ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘೋರ ಘಟನೆ, ಮಂಡ್ಯದ ಬಸರಾಳು ಸಮೀಪದ ಕಾರೆಕಟ್ಟೆಯ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ಸಂಭವಿಸಿದೆ.
ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಬಿಹಾರ ಮೂಲಕ ಕಾರ್ಮಿಕರಿಂದ ಕಾರ್ಖಾನೆ ಸ್ಥಳಾಂತರ ಕಾರ್ಯ ನಡೆಯುತ್ತಿತ್ತು. ಕಳೆದ ಒಂದು ತಿಂಗಳಂದಲೂ ಸ್ಥಳಾಂತರದ ಕೆಲಸ ನಡೆಯುತ್ತಿತ್ತು. ಇಂದು ರಾಸಾಯನಿಕ ಟ್ಯಾಂಕ್ ತೆರವು ಮಾಡುತ್ತಿದ್ದ ಕಾರ್ಮಿಕರು, ಈ ವೇಳೆ ಟ್ಯಾಂಕ್ಸ್ ಸ್ಪೋಟಗೊಂಡು ಸ್ಥಳದಲ್ಲೇ ಇಬ್ಬರು ಸಾವನಪ್ಪಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಕಾರ್ಮಿಕರು ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.








