ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಂತ ರೈತರ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಹುಲಿಯ ದಾಳಿಯ ವೇಳೆಯಲ್ಲಿ ಮಚ್ಚು ಬೀಸಿ, ರೈತರು ತಪ್ಪಿಸಿಕೊಂಡು ಬಂದಿದ್ದಾರೆ. ಹುಲಿಯ ದಾಳಿಯಿಂದಾಗಿ ಓರ್ವ ರೈತ ಗಂಭೀರವಾಗಿ ಗಾಯಗೊಂಡಿದ್ದಾರೆ.
2023ರ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಗಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ – ಮಾಜಿ ಸಿಎಂ HDK ವಿಶ್ವಾಸ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗೋಪಾಲಪುರ ಗ್ರಾಮದ ಬಂಡೀಪುರ ರಕ್ಷಿತಾರಣ್ಯದ ಸಮೀಪ ಇಂದು ಬೆಳಿಗ್ಗೆ ಗವಿಯಪ್ಪ ಎಂಬ ರೈತ, ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಂತ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿತ್ತು. ಹುಲಿಯ ಮೇಲೆ ಮಚ್ಚು ಬೀಸಿದ್ದಂತ ಗವಿಯಪ್ಪ, ದಾಳಿಯಿಂದ ಬಚಾವ್ ಆಗಿ ಬಂದಿದ್ದರು. ಗಂಭೀರವಾಗಿ ಗಾಯಗೊಂಡಿರುವಂತ ಹುಲಿ, ಬಾಳೆ ತೋಟದಲ್ಲಿ ಅಡಗಿ ಕುಳಿತಿರೋದಾಗಿ ತಿಳಿದು ಬಂದಿದೆ.
ದೇವೇಗೌಡರ ಬಗ್ಗೆ ಮಾಜಿ ಶಾಸಕ ರಾಜಣ್ಣ ಕೀಳು ಹೇಳಿಕೆ: ಸಿದ್ದರಾಮಯ್ಯ ಕಡೆ ಬೊಟ್ಟು ಮಾಡಿದ ಹೆಚ್.ಡಿ.ಕುಮಾರಸ್ವಾಮಿ
ಇನ್ನು ಮಧ್ಯಾಹ್ನದ ವೇಳೆಯಲ್ಲಿ ಶೇಖರಪ್ಪ ಎಂಬ ರೈತ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಂತ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿದೆ. ಇಬ್ಬರು ರೈತರನ್ನು ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಓರ್ವ ರೈತನ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. ಹುಲಿಯ ದಾಳಿಯಿಂದಾಗಿ ಗೋಪಾಲಪುರ ಗ್ರಾಮಸ್ಥರು ಆಂತಕದಲ್ಲಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆಗಮಿಸಿ, ನರಭಕ್ಷಕ ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.