Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಅಂತಾರಾಷ್ಟ್ರೀಯ ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ, ಪ್ರಯೋಗ ಯಶಸ್ವಿ

09/04/2026 5:30 PM

ಪೊಲೀಸ್ ಠಾಣೆಗೆ ಬರುವ ನೊಂದವರೊಂದಿಗೆ ಗೌರವದಿಂದ ವರ್ತಿಸಿ: ಗೃಹ ಸಚಿವ ಡಾ.ಜಿ ಪರಮೇಶ್ವರ್

09/04/2026 5:25 PM

ಕಣ್ಣೀರು ಒರೆಸಿಕೊಳ್ಳುತ್ತಲೇ ‘ದ್ವಿತೀಯ PUC ಪರೀಕ್ಷೆ’ ಬರೆದಳು, ಇಂದು ಇಡೀ ‘ರಾಜ್ಯಕ್ಕೇ ಟಾಪರ್’ ಆದಳು!

09/04/2026 5:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೊಲೀಸ್ ಠಾಣೆಗೆ ಬರುವ ನೊಂದವರೊಂದಿಗೆ ಗೌರವದಿಂದ ವರ್ತಿಸಿ: ಗೃಹ ಸಚಿವ ಡಾ.ಜಿ ಪರಮೇಶ್ವರ್
KARNATAKA

ಪೊಲೀಸ್ ಠಾಣೆಗೆ ಬರುವ ನೊಂದವರೊಂದಿಗೆ ಗೌರವದಿಂದ ವರ್ತಿಸಿ: ಗೃಹ ಸಚಿವ ಡಾ.ಜಿ ಪರಮೇಶ್ವರ್

By kannadanewsnow0909/04/2026 5:25 PM

ದೇವನಹಳ್ಳಿ : ನೊಂದವರು, ಶೋಷಿತರಿಗೆ ನ್ಯಾಯ ಕೊಡಿಸಲು ಪೊಲೀಸ್ ಇಲಾಖೆ ಇದೆ. ಈ ನಿಟ್ಟಿನಲ್ಲಿ ಪೊಲೀಸರು ಕೆಲಸ ಮಾಡಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಹೇಳಿದರು.

ಬೆಂಗಳೂರು ನಗರದ ಚಿಕ್ಕಬಾಣವಾರ ಸಹಾಯಕ ಪೊಲೀಸ್ ಆಯುಕ್ತರ ಕಚೇರಿ, ಚಿಕ್ಕಬಾಣಾವರ ಸಂಚಾರ ಪೊಲೀಸ್ ಠಾಣೆಯ ನೂತನ ಕಟ್ಟಡ ನಿರ್ಮಾಣ, ಬೆಂಗಳೂರು ಗ್ರಾಮ ಜಿಲ್ಲೆಯ ಆವತಿಯಲ್ಲಿ ಭಾರತೀಯ ಮೀಸಲು ಪಡೆಯ ಶಂಕುಸ್ಥಾಪನೆ ಹಾಗೂ ವಾಯವ್ಯ ವಿಭಾಗ ಉಪ ಪೊಲೀಸ್ ಆಯುಕ್ತರ ಕಚೇರಿ, ಚಿಕ್ಕ ಬಾಣಾವರ ಪೊಲೀಸ್ ಠಾಣೆಯ ನೂತನ ಕಚೇರಿ,‌ ಈಶಾನ್ಯ ವಿಭಾಗ ಉಪ ಪೊಲೀಸ್ ಆಯುಕ್ತರ ಕಚೇರಿ, ದೇವನಹಳ್ಳಿ ಸಹಾಯಕ‌ ಪೊಲೀಸ್ ಆಯುಕ್ತರ ಕಚೇರಿ ಮತ್ತು ದೇವನಹಳ್ಳಿ ಪೊಲೀಸ್ ಠಾಣೆಯ ನೂತನವಾಗಿ ನಿರ್ಮಿಸಲಾದ ಕಚೇರಿ ಕಟ್ಟಡಗಳ ಉದ್ಘಾಟನೆಯನ್ನು ನೆರವೇರಿಸಿದರು. ಬಳಿಕ ದೇವನಹಳ್ಳಿಯಲ್ಲಿ‌ ನಡೆದ ವೇದಿಕೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪೊಲೀಸ್ ಇಲಾಖೆಯ 594 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಚಿಕ್ಕಬಾಣಾವಾರದಲ್ಲಿ 8.60 ಕೋಟಿ ರೂ, ಆವತಿಯಲ್ಲಿ 568 ಕೋಟಿ ರೂ. ಐಆರ್‌ಬಿ ಬೆಟಾಲಿಯನ್ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಇಷ್ಟೊಂದು ಮೊತ್ತದ ಅಭಿವೃದ್ಧಿ ಕಾರ್ಯ ನೆರವೇರಿಸಲಾಗಿದೆ. ರಾಜಕೀಯ ಉದ್ದೇಶದಿಂದ ಸರ್ಕಾರದಲ್ಲಿ ದುಡ್ಡು ಇಲ್ಲ ಎಂದು ಹೇಳುತ್ತಾರೆ ಎಂದರು.

ಪೊಲೀಸ್ ಇಲಾಖೆ ಶಿಸ್ತುಬದ್ಧಿನ ಇಲಾಖೆ. ಇಡೀ ದೇಶದಲ್ಲಿ ಶಿಸ್ತು, ಸಂಯ್ಮದಿಂದ ಜನಸ್ನೇಹಿಯಾಗಿ ಕೆಲಸ ಮಾಡುತ್ತಿದೆ. ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಅನೇಕ ಹೊಸ ಬದಲಾವಣೆಗಳನ್ನು ತಂದಿದೆ.‌ ಕರ್ನಾಟಕ ಪೊಲೀಸ್ ನ್ಯಾಯ ಒದಗಿಸುವುದರಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದರು.

ಯಾವ ಅಧಿಕಾರಿಯೂ ಕೂಡ ರಿಯಲ್ ಎಸ್ಟೇಟ್ ವ್ಯವಹಾರ ಮಾಡಬಾರದು. ಪೊಲೀಸ್ ಠಾಣೆಯಲ್ಲಿ ರಾಜೀ ಪಂಚಾಯಿತಿ ನಡೆಯಬಾರದು. ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಪೊಲೀಸ್ ಠಾಣೆಗೆ ಬಂದವರನ್ನು ಸರಿಯಾದ ರೀತಿಯಲ್ಲಿ ಗೌರವದಿಂದ ವರ್ತಿಸಬೇಕು ಎಂದರು.

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಎಲ್ಲ ರೀತಿಯ ಸವಲತ್ತು ನಮ್ಮ ಸರ್ಕಾರ ಒದಗಿಸಿದೆ. ಪೊಲೀಸ್ ಗೃಹ ಯೋಜನೆಯಡಿ 38 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತವಾದ ವಸತಿ ನಿರ್ಮಿಸಲಾಗುತ್ತಿದೆ. ಈವರೆಗೆ ಸಿಬ್ಬಂದಿಗಳಿಗೆ ಶೇ. 40ರಷ್ಟು ವಸತಿಗಳನ್ನು ನಿರ್ಮಿಸಿ ಕೊಡಲಾಗಿದೆ. ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮದಿಂದ ನೆನೆಗುದಿಗೆ ಬಿದ್ದಿದ್ದ ಪಿಎಸ್‌ಐ ನೇಮಕಾತಿಯನ್ನು ಪೂರ್ಣಗೊಳಿಸಿದ್ದೇವೆ. ಶೀಘ್ರದಲ್ಲಿ ಇನ್ನಷ್ಟು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ‌ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ, ಚಿಕ್ಕಬಳ್ಳಾಪುರ ಸಂಸದರಾದ ಡಾ. ಕೆ.ಸುಧಾಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಜಂಟಿ ಪೊಲೀಸ್ ಆಯುಕ್ತರಾದ ರಮೇಶ್ ಬಾನೋಥ್, ವಂಶಿಕೃಷ್ಣ, ಪ್ರೆಸ್ಟಿಜ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥರಾದ ನದೀಮ್ ಮತ್ತು ನಹೀಮ್ ರವರು ಉಪಸ್ಥಿತರಿದ್ದರು.

ಕಣ್ಣೀರು ಒರೆಸಿಕೊಳ್ಳುತ್ತಲೇ ‘ದ್ವಿತೀಯ PUC ಪರೀಕ್ಷೆ’ ಬರೆದಳು, ಇಂದು ಇಡೀ ‘ರಾಜ್ಯಕ್ಕೇ ಟಾಪರ್’ ಆದಳು!

BREAKING : ದ್ವಿತೀಯ ಪಿಯು ಫಲಿತಾಂಶದಲ್ಲಿ ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ : 3 ವಿಭಾಗದಲ್ಲೂ ಇವರೇ ನೋಡಿ ಟಾಪರ್!

Share. Facebook Twitter LinkedIn WhatsApp Email

Related Posts

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಅಂತಾರಾಷ್ಟ್ರೀಯ ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ, ಪ್ರಯೋಗ ಯಶಸ್ವಿ

09/04/2026 5:30 PM2 Mins Read

ಕಣ್ಣೀರು ಒರೆಸಿಕೊಳ್ಳುತ್ತಲೇ ‘ದ್ವಿತೀಯ PUC ಪರೀಕ್ಷೆ’ ಬರೆದಳು, ಇಂದು ಇಡೀ ‘ರಾಜ್ಯಕ್ಕೇ ಟಾಪರ್’ ಆದಳು!

09/04/2026 5:19 PM2 Mins Read

KSRTC ಅಂತರ್ ನಿಗಮ ವರ್ಗಾವಣೆಗೆ ಸಂಭವನೀಯ ಪಟ್ಟಿ ಪ್ರಕಟ: ಏ.16ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

09/04/2026 5:11 PM1 Min Read
Recent News

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಅಂತಾರಾಷ್ಟ್ರೀಯ ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ, ಪ್ರಯೋಗ ಯಶಸ್ವಿ

09/04/2026 5:30 PM

ಪೊಲೀಸ್ ಠಾಣೆಗೆ ಬರುವ ನೊಂದವರೊಂದಿಗೆ ಗೌರವದಿಂದ ವರ್ತಿಸಿ: ಗೃಹ ಸಚಿವ ಡಾ.ಜಿ ಪರಮೇಶ್ವರ್

09/04/2026 5:25 PM

ಕಣ್ಣೀರು ಒರೆಸಿಕೊಳ್ಳುತ್ತಲೇ ‘ದ್ವಿತೀಯ PUC ಪರೀಕ್ಷೆ’ ಬರೆದಳು, ಇಂದು ಇಡೀ ‘ರಾಜ್ಯಕ್ಕೇ ಟಾಪರ್’ ಆದಳು!

09/04/2026 5:19 PM

KSRTC ಅಂತರ್ ನಿಗಮ ವರ್ಗಾವಣೆಗೆ ಸಂಭವನೀಯ ಪಟ್ಟಿ ಪ್ರಕಟ: ಏ.16ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

09/04/2026 5:11 PM
State News
KARNATAKA

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಅಂತಾರಾಷ್ಟ್ರೀಯ ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ, ಪ್ರಯೋಗ ಯಶಸ್ವಿ

By kannadanewsnow0909/04/2026 5:30 PM KARNATAKA 2 Mins Read

ಬೆಂಗಳೂರು: ದೇಶೀಯ ವಿಮಾನ ಪ್ರಯಾಣಿಕರಿಗೆ ಈಗಾಗಲೇ ಅತ್ಯಾಧುನಿಕ ‘ಡಿಜಿ ಯಾತ್ರಾ’ ಸೌಲಭ್ಯವನ್ನು ಒದಗಿಸುತ್ತಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ…

ಪೊಲೀಸ್ ಠಾಣೆಗೆ ಬರುವ ನೊಂದವರೊಂದಿಗೆ ಗೌರವದಿಂದ ವರ್ತಿಸಿ: ಗೃಹ ಸಚಿವ ಡಾ.ಜಿ ಪರಮೇಶ್ವರ್

09/04/2026 5:25 PM

ಕಣ್ಣೀರು ಒರೆಸಿಕೊಳ್ಳುತ್ತಲೇ ‘ದ್ವಿತೀಯ PUC ಪರೀಕ್ಷೆ’ ಬರೆದಳು, ಇಂದು ಇಡೀ ‘ರಾಜ್ಯಕ್ಕೇ ಟಾಪರ್’ ಆದಳು!

09/04/2026 5:19 PM

KSRTC ಅಂತರ್ ನಿಗಮ ವರ್ಗಾವಣೆಗೆ ಸಂಭವನೀಯ ಪಟ್ಟಿ ಪ್ರಕಟ: ಏ.16ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

09/04/2026 5:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.