BREAKING: ರಾಯಚೂರಲ್ಲಿ ಹನುಮ ಮಾಲಾಧಾರಿಗಳಿಗೆ ಬೊಲೇರೋ ವಾಹನ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

ರಾಯಚೂರು: ಜಿಲ್ಲೆಯಲ್ಲಿ ಹನುಮ ಮಾಲಾಧಾರಿಗಳಿಗೆ ಬೊಲೆರೋ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ರಾಯಚೂರಿನ ಶಕ್ತಿ ನಗರದಲ್ಲಿನ ಯಾದವ ನಗರದ ಕ್ರಾಸ್ ಬಳಿಯಲ್ಲಿ ಹನುಮ ಮಾಲಾಧಾರಿಗಳು ಹನುಮ ಜಯಂತಿಯ ಪ್ರಯುಕ್ತ ಕೃಷ್ಣಾ ನದಿಗೆ ನೀರು ತರಲು ತೆರಳಿದ್ದರು. ಬೆಳಗಿನ ಜಾವ 5 ಗಂಟೆಯ ವೇಳೆಯಲ್ಲಿ ಹನುಮ ಮಾಲಾಧಾರಿಗಳಿಗೆ ಯಮ ಸ್ವರೂಪಿಯಾಗಿ ಬಂದಂತ ಬೊಲೆರೋ ವಾಹನವೊಂದು ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಅಯ್ಯನಗೌಡ(28), … Continue reading BREAKING: ರಾಯಚೂರಲ್ಲಿ ಹನುಮ ಮಾಲಾಧಾರಿಗಳಿಗೆ ಬೊಲೇರೋ ವಾಹನ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ