Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ ಹೆಚ್.ಡಿ. ಕುಮಾರಸ್ವಾಮಿ

23/05/2025 4:07 PM

BIG NEWS : ಉತ್ತರಕನ್ನಡದಲ್ಲಿ ಮಳೆಯ ಅಬ್ಬರಕ್ಕೆ ರಸ್ತೆ ಸಂಪೂರ್ಣ ಬಂದ್ : ವೃದ್ಧೆಯನ್ನು ಬಿದಿರಿಗೆ ಕಟ್ಟಿ ಆಸ್ಪತ್ರೆಗೆ ರವಾನೆ!

23/05/2025 4:05 PM

ಈಶಾನ್ಯ ರಾಜ್ಯಗಳಿಗೆ 75 ಸಾವಿರ ಕೋಟಿ ರೂಪಾಯಿ ಹೂಡಿಕೆ ಗುರಿ ನಿಗದಿಪಡಿಸಿದೆ ರಿಲಯನ್ಸ್

23/05/2025 4:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದೊಂದು ಅಭಿವೃದ್ಧಿ ಬಜೆಟ್ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
KARNATAKA

ಇದೊಂದು ಅಭಿವೃದ್ಧಿ ಬಜೆಟ್ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

By kannadanewsnow0916/02/2024 2:28 PM

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ‌.

2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇಲಾಖೆಯ ಬಹುತೇಕ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಮಕ್ಕಳ ಉದ್ದೇಶಿತ ಯೋಜನೆಗಳಿಗೆ ಬಜೆಟ್‌ನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದರು.

ಪ್ರಸಕ್ತ ಸಾಲಿನಲ್ಲಿ ಇಲಾಖೆ ನಿರೀಕ್ಷಿಸಿದಷ್ಟು ಬಜೆಟ್‌ ದಕ್ಕಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮಿಗೆ ಈ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಸ್ಮಾರ್ಟ್‌ ಫೋನ್‌ಗಳಿಗೆ 90 ಕೋಟಿ

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಮೇಲ್ವಿಚಾರಕಿಯರ ಬಹುದಿನಗಳ ಬೇಡಿಕೆಯಾಗಿದ್ದ ಸ್ಮಾರ್ಟ್ ಫೋನ್‌ಗಾಗಿ 90 ಕೋಟಿ ರೂಪಾಯಿ ನೀಡಲಾಗಿದೆ. 90 ಕೋಟಿ ರೂ. ವೆಚ್ಚದಲ್ಲಿ 75,938 ಫೋನ್‌ಗಳನ್ನ ನೀಡಲಾಗುತ್ತಿದ್ದು, ಇದರಿಂದ ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳ್ಳಲಿದೆ. ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗಿದೆ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು. ಒಟ್ಟಾರೆ ಇದೊಂದು ಅತ್ಯಂತ ಸಮತೋಲಿತ, ಅಭಿವೃದ್ಧಿ ಪರ ಬಜೆಟ್ ಎಂದು ಹೆಬ್ಬಾಳಕರ್ ಪ್ರಶಂಸಿಸಿದ್ದಾರೆ.

ಉಡುಪಿ, ಬೆಳಗಾವಿಗೂ ಹೆಚ್ಚಿನ ಅನುದಾನ

ನನ್ನ ತವರು ಜಿಲ್ಲೆ ಬೆಳಗಾವಿ ಹಾಗೂ ಉಸ್ತುವಾರಿ ಹೊತ್ತಿರುವ ಉಡುಪಿ ಜಿಲ್ಲೆಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವರು ಹೇಳಿದರು.

ಹೀಗಿದೆ ಇಂದು ‘ಸಿಎಂ ಸಿದ್ಧರಾಮಯ್ಯ’ ಮಂಡಿಸಿದ ‘ರಾಜ್ಯ ಬಜೆಟ್ 2024-25’ರ ಇಲಾಖೆ, ಕ್ಷೇತ್ರವಾರು ಹೈಲೈಟ್ಸ್ | Karnataka Budget 2024-25 Highlights

‘ಫಾಸ್ಟ್ ಟ್ಯಾಗ್’ ಖರೀದಿಸುವ ’32 ಬ್ಯಾಂಕ್’ಗಳ ಪಟ್ಟಿಯಿಂದ ‘ಪೇಟಿಎಂ ಪೇಮೆಂಟ್ಸ್ ಬ್ಯಾಂಕ್’ ಔಟ್ | Paytm Payments Bank

Share. Facebook Twitter LinkedIn WhatsApp Email

Related Posts

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ ಹೆಚ್.ಡಿ. ಕುಮಾರಸ್ವಾಮಿ

23/05/2025 4:07 PM2 Mins Read

BIG NEWS : ಉತ್ತರಕನ್ನಡದಲ್ಲಿ ಮಳೆಯ ಅಬ್ಬರಕ್ಕೆ ರಸ್ತೆ ಸಂಪೂರ್ಣ ಬಂದ್ : ವೃದ್ಧೆಯನ್ನು ಬಿದಿರಿಗೆ ಕಟ್ಟಿ ಆಸ್ಪತ್ರೆಗೆ ರವಾನೆ!

23/05/2025 4:05 PM1 Min Read

ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರಾ?: ರಾಮನಗರ ಹೆಸರು ಬದಲಿಸಿದ್ದಕ್ಕೆ HDK ಕೆಂಡ

23/05/2025 3:49 PM2 Mins Read
Recent News

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ ಹೆಚ್.ಡಿ. ಕುಮಾರಸ್ವಾಮಿ

23/05/2025 4:07 PM

BIG NEWS : ಉತ್ತರಕನ್ನಡದಲ್ಲಿ ಮಳೆಯ ಅಬ್ಬರಕ್ಕೆ ರಸ್ತೆ ಸಂಪೂರ್ಣ ಬಂದ್ : ವೃದ್ಧೆಯನ್ನು ಬಿದಿರಿಗೆ ಕಟ್ಟಿ ಆಸ್ಪತ್ರೆಗೆ ರವಾನೆ!

23/05/2025 4:05 PM

ಈಶಾನ್ಯ ರಾಜ್ಯಗಳಿಗೆ 75 ಸಾವಿರ ಕೋಟಿ ರೂಪಾಯಿ ಹೂಡಿಕೆ ಗುರಿ ನಿಗದಿಪಡಿಸಿದೆ ರಿಲಯನ್ಸ್

23/05/2025 4:00 PM

ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರಾ?: ರಾಮನಗರ ಹೆಸರು ಬದಲಿಸಿದ್ದಕ್ಕೆ HDK ಕೆಂಡ

23/05/2025 3:49 PM
State News
KARNATAKA

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ ಹೆಚ್.ಡಿ. ಕುಮಾರಸ್ವಾಮಿ

By kannadanewsnow0923/05/2025 4:07 PM KARNATAKA 2 Mins Read

ನವದೆಹಲಿ: ದಲಿತ ನಾಯಕರನ್ನು ಮುಗಿಸಲು ಕುತಂತ್ರ ಮಾಡುತ್ತಿರುವ ಮಹಾನಾಯಕನೇ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ರಾಜಕೀಯವಾಗಿ ಮುಗಿಸಲು…

BIG NEWS : ಉತ್ತರಕನ್ನಡದಲ್ಲಿ ಮಳೆಯ ಅಬ್ಬರಕ್ಕೆ ರಸ್ತೆ ಸಂಪೂರ್ಣ ಬಂದ್ : ವೃದ್ಧೆಯನ್ನು ಬಿದಿರಿಗೆ ಕಟ್ಟಿ ಆಸ್ಪತ್ರೆಗೆ ರವಾನೆ!

23/05/2025 4:05 PM

ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರಾ?: ರಾಮನಗರ ಹೆಸರು ಬದಲಿಸಿದ್ದಕ್ಕೆ HDK ಕೆಂಡ

23/05/2025 3:49 PM

BREAKING : ಬೆಂಗಳೂರಲ್ಲಿ 30 ಲಕ್ಷ ಮೌಲ್ಯದ ಗಾಂಜಾ ಜಪ್ತಿ : ಓರ್ವ ಯುವತಿ ಸೇರಿದಂತೆ ನಾಲ್ವರು ಆರೋಪಿಗಳು ಅರೆಸ್ಟ್!

23/05/2025 3:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.