Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

RSS ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು, ಇವರ ಬಗ್ಗೆ ಎಚ್ಚರ ಇರಲಿ: ಸಿಎಂ ಸಿದ್ದರಾಮಯ್ಯ ಕರೆ

18/10/2025 2:24 PM

ನಿಮ್ಮ ಫೋನ್ ಕದ್ದೊಯ್ಯಲ್ಪಟ್ಟಾಗ ಅಥವಾ ಕಳೆದುಹೋದಾಗ ಮೊದಲು, ನಂತ್ರ ಏನು ಮಾಡಬೇಕು?

18/10/2025 2:12 PM

ಬೆಂಗಳೂರಲ್ಲಿ ಮತ್ತೊಂದು ಅಪಘಾತ : ನಿಂತಿದ್ದ ಲಾರಿಗೆ ‘KSRTC’ ಬಸ್ ಡಿಕ್ಕಿ : 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

18/10/2025 1:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೋಟೆಲ್, ಪಿಜಿಗಳಲ್ಲಿ ಮೊಬೈಲ್, ಲ್ಯಾಪ್ ಟಾಪ್ ಕದಿಯುತ್ತಿದ್ದ ಕಳ್ಳ ಅರೆಸ್ಟ್, 14 ಮೊಬೈಲ್, 4 ಲ್ಯಾಪ್ ಟಾಪ್
KARNATAKA

ಹೋಟೆಲ್, ಪಿಜಿಗಳಲ್ಲಿ ಮೊಬೈಲ್, ಲ್ಯಾಪ್ ಟಾಪ್ ಕದಿಯುತ್ತಿದ್ದ ಕಳ್ಳ ಅರೆಸ್ಟ್, 14 ಮೊಬೈಲ್, 4 ಲ್ಯಾಪ್ ಟಾಪ್

By kannadanewsnow0922/08/2025 1:02 PM

ಬೆಂಗಳೂರು: ನಗರದಲ್ಲಿ ಹೋಟೆಲ್ ಮತ್ತು ಪಿ.ಜಿಗಳಲ್ಲಿ ಮೊಬೈಲ್ ಮತ್ತು ಲ್ಯಾಪ್‌ಟಾಪ್‌ಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ 14 ಮೊಬೈಲ್ ಫೋನ್ ಮತ್ತು 4 ಲ್ಯಾಪ್‌ಗಳ ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 76 ಲಕ್ಷ ಆಗಿದೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಹಿತಿ ನೀಡಿದ್ದು, ತಲಘಟ್ಟಪುರ ಪೊಲೀಸ್ ಠಾಣಾ ಸರಹದ್ದಿನ ಮೆಟ್ರೋ ನಿಲ್ದಾಣದ ಹತ್ತಿರದ ಪಿ.ಜಿವೊಂದರಲ್ಲಿ ವಾಸವಾಗಿರುವ ಪಿರಾದುದಾರರು, ದಿನಾಂಕ:16/07/2025 ರಂದು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:15/07/2025 ರಂದು ರಾತ್ರಿ ಪಿರಾದುದಾರರು ತಂಗಿದ್ದ ಪಿ.ಜಿ ಯ ಕೊಠಡಿಗೆ ಮತ್ತೋರ್ವ ವ್ಯಕ್ತಿಯು ತಂಗಲು ಬಂದಿದ್ದು, ಆತನು ಪಿರಾದುದಾರರ 01 ಐ-ಫೋನ್ ಮತ್ತು 01 ಲ್ಯಾಪ್‌ಟಾಪ್ ಹಾಗೂ ಇತರೆ ದಾಖಲಾತಿಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ತಿಳಿಸಿರುತ್ತಾರೆ. ಈ ಕುರಿತು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸಿ, ದಿನಾಂಕ:14/08/2025 ರಂದು ತಮಿಳುನಾಡು ರಾಜ್ಯದ ಪುಝಲ್ ನಲ್ಲಿರುವ ಕೇಂದ್ರ ಕಾರಾಗೃಹ-2 ರಲ್ಲಿ ನ್ಯಾಯಾಂಗ ಬಂಧನಲ್ಲಿದ್ದ ಓರ್ವ ಆರೋಪಿಯನ್ನು 6 ದಿನಗಳ ಕಾಲ ನ್ಯಾಯಾಲಯದ ಅನುಮತಿಯೊಂದಿಗೆ, ಪೊಲೀಸ್ ಅಭಿರಕ್ಷಗೆ ಪಡೆದುಕೊಳ್ಳಲಾಯಿತು.

ಪೊಲೀಸ್ ಅಭಿರಕ್ಷಗೆ ಪಡೆದ ಆರೋಪಿಯನ್ನು ವಿಚಾರಣೆಗೊಳಪಡಿಸಲಾಗಿ, ಆತನು ಹೋಟೆಲ್ ಮತ್ತು ಪಿ.ಜಿ ಗಳಲ್ಲಿ 3 ರಿಂದ 4 ದಿನಗಳ ಕಾಲ ತಂಗುವುದಾಗಿ ರೂಂ ಬುಕ್ ಮಾಡಿಕೊಂಡು, ಅಲ್ಲಿ ಉಳಿದುಕೊಂಡು, ರಾತ್ರಿ ವೇಳೆಯಲ್ಲಿ ಎಲ್ಲರೂ ಮಲಗಿದ ನಂತರ, ರೂಂನಲ್ಲಿದ್ದವರಿಗೆ ಸಂಬಂಧಿಸಿದ ಮೊಬೈಲ್ ಫೋನ್, ಲ್ಯಾಪ್‌ಟಾಪ್‌ಗಳು ಹಾಗೂ ಇತರೆ ದಾಖಲಾತಿಗಳನ್ನು ಕಳವು ಮಾಡುತ್ತಿದ್ದುದ್ದಾಗಿ ತನ್ನೊಪ್ಪಿಕೊಂಡಿರುತ್ತಾನೆ.

ಆರೋಪಿಯು ತಲಘಟ್ಟಪುರ, ಕಬ್ಬನ್‌ಪಾರ್ಕ್, ನಂದಿನಿ ಲೇಔಟ್, ವೈಯ್ಯಾಲಿ ಕಾವಲ್, ಕೋಣನಕುಂಟೆ, ಶೇಷಾದ್ರಿಪುರಂ, ತಿಪಟೂರು ಟೌನ್, ಯಲಹಂಕ, ಗೋವಿಂದಪುರ ಮತ್ತು ದೇವನಹಳ್ಳಿ ಪೊಲೀಸ್‌ ಠಾಣಾ ಸರಹದ್ದುಗಳಲ್ಲಿ ಮೊಬೈಲ್ ಫೋನ್, ಲ್ಯಾಪ್‌ಟಾಪ್‌ಗಳು ಹಾಗೂ ಇತರೆ ದಾಖಲಾತಿಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ. ಕಳವು ಮಾಡಿದ ಮೊಬೈಲ್ ಫೋನ್, ಲ್ಯಾಪ್‌ಟಾಪ್‌ಗಳನ್ನು ಆತನ ಸ್ನೇಹಿತರುಗಳಿಗೆ ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾನೆ.
ತನಿಖೆಯನ್ನು ಮುಂದುವರೆಸಿ, ದಿನಾಂಕ:16/08/2025 ರಿಂದ 18/08/2025 ರ ಅವಧಿಯಲ್ಲಿ 14 ಮೊಬೈಲ್ ಫೋನ್‌ಗಳು ಮತ್ತು 4 ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು * 6,00,000/-(ಆರು ಲಕ್ಷ ರೂಪಾಯಿ).

ಈ ಪ್ರಕರಣದ ಆರೋಪಿಯ ಬಂಧನದಿಂದ, 1) ಕೋಣನಕುಂಟೆ ಮೊ.ಠಾಣೆಯ-01 ಮೊಬೈಲ್ ಫೋನ್ ಕಳವು ಪ್ರಕರಣ, 2) ವೈಯಾಲಿಕಾವಲ್ ಪೊ.ಠಾಣೆಯ-02 ಮೊಬೈಲ್ ಫೋನ್ ಕಳವು ಪ್ರಕರಣಗಳು, 3) ತಿಪಟೂರು ಪ್ರೊ.ಠಾಣೆಯ-03 ಮೊಬೈಲ್ ಫೋನ್ ಕಳವು ಪ್ರಕರಣಗಳು, 4) ಕಬ್ಬನ್‌ಪಾರ್ಕ್ ಪೊ.ಠಾಣೆಯ-01 ಲ್ಯಾಪ್‌ಟಾಪ್ ಕಳವು ಪ್ರಕರಣ, 5) ನಂದಿನಿಲೇಔಟ್ ಪೊ.ಠಾಣೆಯ-01 ಮೊಬೈಲ್ ಫೋನ್ ಹಾಗೂ 01 ಲ್ಯಾಪ್‌ಟಾಪ್ ಕಳವು ಪ್ರಕರಣ, 6) ತಲಘಟ್ಟಪುರ ಪೊ.ಠಾಣೆಯ-01 ಮೊಬೈಲ್ ಫೋನ್ ಹಾಗೂ 01 ಲ್ಯಾಪ್‌ಟಾಪ್ ಕಳವು ಪ್ರಕರಣ ಸೇರಿದಂತೆ ಒಟ್ಟು 8 ಮೊಬೈಲ್ ಫೋನ್ ಕಳವು ಪ್ರಕರಣಗಳು ಹಾಗೂ 3 ಲ್ಯಾಪ್‌ಟಾಪ್ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ. ಉಳಿದ 6 ಮೊಬೈಲ್ ಫೋನ್‌ಗಳು ಹಾಗೂ 1 ಲ್ಯಾಪ್‌ಟಾಪ್‌ನ ವಾರಸುದಾರರ ಪತ್ತೆ ಕಾರ್ಯ ಮುಂದುವರೆದಿದೆ. ತನಿಖೆ ಪ್ರಗತಿಯಲ್ಲಿದೆ.

ದಿನಾಂಕ:20/08/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯದ ಅದೇಶದಂತೆ, ತಮಿಳುನಾಡು ರಾಜ್ಯದ ಪುಝಲ್ ನಲ್ಲಿರುವ ಕೇಂದ್ರ ಕಾರಾಗೃಹ-2 ವಾಪಸ್ ಬಿಡಲಾಗಿರುತ್ತದೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು ನೈರುತ್ಯ ವಿಭಾಗದ ಉಪ ಪೊಲೀಸ್ ಕಮೀಷನರ್ ಅನಿತಾ ಬಿ ಹದ್ದಣ್ಣವರ್ ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ, ಸುಬ್ರಮಣ್ಯಪುರ ಉಪವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಗಿರೀಶ್ ಎಸ್.ಬಿ ರವರ ನೇತೃತ್ವದಲ್ಲಿ, ತಲಘಟ್ಟಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್‌ ಆರ್.ಎಸ್ ಚೌಧರಿ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಬೆಂಗಳೂರಲ್ಲಿ ಮೂವರು ಸರಗಳ್ಳರು ಅರೆಸ್ಟ್, 15.70 ಲಕ್ಷ ಮೌಲ್ಯದ 57.28 ಗ್ರಾಂ ಚಿನ್ನದ ಮಾಂಗಲ್ಯ ಸರ ವಶಕ್ಕೆ

Share. Facebook Twitter LinkedIn WhatsApp Email

Related Posts

RSS ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು, ಇವರ ಬಗ್ಗೆ ಎಚ್ಚರ ಇರಲಿ: ಸಿಎಂ ಸಿದ್ದರಾಮಯ್ಯ ಕರೆ

18/10/2025 2:24 PM2 Mins Read

ಬೆಂಗಳೂರಲ್ಲಿ ಮತ್ತೊಂದು ಅಪಘಾತ : ನಿಂತಿದ್ದ ಲಾರಿಗೆ ‘KSRTC’ ಬಸ್ ಡಿಕ್ಕಿ : 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

18/10/2025 1:48 PM1 Min Read

BREAKING : ಬೆಂಗಳೂರಲ್ಲಿ ಸೀನಿಯರ್ ಕಿರುಕುಳ ತಾಳದೆ, ಪಿಜಿಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ!

18/10/2025 1:45 PM1 Min Read
Recent News

RSS ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು, ಇವರ ಬಗ್ಗೆ ಎಚ್ಚರ ಇರಲಿ: ಸಿಎಂ ಸಿದ್ದರಾಮಯ್ಯ ಕರೆ

18/10/2025 2:24 PM

ನಿಮ್ಮ ಫೋನ್ ಕದ್ದೊಯ್ಯಲ್ಪಟ್ಟಾಗ ಅಥವಾ ಕಳೆದುಹೋದಾಗ ಮೊದಲು, ನಂತ್ರ ಏನು ಮಾಡಬೇಕು?

18/10/2025 2:12 PM

ಬೆಂಗಳೂರಲ್ಲಿ ಮತ್ತೊಂದು ಅಪಘಾತ : ನಿಂತಿದ್ದ ಲಾರಿಗೆ ‘KSRTC’ ಬಸ್ ಡಿಕ್ಕಿ : 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

18/10/2025 1:48 PM

BREAKING : ಬೆಂಗಳೂರಲ್ಲಿ ಸೀನಿಯರ್ ಕಿರುಕುಳ ತಾಳದೆ, ಪಿಜಿಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ!

18/10/2025 1:45 PM
State News
KARNATAKA

RSS ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು, ಇವರ ಬಗ್ಗೆ ಎಚ್ಚರ ಇರಲಿ: ಸಿಎಂ ಸಿದ್ದರಾಮಯ್ಯ ಕರೆ

By kannadanewsnow0918/10/2025 2:24 PM KARNATAKA 2 Mins Read

ಮೈಸೂರು: ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ…

ಬೆಂಗಳೂರಲ್ಲಿ ಮತ್ತೊಂದು ಅಪಘಾತ : ನಿಂತಿದ್ದ ಲಾರಿಗೆ ‘KSRTC’ ಬಸ್ ಡಿಕ್ಕಿ : 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

18/10/2025 1:48 PM

BREAKING : ಬೆಂಗಳೂರಲ್ಲಿ ಸೀನಿಯರ್ ಕಿರುಕುಳ ತಾಳದೆ, ಪಿಜಿಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ!

18/10/2025 1:45 PM

BREAKING : ಕಾಲ್ ಸೆಂಟರ್ ಮೂಲಕ ವೋಟರ್ ಐಡಿ ಡಿಲೀಟ್ : ‘SIT’ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲು!

18/10/2025 1:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.