Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕದಲ್ಲಿ ವರದಕ್ಷಿಣೆ ಸಾವಿನ ಸಂಖ್ಯೆ ಗಣನೀಯವಾಗಿ ಇಳಿಕೆ | Dowry deaths

10/08/2025 10:42 AM

BREAKING : ವಾರಣಾಸಿಯ ದೇವಸ್ಥಾನದಲ್ಲಿ ಭೀಕರ ಬೆಂಕಿ ಅವಘಡ : 7 ಮಂದಿ ಸುಟ್ಟು ಕರಕಲು | Fire Accident

10/08/2025 10:34 AM

ಭಾರತಕ್ಕೆ ವಾಯುಪ್ರದೇಶ ಕ್ಲೋಸ್: ಪಾಕಿಸ್ತಾನಕ್ಕೆ ಎರಡು ತಿಂಗಳಲ್ಲಿ 127 ಕೋಟಿ ರೂ. ನಷ್ಟ

10/08/2025 10:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಶೀಘ್ರವೇ ರಾಜ್ಯದಲ್ಲಿ ಪ್ರವಾಸೋದ್ಯಮ ನೀತಿ ಜಾರಿ: ಡಿಸಿಎಂ ಡಿ.ಕೆ ಶಿವಕುಮಾರ್ | DK Shivakumar
KARNATAKA

BIG NEWS: ಶೀಘ್ರವೇ ರಾಜ್ಯದಲ್ಲಿ ಪ್ರವಾಸೋದ್ಯಮ ನೀತಿ ಜಾರಿ: ಡಿಸಿಎಂ ಡಿ.ಕೆ ಶಿವಕುಮಾರ್ | DK Shivakumar

By kannadanewsnow0916/06/2024 5:40 AM

ಬೆಂಗಳೂರು : “ಕರ್ನಾಟಕ ಸರ್ಕಾರ ಪ್ರವಾಸೋದ್ಯಮದ ಅಭಿವೃದ್ದಿಗೆ ಬದ್ದವಾಗಿದ್ದು, ಹೆಚ್ಚು ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಪ್ರವಾಸೋದ್ಯಮ ನೀತಿ ಜಾರಿಗೆ ತರಲು ಉದ್ದೇಶಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಾಹಾಸಂಸ್ಥೆ (ಎಫ್ ಕೆಸಿಸಿಐ) ಮತ್ತು ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ದಕ್ಷಿಣ ಭಾರತ ಉತ್ಸವ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದ ಅವರು “ಪ್ರವಾಸೋದ್ಯಮ ನೀತಿಯಿಂದ ಹೆಚ್ಚು ಬಂಡವಾಳ ಹೂಡಿಕೆದಾರರನ್ನು ಸೆಳೆಯಬಹುದು. ಕೈಗಾರಿಕೋದ್ಯಮಿಗಳು ಬಲಗೊಂಡಷ್ಟು ಸರ್ಕಾರವು ಬಲಗೊಳ್ಳುತ್ತದೆ. ಏಕೆಂದರೆ ನಿಮ್ಮಿಂದ ಉದ್ಯೋಗ ಸೃಷ್ಟಿಯಾಗುತ್ತದೆ ಎಂದರು.

“ಆಂಧ್ರ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣದಿಂದ ಬಂದಿರುವ ಪ್ರತಿನಿಧಿಗಳು ನಿಮ್ಮ ಅನುಭವಗಳನ್ನು ಇಲ್ಲಿ ಹಂಚಿಕೊಳ್ಳಬೇಕು. ಕರ್ನಾಟಕ ರಾಜ್ಯ 300 ಕಿ.ಮೀ ಹೆಚ್ಚು ಕರಾವಳಿ ಪ್ರದೇಶ ಹೊಂದಿದೆ. ಈ ಮೂಲಕ ಸಾಗರೋತ್ತರ ಉದ್ದಿಮೆಯ ಅಭಿವೃದ್ಧಿಗೆ ನಿಮ್ಮ ಸಲಹೆ ನೀಡಿ ಎಂದರು.

“ನೀರಾವರಿ ಹಾಗೂ ಬೆಂಗಳೂರು ಅಭಿವೃದ್ದಿ ಸಚಿವನಾಗಿ ನನ್ನ ಕಾರ್ಯಕ್ಷೇತ್ರಗಳ ಅಭಿವೃದ್ದಿಗೆ ಸಲಹೆ ಸೂಚನೆಗಳನ್ನು ನಾನು ನಿರೀಕ್ಷೆ ಮಾಡುತ್ತೇನೆ. ಬೆಂಗಳೂರು ಐಟಿ, ಬಿಟಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸದೃಢವಾಗಿದೆ. ಇದರ ಜೊತೆಗೆ ಬೆಂಗಳೂರು ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರನ್ನು ಸೆಳೆಯಲು ಕಾರ್ಯಸೂಚಿ ಸಿದ್ಧಪಡಿಸಬೇಕು ಎಂದು ತಿಳಿಸಿದರು.

ಸ್ಕೈ ಡೆಕ್ ನಿರ್ಮಾಣಕ್ಕೆ ಶೀರ್ಘದಲ್ಲೇ ಟೆಂಡರ್

ಈ ಹಿಂದೆ ಕಬ್ಬನ್ ಪಾರ್ಕ್, ಲಾಲ್ ಬಾಗ್ ಪ್ರವಾಸಿಗರನ್ನು ಸೆಳೆಯುತ್ತಿದ್ದವು. ಈಗ ಹೊಸ ಪೀಳಿಗೆಗೆ ಹೊಸತನ್ನು ನೀಡಬೇಕಿದೆ. ಈ ಕಾರಣಕ್ಕೆ ಸ್ಕೈ ಡೆಕ್ ನಿರ್ಮಾಣಕ್ಕೆ ಯೋಜನೆ ಹಾಕಿಕೊಂಡಿದ್ದೇವೆ. ಪ್ರಸಿದ್ಧವಾದ ಅನೇಕ ನಗರಗಳಲ್ಲಿ ಎತ್ತರವಾದ ಗೋಪುರಗಳು ಆಕರ್ಷಣೀಯ ಕೇಂದ್ರಗಳಿವೆ. ಅದರಂತೆ ಬೆಂಗಳೂರಿನಲ್ಲೂ ಇರಲಿ ಎಂದು ಈ ಯೋಜನೆ ಮಾಡಲಾಗಿದೆ. ಮುಂದಿನ 8- 10 ದಿನಗಳಲ್ಲಿ ಟೆಂಡರ್ ಕರೆಯಲಾಗುವುದು. ಬೃಂದಾವನ ಉದ್ಯಾನವನ್ನು ಡಿಸ್ನಿ ಲ್ಯಾಂಡ್ ಮಾದರಿಯಲ್ಲಿ ಅಭಿವೃದ್ದಿ ಪಡಿಸಲಾಗುವುದು. ಇದಕ್ಕೆ ಕಳೆದ ಬಜೆಟ್ ಅಲ್ಲೂ ಅನುದಾನ ನೀಡಲು ತೀರ್ಮಾನ ಮಾಡಲಾಗಿದೆ ಎಂದರು.

ಬೆಂಗಳೂರು ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಯುತ್ತದೆ ಎಂದು ಊರು ಕಟ್ಟಿದ ಕೆಂಪೇಗೌಡರಿಗೆ ಗೊತ್ತಿರಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬ್ರಾಂಡ್ ಬೆಂಗಳೂರು ಯೋಜನೆಯ ಅಡಿ ಕಸ, ನೀರು, ರಸ್ತೆ, ಮೂಲ ಸೌಕರ್ಯ, ಟ್ರಾಫಿಕ್ ಸೇರಿದಂತೆ ಅನೇಕ ಸಮಸ್ಯೆಗಳ ನಿವಾರಣೆಗೆ ಸಾಕಷ್ಟು ಯೋಜನೆ ಹಾಕಿಕೊಂಡಿದ್ದೇವೆ ಎಂದರು.

ಜಿಎಸ್‌ ಟಿ ಪ್ರವಾಸೋದ್ಯಮವನ್ನು ಕೊಲ್ಲುತ್ತಿದೆ

ಶೇ.18 ಕ್ಕೂ ಹೆಚ್ಚಿನ ಜಿಎಸ್ ಟಿ ಪ್ರವಾಸೋದ್ಯಮವನ್ನು ಕೊಲ್ಲುತ್ತಿದೆ. ದಕ್ಷಿಣ ಭಾರತೀಯರಾದ ನಾವು ಇದರ ಬಗ್ಗೆ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಬೇಕು. ಬ್ಯಾಂಕ್ ಬಡ್ಡಿ ದರ, ಇತರೇ ತೆರಿಗೆಗಳು ಸೇರಿ ಅರ್ಧಕ್ಕೂ ಹೆಚ್ಚು ಹಣ ಕಳೆದುಕೊಂಡರೆ ಹೂಡಿಕೆದಾರರು ಪ್ರವಾಸೋದ್ಯಮದ ಕಡೆ ಗಮನ ಹರಿಸುವುದಿಲ್ಲ. ಆದ ಕಾರಣ ಹೂಡಿಕದಾರ ಸ್ನೇಹಿ ವಾತಾವರಣ ನಿರ್ಮಾಣ ಮಾಡಬೇಕು ಎಂದು ಹೇಳಿದರು.

ಪ್ರವಾಸೋಧ್ಯಮ ಕ್ಷೇತ್ರಕ್ಕೆ ಹೂಡಿಕೆ ಮಾಡುವವರು ತಮ್ಮ ಬೇಡಿಕೆಗಳನ್ನುಲಿಖಿತ ರೂಪದಲ್ಲಿ ಸರ್ಕಾರಕ್ಕೆ ಸಲ್ಲಿಸಿ. ನಿಮ್ಮ ಜೊತೆ ಸರ್ಕಾರ ಇರುತ್ತದೆ. ಹೂಡಿಕೆದಾರರಿಗೆ ಕೇವಲ ಸಹಾಯಧನ ನೀಡಿದರೆ ಸಾಲುವುದಿಲ್ಲ. ಉದಾಹರಣೆಗೆ ಕರಾವಳಿ ಪ್ರದೇಶದ ಹೋಟೆಲ್ ಗಳಿಗೆ 10 ವರ್ಷಗಳ ಕಾಲ ಆಸ್ತಿ ತೆರಿಗೆ ವಿನಾಯಿತಿ ನೀಡಿದರೆ ಒಂದಷ್ಟು ಬೆಂಬಲ ನೀಡಿದಂತೆ ಆಗುತ್ತದೆ. ಒಟ್ಟಿಗೆ ಸೇರಿ ಹೆಜ್ಜೆ ಗುರುತು ನಿರ್ಮಾಣ ಮಾಡೋಣ ಎಂದರು.

Share. Facebook Twitter LinkedIn WhatsApp Email

Related Posts

ಕರ್ನಾಟಕದಲ್ಲಿ ವರದಕ್ಷಿಣೆ ಸಾವಿನ ಸಂಖ್ಯೆ ಗಣನೀಯವಾಗಿ ಇಳಿಕೆ | Dowry deaths

10/08/2025 10:42 AM1 Min Read

BREAKING : ಬೆಂಗಳೂರಿನ HAL ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ಮೋದಿ | PM Modi

10/08/2025 10:28 AM1 Min Read

BREAKING : ಬೆಂಗಳೂರಿನ `HAL’ ಏರ್ ಪೋರ್ಟ್ ಗೆ ಆಗಮಿಸಿದ ಪ್ರಧಾನಿ ಮೋದಿ | PM MODI

10/08/2025 10:25 AM1 Min Read
Recent News

ಕರ್ನಾಟಕದಲ್ಲಿ ವರದಕ್ಷಿಣೆ ಸಾವಿನ ಸಂಖ್ಯೆ ಗಣನೀಯವಾಗಿ ಇಳಿಕೆ | Dowry deaths

10/08/2025 10:42 AM

BREAKING : ವಾರಣಾಸಿಯ ದೇವಸ್ಥಾನದಲ್ಲಿ ಭೀಕರ ಬೆಂಕಿ ಅವಘಡ : 7 ಮಂದಿ ಸುಟ್ಟು ಕರಕಲು | Fire Accident

10/08/2025 10:34 AM

ಭಾರತಕ್ಕೆ ವಾಯುಪ್ರದೇಶ ಕ್ಲೋಸ್: ಪಾಕಿಸ್ತಾನಕ್ಕೆ ಎರಡು ತಿಂಗಳಲ್ಲಿ 127 ಕೋಟಿ ರೂ. ನಷ್ಟ

10/08/2025 10:31 AM

BREAKING : ಬೆಂಗಳೂರಿನ HAL ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ಮೋದಿ | PM Modi

10/08/2025 10:28 AM
State News
KARNATAKA

ಕರ್ನಾಟಕದಲ್ಲಿ ವರದಕ್ಷಿಣೆ ಸಾವಿನ ಸಂಖ್ಯೆ ಗಣನೀಯವಾಗಿ ಇಳಿಕೆ | Dowry deaths

By kannadanewsnow8910/08/2025 10:42 AM KARNATAKA 1 Min Read

ಬೆಂಗಳೂರು: 2023ರಿಂದೀಚೆಗೆ ರಾಜ್ಯದಲ್ಲಿ ವರದಕ್ಷಿಣೆ ಸಾವಿನ ಪ್ರಮಾಣ ಗಣನೀಯವಾಗಿ ಇಳಿಮುಖವಾಗಿದೆ . 2023 ರಲ್ಲಿ 158 ಸಾವುಗಳಿಂದ 2024 ರಲ್ಲಿ…

BREAKING : ಬೆಂಗಳೂರಿನ HAL ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ಮೋದಿ | PM Modi

10/08/2025 10:28 AM

BREAKING : ಬೆಂಗಳೂರಿನ `HAL’ ಏರ್ ಪೋರ್ಟ್ ಗೆ ಆಗಮಿಸಿದ ಪ್ರಧಾನಿ ಮೋದಿ | PM MODI

10/08/2025 10:25 AM

ಇಂದು ‌ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆ : ತಾತ್ಕಾಲಿಕವಾಗಿ ಬಂದ್‌ ಆಗಲಿದೆ ಹಸಿರು ಮಾರ್ಗದ ಈ 4 ನಿಲ್ದಾಣಗಳು

10/08/2025 10:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.