Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಂಗಳೂರಿನಲ್ಲಿ ಹಾಡ ಹಗಲೇ ಎರಡು ಗುಂಪುಗಳ ನಡುವೆ ಮಾರಾಮಾರಿ : ವಿಡಿಯೋ ವೈರಲ್

06/10/2025 4:09 PM

ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

06/10/2025 3:55 PM

ವೈದ್ಯ ಚರಿತ್ರೆಯಲ್ಲೇ ಹೊಸ ರೇಕಾರ್ಡ್ ; ಒಂದೇ ಒಂದು ರಕ್ತ ಪರೀಕ್ಷೆಯಿಂದ 10 ವರ್ಷ ಮೊದ್ಲೇ ದೇಹದಲ್ಲಿರೋ ‘ಕ್ಯಾನ್ಸರ್’ ಪತ್ತೆ!

06/10/2025 3:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ
KARNATAKA

ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

By kannadanewsnow0506/10/2025 3:55 PM

ಕೊಪ್ಪಳ, ಅಕ್ಟೋಬರ್ 6 : ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೊಪ್ಪಳದಲ್ಲಿ ಶೇ.97ರಷ್ಟು ಸಮೀಕ್ಷೆ ಪೂರ್ಣ

ಕೊಪ್ಪಳ ಜಿ್ಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಸಮಾಜದಲ್ಲಿ ಬದಲಾವಣೆಯನ್ನು ವಿರೋಧಿಸುವವರು ಸಮೀಕ್ಷೆಯ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದರು.

ಕೊಪ್ಪಳದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದಾ, ಕಡಿಮೆ ಅಂತರದಲ್ಲಿ ಸೋತಿದ್ದರೂ, ಕೊಪ್ಪಳದ ಜನ ತನ್ನನ್ನು ಆಶೀರ್ವದಿಸಿದ್ದರು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಜನತೆಗೆ ಧನ್ಯವಾದಗಳನ್ನು ತಿಳಿಸಿದರು.

ಬಲ್ಡೋಟಾ ಕಾರ್ಖಾನೆ :

ಬಲ್ಡೋಟಾ ಕಾರ್ಖಾನೆ ಯೋಜನೆ ಕುರಿತಂತೆ ಕೊಪ್ಪಳದಲ್ಲಿ ಹೋರಾಟಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಲ್ಡೋಟಾ ಕಾರ್ಖಾನೆಯ ವಿಚಾರ ನ್ಯಾಯಾಲಯದಲ್ಲಿ ವಿಲೇ ಇದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರಿಸರ ಮಾಲಿನ್ಯ ತಡೆಯಲು ಕ್ರಮ

ಎಂಎಸ್ ಪಿ ಎಲ್ ಸೇರಿದಂತೆ ವಿವಿಧ ಕೈಗಾರಿಕೆಗಳಿಂದ ಬರುವ ಧೂಳಿಂದ ಪರಿಸರ ಮಾಲಿನ್ಯವಾಗುತ್ತಿದ್ದು, ಇದನ್ನು ತಡೆಗಟ್ಟಲು ಸರ್ಕಾರದ ಕ್ರಮ ತೆಗೆದುಕೊಳ್ಳುತ್ತಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಕಾರ್ಖಾನೆಗಳಿಂದ ಬರುವ ಧೂಳನ್ನು ಪರೀಕ್ಷೆ ನಡೆಸಿ, ಧೂಳು ಬರದಂತೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

ಕೇಂದ್ರ ಸರ್ಕಾರವೂ ಜಾತಿಗಣತಿ ನಡೆಸಲಿದೆ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದಾರೆ. ಕೇಂದ್ರ ಸರ್ಕಾರ ನಡೆಸಲಿರುವ ಜಾತಿಗಣತಿಗೂ ವಿರೋಧ ವ್ಯಕ್ತಪಡಿಸುತ್ತಾರೆಯೇ ? ಎಂದು ಪ್ರಶ್ನಿಸಿದರು.

ಲಿಂಗಾಯಿತ ಪ್ರತ್ಯೇಕ ಧರ್ಮ: ಜನರೇ ನಿಲುವೇ ನನ್ನ ನಿಲುವು

ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮ ಎನ್ನುವ ಬಗ್ಗೆ ಮುಖ್ಯಮಂತ್ರಿಗಳ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿ, ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ, ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಬಗ್ಗೆ ಜನರ ನಿಲುವೇ ನನ್ನ ನಿಲುವು ಎಂದರು.

ಗ್ಯಾರಂಟಿಗಳು ಸಮರ್ಪಕವಾಗಿ ತಲುಪುತ್ತಿದೆ

ಗ್ಯಾರಂಟಿಗಳು ಸಮರ್ಪಕವಾಗಿ ಜನರಿಗೆ ತಲುಪುತ್ತಿಲ್ಲ ಎಂಬುದಕ್ಕೆ ಉತ್ತರಿಸಿ, ಗ್ಯಾರಂಟಿಗಳನ್ನು ಸಮರ್ಪಕವಾಗಿ ತಲುಪಿಸಲಾಗುತ್ತಿದೆ ಎಂದರು.

ಕೆಮ್ಮಿನ ಔಷಧಿ-ಎಚ್ಚರಿಕೆ ವಹಿಸುವಂತೆ ಇಲಾಖೆಗೆ ಸೂಚನೆ

ವಿವಿಧ ರಾಜ್ಯದಲ್ಲಿ ಕೆಮ್ಮಿನ ಔಷಧಿಯಿಂದ ಮಕ್ಕಳು ಅಸುನೀಗುತ್ತಿದ್ದು, ಈ ಬಗ್ಗೆ ರಾಜ್ಯಸರ್ಕಾರದ ಕ್ರಮವೇನು ಎಂಬುದಕ್ಕೆ ಉತ್ತರಿಸಿ, ಈ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಿನಲ್ಲಿ ಹಾಡ ಹಗಲೇ ಎರಡು ಗುಂಪುಗಳ ನಡುವೆ ಮಾರಾಮಾರಿ : ವಿಡಿಯೋ ವೈರಲ್

06/10/2025 4:09 PM1 Min Read

ಬಿಜೆಪಿಯವರು ಒಂದೇ ಒಂದು ಮನೆ ಕೊಟ್ಟಿದ್ದರೆ, ಇಂದು ಸಂಜೆಯೇ ರಾಜೀನಾಮೆ ಕೊಡ್ತೇನೆ : ಸಚಿವ ಜಮೀರ್ ಅಹಮದ್ ಸವಾಲು

06/10/2025 3:51 PM1 Min Read

BIG NEWS : ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ : ದಿನೇಶ್ ಗುಂಡೂರಾವ್

06/10/2025 3:48 PM2 Mins Read
Recent News

BIG NEWS : ಬೆಂಗಳೂರಿನಲ್ಲಿ ಹಾಡ ಹಗಲೇ ಎರಡು ಗುಂಪುಗಳ ನಡುವೆ ಮಾರಾಮಾರಿ : ವಿಡಿಯೋ ವೈರಲ್

06/10/2025 4:09 PM

ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

06/10/2025 3:55 PM

ವೈದ್ಯ ಚರಿತ್ರೆಯಲ್ಲೇ ಹೊಸ ರೇಕಾರ್ಡ್ ; ಒಂದೇ ಒಂದು ರಕ್ತ ಪರೀಕ್ಷೆಯಿಂದ 10 ವರ್ಷ ಮೊದ್ಲೇ ದೇಹದಲ್ಲಿರೋ ‘ಕ್ಯಾನ್ಸರ್’ ಪತ್ತೆ!

06/10/2025 3:55 PM

ಬಿಜೆಪಿಯವರು ಒಂದೇ ಒಂದು ಮನೆ ಕೊಟ್ಟಿದ್ದರೆ, ಇಂದು ಸಂಜೆಯೇ ರಾಜೀನಾಮೆ ಕೊಡ್ತೇನೆ : ಸಚಿವ ಜಮೀರ್ ಅಹಮದ್ ಸವಾಲು

06/10/2025 3:51 PM
State News
KARNATAKA

BIG NEWS : ಬೆಂಗಳೂರಿನಲ್ಲಿ ಹಾಡ ಹಗಲೇ ಎರಡು ಗುಂಪುಗಳ ನಡುವೆ ಮಾರಾಮಾರಿ : ವಿಡಿಯೋ ವೈರಲ್

By kannadanewsnow0506/10/2025 4:09 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಹಾಡ ಹಗಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ಆಗಿದೆ. ಚಾಕು ಹಿಡಿದು ನಡು ರಸ್ತೆಯಲ್ಲಿಯೇ ಗ್ಯಾಂಗ್…

ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

06/10/2025 3:55 PM

ಬಿಜೆಪಿಯವರು ಒಂದೇ ಒಂದು ಮನೆ ಕೊಟ್ಟಿದ್ದರೆ, ಇಂದು ಸಂಜೆಯೇ ರಾಜೀನಾಮೆ ಕೊಡ್ತೇನೆ : ಸಚಿವ ಜಮೀರ್ ಅಹಮದ್ ಸವಾಲು

06/10/2025 3:51 PM

BIG NEWS : ಸಿರಫ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ : ದಿನೇಶ್ ಗುಂಡೂರಾವ್

06/10/2025 3:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.