Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾತ್ರಿ ಟೈಮಲ್ಲಿ ‘ಹಾಲು’ ಕುಡಿಯೋದ್ರಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ?

05/06/2025 8:56 PM

Flipkart ‘ನೇರ ಸಾಲ’ಕ್ಕೆ ‘RBI’ ಅನುಮೋದನೆ ; ಈಗ ಗ್ರಾಹಕರಿಗೆ ‘ಡೈರೆಕ್ಟ್ ಲೋನ್’ ಲಭ್ಯ

05/06/2025 8:30 PM

ಬೆಳಿಗ್ಗೆ ಎದ್ದ ತಕ್ಷಣ ಈ ಪರಿಹಾರ ಅನುಸರಿಸಿ.! ಲಕ್ಷ್ಮಿ ದೇವಿಯ ಆಶೀರ್ವಾದ ನಿಮ್ಮ ಮೇಲಿರುತ್ತೆ

05/06/2025 8:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ‘AI ತಂತ್ರಜ್ಞಾನ’ದ ಮೂಲಕ ‘ಸಂಚಾರಿ ನಿಯಮ ಉಲ್ಲಂಘನೆ’ ಮೇಲೆ ನಿಗಾ- ಡಿಸಿಎಂ ಡಿಕೆಶಿ
KARNATAKA

ಬೆಂಗಳೂರಲ್ಲಿ ‘AI ತಂತ್ರಜ್ಞಾನ’ದ ಮೂಲಕ ‘ಸಂಚಾರಿ ನಿಯಮ ಉಲ್ಲಂಘನೆ’ ಮೇಲೆ ನಿಗಾ- ಡಿಸಿಎಂ ಡಿಕೆಶಿ

By kannadanewsnow0913/01/2024 3:42 PM

ಬೆಂಗಳೂರು : “ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ಸಂಚಾರಿ ನಿಯಮ ಉಲ್ಲಂಘನೆ ಮೇಲೆ ನಿಗಾ ಇಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿದರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ -24 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಳೆದ 3 ವರ್ಷಗಳಲ್ಲಿ 6 ಸಾವಿರಕ್ಕೂ ಹೆಚ್ಚು ಡ್ರೈವಿಂಗ್ ಲೈಸೆನ್ಸ್‌ಗಳನ್ನು ಅಮಾನತು ಮಾಡಲಾಗಿದೆ. ಎನ್‌ಸಿ‌ಆರ್‌ಬಿ ಅಂಕಿಅಂಶಗಳ ಪ್ರಕಾರ ಬೈಕ್ ಅಪಘಾತಗಳಿಂದ ಅತ್ಯಂತ ಹೆಚ್ಚು ಮರಣಗಳಾಗಿವೆ. ಆದ ಕಾರಣ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಬೇಕು ಎಂದರು.

ಜೀವನದಲ್ಲಿ ಧೈರ್ಯ ಇರಬೇಕು ಆದರೆ ಭಂಡತನ ಇರಬಾರದು. ಜೀವ ಅಮೂಲ್ಯವಾದುದು, ಒಮ್ಮೆ ಹೋದ ಜೀವ ಮತ್ತೆ ಬರುವುದಿಲ್ಲ. ಸಂಚಾರಿ ನಿಯಮ ಪಾಲನೆಯ ಬಗ್ಗೆ ಯುವ ಪೀಳಿಗೆಗೆ ಮಾರ್ಗದರ್ಶನ ನೀಡಬೇಕಾಗಿದೆ. ಕಾನೂನು ಪಾಲನೆ, ಶಿಸ್ತು, ಸಂಯಮ ಸೇರಿದಂತೆ ರಸ್ತೆ ನಿಯಮಗಳನ್ನು ಉಲ್ಲಂಘನೆ ಮಾಡಬಾರದು ಎಂದು ಮಕ್ಕಳಲ್ಲಿ ಅರಿವು ಮೂಡಿಸಲು ‘ಮೊಳಕೆಯಲ್ಲೇ ತಿದ್ದಿರಿ’ ಎನ್ನುವ ಕೈಪಿಡಿಯನ್ನು ಬಿಡುಗಡೆ ಮಾಡಿಲಾಗಿದೆ ಎಂದು ಹೇಳಿದರು.

ಈ ಹಿಂದೆ ನಮ್ಮ ಕಾಂಗ್ರೆಸ್ ಸರ್ಕಾರ ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣ ಚಿಕಿತ್ಸೆ ನೀಡಲು ಹರೀಶ್ ಸಾಂತ್ವನ ಯೋಜನೆ ಜಾರಿಗೆ ತಂದಿತ್ತು. ಆದರೆ ಅಪಘಾತವಾಗಿ ಹೋದ ಜೀವ ಮತ್ತೆ ಮರಳಿ ತರಲು ಸಾಧ್ಯವೇ? ಫುತ್‌ಪಾತ್ ಮೇಲೆ ಗಾಡಿ ಚಲಾಯಿಸುವುದು, ಸಿಗ್ನಲ್ ಜಂಪ್ ಮಾಡಿ ವಾಹನ ಚಲಾಯಿಸುವುದರಿಂದ ಏನೂ ಪ್ರಯೋಜನವಿಲ್ಲ ಎಂದರು.

ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಕ್ರಮ

ಸುಮಾರು 24 ಲಕ್ಷ ಕುಟುಂಬಗಳು ಬೆಂಗಳೂರಿನಲ್ಲಿ ವಾಸವಿದ್ದು, 1 ಕೋಟಿಗೂ ಹೆಚ್ಚು ವಾಹನಗಳು ಸಂಚರಿಸುತ್ತವೆ. ಯುವ ಪೀಳಿಗೆ ಜವಾಬ್ದಾರಿ ಅರಿತು ಸಂಚಾರ ನಿಯಮಗಳನ್ನು ಪಾಲಿಸಬೇಕು. ಸಾರಿಗೆ ಇಲಾಖೆ, ಬಿಬಿಎಂಪಿ, ಪೊಲೀಸ್ ಇಲಾಖೆಗಳು ಸೇರಿ ಸಂಚಾರ ದಟ್ಟಣೆ ನಿವಾರಣೆಗೆ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಸಂಚಾರ ದಟ್ಟಣೆ ನಿವಾರಣೆಗೆ ಇತರೇ ದೇಶಗಳಲ್ಲಿ ಇರುವ ಯೋಜನೆಗಳನ್ನು ಅಧ್ಯಯನ ಮಾಡಿ ಇಲ್ಲಿ ಅಳವಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಕೋರ್ಟ್ ಆದೇಶದಂತೆ ಫುಟ್ ಪಾತ್ ವ್ಯಾಪಾರಿಗಳ ತೆರವು

ಕಾರ್ಯಕ್ರಮದ ನಂತರ ಮಾಧ್ಯಮಗಳು ಜಯನಗರದಲ್ಲಿ ಬೀದಿ ವ್ಯಾಪಾರಿಗಳ ತೆರವು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಕೇಳಿದಾಗ, “ಪಾದಚಾರಿಗಳ ಅನುಕೂಲ, ಸುಗಮ ಸಂಚಾರಕ್ಕಾಗಿ ಹೈಕೋರ್ಟ್ ಆದೇಶದಂತೆ ಫುಟ್ ಪಾತ್ ವ್ಯಾಪಾರಿಗಳ ತೆರವು ಮಾಡಲಾಗಿದೆ. ಪಾದಚಾರಿ ಮಾರ್ಗ ಇರುವುದು ಜನ ಓಡಾಡಲು. ಇಂತಹ ವ್ಯಾಪಾರಿಗಳು ನೋಂದಣಿ ಮಾಡಿಕೊಂಡು ರಸ್ತೆಯ ಒಂದು ಕಡೆ ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಲಾಗುವುದು. ಅವರಿಗೆ ಆರ್ಥಿಕ ನೆರವು ನೀಡಲು ನಾವು ಸಿದ್ಧ. ಆದರೆ ಪಾದಚಾರಿ ಮಾರ್ಗದಲ್ಲಿ ಟೆಂಟ್ ಹಾಕಿಕೊಂಡು ವ್ಯಾಪಾರ ಮಾಡಿದರೆ ಪಾದಚಾರಿಗಳು ಎಲ್ಲಿ ಓಡಾಡಬೇಕು” ಎಂದು ತಿಳಿಸಿದರು.

ಪ್ರಿಯಾಂಕಾ ಗಾಂಧಿ ಸ್ಪರ್ಧೆ ಬಗ್ಗೆ ಮಾಹಿತಿ ಇಲ್ಲ

ಪ್ರಿಯಾಂಕಾ ಗಾಂಧಿ ಅವರು ಕರ್ನಾಟಕ ಅಥವಾ ತೆಲಂಗಾಣದಲ್ಲಿ ಸ್ಪರ್ಧೆ ಮಾಡುವ ಚರ್ಚೆ ಬಗ್ಗೆ ಕೇಳಿದಾಗ, “ಈ ಬಗ್ಗೆ ನಿಮಗೆ ಮಾಹಿತಿ ಇರಬಹುದು. ನನಗೆ ಮಾಹಿತಿ ಇಲ್ಲ, ನನ್ನ ಜತೆ ಯಾರು ಮಾತನಾಡಿಲ್ಲ” ಎಂದು ತಿಳಿಸಿದರು.

ರಾಜ್ಯದಲ್ಲಿ ಭದ್ರತೆ ಇಲ್ಲ ಎಂಬ ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, “ಅವರ ಕಾಲದಲ್ಲಿ ಆದದ್ದನ್ನು ಅವರು ಹೇಳುತ್ತಿದ್ದಾರೆ. ನಾವು ಯಾವುದೇ ಹಂತದಲ್ಲೂ ನೈತಿಕ ಪೊಲೀಸ್ ಗಿರಿಗೆ ಪ್ರೋತ್ಸಾಹ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಅನುಭವ ಮಂಟಪ ಯೋಜನೆ ಆರಂಭಿಸಿದ್ದೇ ಕಾಂಗ್ರೆಸ್

ಅನುಭವ ಮಂಟಪಕ್ಕೆ ಅನುದಾನ ನೀಡುತ್ತಿಲ್ಲ ಎಂಬ ಬಸವ ಕಲ್ಯಾಣ ಶಾಸಕರ ಆರೋಪದ ಬಗ್ಗೆ ಕೇಳಿದಾಗ, ಅವರು ಹೊಸದಾಗಿ ಶಾಸಕರಾಗಿದ್ದಾರೆ. ಮುಖ್ಯಮಂತ್ರಿಗಳು ನಿನ್ನೆ ಶಿವಮೊಗ್ಗದಲ್ಲಿ ಅಲ್ಲಮ ಪ್ರಭುಗಳ ಹೆಸರನ್ನು ಘೋಷಣೆ ಮಾಡಿದ್ದಾರೆ. ನಮ್ಮ ಆಸಕ್ತಿಗೆ ಇದೆ ಸಾಕ್ಷಿ. ಇದನ್ನು ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರ. ಅವರ ಕಾಲದಲ್ಲಿ ಯಾಕೆ ಅನುದಾನ ಬಿಡುಗಡೆ ಮಾಡಲಿಲ್ಲ” ಎಂದು ತಿರುಗೇಟು ನೀಡಿದರು.

ಒಂದು ಧರ್ಮ, ಒಂದು ಜಾತಿಯ ಪರವಾಗಿರಲು ನಾವು ‘ಬಿಜೆಪಿ’ ಅಲ್ಲ- ಸಿಎಂ ಸಿದ್ಧರಾಮಯ್ಯ ಗುಡುಗು

ಲೋಕಸಭಾ ಚುನಾವಣೆ : ನನಗೆ ಯತಿಂದ್ರ ಸಿದ್ದರಾಮಯ್ಯ ಎದುರಾಳಿಯಾದ್ರೆ ಒಳ್ಳೆಯದು : ಪ್ರತಾಪ್ ಸಿಂಹ

Share. Facebook Twitter LinkedIn WhatsApp Email

Related Posts

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

05/06/2025 6:54 PM3 Mins Read

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM3 Mins Read

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM2 Mins Read
Recent News

ರಾತ್ರಿ ಟೈಮಲ್ಲಿ ‘ಹಾಲು’ ಕುಡಿಯೋದ್ರಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ?

05/06/2025 8:56 PM

Flipkart ‘ನೇರ ಸಾಲ’ಕ್ಕೆ ‘RBI’ ಅನುಮೋದನೆ ; ಈಗ ಗ್ರಾಹಕರಿಗೆ ‘ಡೈರೆಕ್ಟ್ ಲೋನ್’ ಲಭ್ಯ

05/06/2025 8:30 PM

ಬೆಳಿಗ್ಗೆ ಎದ್ದ ತಕ್ಷಣ ಈ ಪರಿಹಾರ ಅನುಸರಿಸಿ.! ಲಕ್ಷ್ಮಿ ದೇವಿಯ ಆಶೀರ್ವಾದ ನಿಮ್ಮ ಮೇಲಿರುತ್ತೆ

05/06/2025 8:22 PM

‘Flipkart’ ಬಳಕೆದಾರರಿಗೆ ಗುಡ್ ನ್ಯೂಸ್ ; ಇನ್ಮುಂದೆ ‘ನೇರ ಸಾಲ’ ಲಭ್ಯ, ಕಂಪನಿಗೆ ಸಿಕ್ತು ‘RBI’ ಲೈಸನ್ಸ್

05/06/2025 7:37 PM
State News
KARNATAKA

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

By kannadanewsnow0905/06/2025 6:54 PM KARNATAKA 3 Mins Read

ಅನ್ಯ ದೇವತೆಗಳನ್ನು ಪೂಜಿಸುವುದಕ್ಕಿಂತ ಕುಲದೇವತೆಯನ್ನು ಪೂಜಿಸಿದರೆ ನಮ್ಮ ಬದುಕು ಹಸನಾಗುತ್ತದೆ ಎನ್ನುತ್ತಾರೆ. ಅದಕ್ಕಾಗಿ ಬೇರೆ ದೇವತೆಗಳನ್ನು ಪೂಜಿಸಬಾರದೇ ಎಂದು ಕೇಳಿದರೆ…

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM

ಜೂ.21ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ‘KUWJ’ಯಿಂದ ಕೆ.ವಿ ಪ್ರಭಾಕರ್ ಗೆ ಆಹ್ವಾನ

05/06/2025 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.