Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಡ್ಯ ಜನತೆಗೆ ಶಾಸಕ ಪಿ.ರವಿಕುಮಾರ್ ಗೌಡ ಸಿಹಿಸುದ್ದಿ: ವಿಧಾನಸಭಾ ಕ್ಷೇತ್ರದಲ್ಲಿ 5,000 ನಿವೇಶನ ಹಂಚಿಕೆಗೆ ನಿರ್ಧಾರ

​ಈ ಬಾರಿ ಮೋದಿಯಿಂದ ಬಿಗಿಯಾದ ಆಲಿಂಗನವಿಲ್ಲ, ಕೇವಲ ಹಸ್ತಲಾಘವ! 16 ತಿಂಗಳ ನಂತರದ ‘ಮೋದಿ-ಟ್ರಂಪ್’ ಭೇಟಿಯ ವೀಡಿಯೋ ವೈರಲ್!

ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ: ಸಿಎಂ ಡಿ.ಕೆ.ಶಿವಕುಮಾರ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ: ಸಿಎಂ ಡಿ.ಕೆ.ಶಿವಕುಮಾರ್
KARNATAKA

ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ: ಸಿಎಂ ಡಿ.ಕೆ.ಶಿವಕುಮಾರ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು : “ನೂತನವಾಗಿ ನಿರ್ಮಾಣವಾಗುತ್ತಿರುವ ಕೆಂಪೇಗೌಡ ಬಡಾವಣೆಯಲ್ಲಿ ಇದೇ 27ರಂದು ಬೆಳಗ್ಗೆ 11.30ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತಿ ನಡೆಸಲು ತೀರ್ಮಾನಿಸಲಾಗಿದೆ. ಬಿಡಿಎ ವತಿಯಿಂದ ಅಧ್ಯಕ್ಷರಾದ ಹ್ಯಾರೀಸ್ ಅವರ ನೇತೃತ್ವದಲ್ಲಿ ನಗರದಲ್ಲಿ 15 ಲಕ್ಷ ಗಿಡಗಳನ್ನು ನೆಡಲಾಗುವುದು. ಈ ಬಡಾವಣೆಯಲ್ಲಿ ನೂತನ ರಸ್ತೆಯನ್ನು ಉದ್ಘಾಟಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಪೂರ್ವಭಾವಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಪ್ರತಿ ವರ್ಷದಂತೆ ಕೆಂಪೇಗೌಡ ಜಯಂತಿ ಆಚರಣೆ ಕುರಿತಾಗಿ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಕಾರ್ಯಕ್ರಮದ ರೂಪುರೇಷೆ ಬಗ್ಗೆ ಎಲ್ಲಾ ಸಂಘಟನೆಗಳ ಜತೆ ಚರ್ಚೆ ಮಾಡಲಾಗಿದೆ. ಪ್ರತಿ ಬಾರಿಯಂತೆ ನಗರದ ನಾಲ್ಕು ಕೆಂಪೇಗೌಡ ಗೋಪುರಗಳಿಂದ ಪ್ರತ್ಯೇಕ ತಂಡಗಳು ಆಗಮಿಸಲಿವೆ. ನಾಲ್ಕು ಗೋಪುರಗಳ ಪೈಕಿ ರಾಮಲಿಂಗಾ ರೆಡ್ಡಿ, ಕೃಷ್ಣ ಬೈರೇಗೌಡ, ಕೆ.ಜೆ ಜಾರ್ಜ್ ಹಾಗೂ ಬೈರತಿ ಸುರೇಶ್ ಅವರು ಜವಾಬ್ದಾರಿ ವಹಿಸಲಿದ್ದಾರೆ. ಇನ್ನು ಮಾಗಡಿ ತಂಡವನ್ನು ಸ್ಥಳೀಯ ಶಾಸಕರಾದ ಬಾಲಕೃಷ್ಣ, ಹುಲಿಯೂರು ದುರ್ಗ ಕಡೆಯಿಂದ ರಂಗನಾಥ್ ಅವರು ಮುನ್ನಡೆಸಲಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕಾರ್ಯಕ್ರಮವನ್ನು ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರಿಂದ ನಡೆಸಲಾಗುವುದು. ಕೃಷ್ಣಬೈರೇಗೌಡ ಅವರ ನೇತೃತ್ವದಲ್ಲಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ತಯಾರಿ ಮಾಡಲಾಗುವುದು” ಎಂದು ತಿಳಿಸಿದರು.

“ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಆವರಣದಲ್ಲಿ ಕೆಂಪೇಗೌಡರ ಹೆಸರಿನಲ್ಲಿ ಟೌನ್ ಪ್ಲಾನಿಂಗ್ ಕಾಲೇಜು ನಿರ್ಮಿಸಲು ತೀರ್ಮಾನಿಸಲಾಗಿತ್ತು. ಅದರ ಸಿದ್ಧತೆ ನಡೆಸಲಾಗುತ್ತಿದೆ. ಪ್ರತಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಜಯಂತಿ ಆಚರಿಸಲಾಗುವುದು. ಇದಕ್ಕಾಗಿ 1 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಬೇರೊಂದು ದಿನ ಬೆಂಗಳೂರಿನ 369 ವಾರ್ಡ್ ಗಳಲ್ಲಿ ಈ ಕಾರ್ಯಕ್ರಮ ನಡೆಸಲು ಜಿಬಿಎ ವತಿಯಿಂದ ತಲಾ 1 ಲಕ್ಷ ಅನುದಾನ ನೀಡಲಾಗುವುದು. ಈ ಕಾರ್ಯಕ್ರಮದ ದಿನಾಂಕವನ್ನು ಬೆಂಗಳೂರು ನಗರದ ಸಚಿವರು ತೀರ್ಮಾನ ಮಾಡಲಿದ್ದಾರೆ. ಈ ಸಭೆಯಲ್ಲಿ ಅನೇಕ ಸಲಹೆಗಳು ಬಂದಿವೆ” ಎಂದರು.

“ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಥೀಮ್ ಪಾರ್ಕ್ ಪೂರ್ಣಗೊಂಡಿದ್ದು, ಇದನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲು ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ತಯಾರಿ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಗಣ್ಯರು, ಸ್ವಾಮೀಜಿಗಳು ಹಾಗೂ ನಾಯಕರ ಆಹ್ವಾನದ ಜವಾಬ್ದಾರಿಯನ್ನು ಕೃಷ್ಣ ಬೈರೇಗೌಡರು ವಹಿಸಿಕೊಂಡಿದ್ದಾರೆ. ಸಂಘಟನೆಗಳು ಹಾಗೂ ಒಕ್ಕಲಿಗರ ಸಂಘ ತಮ್ಮದೇ ಆದ ಜವಾಬ್ದಾರಿ ಹೊತ್ತುಕೊಂಡಿವೆ. ಈ ಕಾರ್ಯಕ್ರಮ ಒಂದು ಜಾತಿ ಅಥವಾ ಧರ್ಮಕ್ಕೆ ಸೀಮಿತವಲ್ಲ. ಕೆಂಪೇಗೌಡರು ಬೆಂಗಳೂರು ನಗರ ಹಾಗೂ ರಾಜ್ಯದ ಆಸ್ತಿ. ಎಲ್ಲಾ ಧರ್ಮ, ಜಾತಿ, ಸಂಘಟನೆಯವರು ಸೇರಿ ಜಯಂತಿ ಆಚರಿಸಲಾಗುವುದು” ಎಂದು ತಿಳಿಸಿದರು.

ಸಭೆಯಲ್ಲಿ ವ್ಯಕ್ತವಾದ ಸಲಹೆಗಳು:

ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಭೆಯಲ್ಲಿ ಅನೇಕ ಸಲಹೆಗಳು ವ್ಯಕ್ತವಾಗಿದ್ದು, ಕೆಂಪೇಗೌಡ ಸಮಾಧಿ ಸ್ಥಳವನ್ನು 10 ಎಕರೆ ಜಾಗದಲ್ಲಿ ಅಭಿವೃದ್ಧಿ ಪಡಿಸಬೇಕು. ಜೊತೆಗೆ ಕೆಂಪೇಗೌಡರ ಕೋಟೆ ಅಭಿವೃದ್ಧಿಗೆ 100 ಕೋಟಿ ರೂ. ವೆಚ್ಚದ ಟೆಂಡರ್ ಆಗಿದ್ದು, ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಳ್ಳಬೇಕು. ಜಿಬಿಎ ವ್ಯಾಪ್ತಿಯಲ್ಲಿ ಕೆಂಪೇಗೌಡ ಪ್ರಶಸ್ತಿ ಆಯ್ಕೆ ಸಮಿತಿ ರಚಿಸಬೇಕು ಎಂಬ ವಿಚಾರಗಳು ಚರ್ಚೆಯಾದವು. ಉಳಿದಂತೆ ಬಂದ ಸಲಹೆಗಳು ಹೀಗಿವೆ..

• ನಾಡಪ್ರಭು ಕೆಂಪೇಗೌಡ ಅವರನ್ನು ಬೆಂಗಳೂರಿನ ಸಾಂಸ್ಕೃತಿಕ ನಾಯಕ ಎಂದು ಘೋಷಣೆ
• ಎಲ್ಲಾ ಜಿಲ್ಲೆಗಳಲ್ಲಿ ಕೆಂಪೇಗೌಡ ಜಿಲ್ಲಾ ಭವನ ನಿರ್ಮಾಣ
• ಕೆಂಪೇಗೌಡರ ಹೆಸರಿನಲ್ಲಿ ಅಂತಾರಾಷ್ಟ್ರೀಯ ಉದ್ಯಾನವನ ಹಾಗೂ ಅಂತಾರಾಷ್ಟ್ರೀಯ ಸಮುದಾಯ ಭವನ ನಿರ್ಮಾಣ
• ಕೆಂಪೇಗೌಡರ ವಸ್ತುಸಂಗ್ರಹಾಲಯ
• ಕೆಂಪೇಗೌಡರ ಸ್ಮರಣೆಯಲ್ಲಿ ಬೆಂಗಳೂರಿನ ಕೆರೆಗಳ ಶುದ್ಧೀಕರಣ, ಪುನಶ್ಚೇತನ
• ಸ್ವಾಮಿನಾಥನ್ ವರದಿ ಆಧರಿಸಿ ಜಲ ನಿರ್ವಹಣೆ ಬಗ್ಗೆ ಬೆಂಗಳೂರಿಗರಿಗೆ ಜಾಗೃತಿ ಮೂಡಿಸಲು ಕಾರ್ಯಾಗಾರ
• ಪಠ್ಯಪುಸ್ತಕದಲ್ಲಿ ಕೆಂಪೇಗೌಡರ ಜೀವನ ಚರಿತ್ರೆ
• ಕೆಂಪೇಗೌಡ ಜಯಂತಿಯಂದು ಸರ್ಕಾರಿ ರಜೆ ಘೋಷಣೆ
• ನಗರದ ನಾಲ್ಕು ದಿಕ್ಕಿನಲ್ಲಿ 50-60 ಅಡಿ ಎತ್ತರದ ಕೆಂಪೇಗೌಡರ ಕಲ್ಲಿನ ಪ್ರತಿಮೆ ನಿರ್ಮಾಣ
• ಬೆಂಗಳೂರು ಗ್ರಾಮಾಂತರ ಜಿಲ್ಲೆ ಆವತಿ ಗ್ರಾಮ ಅಭಿವೃದ್ಧಿ

Share. Facebook Twitter LinkedIn WhatsApp Email

Related Posts

ಮಂಡ್ಯ ಜನತೆಗೆ ಶಾಸಕ ಪಿ.ರವಿಕುಮಾರ್ ಗೌಡ ಸಿಹಿಸುದ್ದಿ: ವಿಧಾನಸಭಾ ಕ್ಷೇತ್ರದಲ್ಲಿ 5,000 ನಿವೇಶನ ಹಂಚಿಕೆಗೆ ನಿರ್ಧಾರ

2 Mins Read

ಲಕ್ಷಾಂತರ ಹೃದಯಗಳಿಗೆ ಚೈತನ್ಯ ತುಂಬಿದ ‘ಡಾ. ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆ’

1 Min Read

ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮವಹಿಸಿ: ಸಚಿವ ಈಶ್ವರ ಖಂಡ್ರೆ ಸೂಚನೆ

1 Min Read
Recent News

ಮಂಡ್ಯ ಜನತೆಗೆ ಶಾಸಕ ಪಿ.ರವಿಕುಮಾರ್ ಗೌಡ ಸಿಹಿಸುದ್ದಿ: ವಿಧಾನಸಭಾ ಕ್ಷೇತ್ರದಲ್ಲಿ 5,000 ನಿವೇಶನ ಹಂಚಿಕೆಗೆ ನಿರ್ಧಾರ

​ಈ ಬಾರಿ ಮೋದಿಯಿಂದ ಬಿಗಿಯಾದ ಆಲಿಂಗನವಿಲ್ಲ, ಕೇವಲ ಹಸ್ತಲಾಘವ! 16 ತಿಂಗಳ ನಂತರದ ‘ಮೋದಿ-ಟ್ರಂಪ್’ ಭೇಟಿಯ ವೀಡಿಯೋ ವೈರಲ್!

ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ: ಸಿಎಂ ಡಿ.ಕೆ.ಶಿವಕುಮಾರ್

​’ಬಿಗ್‌ಬಾಸ್ಕೆಟ್’ ಸಿಇಒ ಸ್ಥಾನದಿಂದ ಹರಿ ಮೆನನ್ ನಿರ್ಗಮನ: ಅಮೆಜಾನ್ ಅನುಭವಿ ಅಮಿತ್ ನಂದಾ ಹೆಗಲಿಗೆ ಸಂಸ್ಥೆಯ ಸಾರಥ್ಯ!

State News
KARNATAKA

ಮಂಡ್ಯ ಜನತೆಗೆ ಶಾಸಕ ಪಿ.ರವಿಕುಮಾರ್ ಗೌಡ ಸಿಹಿಸುದ್ದಿ: ವಿಧಾನಸಭಾ ಕ್ಷೇತ್ರದಲ್ಲಿ 5,000 ನಿವೇಶನ ಹಂಚಿಕೆಗೆ ನಿರ್ಧಾರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ, ವಸತಿ ಸೌಲಭ್ಯ ವಿಸ್ತರಣೆ ಹಾಗೂ ಭವಿಷ್ಯದ ಸಾರ್ವಜನಿಕ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು…

ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ: ಸಿಎಂ ಡಿ.ಕೆ.ಶಿವಕುಮಾರ್

ಲಕ್ಷಾಂತರ ಹೃದಯಗಳಿಗೆ ಚೈತನ್ಯ ತುಂಬಿದ ‘ಡಾ. ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆ’

ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮವಹಿಸಿ: ಸಚಿವ ಈಶ್ವರ ಖಂಡ್ರೆ ಸೂಚನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.