ವಿಜಯಪುರ : ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಘಾಳಪೂಜಿ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಶಾರ್ಟ್ ಸರ್ಕ್ಯೂಟ್ ಇಂದ ಅಗ್ನಿ ಅವಘಡ ಸಂಭವಿಸಿ ಮೂರು ವಿದ್ಯಾರ್ಥಿಗಳಿಗೆ ಗಂಭೀರವಾದಂತಹ ಗಾಯಗಳಾದಂತ ಘಟನೆ ನಡೆದಿದೆ.

ಅಡ್ಡಮತದಾನ ವಿಚಾರ: ಸೋಮಶೇಖರ್ ರಾಜಕೀಯವಾಗಿ ‘ಸೂಸೈಡ್’ ಮಾಡಿಕೊಂಡಿದ್ದಾರೆ : ಆರ್.ಅಶೋಕ್ ಕಿಡಿ

ಘಟನೆಯಲ್ಲಿ 6ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೈಕಾಲು ಸುಟ್ಟು ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಬಿಎಲ್ಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಲ್ಲದೆ ಸಾಗರ್, ಸಮರ್ಥ, ಮಲ್ಲಿಕಾರ್ಜುನ ವಿದ್ಯಾರ್ಥಿಗಳಿಗೆ ಸುಟ್ಟು ಗಾಯಗಳಾಗಿವೆ. ಇನ್ನು ಘಟನೆ ನಡೆದ ಕೊಠಡಿಯಲ್ಲಿ 18 ವಿದ್ಯಾರ್ಥಿಗಳು ರಾತ್ರಿ ಮಲಗಿದ್ದಾಗ ಏಕಾಏಕಿ ಬೆಂಕಿ ವ್ಯಾಪಿಸಿ ಈ ಅವಘಡ ಸಂಭವಿಸಿದೆ. ವಾರ್ಡನ್ ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಧಾವಿಸಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

ಗಮನಿಸಿ: ಈ ಕಾರಣಕ್ಕೆ ಅಪ್ಪಿತಪ್ಪಿಯೂ ಸೇಬಿನ ಬೀಜ ಸೇವಿಸಬೇಡಿ!

ವಸತಿ ಶಾಲೆ ಉದ್ಘಾಟನೆಯಾಗಿ ಕೇವಲ 6 ತಿಂಗಳಾಗಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಅಗ್ನಿ ಅವಘಡ ಸಂಭವಿಸಿದೆ. ಶಾಲೆ ಉದ್ಘಾಟನೆಗೊಂಡ ಆರು ತಿಂಗಳಲ್ಲಿಯೇ ಘಟನೆ ನಡೆದಿದೆ. ಅಗ್ನಿ ಅವಘಡದಿಂದಾಗಿ ಕೋಣೆಯ ಗೋಡೆಗೆ ಆವರಿಸಿರುವ ಹೊಗೆಯನ್ನು ಸ್ವಚ್ಛ ಮಾಡುವ ಕಾರ್ಯ ನಡೆದಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ ಎಂದು ವಿದ್ಯಾರ್ಥಿಗಳ ಪೋಷಕರು ಆರೋಪಿಸಿದ್ದಾರೆ.

JOB ALERT : ಕೆಪಿಎಸ್‌ಸಿ & ಬಿಎಂಟಿಸಿಯಿಂದ ಒಟ್ಟು 2,884 ಹುದ್ದೆಗಳಿಗೆ ಅರ್ಜಿ ಆಹ್ವಾನ! ಇಲ್ಲಿದೆ ಸಂಪೂರ್ಣ ಮಾಹಿತಿ!!

Share.
Exit mobile version