Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಕರಾವಳಿಯ ನರಕವನ್ನೇ ಸ್ಫೋಟಿಸ್ತೇನೆ’ : ‘ಒಂದಲ್ಲ ಒಂದು ರೀತಿಯಲ್ಲಿ’ ಹಾರ್ಮುಜ್ ಮತ್ತೆ ತೆರೆಯುವುದಾಗಿ ‘ಟ್ರಂಪ್’ ಪ್ರತಿಜ್ಞೆ

14/03/2026 8:49 PM

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

14/03/2026 8:44 PM

ALERT : ಓರಲ್ ಸೆಕ್ಸ್ (Oral Sex) ಕೂಡ ಗಂಟಲು ಕ್ಯಾನ್ಸರ್ ಗೆ ಕಾರಣವಾಗಬಹುದು ಎಚ್ಚರ !

14/03/2026 8:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದು ‘ಎಳ್ಳಮಾವಾಸ್ಯೆ’ಯಂದು ‘ಎಳ್ಳಿನಿಂದ ತರ್ಪಣ’ ಮಾಡುವುದರ ಹಿಂದಿನ ಮಹತ್ವ
KARNATAKA

ಇದು ‘ಎಳ್ಳಮಾವಾಸ್ಯೆ’ಯಂದು ‘ಎಳ್ಳಿನಿಂದ ತರ್ಪಣ’ ಮಾಡುವುದರ ಹಿಂದಿನ ಮಹತ್ವ

By kannadanewsnow0923/12/2024 7:54 PM

ಪ್ರಪಂಚದಲ್ಲಿ ಹುಟ್ಟುವ ಪ್ರತಿಯೊಂದು ಮನುಷ್ಯನು ಹುಟ್ಟುವಾಗಲೇ ಐದು ಋಣವುಳ್ಳವನಾಗುತ್ತಾನೆ. ದೇವಋಣ, ಋಷಿಋಣ, ಪಿತೃಋಣ, ಮನುಷ್ಯಋಣ ಮತ್ತು ಭೂತಋಣ. ದೇವತೆಗಳು, ಋಷಿಗಳು, ಪಿತೃಗಳು, ಮಾನವರು ಮತ್ತು ಪ್ರಾಣಿಗಳು ಇವರೆಲ್ಲರಿಂದ ನಾವು ನಾನಾವಿಧದ ಉಪಕಾರಗಳನ್ನು ಪಡೆಯತ್ತೇವೆ. ಅವರ ಹಂಗಿಲ್ಲದೆ ಬದುಕುವ ಸಾಮರ್ಥ್ಯ ನಮಗಾರಿಗೂ ಇಲ್ಲವಾದ್ದರಿಂದ ಇವರೆಲ್ಲರ ಉಪಕಾರ ಸ್ಮರಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಈ ಸ್ಮರಣೆಯು ಕೇವಲ ಯಾಂತ್ರಿಕವಾಗಿರದೆ, ಅವುಗಳ ಮೂಲಕ ಭಗವಂತನ ಆರಾಧನೆಯಾಗಬೇಕು ಎಂದು ತಿಳಿಸುತ್ತವೆ ಶಾಸ್ತ್ರಗಳು. ಸ್ವಾಧ್ಯಾಯ ಮಾಡುವುದು, ಹವನ, ಶ್ರಾದ್ಧ, ತಿಲತರ್ಪಣ ,ಅನ್ನದಾನ ಮುಂತಾದವುಗಳು ಅರ್ಚನೆಗಳಾಗಿವೆ.

ಪ್ರತಿಯೊಬ್ಬನೂ ತನ್ನ ತಂದೆತಾಯಿಗಳಿಗೆ ಮಗನೆಂದು ಹೇಗೆ ಅನ್ನಿಸಿಕೊಳ್ಳುತ್ತಾನೆ?
ಎಂಬ ಪ್ರಶ್ನೆಗೆ ಶಾಸ್ತ್ರೋಕ್ತವಾದ ಉತ್ತರ ಹೀಗಿದೆ:

“ಜೀವತೋ ವಾಕ್ಯಕರಣಾತ್
ಪ್ರತ್ಯಬ್ಧಂ ಭೂರಿಭೋಜನಾತ್ |
ಗಯಾಯಾಂ ಪಿಂಡದಾನಾಚ್ಚತ್ರಿಭಿಃ ಪುತ್ರಸ್ಯ ಪುತ್ರತಾ ||”

ತಂದೆತಾಯಿಗಳು ಬದುಕಿರುವಾಗ ಅವರ ಧರ್ಮಸಮ್ಮತವಾದ ಮಾತುಗಳನ್ನು ನಡೆಸಿಕೊಡುತ್ತಾ ಸಂತೋಷಪಡಿಸಬೇಕು.

ಮೃತರಾದ ಮೇಲೆ ಪ್ರತಿವರ್ಷ ಅವರ ಶ್ರಾದ್ಧವನ್ನು ಭಕ್ತಿಯಿಂದ ಮಾಡಬೇಕು.
ವಿಷ್ಣುಪಾದವಿರುವ ಗಯಾಕ್ಷೇತ್ರದಲ್ಲಿ ಒಮ್ಮೆಯಾದರೂ ಪಿತೃತೃಪ್ತಿಗಾಗಿ ಪಿಂಡದಾನ ಮಾಡಬೇಕು.
ಈ ಮೂರು ಕರ್ಮಗಳಿಂದಾಗಿ ‘ಪುತ್ರ’ ಎನಿಸಬಲ್ಲ. ಹೀಗಾಗಿ ಪಿತೃದೇವತೆಗಳ ಪ್ರೀತಿಯನ್ನು ಉದ್ದೇಶಿಸಿ, ಮೃತರಾದ ತಂದೆತಾಯಿಗಳ ಶ್ರಾದ್ಧವನ್ನು ಶ್ರದ್ಧೆಯಿಂದ ಆಚರಿಸಬೇಕಾದುದು ಮಗನ ಮುಖ್ಯಕರ್ತವ್ಯ. ಇದು ಪಿತೃಯಜ್ಞ.

ತಾನು ಪ್ರತ್ಯಕ್ಷವಾಗಿ ಕಂಡಿದ್ದ, ಕಂಡಿರದ ಬಂಧುಬಳಗದವರಲ್ಲಿ ಬ್ರಹ್ಮಚಾರಿಯಾಗಿಯೇ ಮೃತರಾದವರಿಗೂ, ಕನ್ಯಾವಸ್ಥೆಯಲ್ಲಿ ಸತ್ತವರಿಗೂ, ಅಪಘಾತದಿಂದ ಮಡಿದವರಿಗೂ, ಕರ್ಮವನ್ನು ಮಾಡಲು ಅಧಿಕಾರಿಗಳೇ ಇಲ್ಲದಂತಹವರಿಗೂ ಅಲ್ಲದೆ ಜನ್ಮತಃ ದಿವ್ಯಾಂಗರಾಗಿ ಹುಟ್ಟಿ ಮೃತರಾದವರಿಗೂ, ಬೆಂಕಿ, ವಿದ್ಯುತ್, ಆಯುಧಗಳಿಂದ ಅಪಘಾತಗಳಿಂದ ಅಥವಾ ಮತ್ತಾವುದೇ ರೀತಿಯಿಂದ ದುರ್ಮರಣ ಹೊಂದಿದವರಿಗೂ, ಹೀಗೆ ಎಲ್ಲರ ಉದ್ಧಾರ ಮತ್ತು ತೃಪ್ತಿಗಾಗಿ ಅವರೆಲ್ಲರಿಗೂ ಸಮುದ್ರ ಅಥವಾ ಹೊಳೆಯಲ್ಲಿ ಸ್ನಾನ ಮಾಡಿ ತಿಲತರ್ಪಣವನ್ನು ಕೊಟ್ಟು ತೃಪ್ತಿಪಡಿಸುವ ಕ್ರಿಯೆ ಈ ಎಳ್ಳಮಾವಾಸ್ಯೆ ಯಲ್ಲಿ ಅತ್ಯಂತ ಶ್ರೇಷ್ಠ.

ಮನುಷ್ಯನ ಮರಣಾನಂತರ ಮಾಡುವ ಈ ವಿಧಾನದಲ್ಲಿ ಕಣ್ಣಿಗೆ ಕಾಣಿಸದಿರುವ ಆತನ ನಾಮ, ಗೋತ್ರವನ್ನು ಹೇಳಿ ಭೂಮಿಯಲ್ಲಿ ತರ್ಪಣ ಮಾಡಿದರೆ ಎಲ್ಲೋ ಇರುವ ಆತನಿಗೆ ಹೇಗೆ ಸಲ್ಲುತ್ತದೆ? ಎಂಬ ಪ್ರಶ್ನೆಗೆ ಶಾಸ್ತ್ರವು ಸಮಂಜಸವಾದ ಉತ್ತರ ನೀಡಿದೆ:-

ಭಗವಂತನು ಪ್ರದ್ಯುಮ್ನ, ಸಂಕರ್ಷಣ, ವಾಸುದೇವ ಎಂಬ ತನ್ನ ರೂಪಗಳಿಂದ ಪಿತೃದೇವತೆಗಳಲ್ಲಿ ಅಂತರ್ಗತನಾಗಿ ಇದ್ದು ನಾವು ನೀಡುವ ಎಳ್ಳಿನಿಂದ ಮಾಡುವ ತರ್ಪಣವನ್ನು ಅಂದರೆ ನಾವು ಭಾವನೆಯಿಂದ ನೀಡಿದಂತಹ ಈ ಆರಾಧನೆಯನ್ನು ತೆಗೆದುಕೊಂಡು ತೃಪ್ತನಾಗುತ್ತಾನೆ. ಮೃತರಾದ ನಮ್ಮ ಸಂಬಂಧಿಕರು ಪಶು, ಪಕ್ಷಿ, ಮಾನವ ಹೀಗೆ ಯಾವ ಯೋನಿಯಲ್ಲಿ ಜನಿಸಿದ್ದರೂ ಅವರವರಿಗೆ ಯೋಗ್ಯವಾದ ಆಹಾರ-ನೀರು ಸಿಗುವಂತೆ ಮಾಡಿ ಅನುಗ್ರಹಿಸುತ್ತಾನೆ. ಇದು ಆ ಭಗವಂತನು ಮಾಡಿದ ಅದ್ಭುತ ವ್ಯವಸ್ಥೆ.

‘ಶ್ರಾದ್ಧೇ ತ್ರೀಣಿ ಪವಿತ್ರಾಣಿ ದೌಹಿತ್ರಃ ಕುತಪಃ ತಿಲಃ |’ ಶ್ರಾದ್ಧ ಮಾಡಲು ಅತ್ಯಂತ ಶ್ರೇಷ್ಠವಾದ ಮೂರು ಸಂಗತಿಗಳು – ಹೆಣ್ಣುಮಗಳ ಮಗ, ಮಧ್ಯಾಹ್ನ ಕಾಲ, ಎಳ್ಳು. ಇವೆಲ್ಲಕ್ಕಿಂತ ಮುಖ್ಯವಾಗಿ ಇರಬೇಕಾದುದು ಶ್ರದ್ಧೆ.
ಶ್ರದ್ಧೆಯಿಂದ ಮಾಡಲೇಬೇಕಾದ್ದರಿಂದ ಈ ಕಾರ್ಯವನ್ನು ‘ಶ್ರಾದ್ಧ’ ಎಂದು ಶಾಸ್ತ್ರಗಳು ಕರೆದಿವೆ.

ಈ ಶ್ರಾದ್ಧಕ್ರಿಯೆಯಿಂದ ಅಥವಾ ತಿಲ ತರ್ಪಣದಿಂದ ಸಂತೋಷಗೊಂಡ ಪಿತೃದೇವತೆಗಳು ಶ್ರಾದ್ಧಕರ್ತೃಗಳಿಗೆ, ಅವರ ಕುಟುಂಬಕ್ಕೆ ಸಕಲವಿಧವಾದ ಮಂಗಳ ಉಂಟಾಗುವಂತೆ ಆಶೀರ್ವದಿಸುತ್ತಾರೆ. ಇದರಿಂದ ಯಜಮಾನನ ಕುಟುಂಬಕ್ಕೆ ಸಕಲವಿಧ ಕ್ಷೇಮ-ಅಭಿವೃದ್ಧಿ ನಿಶ್ಚಿತ. ಹೀಗಾಗಿ ಜನ್ಮ ಕೊಟ್ಟು ಸಾಕಿ ಸಲಹಿದ ಪಿತೃಗಳಿಗೆ ಉಪಕಾರಸ್ಮರಣೆಯಿಂದ ಮಾಡಬೇಕಾದ ತರ್ಪಣ ಕಾರ್ಯ ಮಕ್ಕಳ ಮುಖ್ಯ ಕರ್ತವ್ಯವಾಗಿದೆ. .

ಮಹಾಭಾರತ ಕಾಲದಲ್ಲಿ ನಡೆದ ಕುರುಕ್ಷೇತ್ರ ಯುದ್ಧದಲ್ಲಿ ಮಡಿದ ಬಂಧುಮಿತ್ರರಿಗೆ ಎಳ್ಳಿನಿಂದ ತರ್ಪಣ ಮಾಡಿದ ದಿನವನ್ನು ಎಳ್ಳಮಾವಾಸ್ಯೆ ಎಂದು ಆಚರಿಸಲಾಗುತ್ತದೆ ಎಂದೂ ಹೇಳುತ್ತಾರೆ. ಈ ದಿನ ತರ್ಪಣ ಬಿಟ್ಟು, ಸತ್ಪಾತ್ರರಿಗೆ ಊಟ ಹಾಕಿ, ದಾನ ನೀಡಿ ಶ್ರಾದ್ಧ ಕಾರ್ಯಗಳನ್ನು ಮಾಡುವುದರಿಂದ ಬದುಕಿನಲ್ಲಿ ಶಾಂತಿ, ನೆಮ್ಮದಿ ದೊರೆಯುತ್ತದೆ ಎಂಬ ನಂಬಿಕೆಯಿದೆ. ವಿಶೇಷವಾಗಿ ಎಳ್ಳನ್ನು ದಾನ ಮಾಡುತ್ತಾರೆ.

ಮಲೆನಾಡು ಮತ್ತು ಕರಾವಳಿಯ ಭಾಗಗಳಲ್ಲಿ ಈ ದಿನ ತೀರ್ಥಸ್ನಾನ ಪ್ರಮುಖವಾಗಿದೆ. ಈ ದಿನ ಜನರು ಸಮುದ್ರ ಸ್ನಾನ ಮಾಡುತ್ತಾರೆ. ಉಡುಪಿ ಸಮೀಪದ ವಡಭಾಂಡೇಶ್ವರ ದೇವಸ್ಥಾನದಲ್ಲಿ ಬಲರಾಮ ದೇವರ ದರ್ಶನ ಮಾಡುವುದರಿಂದ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ.

ತೀರ್ಥಹಳ್ಳಿಯಲ್ಲಿ ಎಳ್ಳು ಅಮಾವಾಸ್ಯೆಯನ್ನು ಅತ್ಯಂತ ವಿಶಿಷ್ಟ ಮತ್ತು ಸಡಗರದಿಂದ ಆಚರಿಸಲಾಗುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಹಿಂದೆ ಜಮದಗ್ನಿ ಋಷಿಯ ಆದೇಶದಂತೆ ಮಗ ಪರಶುರಾಮ ತನ್ನ ಕೊಡಲಿಯಿಂದ ತಾಯಿ ರೇಣುಕಾದೇವಿಯ ರುಂಡವನ್ನು ಕಡಿದು, ಬಳಿಕ ಕೊಡಲಿಗೆ ಅಂಟಿದ ರಕ್ತದ ಕಲೆಯನ್ನು ಅಳಿಸಲೆಂದು ಸಾಕಷ್ಟು ನದಿಗಳಲ್ಲಿ ಶುಚಿಗೊಳಿಸಿದರೂ, ಒಂದು ಹನಿ ರಕ್ತದ ಕಲೆ ಹಾಗೆಯೇ ಉಳಿಯಿತು. ಕೊನೆಗೆ ಪರಶುರಾಮರು ತುಂಗಾ ನದಿಯಲ್ಲಿ ಕೊಡಲಿಯನ್ನು ಅದ್ದಿದಾಗ ಆ ರಕ್ತದ ಕಲೆ ಹೊರಟುಹೋಯಿತಂತೆ. ಈ ರೀತಿಯ ಪಾವಿತ್ರ್ಯ ಹೊಂದಿರುವ ತುಂಗಾ ನದಿಯು ತೀರ್ಥಕ್ಕೆ ಸಮನಾಗಿರುವುದರಿಂದ ಈ ಕ್ಷೇತ್ರ ತೀರ್ಥಹಳ್ಳಿ ಎಂಬ ಹೆಸರು ಪಡೆಯಿತೆಂದು ಹೇಳುತ್ತಾರೆ. ಆದ್ದರಿಂದ ಎಳ್ಳು ಅಮಾವಾಸ್ಯೆಯ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಈ ಕ್ಷೇತ್ರಕ್ಕೆ ಬಂದು ತುಂಗೆಯಲ್ಲಿ ಮಿಂದು ಪುನೀತರಾಗುತ್ತಾರೆ.

Share. Facebook Twitter LinkedIn WhatsApp Email

Related Posts

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

14/03/2026 8:44 PM1 Min Read

ALERT : ಓರಲ್ ಸೆಕ್ಸ್ (Oral Sex) ಕೂಡ ಗಂಟಲು ಕ್ಯಾನ್ಸರ್ ಗೆ ಕಾರಣವಾಗಬಹುದು ಎಚ್ಚರ !

14/03/2026 8:36 PM2 Mins Read

JOB ALERT: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ; ರಾಜ್ಯ ಪೊಲೀಸ್ ಇಲಾಖೆಯ 5,764 ಕಾನ್ ಸ್ಟೇಬಲ್ ಹುದ್ದೆ ಭರ್ತಿಗೆ ಚಾಲನೆ

14/03/2026 8:23 PM1 Min Read
Recent News

BREAKING : ‘ಕರಾವಳಿಯ ನರಕವನ್ನೇ ಸ್ಫೋಟಿಸ್ತೇನೆ’ : ‘ಒಂದಲ್ಲ ಒಂದು ರೀತಿಯಲ್ಲಿ’ ಹಾರ್ಮುಜ್ ಮತ್ತೆ ತೆರೆಯುವುದಾಗಿ ‘ಟ್ರಂಪ್’ ಪ್ರತಿಜ್ಞೆ

14/03/2026 8:49 PM

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

14/03/2026 8:44 PM

ALERT : ಓರಲ್ ಸೆಕ್ಸ್ (Oral Sex) ಕೂಡ ಗಂಟಲು ಕ್ಯಾನ್ಸರ್ ಗೆ ಕಾರಣವಾಗಬಹುದು ಎಚ್ಚರ !

14/03/2026 8:36 PM

BREAKING : “ನಾವು ಶೀಘ್ರದಲ್ಲೇ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುತ್ತೇವೆ” : ಟ್ರಂಪ್

14/03/2026 8:35 PM
State News
KARNATAKA

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

By kannadanewsnow5714/03/2026 8:44 PM KARNATAKA 1 Min Read

ಬೆಂಗಳೂರು: ಮತದಾರರು ತಮ್ಮ ಹೆಸರನ್ನು ಸುಲಭವಾಗಿ ಹುಡುಕಲು ಅನುಕೂಲವಾಗುವಂತೆ, ವಾರ್ಡ್ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಇದೀಗ ಅಧಿಕೃತ ಜಾಲತಾಣದಲ್ಲಿ…

ALERT : ಓರಲ್ ಸೆಕ್ಸ್ (Oral Sex) ಕೂಡ ಗಂಟಲು ಕ್ಯಾನ್ಸರ್ ಗೆ ಕಾರಣವಾಗಬಹುದು ಎಚ್ಚರ !

14/03/2026 8:36 PM

JOB ALERT: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ; ರಾಜ್ಯ ಪೊಲೀಸ್ ಇಲಾಖೆಯ 5,764 ಕಾನ್ ಸ್ಟೇಬಲ್ ಹುದ್ದೆ ಭರ್ತಿಗೆ ಚಾಲನೆ

14/03/2026 8:23 PM

ನಿಮ್ಮ ದೇವರ ಮನೆಯಲ್ಲಿ ಕುಳಿತು ಈ ಶ್ಲೋಕಗಳನ್ನು ತಪ್ಪದೇ ಪಠಿಸಿ, ಕಷ್ಟಗಳೆಲ್ಲಾ ದೂರ ದೂರ

14/03/2026 6:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.