ಬೆಂಗಳೂರು: ಬಿಎಂಎಸ್‌ ಟ್ರಸ್ಟ್‌ ಅವ್ಯವಹಾರ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಎಂಎಸ್ ಕಾಲೇಜು ಟ್ರಸ್ಟ್‌ , ಜಮೀನು ಅಕ್ರಮ ಆರೋಪ ವಿಚಾರವಾಗಿ ಸರ್ಕಾರ ಒಬ್ಬ ವ್ಯಕ್ತಿಗೆ ಈಗಾಗಲೇ ಈ ಟ್ರಸ್ಟ್‌ ಬರೆದುಕೊಟ್ಟಿದೆ. ಸಾರ್ವಜನಿಕ ಟ್ರಸ್ಟ್‌ ಒಂದು ಕುಟುಂಬಕ್ಕೆ ವರ್ಗಾವಣೆ ಆಗುತ್ತಿದೆ ಎಂದು ಬೆಂಗಳೂರಿನಲ್ಲಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

BIGG NEWS : ‘ಬೆಂಕಿ ಪೊಟ್ಟಣ’ ಬಳಸಿ ಬಾಂಬ್‌ ಬ್ಲಾಸ್ಟ್‌ ನಡೆಸಿದ್ದ ಶಂಕಿತ ಉಗ್ರ : ಪೊಲೀಸರ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

 

ಅಕ್ರಮದಲ್ಲಿ ಸಚಿವ ಅಶ್ವತ್ಥನಾರಾಯಣ ಭಾಗಿಯಾಗಿದ್ದಾರೆ. ಅಕ್ರಮದ ಬಗ್ಗೆ ತನಿಖೆ ಮಾಡಲು ಸರ್ಕಾರಕ್ಕೆ ಭಯ ಯಾಕೆ? ಅಕ್ರಮದ ದಾಖಲೆಗಳನ್ನು ರಾಜ್ಯದ ಜನರ ಮುಂದೆ ಇಟ್ಟಿದ್ದೇನೆ ಎಂದರು.
ಇನ್ನು ಈ ಸಂಬಂಧ ಪ್ರಧಾನಿ ಮೋದಿಗೆ ನಾನು ಪತ್ರ ಬರೆಯುತ್ತೇನೆ. ಭ್ರಷ್ಟ ವ್ಯವಸ್ಥೆ ನಿಲ್ಲಿಸುತ್ತೇವೆ ಎಂದು ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇವೆ. ಅಕ್ರಮ ದಾಖಲೆಗಳನ್ನು ಅವರಿಗೂ ಸಹ ಕಳಿಸುತ್ತೇನೆ. ಆದರೆ ಪ್ರಧಾನಿ ಮೋದಿ ಏನು ಕ್ರಮ ಕೈಗೊಳ್ಳಾರೋ ನೋಡೋಣ ಎಂದು ಹೇಳಿದ್ದಾರೆ. ಇದು ೪೦ % ಕಮಿಷನ್‌ ಅಲ್ಲ, ೧೦೦ % ಕಮಿಷನ್‌ ಎಂದು ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Share.
Exit mobile version