Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಬಸವ ವಸತಿ ಯೋಜನೆಯ ಸಹಾಯಧನ ಹೆಚ್ಚಳ

10/12/2025 8:25 PM

ರಾಜ್ಯದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಹೊಸ ಕಟ್ಟಡ

10/12/2025 8:22 PM

BREAKING : ಇಸ್ರೇಲ್ ಪಿಎಂ ಜೊತೆ ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ ; ಭಯೋತ್ಪಾದನೆ ಕುರಿತು ಶೂನ್ಯ ಸಹಿಷ್ಣುತೆ ಪುನರುಚ್ಚಾರ

10/12/2025 8:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ಸೆ.16ರಂದು ‘ಈದ್ ಮಿಲಾದ್’ ಹಿನ್ನಲೆಯಲ್ಲಿ ಈ ರಸ್ತೆಗಳಲ್ಲಿ ‘ಸಂಚಾರ ನಿರ್ಬಂಧ’ | Bengaluru Traffic Update
KARNATAKA

ಬೆಂಗಳೂರು ಜನತೆ ಗಮನಕ್ಕೆ: ಸೆ.16ರಂದು ‘ಈದ್ ಮಿಲಾದ್’ ಹಿನ್ನಲೆಯಲ್ಲಿ ಈ ರಸ್ತೆಗಳಲ್ಲಿ ‘ಸಂಚಾರ ನಿರ್ಬಂಧ’ | Bengaluru Traffic Update

By kannadanewsnow0913/09/2024 4:26 PM

ಬೆಂಗಳೂರು: ಸೆಪ್ಟೆಂಬರ್.16ರಂದು ಈದ್ ಮಿಲಾದ್ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಕೆಲ ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ಪರ್ಯಾಯ ಮಾರ್ಗದ ರಸ್ತೆಗಳಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.

ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, DO:-16/09/2024 ರಂದು ಮುಸ್ಲಿಂ ಬಾಂಧವರು “ಈದ್-ಮಿಲಾದ್ ಹಬ್ಬವನ್ನು ಆಚರಣೆ ಮಾಡಲಿದ್ದು ಈ ಸಂಬಂಧ ನೃಪತುಂಗ ರಸ್ತೆಯಲ್ಲಿನ Y.M.C.A. ಮೈದಾನಕ್ಕೆ ಸಾವಿರಾರು ಜನರು ಅಲಂಕೃತ ವಾಹನ ಹಾಗೂ ಮೆರವಣಿಗೆ ಮೂಲಕ ನಗರದ ವಿವಿಧ ಸ್ಥಳಗಳಿಂದ ಬಂದು ಸೇರಲಿದ್ದಾರೆ. ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿರುತ್ತದೆ ಎಂದು ತಿಳಿಸಿದೆ.

ಈದ್-ಮಿಲಾದ್ ಮೆರವಣಿಗೆ ಮಾರ್ಗಗಳು:

1. ಜೆ.ಸಿ ನಗರ ದರ್ಗಾದಿಂದ ಹೊರಟು ಶಿವಾಜಿನಗರ ಕಂಟೋನ್‌ಮೆಂಟ್ ಕಡೆಗೆ ಸಾಗುವುದು.
2. ಯಲಹಂಕ ಓಲ್ಡ್ ಟೌನ್ ಮಸೀದಿಯಿಂದ ಯಲಹಂಕ ಓಲ್ಡ್ ಟೌನ್ ಮಸೀದಿಯವರೆಗೆ
3. ಹಳೇ ಬಸ್ ನಿಲ್ದಾಣದಿಂದ ಸಣ್ಣ ಅಮಾನಿಕೆರೆಯವರೆಗೆ
4. ಬೆಳ್ಳಳ್ಳಿ ಕ್ರಾಸ್ ನಿಂದ ನಾಗವಾರ ಸಿಗ್ನಲ್ ವರೆಗೆ
5. ರಾಜಗೋಪಾಲನಗರ ಮುಖ್ಯರಸ್ತೆಯಿಂದ ಪೀಣ್ಯ 2ನೇ ಹಂತದವರೆಗೆ
6. ಸೌತ್ ಎಂಡ್ ಸರ್ಕಲ್ ನಿಂದ ಆರ್.ವಿ ರಸ್ತೆಯಲ್ಲಿ ಲಾಲ್‌ಬಾಗ್ ವೆಸ್ಟ್ ಗೇಟ್ ಸರ್ಕಲ್‌ವರೆಗೆ
7. ಗೀತಾ ಜಂಕ್ಷನ್ (ಕೂಲ್ ಜಾಯಿಂಟ್ ಜಂಕ್ಷನ್) ನಿಂದ ಸೌತ್ ಎಂಡ್ ಸರ್ಕಲ್
8. ಬೇಂದ್ರೆ ಜಂಕ್ಷನ್‌ನಿಂದ ಓಬಳಪ್ಪ ಗಾರ್ಡನ್‌ ಜಂಕ್ಷನ್
9. ಮಹಾಲಿಂಗೇಶ್ವರ ಬಡಾವಣೆ ನಿಂದ ಆಡುಗೋಡಿ
ಮೇಲ್ಕಂಡ ಮಾರ್ಗಗಳ ಮೂಲಕ ಎಲ್ಲರೂ Y.M.C.A. ಮೈದಾನಕ್ಕೆ ಬಂದು ಸೇರುತ್ತಾರೆ.

ಸಂಚಾರವನ್ನು ನಿರ್ಬಂಧಿಸಿರುವ ಸ್ಥಳಗಳು :

1. ನೇತಾಜಿ ಜಂಕ್ಷನ್ ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೆ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ. 2. ಮಾಸ್ ಜಂಕ್ಷನ್ ನಿಂದ ಎಂ.ಎಂ ರಸ್ತೆ ಮೂಲಕ ನೇತಾಜಿ ಜಂಕ್ಷನ್ ವರೆಗೆ ಎಂ.ಎಂ.ರಸ್ತೆ ರಸ್ತೆಯಲ್ಲಿ ದ್ವಿಮುಖ ಸಂಚಾರಕ್ಕೆ ಬದಲಾಗಿ ಏಕ ಮುಖ ಸಂಚಾರವನ್ನಾಗಿ ತಾತ್ಕಾಲಿಕವಾಗಿ ಮಾರ್ಪಾಡು ಮಾಡಲಾಗಿದ್ದು, ನೇತಾಜಿ ಜಂಕ್ಷನ್‌ನಿಂದ ಮಾಸ್‌ ಜಂಕ್ಷನ್ ಕಡೆಗೆ ವಾಹನಗಳ ಸಂಚಾರಕ್ಕೆ ಅವಕಾಶ ವಿರುತ್ತದೆ.

3. ನೇತಾಜಿ ಜಂಕ್ಷನ್ ನಿಂದ ಹೇನ್ಸ್ ಜಂಕ್ಷನ್ ವರೆಗೆ ಹೇನ್ಸ್ ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.

4. ನಾಗವಾರ ಜಂಕ್ಷನ್ ನಿಂದ ಪಾಟರಿ ಸರ್ಕಲ್ ರಸ್ತೆಯ ವರೆಗೆ ಭಾಗಶಃ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.

ನಿರ್ಬಂಧಿಸಿರುವ ಸ್ಥಳಗಳಿಗೆ ಪರ್ಯಾಯ ಮಾರ್ಗಗಳು:

1. ಕೆ.ಆರ್ ಸರ್ಕಲ್‌ನಿಂದ ನೃಪತುಂಗ ರಸ್ತೆಯನ್ನು ಬಳಸಿ ಹಾದು ಹೋಗುವ ವಾಹನ ಚಾಲಕರು/ಸವಾರರು ಕೆ.ಆರ್ ವೃತ್ತದಲ್ಲಿ ಕಬ್ಬನ್ ಉದ್ಯಾನವನವನ್ನು ಪ್ರವೇಶಿಸಿ ಸಿದ್ದಲಿಂಗಯ್ಯ ವೃತ್ತದ ಕಡೆಗೆ ಅಥವಾ ಸೆಂಟ್ರಲ್ ಲೈಬ್ರರಿ ವೃತ್ತದ ಬಳಿ ಬಲ ತಿರುವು ಪಡೆದು ಏಕಮುಖ ಸಂಚಾರದ ವಿರುದ್ಧವಾಗಿ ಹಲ್ಸನ್ ವೃತ್ತಕ್ಕೆ ಬಂದು ಮುಂದೆ
ಹೋಗಬಹುದಾಗಿದೆ.

2. ಸಿಟಿಮಾರ್ಕೆಟ್ ವೃತ್ತ ಮಾರ್ಗವಾಗಿ ಕೆಂಪೇಗೌಡ ಬಸ್‌ ನಿಲ್ದಾಣ ಕಡೆಗೆ ಸಂಚಾರಿಸುವ ಎಲ್ಲಾ ಮಾದರಿಯ ವಾಹನಗಳು ಜೆ.ಸಿ. ರಸ್ತೆ ಮೂಲಕ ಟೌನ್ ಹಾಲ್ ವೃತ್ತ ಎನ್.ಆರ್.ವೃತ್ತ ಮಾರ್ಗವಾಗಿ ಕೆ.ಜಿ.ರಸ್ತೆಯಲ್ಲಿ ಚಲಿಸಿ ಕೆಂಪೇಗೌಡ ಬಸ್‌ ನಿಲ್ದಾಣ ತಲುಪಬಹುದು ಹಾಗೂ ರಿಚ್‌ಮಂಡ್ ರಸ್ತೆ – ರೆಸಿಡೆನ್ಸಿ ರಸ್ತೆ ಕಡೆಗೆ ಹೋಗುವವರು ಪಿ.ಕೆ.ಲೇನ್ ಮತ್ತು ಓ.ಟಿ.ಸಿ. ರಸ್ತೆಯಲ್ಲಿ ಚಲಿಸಿ ಎನ್.ಆರ್.ವೃತ್ತದ ಮೂಲಕ ದೇವಾಂಗ ವೃತ್ತ, ಮಿಷನ್ ರಸ್ತೆ ಮಾರ್ಗವಾಗಿ ಹೋಗಬಹುದಾಗಿದೆ.

3. ರಿಚ್‌ಮಂಡ್ ರಸ್ತೆ ಕಡೆಯಿಂದ ಬರುವ ವಾಹನಗಳು ಆರ್.ಆರ್.ಎಂ.ಆರ್. ರಸ್ತೆ – ಹಡ್ನನ್ ವೃತ್ತ ಕೆ.ಜಿ.ರಸ್ತೆ ಕಡೆಗೆ ಹಾಗೂ ಎನ್.ಆರ್.ವೃತ್ತದ ಮೂಲಕ ಟೌನ್‌ಹಾಲ್ ಕಡೆಗೆ ಸಂಚರಿಸ ಬಹುದು.

4. ಪೊಲೀಸ್ ಕಾರ್ನರ್ ಕಡೆಯಿಂದ ಬರುವ ವಾಹನಗಳು ಹಡ್ನನ್ ವೃತ್ತದ ಮೂಲಕ ಕಬ್ಬನ್‌ಪಾರ್ಕ್ ಒಳಭಾಗ ಸಂಚರಿಸುವುದನ್ನು ನಿಷೇಧಿಸಿದ್ದು, ಸದರಿ ವಾಹನಗಳು ಕಸ್ತೂರಿಬಾ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದ ಕಡೆಗೆ ಸಂಚರಿಸಬಹುದಾಗಿದೆ.

5. ಮೈಸೂರು ರಸ್ತೆ-ಸಿರ್ಸಿ ವೃತ್ತ – ಸಿರ್ಸಿ ರಸ್ತೆ- ಚಾಮರಾಜಪೇಟೆ 7ನೇ ಅಡ್ಡರಸ್ತೆ- ಬಲ ತಿರುವು ಚಾಮರಾಜಪೇಟೆ 2, 3, 4 & 5ನೇ ಮುಖ್ಯರಸ್ತೆಯಲ್ಲಿ ಎಡತಿರುವು ಪಡೆದು ಸಿಟಿಮಾರುಕಟ್ಟೆ ಹಾಗು ಇತರೆ ಕಡೆಗೆ ಸಂಚರಿಸಬಹುದಾಗಿದೆ.

6. ನೇತಾಜಿ ರಸ್ತೆ ಕಡೆಯಿಂದ ಟ್ಯಾನರಿ ರಸ್ತೆ ಮೂಲಕ ನಾಗಾವರ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿದ್ದು. ನೇತಾಜಿ ಜಂಕ್ಷನ್ ಇಂದ -ಬಲತಿರುವು-ಮಾಸ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಕ್ಲಾರೆನ್ಸ್ ರೈಲ್ವೆ ಮೇಲ್ಲೇತುವೆಯಲ್ಲಿ ಪಾಟರಿ ರಸ್ತೆಗೆ ಬಲ ತಿರುವು ಪಡೆದು ಪಾಟರಿ ರಸ್ತೆ ಮತ್ತು ಹೆಣ್ಣೂರು ರಸ್ತೆ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು ಹೆಣ್ಣೂರು ಮುಖ್ಯರಸ್ತೆ ಲಿಂಗರಾಜಪುರಂ ಫೈಓವರ್‌ ಮುಖೇನ ಹೆಣ್ಣೂರು, ಬಾಣಸವಾಡಿ ಹಾಗೂ ಹೊರ ವರ್ತುಲ ರಸ್ತೆ ಕಡೆಗೆ ಸಂಚರಿಸಲು ಅವಕಾಶ ಮಾಡಿಕೊಡಲಾಗಿರುತ್ತದೆ

7. ಮಾಸ್ ಜಂಕ್ಷನ್‌ನಿಂದ ಎಂ.ಎಂ ರಸ್ತೆಯಲ್ಲಿ ನೇತಾಜಿ ಜಂಕ್ಷನ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿದ್ದು, ಮಾಸ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಮಾಸ್ತೆ ರಸ್ತೆ ಮೂಲಕ ಕೋಲ್ಸ್ ರಸ್ತೆ ತಲುಪಿ ಬಲ ತಿರುವು ಪಡೆದು ಕೋಲ್ಸ್ ರಸ್ತೆಯ ಹೆಚ್.ಪಿ ಪೆಟ್ರೋಲ್ ಬಂಕ್ ಹತ್ತಿರ ಸೌಂಡರ್ಸ್ ರಸ್ತೆಗೆ ಎಡ ತಿರುವು ಪಡೆದು ನೇರವಾಗಿ ಸೆಂಟ್ ಜಾನ್ಸ್ ಚರ್ಚ್ ರಸ್ತೆ ತಲುಪಿ ಕೋಲ್ಸ್ ಪಾರ್ಕ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮೂಲಕ ಹೇನ್ಸ್ ಜಂಕ್ಷನ್ ತಲುಪಲು ಅವಕಾಶ ಮಾಡಿಕೊಡಲಾಗಿರುತ್ತದೆ.

8. ನೇತಾಜಿ ಜಂಕ್ಷನ್‌ನಿಂದ ಹೇನ್ಸ್ ರಸ್ತೆಯಲ್ಲಿ ಹೇನ್ಸ್ ಜಂಕ್ಷನ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿದ್ದು, ನೇತಾಜಿ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಎಂ.ಎಂ ರಸ್ತೆ ಮೂಲಕ ಮಾಸ್ಕ್ ಜಂಕ್ಷನ್ ತಲುಪಿ ಬಲ ತಿರುವು ಪಡೆದು ಮಾಸ್ತೆ ರಸ್ತೆ ಮೂಲಕ ಕೋಲ್ಸ್ ರಸ್ತೆ ತಲುಪಿ ಬಲ ತಿರುವು ಪಡೆದು ಕೋಲ್ಸ್ ರಸ್ತೆಯ ಹೆಚ್.ಪಿ ಪೆಟ್ರೋಲ್ ಬಂಕ್ ಹತ್ತಿರ ಸೌಂಡರ್ಸ್ ರಸ್ತೆಗೆ ಎಡ ತಿರುವು ಪಡೆದು ನೇರವಾಗಿ ಸೆಂಟ್ ಜಾನ್ಸ್ ಚರ್ಚ್ ರಸ್ತೆ ತಲುಪಿ ಕೋಲ್ಸ್ ಪಾರ್ಕ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮೂಲಕ ಹೇನ್ಸ್ ಜಂಕ್ಷನ್ ತಲುಪಲು ಅವಕಾಶ ಮಾಡಿಕೊಡಲಾಗಿರುತ್ತದೆ.

9. ಥಣೀಸಂದ್ರ ಕಡೆಯಿಂದ ಶಿವಾಜಿನಗರ ಕಡೆಗೆ ಬರುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ನಾಗವಾರ ಜಂಕ್ಷನ್ ನಿಂದ – ಎಡತಿರುವು – ಹೆಣ್ಣೂರು ಜಂಕ್ಷನ್ – ಬಲತಿರುವು – ಸಿದ್ಧಪ್ಪ ರೆಡ್ಡಿ ಜಂಕ್ಷನ್ – ಅಯೋಧ್ಯ ಜಂಕ್ಷನ್ – ಲಿಂಗರಾಜಪುರಂ  ಪ್ಲೈ ಓವರ್ ನಿಂದ – ಪುಲಕೇಶಿನಗರ ಸಂಚಾರ ಠಾಣೆ ಕಡೆಯಿಂದ ಮಾರ್ಗ ಬದಲಾವಣೆ ಮಾಡಿ ರಾಬರ್ಟ್ ಸನ್ ರಸ್ತೆ ಜಂಕ್ಷನ್ ನಲ್ಲಿ ಬಲತಿರುವು ಪಡೆದುಕೊಂಡು ಹೇನ್ಸ್ ರಸ್ತೆ ಮೂಲಕ ಶಿವಾಜಿನಗರ ತಲುಪುವುದು. ನಾಗವಾರ ಜಂಕ್ಷನ್ ನಿಂದ ಬಲತಿರುವು ಪಡೆದು ಹೆಬ್ಬಾಳ ಮುಖೇನ ನಗರಕ್ಕೆ ಸಂಚರಿಸಲು ಅವಕಾಶ ಮಾಡಿಕೊಡಲಾಗಿರುತ್ತದೆ.

10. ಶಿವಾಜಿ ನಗರದ ಕಡೆಯಿಂದ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನಗಳನ್ನು ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆಯವರು ಮಾರ್ಗ ಬದಲಾವಣೆ ಮಾಡಿ ಸ್ಪೆನ್ಸರ್ ರಸ್ತೆಯಲ್ಲಿ ಕಡ್ಡಾಯವಾಗಿ ಬಲ ತಿರುವು ಪಡೆದುಕೊಂಡು ಸ್ಪೆನ್ಸರ್ ರಸ್ತೆ ಮೂಲಕ ಕೋಲ್ಸ್ ರಸ್ತೆ ತಲುಪಿ ವೀಲರ್ ರಸ್ತೆ ಮೂಲಕ ಹೆಣ್ಣೂರು, ಬಾಣಸವಾಡಿ, ಹಲಸೂರು ಕಡೆ ಹೋಗಬಹುದಾಗಿರುತ್ತದೆ.

11. ಆರ್.ಟಿ.ನಗರ ದಿಂದ ಕಾವಲ್ ಬೈರಸಂದ್ರ ಮೂಲಕ ಬರುವ ವಾಹನಗಳನ್ನು ಪುಷ್ಪಾಂಜಲಿ ಟಾಕೀಸ್ ಎಡ ತಿರುವು ಪಡೆದು ವೀರಣ್ಣ ಪಾಳ್ಯ ಜಂಕ್ಷನ್ ಕಡೆಗೆ బల ತಿರುವು ಪಡೆದು ನಾಗವಾರ ಜಂಕ್ಷನ್ ರಸ್ತೆ ಗೆ ತಲುಪಬಹುದಾಗಿರುತ್ತದೆ.

ವಾಹನ ನಿಲುಗಡೆಯನ್ನು ನಿರ್ಬಂಧಿಸಿರುವ ರಸ್ತೆಗಳು

1. ನೃಪತುಂಗ ರಸ್ತೆ, ಕೆ.ಆರ್ ವೃತ್ತದಿಂದ ಪೊಲೀಸ್ ಕಾರ್ನರ್ ವರೆಗೆ
2. ಕೆ.ಜಿ.ರಸ್ತೆ, ಪೊಲೀಸ್ ಕಾರ್ನರ್ ನಿಂದ ಮೈಸೂರು ಬ್ಯಾಂಕ್‌ ವೃತ್ತದ ವರೆಗೆ
3. ಎನ್.ಆರ್.ರಸ್ತೆ, ಟೌನ್‌ಹಾಲ್ ಜಂಕ್ಷನ್ ನಿಂದ ಪೊಲೀಸ್ ಕಾರ್ನರ್ ವರೆಗೆ
4. ಪಿ.ಕಾಳಿಂಗರಾವ್ ರಸ್ತೆ, ಎನ್.ಆರ್ ಜಂಕ್ಷನ್ ನಿಂದ ಸುಬ್ಬಯ್ಯ ವೃತ್ತದ ವರೆಗೆ
5. ಕಸ್ತೂರಿಬಾ ರಸ್ತೆ, ಹಲ್ಸನ್ ವೃತ್ತದಿಂದ ಸಿದ್ದಲಿಂಗಯ್ಯ ವೃತ್ತದ ವರೆಗೆ ಹಾಗೂ ಸಿದ್ದಲಿಂಗಯ್ಯ ವೃತ್ತದಿಂದ ಕ್ಲೀನ್ಸ್ ವೃತ್ತದ ವರೆಗೆ

6. ಮಲ್ಯ ಆಸ್ಪತ್ರೆ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್. ಜಂಕ್ಷನ್ ವರೆಗೆ 7. ಆರ್.ಆರ್.ಎಂ.ಆರ್ ರಸ್ತೆ, ರಿಚ್‌ಮಂಡ್ ವೃತ್ತದಿಂದ ಹಲ್ಸನ್ ವೃತ್ತದ ವರೆಗೆ
8. ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ಲೀನ್ ವೃತ್ತದ ವರೆಗೆ
9. ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಬಿ.ಆರ್.ವಿ ಜಂಕ್ಷನ್ ವರೆಗೆ
10. ಕ್ವಿನ್ಸ್ ರಸ್ತೆ, ಬಾಳೇಕುಂದ್ರಿ ವೃತ್ತದಿಂದ ಕೀನ್ಸ್ ವೃತ್ತದ ವರೆಗೆ
II. ಡಾ: ಬಿ.ಆರ್.ಅಂಬೇಡ್ಕರ್ ರಸ್ತೆ, ಕೆ.ಆರ್.ವೃತ್ತದಿಂದ ಬಾಳೇಕುಂದ್ರಿ ವೃತ್ತದ ವರೆಗೆ
12. ಶೇಷಾದ್ರಿ ರಸ್ತೆ, ಮಹಾರಾಣಿ ವೃತ್ತದಿಂದ ಕೆ.ಆರ್.ವೃತ್ತದ ವರೆಗೆ
13. ಹಳೇ ಅಂಚೆ ಕಛೇರಿ ರಸ್ತೆ, ಮೈಸೂರು ಬ್ಯಾಂಕ್‌ ವೃತ್ತದಿಂದ ಕೆ.ಆರ್.ವೃತ್ತದ ವರೆಗೆ
14. ಕಬ್ಬನ್ ಉದ್ಯಾನವನದ ಒಳ ಆವರಣ
15. ನೇತಾಜಿ ರಸ್ತೆ, ಹೇನ್ಸ್ ರಸ್ತೆ, ಎಂ.ಎಂ ರಸ್ತೆ, ಮಾಸ್ ರಸ್ತೆ, ಕೋಲ್ಸ್ ರಸ್ತೆ, ಸೌಂಡರ್ಸ್‌ ರಸ್ತೆ, ಸೆಂಟ್ ಜಾನ್ಸ್ ಚರ್ಚ್ ರಸ್ತೆ ಹಾಗೂ ಮಿಲ್ಲರ್ ರಸ್ತೆ ಎಕ್ಸ್‌ಟೆಂಕ್ಷನ್ ನಲ್ಲಿ ಎರಡೂ ಬದಿಯಲ್ಲಿ ಎಲ್ಲಾ ರೀತಿಯ ವಾಹನಗಳ ಪಾರ್ಕಿಂಗ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.
16. ಪಾಟರಿ ಸರ್ಕಲ್ ನಿಂದ ನಾಗವಾರ ಸಿಗ್ನಲ್ ವರೆಗೆ ಎರಡು ಬದಿಯಲ್ಲಿ ವಾಹನಗಳ ಪಾರ್ಕಿಂಗ್ ನಿಷೇಧ ಮಾಡಲಾಗಿರುತ್ತದೆ.
17. ಗೋವಿಂದಪುರ ಜಂಕ್ಷನ್‌ನಿಂದ ಗೋವಿಂದಪುರ ಕಾ. & ಸು. ಪೊಲೀಸ್ ಠಾಣೆಯ ವರೆಗೆ ಎರಡು ಬದಿಯಲ್ಲಿ ಪಾರ್ಕಿಂಗ್ ನಿಷೇದ ಮಾಡಲಾಗಿರುತ್ತದೆ.
18. ಹೆಚ್.ಬಿ.ಆರ್ ಬಡಾವಣೆಯ ಸಿದ್ದಪ್ಪ ರೆಡ್ಡಿ ಜಂಕ್ಷನ್ ನಿಂದ ನರೇಂದ್ರ ಟೆಂಟ್ ಜಂಕ್ಷನ್ ವರೆಗೆ ಎರಡು ಬದಿಯಲ್ಲಿ ಪಾರ್ಕಿಂಗ್ ನಿಷೇದ ಮಾಡಿಲಾಗಿರುತ್ತದೆ.

BREAKING: ಬೆಂಗಳೂರಲ್ಲಿ ‘ಈದ್ ಮಿಲಾದ್’ ಹಬ್ಬಕ್ಕೆ ‘ಪೊಲೀಸ್ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ: ಈ ನಿಯಮಗಳ ಪಾಲನೆ ಕಡ್ಡಾಯ

BIG NEWS : ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು ಕೇಂದ್ರ ಸರ್ಕಾರಕ್ಕೆ ಕೊಟ್ಟ ತಪರಾಕಿ : ಸಿಎಂ ಸಿದ್ದರಾಮಯ್ಯ

BREAKING: ಶೀಘ್ರವೇ ನಂದಿನಿ ಹಾಲಿನ ದರ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ | Nandini Milk Price Hike

Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಬಸವ ವಸತಿ ಯೋಜನೆಯ ಸಹಾಯಧನ ಹೆಚ್ಚಳ

10/12/2025 8:25 PM1 Min Read

ರಾಜ್ಯದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಹೊಸ ಕಟ್ಟಡ

10/12/2025 8:22 PM1 Min Read

JOB ALERT: ರಾಜ್ಯದಲ್ಲಿ ಖಾಲಿ ಇರುವ 24,300 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಮಂಜೂರಾತಿ: ಸಿಎಂ ಸಿದ್ಧರಾಮಯ್ಯ

10/12/2025 8:17 PM1 Min Read
Recent News

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಬಸವ ವಸತಿ ಯೋಜನೆಯ ಸಹಾಯಧನ ಹೆಚ್ಚಳ

10/12/2025 8:25 PM

ರಾಜ್ಯದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಹೊಸ ಕಟ್ಟಡ

10/12/2025 8:22 PM

BREAKING : ಇಸ್ರೇಲ್ ಪಿಎಂ ಜೊತೆ ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ ; ಭಯೋತ್ಪಾದನೆ ಕುರಿತು ಶೂನ್ಯ ಸಹಿಷ್ಣುತೆ ಪುನರುಚ್ಚಾರ

10/12/2025 8:22 PM

JOB ALERT: ರಾಜ್ಯದಲ್ಲಿ ಖಾಲಿ ಇರುವ 24,300 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಮಂಜೂರಾತಿ: ಸಿಎಂ ಸಿದ್ಧರಾಮಯ್ಯ

10/12/2025 8:17 PM
State News
KARNATAKA

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಬಸವ ವಸತಿ ಯೋಜನೆಯ ಸಹಾಯಧನ ಹೆಚ್ಚಳ

By kannadanewsnow0910/12/2025 8:25 PM KARNATAKA 1 Min Read

ಬೆಳಗಾವಿ ಸುವರ್ಣಸೌಧ: ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ ಸಹಾಯಧನವು ಸಾಕಾಗುತ್ತಿಲ್ಲ ಎಂಬ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಆಯ್ಕೆಯಾದ…

ರಾಜ್ಯದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಹೊಸ ಕಟ್ಟಡ

10/12/2025 8:22 PM

JOB ALERT: ರಾಜ್ಯದಲ್ಲಿ ಖಾಲಿ ಇರುವ 24,300 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಮಂಜೂರಾತಿ: ಸಿಎಂ ಸಿದ್ಧರಾಮಯ್ಯ

10/12/2025 8:17 PM

RTO ಕಚೇರಿಗಳಲ್ಲಿ ‘ಬ್ರೋಕರ್’ಗಳು ಕಾಣಿಸಿಕೊಂಡರೆ ಅಧಿಕಾರಿಗಳು ಸಸ್ಪೆಂಡ್: ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ

10/12/2025 8:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.