿಪಡಿಸಬೇಕು. ಕಾಲಮಿತಿಯಲ್ಲಿ ಅನುಮೋದನೆಗಳನ್ನು ನೀಡಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.

• ಕೈಗಾರಿಕೆಗಳಿಗೆ ರಸ್ತೆ, ನೀರು, ವಿದ್ಯುತ್‌ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವ ಕುರಿತಾಗಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚಿಸಿದರು.

• ಹಸಿರು ಇಂಧನ ಮೂಲಗಳಿಂದ ಕೈಗಾರಿಕೆಗಳಿಗೆ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಅಸಾಂಪ್ರದಾಯಿಕ ಇಂಧನ ಮೂಲಗಳಿಗೆ ಆದ್ಯತೆ ನೀಡಬೇಕು. ಇದಕ್ಕಾಗಿ ವ್ಯವಸ್ಥಿತ ಯೋಜನೆ ರೂಪಿಸಬೇಕು.

• ಕೇಂದ್ರ ಸರ್ಕಾರ 2ಪ್ರಮುಖ ಕಾರ್ಮಿಕ ಸುಧಾರಣೆಗಳ ಅನುಷ್ಠಾನವನ್ನು ಪ್ರಸ್ತಾಪಿಸಿದೆ. ಕಾರ್ಮಿಕರ ಕೆಲಸದ ಅವಧಿಯನ್ನು ಮರು ನಿಗದಿಪಡಿಸುವ ಸಂದರ್ಭದಲ್ಲಿ ಕಾರ್ಮಿಕರ ಹಿತವನ್ನು ಗಮನದಲ್ಲಿಡಲಾಗುವುದು.

• ಏಕಗವಾಕ್ಷಿ ವ್ಯವಸ್ಥೆಯಡಿ ಅರ್ಜಿಗಳ ವಿಲೇವಾರಿ ಆಗುತ್ತಿಲ್ಲ ಎಂದು ದೂರುಗಳಿವೆ. ಎಲ್ಲಾ ಸೇವೆಗಳನ್ನು ನೀಡಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ 29 ಸೇವೆಗಳು ಏಕಗವಾಕ್ಷಿ ವ್ಯವಸ್ಥೆಯಿಂದ ಹೊರಗಿದ್ದು, ಅವುಗಳನ್ನು ಸಹ ಇದರಡಿ ತರಬೇಕು. ಎಲ್ಲಾ ಅರ್ಜಿಗಳನ್ನು ಏಕಗವಾಕ್ಷಿ ವ್ಯವಸ್ಥೆಯಡಿ ಏಕೀಕೃತ ವಿಲೇವಾರಿಗೆ ಕ್ರಮ.

• ರಾಜ್ಯದಲ್ಲಿ ಈ ವರ್ಷದ ಆರಂಭದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರೂ.10.27 ಲಕ್ಷ ಕೋಟಿ ಹೂಡಿಕೆ ಆಕರ್ಷಿಸಲಾಗಿದ್ದು, ಈಗಾಗಲೇ ಶೇ.60ರಷ್ಟು ಹೂಡಿಕೆಗಳು ಅನುಷ್ಠಾನ ಹಂತದಲ್ಲಿವೆ.

• ಸುಮಾರು ರೂ.1.5ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ವಿವಿಧ ಹಂತದಲ್ಲಿವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ನನಗೂ ಸಚಿವನಾಗಬೇಕೆಂಬ ಆಸೆ ಇದೆ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

ಬೆಂಗಳೂರು ಜನತೆ ಗಮನಕ್ಕೆ : ನಾಳೆ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ

Share. Facebook Twitter LinkedIn WhatsApp Email

Related Posts

BREAKING : ಡೇಟಿಂಗ್ ಆಪ್ ಬಳಸೋ ಮುನ್ನ ಎಚ್ಚರ : ‘AI’ ಹುಡುಗಿ ಮಾತಿಗೆ ಬೆತ್ತಲಾದ ಯುವಕನಿಂದ 1.5ಲಕ್ಷ ವಸೂಲಿ!

12/01/2026 7:23 AM1 Min Read

BIG NEWS : ಬೆಂಗಳೂರಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ, ಬ್ಯಾರಿಕೇಡ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

12/01/2026 7:14 AM1 Min Read

BREAKING : ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಗೈರು : ಶಾಸಕ ಯತ್ನಾಳ್ ವಿರುದ್ಧ ಬೇಲ್ ರಹಿತ ಬಂಧನ ವಾರೆಂಟ್

12/01/2026 7:11 AM1 Min Read
Recent News

BREAKING : ಡೇಟಿಂಗ್ ಆಪ್ ಬಳಸೋ ಮುನ್ನ ಎಚ್ಚರ : ‘AI’ ಹುಡುಗಿ ಮಾತಿಗೆ ಬೆತ್ತಲಾದ ಯುವಕನಿಂದ 1.5ಲಕ್ಷ ವಸೂಲಿ!

12/01/2026 7:23 AM

BIG NEWS : ಬೆಂಗಳೂರಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ, ಬ್ಯಾರಿಕೇಡ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

12/01/2026 7:14 AM

BREAKING : ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಗೈರು : ಶಾಸಕ ಯತ್ನಾಳ್ ವಿರುದ್ಧ ಬೇಲ್ ರಹಿತ ಬಂಧನ ವಾರೆಂಟ್

12/01/2026 7:11 AM

ಬಂದ ನಗು ತಡೆಯಲು ಸಾಧ್ಯವೇ?: ಭಾವನೆಗಳ ನಿಗ್ರಹದ ಬಗ್ಗೆ ಹೊರಬಿದ್ದಿದೆ ಅಚ್ಚರಿಯ ಸಂಶೋಧನೆ!

12/01/2026 7:06 AM
State News
KARNATAKA

BREAKING : ಡೇಟಿಂಗ್ ಆಪ್ ಬಳಸೋ ಮುನ್ನ ಎಚ್ಚರ : ‘AI’ ಹುಡುಗಿ ಮಾತಿಗೆ ಬೆತ್ತಲಾದ ಯುವಕನಿಂದ 1.5ಲಕ್ಷ ವಸೂಲಿ!

By kannadanewsnow0512/01/2026 7:23 AM KARNATAKA 1 Min Read

ಬೆಂಗಳೂರು : ಇತ್ತೀಚಿಗೆ ಈ ಒಂದು AI ಎನ್ನುವ ಆಪ್ ನಿಂದ ನಮಗೆ ಯಾವ ರೀತಿ ಬೇಕು ಆ ರೀತಿ…

BIG NEWS : ಬೆಂಗಳೂರಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ, ಬ್ಯಾರಿಕೇಡ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

12/01/2026 7:14 AM

BREAKING : ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಗೈರು : ಶಾಸಕ ಯತ್ನಾಳ್ ವಿರುದ್ಧ ಬೇಲ್ ರಹಿತ ಬಂಧನ ವಾರೆಂಟ್

12/01/2026 7:11 AM

GOOD NEWS: ಯಶಸ್ವಿನಿ ಯೋಜನೆಯಡಿ 5 ಲಕ್ಷ ರೂ.ವರೆಗೆ ಚಿಕಿತ್ಸೆ ಉಚಿತ: ಹೊಸ ಸದಸ್ಯರ ನೋಂದಣಿ ಆಂರಭ

12/01/2026 6:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.