ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕಿನ ಕೋಡೆಗಂಡ್ಲು ಗ್ರಾಮದ ಮಳೆಯಿಂದ ಕೆರೆ ಕೋಡಿ ಹರಿದಿದೆ. ಇದನ್ನು ನೋಡಲು ಹೋದ ಮೂವರು ಬಾಲಕರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

BREAKING NEWS: ಸಿದ್ದರಾಮಯ್ಯರ 75ನೇ ಜನ್ಮದಿನದ ಅಮೃತ ಮಹೋತ್ಸವ; ಸಿದ್ದರಾಮಯ್ಯ ಕುರಿತು ಮೂರು ಪುಸ್ತಕಗಳ ಬಿಡುಗಡೆ

 

ಸಂಜೆ ಶಾಲೆ ಬಂದು ಕೆರೆ ನೋಡಲು ಹೋಗಿದ್ದರು. ಈ ವೇಳೆ ಕೆರೆಯಲ್ಲಿ ಈಜಲು ಹೋಗಿದ್ದು, ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ವೆಂಕಟೇಶ್-ಗಾಯತ್ರಿ ದಂಪತಿ ಅವಳಿ ಮಕ್ಕಳಾದ ರಾಮ(10) – ಲಕ್ಷ್ಮಣ(10) ಹಾಗೂ ಮುನಿರಾಜು-ಗೌತಮಿ ದಂಪತಿ ಪ್ರಜ್ವಲ್(09) ಮೃತ ದುರ್ದೈವಿಗಳು. ಇದೀಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ಸಂಬಂಧ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share.
Exit mobile version