Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಸುಳ್ಳೇ? ವಾಟ್ಸಾಪ್ ಪ್ರೈವೆಸಿ ಬಗ್ಗೆ ಜಗತ್ತಿನಾದ್ಯಂತ ಹೊಸ ಕಿಡಿ | WhatsApp

26/01/2026 1:00 PM

BREAKING : 400 ಕೋಟಿ ದರೋಡೆ ಹಣ ಗುಜರಾತ್ ನ ಪ್ರಭಾವಿ ರಾಜಕಾರಣಿಗೆ ಸೇರಿದ್ದು : ತನಿಖೆಯಲ್ಲಿ ಸ್ಪೋಟಕ ಅಂಶ ಬಯಲು!

26/01/2026 12:55 PM

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಎಚ್ ಡಿ ಕುಮಾರಸ್ವಾಮಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು

26/01/2026 12:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು
KARNATAKA

ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

By kannadanewsnow0917/04/2024 2:38 PM

ಬೆಂಗಳೂರು : “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಸಂಸದ ಕರಡಿ ಸಂಗಣ್ಣ ಮತ್ತಿತರರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು;

ಕೇಂದ್ರದಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದರೆ ಗ್ಯಾರಂಟಿಗಳನ್ನು ತೆಗೆದುಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಆದರೆ ಯಡಿಯೂರಪ್ಪ, ಕುಮಾರಸ್ವಾಮಿ, ಅಶೋಕ ಅವರಿಗೆ ಗ್ಯಾರಂಟಿಗಳನ್ನು ಮುಟ್ಟಲು ರಾಜ್ಯದ ಜನ ಅವಕಾಶ ನೀಡುವುದಿಲ್ಲ.

ಕಾಂಗ್ರೆಸ್ ಪಕ್ಷದ ಮೇಲಿನ ಜನರ ಪ್ರೀತಿ ಕಂಡು ಅವರಿಗೆ ಅಸೂಯೆ ಆಗಿದೆ. ಆದ ಕಾರಣ ನಮ್ಮ ತಾಯಂದಿರ ಬಗ್ಗೆ ಮಾತನಾಡುತ್ತಿದ್ದಾರೆ. ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿರುವ ಅವರಿಗೆ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ” ಎಂದು ಹೇಳಿದರು.

ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿಗಳು ಸೇರಿ ಕೈ ಗಟ್ಟಿಯಾಯಿತು ಎನ್ನುವುದಕ್ಕೆ ನಿಮ್ಮ ಹೇಳಿಕೆಗಳೇ ಸಾಕ್ಷಿ. ಗೀತಾ ಶಿವರಾಜ್ ಕುಮಾರ್ ಅವರ ನಾಮಪತ್ರ ಸಲ್ಲಿಕೆ ವೇಳೆ ಪಕ್ಷ ಭೇದ ಮರೆತು ಸೇರಿದ್ದ ಜನರನ್ನು ನೋಡಿದ ನಂತರ ಅನಿಸಿತು, ಯಾವುದೇ ಕಾರಣಕ್ಕೂ ಯಡಿಯೂರಪ್ಪ ಅವರ ಸುಪುತ್ರ ರಾಘವೇಂದ್ರ ಗೆಲ್ಲಲು ಸಾಧ್ಯವಿಲ್ಲ ಎಂದು.

ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಹಾಗೂ ಗ್ಯಾರಂಟಿಗಳ ಅಲೆಯಿದೆ. ಇಡೀ ದೇಶವೇ ಕರ್ನಾಟಕದ ಕಡೆಗೆ ತಿರುಗಿ ನೋಡುತ್ತಿದೆ. ಮಂಗಳವಾರ ಕೇರಳ ರಾಜ್ಯ ಪ್ರವಾಸಕ್ಕೆ ಹೋಗಿದ್ದೆ, ಅಲ್ಲಿಯೂ ಸಹ ಕಾಂಗ್ರೆಸ್ 20 ಸ್ಥಾನಗಳನ್ನು ಗೆಲ್ಲಲಿದೆ.

ಇಡೀ ದೇಶದಲ್ಲಿ 100 ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಎನ್ಡಿಎ ಬದಲಾಯಿಸಿದೆ. ರಾಜ್ಯದಲ್ಲಿ 14 ಸ್ಥಾನಗಳನ್ನು ಬದಲಾಯಿಸಿದೆ. ಯಾವುದೇ ಕಾರಣಕ್ಕೂ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. “ಇಂಡಿಯಾ ಒಕ್ಕೂಟ ಗೆದ್ದೇ, ಗೆಲ್ಲಲಿದೆ”.

ನಿರುದ್ಯೋಗ, ಬೆಲೆಏರಿಕೆ ಸಮಸ್ಯೆಯ ಬಗ್ಗೆ ಜನರು ಚಿಂತನೆ ಮಾಡುತ್ತಿದ್ದಾರೆ. ಧರ್ಮ, ಜಾತಿ ಆದಾರದ ಮೇಲೆ ನಡೆಯುತ್ತಿರುವ ರಾಜಕಾರಣದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿದೆ. ಪ್ರಧಾನಿ ಮೋದಿ ಅವರು ಸಂವಿಧಾನ ಬದಲಾವಣೆ ಮಾಡುವುದಿಲ್ಲ ಎಂದು ಬಹಿರಂಗವಾಗಿ ಹೇಳಿಕೆ ಕೊಡುತ್ತಿದ್ದಾರೆ.

ಬಿಜೆಪಿಯ ಹಾಲಿ ಸಂಸದರೊಬ್ಬರು 400 ಸ್ಥಾನಗಳನ್ನು ಕೊಡಿ, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಎರಡು ಮೂರು ಬಾರಿ ಹೇಳಿದರು. ಅವರನ್ನು ಪಕ್ಷದಿಂದ ಉಚ್ಚಾಟಿಸುವುದಕ್ಕೆ ಬಿಜೆಪಿ ಏಕೆ ಮುಂದಾಗಿಲ್ಲ? ಸಂವಿಧಾನ ಬದಲಾವಣೆ ಹೇಳಿಕೆಯ ನಂತರ ಉತ್ತರ ಭಾರತದಲ್ಲಿ ಜನ ದಂಗೆ ಎದ್ದಿದ್ದಾರೆ. ಆದ ಕಾರಣ ಈಗ ಬದಲಾವಣೆ ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ.

ತೆಲಂಗಾಣ ಮತ್ತು ಕರ್ನಾಟಕದಲ್ಲಿ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದ ಮೇಲೆ ಗ್ಯಾರಂಟಿ ವಿರುದ್ಧ ಮಾತನಾಡುತ್ತಿದ್ದವರು, ಈಗ ಅದರ ಪರವಾಗಿ ಮಾತನಾಡುತ್ತಿದ್ದಾರೆ. ಮೋದಿ ಗ್ಯಾರಂಟಿ ಎಂದು ಕರೆಯುತ್ತಿದ್ದಾರೆ.

ಬಿಜೆಪಿಗೆ ಸೋಲು ಗ್ಯಾರಂಟಿ ಎಂದು ಗೊತ್ತಾದ ಮೇಲೆ ಮೈತ್ರಿ ಮಾಡಿಕೊಂಡಿದ್ದಾರೆ. ಆಂಧ್ರ ಪ್ರದೇಶದಲ್ಲಿ ಸಂಬಂಧವೇ ಇಲ್ಲದ ಚಂದ್ರಬಾಬು ನಾಯ್ಡು ಜೊತೆ ಸೇರಿಕೊಂಡಿದ್ದಾರೆ. ಕರ್ನಾಟಕದಲ್ಲಿ ದಳದೊಟ್ಟಿಗೆ ಸೇರಿಕೊಂಡಿದ್ದಾರೆ.

ಸವದಿಯವರು ಹೇಳುತ್ತಿದ್ದರು, ಕರಡಿ ಸಂಗಣ್ಣ ಅವರನ್ನು ನಾನೇ ದಳದಿಂದ ಬಿಜೆಪಿಗೆ ಸೇರಿಸಿದ್ದೆ ಎಂದು. ಸರಳ, ಸಜ್ಜನಿಕೆಯ ನಾಯಕ. ಬಿಜೆಪಿ ಸುಮ್ಮನೆ ಅಬ್ಬರ ಮಾಡುತ್ತಿರುವ ಹೊತ್ತಿನಲ್ಲಿ ಅವರು ಕಾಂಗ್ರೆಸ್ ಸೇರುತ್ತಿದ್ದಾರೆ. ಏಕೆಂದರೆ ಕಾಂಗ್ರೆಸ್ ಪಕ್ಷದ ನೀತಿ, ಸಿದ್ಧಾಂತ, ಕಾರ್ಯಕ್ರಮಗಳನ್ನು ಅವರು ಮೆಚ್ಚಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳು ಬಿಜೆಪಿಯನ್ನು ರಾಜ್ಯದಲ್ಲಿ ತೊಳೆದು ಹಾಕುತ್ತಿವೆ. ಬೆಳಗಾವಿಯ ಗಾಂಧಿ ಬಾವಿಯಿಂದ ನೀರನ್ನು ತೆಗೆದು ಕೊಳೆ ತೊಳೆದಂತೆ, ರಾಜ್ಯದ ಜನತೆ ಬಿಜೆಪಿಯನ್ನು ಗುಡಿಸಿ ಹಾಕುತ್ತಾರೆ.

ಕರಡಿ ಸಂಗಣ್ಣ ಅವರು ತಳಮಟ್ಟದ ರಾಜಕಾರಣದಿಂದ ಬೆಳೆದವರು. ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ನಂತರ 1999 ರಲ್ಲಿ ಜೆಡಿಯು ಪಕ್ಷದಿಂದ ಶಾಸಕರಾಗಿದ್ದರು. ನಂತರ ಎರಡು ಬಾರಿ ಸಂಸದರಾಗಿದ್ದರು. ಕೊಪ್ಪಳ ಭಾಗದಲ್ಲಿ ಭಾರಿ ಜನಸಂಪರ್ಕ ಹೊಂದಿರುವ ವ್ಯಕ್ತಿ.

ಇದೇ ವೇಳೆ ಅರಕಲಗೂಡಿನ ಪುಟ್ಟಸ್ವಾಮಿ, ರಾಜಾಜಿನಗರದ ಕೃಷ್ಣಮೂರ್ತಿ, ಮೂರು ಬಾರಿ ಶಾಸಕರಾಗಿದ್ದ ಶಿವಪುತ್ರ ಮಾಳಗಿ, ಪತ್ರಕರ್ತೆ ಸ್ವಾತಿ ಚಂದ್ರಶೇಖರ್ ಅವರನ್ನು ಇದೇ ಸಂದರ್ಭದಲ್ಲಿ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಶಿವರಾಜ್ ತಂಗಡಗಿ, ಶಾಸಕ ಲಕ್ಷ್ಮಣ ಸವದಿ ಅವರು ಪಕ್ಷಕ್ಕೆ ಬರ ಮಾಡಿಕೊಂಡರು.

‘ಸ್ಯಾನಿಟರಿ ಪ್ಯಾಡ್’ ನಂತೆ ಚೀನಾದಲ್ಲಿ ರೈಲು ನಿಲ್ದಾಣ ನಿರ್ಮಾಣ! ಫೋಟೋ ವೈರಲ್‌

ಮಂಡ್ಯಕ್ಕೆ ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ’ ಆಗಮನ

Share. Facebook Twitter LinkedIn WhatsApp Email

Related Posts

BREAKING : 400 ಕೋಟಿ ದರೋಡೆ ಹಣ ಗುಜರಾತ್ ನ ಪ್ರಭಾವಿ ರಾಜಕಾರಣಿಗೆ ಸೇರಿದ್ದು : ತನಿಖೆಯಲ್ಲಿ ಸ್ಪೋಟಕ ಅಂಶ ಬಯಲು!

26/01/2026 12:55 PM1 Min Read

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಎಚ್ ಡಿ ಕುಮಾರಸ್ವಾಮಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು

26/01/2026 12:46 PM1 Min Read

400 ಕೋಟಿ ರಾಬರಿ ಕೇಸ್ ನಲ್ಲಿ, ಬಿಜೆಪಿ ಕಾಂಗ್ರೆಸ್ ಅಂತ ಏನಿಲ್ಲ ಎಲ್ಲರೂ ಇದ್ದಾರೆ : ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ

26/01/2026 12:42 PM1 Min Read
Recent News

ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಸುಳ್ಳೇ? ವಾಟ್ಸಾಪ್ ಪ್ರೈವೆಸಿ ಬಗ್ಗೆ ಜಗತ್ತಿನಾದ್ಯಂತ ಹೊಸ ಕಿಡಿ | WhatsApp

26/01/2026 1:00 PM

BREAKING : 400 ಕೋಟಿ ದರೋಡೆ ಹಣ ಗುಜರಾತ್ ನ ಪ್ರಭಾವಿ ರಾಜಕಾರಣಿಗೆ ಸೇರಿದ್ದು : ತನಿಖೆಯಲ್ಲಿ ಸ್ಪೋಟಕ ಅಂಶ ಬಯಲು!

26/01/2026 12:55 PM

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಎಚ್ ಡಿ ಕುಮಾರಸ್ವಾಮಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು

26/01/2026 12:46 PM

Republic Day 2026: ಗಣರಾಜ್ಯೋತ್ಸವದಲ್ಲಿ ಮಿಲಿಟರಿ ಪರಾಕ್ರಮವನ್ನು ಪ್ರದರ್ಶಿಸಿದ ಭಾರತ | Watch video

26/01/2026 12:42 PM
State News
KARNATAKA

BREAKING : 400 ಕೋಟಿ ದರೋಡೆ ಹಣ ಗುಜರಾತ್ ನ ಪ್ರಭಾವಿ ರಾಜಕಾರಣಿಗೆ ಸೇರಿದ್ದು : ತನಿಖೆಯಲ್ಲಿ ಸ್ಪೋಟಕ ಅಂಶ ಬಯಲು!

By kannadanewsnow0526/01/2026 12:55 PM KARNATAKA 1 Min Read

ಬೆಳಗಾವಿ : ಚೋರ್ಲಾ ಘಾಟ್ ಬಳಿಯ 400 ಕೋಟಿ ದರೋಡೆ ಪ್ರಕರಣ ಬಗೆದಷ್ಟು ಬಯಲಾಗ್ತಿದೆ. ಹಣ ಪ್ರಭಾವಿ ರಾಜಕಾರಣಿಗೆ ಸೇರಿದ್ದಾಗಿರಬಹುದು…

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಎಚ್ ಡಿ ಕುಮಾರಸ್ವಾಮಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು

26/01/2026 12:46 PM

400 ಕೋಟಿ ರಾಬರಿ ಕೇಸ್ ನಲ್ಲಿ, ಬಿಜೆಪಿ ಕಾಂಗ್ರೆಸ್ ಅಂತ ಏನಿಲ್ಲ ಎಲ್ಲರೂ ಇದ್ದಾರೆ : ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ

26/01/2026 12:42 PM

‘ಗ್ಯಾರಂಟಿಯಿಂದ’ ಕುಟುಂಬಗಳು ಆರ್ಥಿಕವಾಗಿ ಸಬಲವಾಗುತ್ತಿವೆ : ರಾಜ್ಯ ಸರ್ಕಾರವನ್ನು ಹಾಡಿ ಹೊಗಳಿದ ಗವರ್ನರ್

26/01/2026 11:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.