Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮನೆ ಬದಲಿಸಿದ್ದೀರಾ.? ಆ ಮನೆಗೂ ಗೃಹಜ್ಯೋತಿ ಸೌಲಭ್ಯ ಪಡೆಯಲು ಅವಕಾಶವಿದೆ, ಜಸ್ಟ್ ಹೀಗೆ ಮಾಡಿ | Gruha Jyothi Scheme

13/05/2025 7:51 PM

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

13/05/2025 7:44 PM

ಇನ್ಮುಂದೆ ಪಾಕಿಸ್ತಾನದ ಗುಂಡುಗಳಿಗೆ ನಾವು ಗುಂಡುಗಳಿಂದಲೇ ಉತ್ತರಿಸುತ್ತೇವೆ : ರಣಧೀರ ಜೈಸ್ವಾಲ್ ಹೇಳಿಕೆ

13/05/2025 7:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಭಾರತ್ ಜೋಡೋ ಯಾತ್ರೆ’ ಮಾಡಿ ‘ದೇಶ ಇಬ್ಭಾಗ’ ಮಾಡಲು ಹೊರಟಿದ್ದಾರೆ – ‘HDK’ ಗಂಭೀರ ಆರೋಪ
KARNATAKA

‘ಭಾರತ್ ಜೋಡೋ ಯಾತ್ರೆ’ ಮಾಡಿ ‘ದೇಶ ಇಬ್ಭಾಗ’ ಮಾಡಲು ಹೊರಟಿದ್ದಾರೆ – ‘HDK’ ಗಂಭೀರ ಆರೋಪ

By kannadanewsnow0902/02/2024 3:48 PM

ರಾಮನಗರ/ಬೆಂಗಳೂರು: ಭಾರತ ಒಂದಾಗಿರಬೇಕು ಎಂದು ಭಾರತ್ ಜೋಡೋ ಯಾತ್ರೆ ಮಾಡಿದವರೇ ಇವತ್ತು ಭಾರತ್ ತೋಡೋ ಎನ್ನುತ್ತಾರೆ ದೇಶ ಇಬ್ಭಾಗ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಬಿಡದಿಯ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿ.ಕೆ‌‌‌.ಸುರೇಶ್ ಅವರು ನೀಡಿರುವ ಹೇಳಿಕೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.

ಇಲ್ಲಿ ಕಲ್ಲು ಹೊಡೆಕೊಂಡು ಲೂಟಿ ಮಾಡಿಕೊಂಡು ಇದ್ದೋರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ. ಇಲ್ಲಿ ಬಡ ಜನರನ್ನು ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ. ಅಂತವರನ್ನು ತೆಗೆದುಕೊಂಡು ಹೋಗಿ ದೇಶ ಕಟ್ಟು ಅಂತ ಕಳುಹಿಸಿದರೆ ಕಟ್ಟುತ್ತಾರೆಯೇ? ಅವರ ಸಾಮ್ರಾಜ್ಯ ಕಟ್ಟುಕೊಳ್ತಾರೆ ಅಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಎಂದು ಅವರು ಟಾಂಗ್ ನೀಡಿದರು.

ಕೇಂದ್ರ ಸರ್ಕಾರದ ಮುಂದೆ ನಮ್ಮ ಬೇಡಿಕೆಗಳನ್ನು ಸಂಘರ್ಷದಿಂದ ಈಡೇರಿಸಿಕೊಳ್ಳಲು ಸಾಧ್ಯವಿಲ್ಲ. ವಾಸ್ತವವನ್ನು ಅವರಿಗೆ ಮನವರಿಕೆ ಮಾಡಬೇಕು. ಅವರನ್ನು ಒಪ್ಪಿಸಿ, ಮನವರಿಕೆ ಮಾಡಿಕೊಟ್ಟು ಹಣ ಪಡೆಯಬೇಕು‌. ಅದನ್ನು ಬಿಟ್ಟು ಇವರ ಬಾಲಿಷ ಹೇಳಿಕೆಗಳಿಂದ ಸಮಸ್ಯೆ ಬಗೆಹರಿಯಲ್ಲ ಎಂದು ಸಂಸದ ಸುರೇಶ್ ಅವರಿಗೆ ತರಾಟೆಗೆ ತೆಗೆದುಕೊಂಡರು ಮಾಜಿ ಮುಖ್ಯಮಂತ್ರಿಗಳು.

ಡಿ.ಕೆ.ಸುರೇಶ್ ಅವರು ದೇಶ ವಿಭಜನೆ ಮಾತನಾಡಿದ್ದಾರೆ

ಕೇಂದ್ರ ಸರ್ಕಾರ ಆರ್ಥಿಕ ತಾರತಮ್ಯ, ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂಬ ಕಾರಣ ಕೊಟ್ಟಿದ್ದಾರೆ. ಇದು ಅಪ್ರಭುದ್ಧತೆಯ ಹೇಳಿಕೆ. ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೋ ಯಾತ್ರೆ ಮಾಡಿದರು. ಈಗ ವಿಭಜನೆಯ ಮಾತನ್ನು ಆಡುತ್ತಿದ್ದಾರೆ. ಒಂದು ವೇಳೆ ವಿಭಜನೆ ಆಯ್ತು ಅಂತ ತಿಳಿದುಕೊಳ್ಳಿ. ತಮಿಳುನಾಡಿನಿಂದ ಕಾವೇರಿ ವಿಚಾರದಲ್ಲಿ ನ್ಯಾಯ ಪಡೆಯಲು ಸಾಧ್ಯವೇ? ಇವರು ನ್ಯಾಯ ದೊರಕಿಸಿಕೊಡುತ್ತಾರೆಯೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ದೇಶದ ಮೊದಲನೇ ಬಜೆಟ್ ಗಾತ್ರ 174 ಕೋಟಿ ರೂಪಾಯಿ. ಆಗ ದೇಶದಲ್ಲಿ ಆಹಾರದ ಕೊರತೆ ಇತ್ತು. ಆಗಿನಿಂದಲೂ ಸರ್ಕಾರಗಳು ಬಜೆಟ್ ಮಂಡಿಸಿಕೊಂಡು ಬಂದಿವೆ. ಕಾಲಕ್ರಮೇಣ ನಾವು ಹಣಕಾಸು ಆಯೋಗಗಳನ್ನು ರಚನೆ ಮಾಡಿಕೊಂಡಿದ್ದೇವೆ. ಅವರು ಎಲ್ಲಾ ರಾಜ್ಯಕ್ಕೂ ಭೇಟಿ ಕೊಟ್ಟು ಪರಿಶೀಲನೆ ಮಾಡುತ್ತಾರೆ. ಯಾವ ರಾಜ್ಯಕ್ಕೆ ಎಷ್ಟು ಹಣಬೇಕು ಎಂದು ವರದಿ ಕೊಡುತ್ತಾರೆ. ಯಾವ ರಾಜ್ಯ ಅಭಿವೃದ್ಧಿ ಆಗಿಲ್ಲ, ಯಾವ ರಾಜ್ಯ ಅಭಿವೃದ್ಧಿ ಆಗಿದೆ ಎಂಬ ಮಾನದಂಡದ ಅಡಿಯಲ್ಲಿ ಹಣ ಹಂಚಿಕೆ ಆಗುತ್ತದೆ. ಈ ಪದ್ಧತಿಯನ್ನು ಕಾಂಗ್ರೆಸ್ ಸರ್ಕಾರದ ಕಾಲದಲ್ಲಿಯೇ ಆರಂಭ ಮಾಡಲಾಯಿತು. ಮೋದಿ ಬಂದು ಪ್ರಾರಂಭ ಮಾಡಿದ್ದಲ್ಲ ಇದು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಶೋಷಿತರ ಹೆಸರಿನಲ್ಲಿ ಸಿಎಂ ಮಜಾ

ಶೋಷಿತ ವರ್ಗಗಳ ಜನರ ಬಗ್ಗೆ ಕಾಂಗ್ರೆಸ್ ಅನುಕಂಪದ ಲೇವಡಿ ಮಾಡಿದ ಕುಮಾರಸ್ವಾಮಿ ಅವರು; ಶೋಷಿತ ವರ್ಗಗಳ ಹೆಸರಿನಲ್ಲಿ ಇವರು ಮಜಾ ಮಾಡ್ತಾ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಶೋಷಿತ ವರ್ಗಗಳ ಜನ ಬೀದಿಯಲ್ಲಿ ಇದ್ದಾರೆ. ಎಷ್ಟು ಜನರನ್ನು ಇವರು ಮೀಸಲಾತಿ ವ್ಯವಸ್ಥೆಯಲ್ಲಿ ಉಳಿಸಿಕೊಂಡಿದ್ದಾರೆ. ಎಷ್ಟು ಜನರಿಗೆ ಅನುಕೂಲ ಆಗಿದೆ? ಮೀಸಲಾತಿ ಪಡೆದುಕೊಂಡವರೇ ಮತ್ತೆ ಮತ್ತೆ ಮೀಸಲು ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಅದಕ್ಕೆ ಏನು ಹೇಳುತ್ತಾರೆ ಇವರು? ಮೀಸಲು ಸೌಲಭ್ಯ ಪಡೆದವರೇ ಎಷ್ಟು ವರ್ಷ ಪಡೆಯುತ್ತಾರೆ? ಅದನ್ನು ಜನರಿಗೆ ತಿಳಿಸಿ. ಶೋಷಿತ ವರ್ಗಗಳ ಬದುಕು ಕಾಂಗ್ರೆಸಿಗರಿಗೆ ಬೇಕಿಲ್ಲ. ಸ್ವಾತಂತ್ರ್ಯ ಬಂದು 75 ವರ್ಷದಿಂದ ಇನ್ನೂ ಅವರ ಹೆಸರು ಹೇಳಿಕೊಂಡೇ ಜೀವನ ಮಾಡುತ್ತಿದ್ದೀರಿ ಎಂದು ಕಾಂಗ್ರೆಸ್ ವಿರುದ್ದ ಹೆಚ್ ಡಿಕೆ ವಾಗ್ಧಾಳಿ ನಡೆಸಿದರು.

ಕಾಂತರಾಜು ವರದಿ ಬಗ್ಗೆ ಬೀದಿ ಬೀದಿಯಲ್ಲಿ ಮಾತನಾಡಿದ್ದಾರೆ. ನಿಮ್ಮನ್ನು ವರದಿ ಸ್ವೀಕರಿಸಬೇಡಿ ಅಂತ ಹಿಡಿದುಕೊಂಡಿರುವವರು ಯಾರು? ನಾನು ಸಿಎಂ ಆಗಿದ್ದಾಗ ವರದಿ ತೆಗೆದುಕೊಂಡಿಲ್ಲ ಅಂದಿದ್ದಾರೆ. ಆ ವರದಿಯಲ್ಲಿ ಮೆಂಬರ್ ಸೆಕ್ರೆಟರಿ ಸಹಿ ಇತ್ತಾ? ಇವತ್ತಿನ ವರೆಗೂ ಆ ವರದಿಗೆ ಸಹಿ ಹಾಕಿಲ್ಲ. ಸಹಿ ಹಾಕದ ವರದಿಯನ್ನ ನಾನು ಹೇಗೆ ಸ್ವೀಕರಿಸಲಿ? ಸುಮ್ಮನೆ ನನ್ನ ಮೇಲೆ ಆರೋಪ ಮಾಡ್ತಾರೆ ಎಂದು ಅವರು ಕಿಡಿಕಾರಿದರು.

ಕಮೀಷನ್ ದಂಧೆ ಅವ್ಯಾಹತ

ಕಾಂಗ್ರೆಸ್ ಸರಕಾರದಲ್ಲಿ ಕಮಿಷನ್ ದಂಧೆ ನಡೆಯುತ್ತಿದೆ ಎಂಬ ಕಾಂಗ್ರೆಸ್ ಮಾಜಿ ಸಚಿವ ಗಂಡಸಿ ಶಿವರಾಂ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು; ಕಾಂಗ್ರೆಸ್ ನಲ್ಲಿ 50 ಪರ್ಸೆಂಟ್ ಇದೆ ಅಂತ ಅವರು ಹೇಳಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಮ್ಮ ಮಾರ್ಗದರ್ಶರು ಅಂತಿದ್ದರು. ಅವರೇ ಬಾಣಲಿಯಿಂದ ಬೆಂಕಿಗೆ ಬಿದ್ದ ಹಾಗಾಗಿದೆ ಅಂತ ಹೇಳಿಕೆ ಕೊಟ್ಟಿದ್ದಾರೆ. ಇದನ್ನೆಲ್ಲಾ ಕುಮಾರಸ್ವಾಮಿ ಪ್ರಶ್ನೆ ಮಾಡಿದರೆ ಅವರಿಗೆ ಅಸಹನೆ, ಮೆಂಟಲ್ ಬ್ಯಾಲೆನ್ಸ್ ತಪ್ಪಿದೆ ಅಂತಾರೆ. ಪ್ರತಿನಿತ್ಯ ವರ್ಗಾವಣೆ ಮಾಡುವ ಕೆಲಸವೇ ಆಗಿದೆ. ಸಿದ್ದರಾಮಯ್ಯ ಮೋದಿ ಬಗ್ಗೆ ಕಮೆಂಟ್ ಮಾಡಿದ್ದಾರೆ. ಮೊದಲು ನಿಮ್ಮ ಸ್ಥಿತಿ ನೋಡಿಕೊಳ್ಳಿ ಎಂದು ಅವರು ಟೀಕಾಪ್ರಹಾರ ನಡೆಸಿದರು.

ರಾಯಚೂರಲ್ಲಿ ‘ಟಿಪ್ಪು ಭಾವಚಿತ್ರ’ಕ್ಕೆ ಅಪಮಾನ ಪ್ರಕರಣ; ಇಬ್ಬರು ‘ಪೊಲೀಸ್ ಪೇದೆ’ಗಳು ಅಮಾನತು

BREAKING : ಜಾರ್ಖಂಡ್ ಮಾಜಿ ಸಿಎಂ ‘ಹೇಮಂತ್ ಸೊರೆನ್’ 5 ದಿನ ‘ED ಕಸ್ಟಡಿ’ಗೆ ನೀಡಿದ ಕೋರ್ಟ್

Share. Facebook Twitter LinkedIn WhatsApp Email

Related Posts

ಮನೆ ಬದಲಿಸಿದ್ದೀರಾ.? ಆ ಮನೆಗೂ ಗೃಹಜ್ಯೋತಿ ಸೌಲಭ್ಯ ಪಡೆಯಲು ಅವಕಾಶವಿದೆ, ಜಸ್ಟ್ ಹೀಗೆ ಮಾಡಿ | Gruha Jyothi Scheme

13/05/2025 7:51 PM1 Min Read

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

13/05/2025 7:44 PM1 Min Read

BIG NEWS : ಪಾಕಿಸ್ತಾನಕ್ಕೆ ಬುದ್ಧಿ ಕಲಿಸಬೇಕೆಂದು ಹೊರಟು, ಈಗ ಕದನ ವಿರಾಮ ಘೋಷಿಸಿದ್ದು ಸರಿನಾ? : ಕೃಷ್ಣ ಭೈರೇಗೌಡ

13/05/2025 7:24 PM1 Min Read
Recent News

ಮನೆ ಬದಲಿಸಿದ್ದೀರಾ.? ಆ ಮನೆಗೂ ಗೃಹಜ್ಯೋತಿ ಸೌಲಭ್ಯ ಪಡೆಯಲು ಅವಕಾಶವಿದೆ, ಜಸ್ಟ್ ಹೀಗೆ ಮಾಡಿ | Gruha Jyothi Scheme

13/05/2025 7:51 PM

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

13/05/2025 7:44 PM

ಇನ್ಮುಂದೆ ಪಾಕಿಸ್ತಾನದ ಗುಂಡುಗಳಿಗೆ ನಾವು ಗುಂಡುಗಳಿಂದಲೇ ಉತ್ತರಿಸುತ್ತೇವೆ : ರಣಧೀರ ಜೈಸ್ವಾಲ್ ಹೇಳಿಕೆ

13/05/2025 7:35 PM

BIG NEWS : ಪಾಕಿಸ್ತಾನಕ್ಕೆ ಬುದ್ಧಿ ಕಲಿಸಬೇಕೆಂದು ಹೊರಟು, ಈಗ ಕದನ ವಿರಾಮ ಘೋಷಿಸಿದ್ದು ಸರಿನಾ? : ಕೃಷ್ಣ ಭೈರೇಗೌಡ

13/05/2025 7:24 PM
State News
KARNATAKA

ಮನೆ ಬದಲಿಸಿದ್ದೀರಾ.? ಆ ಮನೆಗೂ ಗೃಹಜ್ಯೋತಿ ಸೌಲಭ್ಯ ಪಡೆಯಲು ಅವಕಾಶವಿದೆ, ಜಸ್ಟ್ ಹೀಗೆ ಮಾಡಿ | Gruha Jyothi Scheme

By kannadanewsnow0913/05/2025 7:51 PM KARNATAKA 1 Min Read

ಬೆಂಗಳೂರು: ನೀವು ಬಾಡಿಗೆ ಮನೆಯಲ್ಲಿದ್ದರೂ, ಮನೆ ಬದಲಿಸಿದ ನಂತ್ರ, ಹೊಸದಾಗಿ ತೆರಳಿದಂತ ಬಾಡಿಗೆ ಮನೆಗೂ ಗೃಹಜ್ಯೋತಿ ಯೋಜನೆಯ ಸೌಲಭ್ಯ ಪಡೆಯಲು…

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

13/05/2025 7:44 PM

BIG NEWS : ಪಾಕಿಸ್ತಾನಕ್ಕೆ ಬುದ್ಧಿ ಕಲಿಸಬೇಕೆಂದು ಹೊರಟು, ಈಗ ಕದನ ವಿರಾಮ ಘೋಷಿಸಿದ್ದು ಸರಿನಾ? : ಕೃಷ್ಣ ಭೈರೇಗೌಡ

13/05/2025 7:24 PM

BREAKING : ಬಳ್ಳಾರಿ ಬಳಿಕ ಹಾವೇರಿ, ಗದಗದಲ್ಲೂ ಸಿಡಿಲು ಬಡಿದು ಮೂವರು ಸಾವು!

13/05/2025 7:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.