Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಸ್ವಾಮಿ ಅವಿಮುಕ್ತೇಶ್ವರಾನಂದ’ ವಿರುದ್ಧ ಪೋಕ್ಸೋ ಕಾಯ್ದೆಯಡಿ FIR ದಾಖಲಿಸಲು ಕೋರ್ಟ್ ಆದೇಶ

21/02/2026 9:29 PM

ಕರ್ನಾಟಕವನ್ನು EV ಹಬ್ ಆಗಿ ರೂಪಾಂತರ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ

21/02/2026 9:06 PM

ಸಿದ್ದರಾಮಯ್ಯನವರು ಕುರ್ಚಿ ಬಿಟ್ಟು ಕೊಡುವ ಜಾಯಮಾನದವರಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

21/02/2026 9:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕವನ್ನು EV ಹಬ್ ಆಗಿ ರೂಪಾಂತರ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ
KARNATAKA

ಕರ್ನಾಟಕವನ್ನು EV ಹಬ್ ಆಗಿ ರೂಪಾಂತರ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ

By kannadanewsnow0921/02/2026 9:06 PM

ಬೆಂಗಳೂರು: ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರವು ದೊಡ್ಡ ಪ್ರಮಾಣದಲ್ಲಿ ಉತ್ತೇಜನ ನೀಡುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಬೆಂಗಳೂರಿನಲ್ಲಿ ಶನಿವಾರದಂದು ನ್ಯೂಸ್ ಫಸ್ಟ್ ಸುದ್ದಿವಾಹಿನಿ ಆಯೋಜಿಸಿದ್ದ ಎಲೆಕ್ಟ್ರಿಕ್ ವಾಹನಗಳ ಇವಿ ಎವರೆಡಿ 2026 ಬೃಹತ್ ಮೇಳವನ್ನು ಉದ್ಘಾಟಿಸಿ ಮಾತಾಡಿದರು ಕೇಂದ್ರ ಸಚಿವರು.

ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ವಿಪುಲ ಅವಕಾಶಗಳಿವೆ. ಅನೇಕ ದೊಡ್ಡ ಕಂಪನಿಗಳು ರಾಜ್ಯವನ್ನು ಕಾರ್ಯಕ್ಷೇತ್ರ ಮಾಡಿಕೊಂಡಿವೆ. ಎಲೆಕ್ಟ್ರಾನಿಕ್ಸ್, ಆಟೋಮೋಟಿವ್ ಎಂಜಿನಿಯರಿಂಗ್ ಮತ್ತು ಸ್ಟಾರ್ಟ್ಅಪ್‌ಗಳಲ್ಲಿ ಬೆಂಗಳೂರಿನ ಬಲವಾದ ನೆಲೆಯು ಇವಿ ವಾಹನಗಳ ನಾವೀನ್ಯತೆ ಮತ್ತು ಉತ್ಪಾದನೆಗೆ ಜಾಗತಿಕ ಕೇಂದ್ರವಾಗಿ ರಾಜ್ಯವು ಹೊರಹೊಮ್ಮಲು ಸಹಕಾರಿ ಆಗಿದೆ ಎಂದು ಅವರು ಒತ್ತಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದ ಎಲೆಲೆಕ್ಟ್ರಿಕ್ ವಾಹನಗಳ ಚಲನಶೀಲತೆಯ ಪರಿವರ್ತನಾತ್ಮಕ ವೇಗವನ್ನು ಪಡೆದುಕೊಳ್ಳುತ್ತಿದ್ದು, ಜಾಗತಿಕ ಸ್ಪರ್ಧೆಗೆ ಅನುಗುಣವಾಗಿ ಗುಣಾತ್ಮಕವಾಗಿ ಬೆಳವಣಿಗೆ ಹೊಂದುತ್ತಿದೆ. ಭಾರತದಲ್ಲಿ ವೇಗವಾಗಿ ಇವಿ ಪೂರಕ ವ್ಯವಸ್ಥೆಯ ಬೆಳೆಯುತ್ತಿದೆ. ಈ ವಲಯದಲ್ಲಿ ನಾವೀನ್ಯತೆ ಮತ್ತು ಆವಿಷ್ಕಾರಕ್ಕೆ ದೊಡ್ಡ ಮಟ್ಟದಲ್ಲಿ ಉತ್ತೇಜನ ಸಿಗುತ್ತಿದೆ ಎಂದು ಅವರು ಹೇಳಿದರು.

ಭಾರತವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಶಕ್ತಿಯಾಗಿದೆ. ಈ ಬೆಳವಣಿಗೆಗೆ ಎಲೆಕ್ಟ್ರಿಕ್ ವಾಹನ ಕ್ಷೇತ್ರವು ಬೃಹತ್ ಕೊಡುಗೆ ನೀಡುತ್ತಿದೆ. ಕೇಂದ್ರ ಸರ್ಕಾರವು ಅನೇಕ ಪ್ರೋತ್ಸಾಹಕ ಯೋಜನೆಗಳನ್ನು ಅನುಷ್ಠಾನ ಮಾಡುವ ಮೂಲಕ ಈ ಉದ್ಯಮಕ್ಕೆ ಬೆಂಬಲವಾಗಿ ನಿಂತಿದೆ ಎಂದು ಅವರು ವಿವರಿಸಿದರು.

“ಎಲೆಕ್ಟ್ರಿಕ್ ವಾಹನಗಳು ಭಾರತೀಯ ಚಲನಶೀಲತೆಯ ಪರಿವರ್ತನಾತ್ಮಕ ಬೆಳವಣಿಗೆಯ ಅತಿ ಮುಖ್ಯ ಘಟ್ಟವಾಗಿದೆ. ವಿದ್ಯುತ್ ಚಾಲಿತ ವಾಹನಗಳು ಕೇವಲ ಸ್ವಚ್ಛ ಸಾರಿಗೆಗೆ ಪೂರಕ ಮಾತ್ರವಲ್ಲ; ಅವು ಇಂಧನ ಸುರಕ್ಷತೆ, ತಾಂತ್ರಿಕ ನಾಯಕತ್ವ ಮತ್ತು ನಮ್ಮ ಯುವಕರಿಗೆ ಹೊಸ ಆರ್ಥಿಕ ಅವಕಾಶಗಳನ್ನು ವಿಪುಲವಾಗಿ ತೆರೆಯುತ್ತವೆ” ಎಂದು ಕೇಂದ್ರ ಸಚಿವರು ಪ್ರತಿಪಾದಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ರೂಪಿಸಲಾದ ವಿವಿಧ ನೀತಿಗಳು 2070ರ ವೇಳೆಗೆ ಭಾರತೀಯ ಸಾರಿಗೆ ವ್ಯವಸ್ಥೆಯಲ್ಲಿ ಇಂಗಾಲ ಹೊರಸೂಸುವಿಕೆಯನ್ನು ನಿವ್ವಳ ಶೂನ್ಯಕ್ಕೆ ತರುವ ಉದ್ದೇಶ ಹೊಂದಲಾಗಿದೆ. ಇದು ಅತ್ಯಂತ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಗುರಿ ಆಗಿದ್ದು, ಅದನ್ನು ಭಾರತ ತಪ್ಪದೇ ಸಾಧಿಸುತ್ತದೆ. ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತ ಪರಿಕಲ್ಪನೆಯ ಅಡಿಯಲ್ಲಿ ಇವಿ ವಲಯದ ದೇಶೀಯ ಸಾಮರ್ಥ್ಯವನ್ನು ಇಮ್ಮಡಿಗೊಳಿಸಲಾಗುತ್ತಿದೆ ಎಂದು ಸಚಿವರು ಪ್ರತಿಪಾದಿಸಿದರು.

ರೇರ್ ಅರ್ಥ್ ಮೆಟಲ್ ಕ್ಷೇತ್ರಕ್ಕೆ ₹7,280 ಕೋಟಿ:

ಇವಿ ಕ್ಷೇತ್ರ ಮಾತ್ರವಲ್ಲದೆ ರಕ್ಷಣೆ, ಏರೋಸ್ಪೇಸ್, ಆಟೋಮೊಬೈಲ್ ಸೇರಿದಂತೆ ವಿವಿಧ ವ್ಯೂಹಾತ್ಮಕ ಕ್ಷೇತ್ರಗಳಿಗೆ ಶಕ್ತಿ ತುಂಬುವ ಉದ್ದೇಶದಿಂದ ಭೂಮಿಯಲ್ಲಿ ಲಭ್ಯವಿರುವ ಅಪರೂಪದ ಆಯಸ್ಕಾಂತಗಳ ಉತ್ಪಾದನೆ, ಬಳಕೆಗೆ ಉತ್ತೇಜಿಸಲು ₹7,280 ಕೋಟಿ ವೆಚ್ಚದ ಯೋಜನೆಯನ್ನು ಈಗಾಗಲೇ ರೂಪಿಸಲಾಗಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬೃಹತ್ ಕೈಗಾರಿಕಾ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಡಾ. ಹನೀಫ್ ಖುರೇಷಿ ಮಾತನಾಡಿ; ಆಟೋಮೊಬೈಲ್ ವಲಯದಲ್ಲಿನ ಪ್ರಗತಿಯ ವೇಗದ ಬಗ್ಗೆ ಮಾಹಿತಿ ನೀಡಿದರು.

ಆಟೋ ಉದ್ಯಮದ ಕೆ. ಎನ್. ರಾಧಾಕೃಷ್ಣನ್, ಸುಮನ್ ಮಿಶ್ರಾ, ಸುಲಜಾ ಪಿರೋಡಿಯಾ ಮತ್ತು ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಎಸ್. ರವಿಕುಮಾರ್ ಸೇರಿದಂತೆ ಪ್ರಮುಖ ಉದ್ಯಮ ಪಾಲುದಾರರು ಈ ಎಕ್ಸ್‌ಪೋದಲ್ಲಿ ಭಾಗವಹಿಸಿದ್ದರು.

Share. Facebook Twitter LinkedIn WhatsApp Email

Related Posts

ಸಿದ್ದರಾಮಯ್ಯನವರು ಕುರ್ಚಿ ಬಿಟ್ಟು ಕೊಡುವ ಜಾಯಮಾನದವರಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

21/02/2026 9:03 PM2 Mins Read

ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ?: ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ

21/02/2026 9:01 PM1 Min Read

ಶಿಕ್ಷಕರ ಸಂಘಗಳು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಪ್ರತಿ ಸ್ಪಂದಿಸಬೇಕು: ಜಿಲ್ಲಾಧ್ಯಕ್ಷ ಡಿ.ಬಿ.ರುದ್ರಪ್ಪ

21/02/2026 8:48 PM2 Mins Read
Recent News

BREAKING : ‘ಸ್ವಾಮಿ ಅವಿಮುಕ್ತೇಶ್ವರಾನಂದ’ ವಿರುದ್ಧ ಪೋಕ್ಸೋ ಕಾಯ್ದೆಯಡಿ FIR ದಾಖಲಿಸಲು ಕೋರ್ಟ್ ಆದೇಶ

21/02/2026 9:29 PM

ಕರ್ನಾಟಕವನ್ನು EV ಹಬ್ ಆಗಿ ರೂಪಾಂತರ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ

21/02/2026 9:06 PM

ಸಿದ್ದರಾಮಯ್ಯನವರು ಕುರ್ಚಿ ಬಿಟ್ಟು ಕೊಡುವ ಜಾಯಮಾನದವರಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

21/02/2026 9:03 PM

ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ?: ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ

21/02/2026 9:01 PM
State News
KARNATAKA

ಕರ್ನಾಟಕವನ್ನು EV ಹಬ್ ಆಗಿ ರೂಪಾಂತರ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ

By kannadanewsnow0921/02/2026 9:06 PM KARNATAKA 2 Mins Read

ಬೆಂಗಳೂರು: ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ ಕೇಂದ್ರದ ನರೇಂದ್ರ…

ಸಿದ್ದರಾಮಯ್ಯನವರು ಕುರ್ಚಿ ಬಿಟ್ಟು ಕೊಡುವ ಜಾಯಮಾನದವರಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

21/02/2026 9:03 PM

ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ?: ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ

21/02/2026 9:01 PM

ಶಿಕ್ಷಕರ ಸಂಘಗಳು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಪ್ರತಿ ಸ್ಪಂದಿಸಬೇಕು: ಜಿಲ್ಲಾಧ್ಯಕ್ಷ ಡಿ.ಬಿ.ರುದ್ರಪ್ಪ

21/02/2026 8:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.