Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ಸರ್ಕಾರದ `ಸೌಲಭ್ಯ’ ಪಡೆಯಲು ನಿಮ್ಮ ಬಳಿ ಇರಲೇಬೇಕಾದ 4 `ಕಾರ್ಡ್’ ಗಳು ಇವು.!

10/01/2026 1:19 PM

ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ನೆನಪುಗಳ ಖಜಾನೆಯಾಗಲಿ: ಮದ್ದೂರು ಶಾಸಕ ಕೆ.ಎಂ.ಉದಯ್

10/01/2026 1:16 PM

ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರ ಪದ್ಮನಾಭನಗರದಲ್ಲಿ : ಮಾಜಿ ಸಂಸದ ಡಿಕೆ ಸುರೇಶ್ ಸ್ಪೋಟಕ ಆರೋಪ!

10/01/2026 1:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಮಳೆಗಾಲದಲ್ಲಿ ಸಕ್ರೀಯವಾಗಿ ಕಾರ್ಯ ನಿರ್ವಹಿಸಲು ಮರ ಕಟಾವು ತಂಡ ರಚನೆ
KARNATAKA

ಬೆಂಗಳೂರಲ್ಲಿ ಮಳೆಗಾಲದಲ್ಲಿ ಸಕ್ರೀಯವಾಗಿ ಕಾರ್ಯ ನಿರ್ವಹಿಸಲು ಮರ ಕಟಾವು ತಂಡ ರಚನೆ

By kannadanewsnow0911/05/2024 7:36 PM

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದ ವೇಳೆ ಧರೆಗುರುಳುವ ಮರ, ಮರದ ರೆಂಬೆ/ಕೊಂಬೆಗಳನ್ನು ತೆರವುಗೊಳಿಸುವ ಸಲುವಾಗಿ “ಮರ ಕಟಾವು ತಂಡಗಳು” ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಧರಗುರುಳಿದ ಮರಗಳನ್ನು ಕಾಲಮಿತಿಯೊಳಗಾಗಿ ತೆರವುಗೊಳಿಸಲಾಗುತ್ತಿದೆ ಎಂಬುದಾಗಿ ಬಿಬಿಎಂಪಿ ತಿಳಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಗರಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮಳೆಯಾಗುವ ವೇಳೆ ಮರಗಳು, ಮರದ ರೆಂಬೆ/ಕೊಂಬೆಗಳು ಧರೆಗುರುಳಲಿವೆ. ಇದರಿಂದ ನಾಗರೀಕರಿಗೆ ಹಾಗೂ ವಾಹನ ಸವಾರರಿಗೆ ಸಾಕಷ್ಟು ಸಮಸ್ಯೆಯಾಗಲಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಅರಣ್ಯ ವಿಭಾಗವು ಮರ ಕಟಾವು ತಂಡಗಳನ್ನು ನಿಯೋಜಿಸಿದೆ ಎಂದಿದೆ.

ಪಾಲಿಕೆಯ ನಿಯಂತ್ರಣ ಕೊಠಡಿಗಳಿಗೆ ಮರ, ಮರದ ರೆಂಬೆ/ಕೊಂಬೆಗಳು ಬಿದ್ದಂತಹ ದೂರುಗಳು ಬಂದ ಕೂಡಲೆ, ಆ ದೂರುಗಳನ್ನು ಆಯಾ ವಲಯದ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಿದ್ದಾರೆ. ಅನಂತರ ಅಧಿಕಾರಿಗಳು ಮರ, ಮರದ ರೆಂಬೆ/ಕೊಂಬೆ ಬಿದ್ದಿರುವ ಸ್ಥಳಕ್ಕೆ ಮರ ಕಟಾವು ತಂಡಗಳನ್ನು ಕಳುಹಿಸಿ ಧರೆಗುರುಳಿದ ಮರಗಳನ್ನು ಕಟಾವು ಮಾಡಿ ನಾಗರೀಕರು/ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿದ್ದಾರೆ ಎಂದು ತಿಳಿಸಿದೆ.

39 ಮರ ಕಟಾವು ತಂಡಗಳ ನಿಯೋಜನೆ

ಪಾಲಿಕೆ ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳಿದ್ದು, ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ 28 ಮರ ಕಟಾವು ತಂಡಗಳು ಕಾರ್ಯನಿರ್ವಹಿಸುತ್ತಿವೆ. ಇದರ ಜೊತೆಗೆ ತುರ್ತಾಗಿ ಮರಗಳನ್ನು ತೆರವುಗೊಳಿಸುವ ಸಲುವಾಗಿ ಹೆಚ್ಚುವರಿಯಾಗಿ 11 ತಂಡಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಪ್ರತಿ ತಂಡದಲ್ಲೂ ಏಳು ಕಾರ್ಮಿಕರು, ಒಬ್ಬರು ಮೇಲ್ವಿಚಾರಕರು ಇರುತ್ತಾರೆ. ಮರಗಳನ್ನು ತೆರವುಗೊಳಿಸುವ ಅವಶ್ಯಕತೆಯಿರುವ ಗರಗಸ, ಕೊಂಬೆಗಳನ್ನು ತುಂಡರಿಸುವ ಯಂತ್ರ, ಹಾರೆ, ಹಗ್ಗ ಸೇರಿದಂತೆ ಇನ್ನಿತರೆ ಸಲಕರಣೆಗಳಿರಲಿವೆ. ಜೊತೆಗೆ ಕಟಾವು ಮಾಡಿದ ಮರದ ತುಂಡುಗಳ ಸಾಗಣೆಗಾಗಿ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದೆ.

5 ಬೈಕ್ ತಂಡಗಳ ನಿಯೋಜನೆ

ಮಳೆಗಾಲದಲ್ಲಿ ಬಿದ್ದಂತಹ ಮರಗಳನ್ನು ತೆರವುಗೊಳಿಸುವ ಸಲುವಾಗಿ ಈ ಬಾರಿ ವಿನೂತನವಾಗಿ 5 ಬೈಕ್(ದ್ವಿಚಕ್ರ ತಂಡ) ತಂಡಗಳನ್ನು ನಿಯೋಜಿಸಿಕೊಳ್ಳಲಾಗಿದೆ. ಅದರಂತೆ ರಸ್ತೆ ಮೇಲೆ ಬಿದ್ದಂತಹ ಅಥವಾ ತುರ್ತಾಗಿ ಮರಗಳನ್ನು ತೆಗೆಯಬೇಕಾದ ಸ್ಥಳಗಳಿಗೆ ಬೈಕ್ ತಂಡಗಳು ಕೊಂಬೆ ಕಟಾವು ಯಂತ್ರವನ್ನು ತೆಗೆದುಕೊಂಡು ಸ್ಥಳಕ್ಕೆ ತೆರಳಿ ಮರವನ್ನು ಕಟಾವು ಮಾಡಿ ತೆರವುಗೊಳಿಸಲಿದ್ದಾರೆ.

ಕ್ರೇನ್, ಜೆಸಿಬಿಗಳ ನಿಯೋಜನೆ

ಮಳೆಗಾಲದ ವೇಳೆ ಬೃಹತ್ ಮರಗಳು ಬಿದ್ದರೆ ಅವುಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸುವ ಸಲುವಾಗಿ ಪಾಲಿಕೆ ಅರಣ್ಯ ವಿಭಾಗವು 2 ಕ್ರೇನ್ ಹಾಗೂ 2 ಜೆಸಿಬಿ ಗಳನ್ನು ನಿಯೋಜನೆ ಮಾಡಿಕೊಂಡಿದೆ. ಅಲ್ಲದೆ ಅದನ್ನು ಸಾಗಾಣೆ ಮಾಡುವ ಸಲುವಾಗಿ 8 ಟ್ರ‍್ಯಾಕ್ಟರ್ ಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ.

ಕಟಾವು ಮಾಡಿದ ಮರದ ದಿಮ್ಮಿಗಳ ವಿಲೇವಾರಿಗೆ ಡಂಪಿಂಗ್ ಯಾರ್ಡ್ ವ್ಯವಸ್ಥೆ

ಧರೆಗುಳಿದ ಮರಗಳನ್ನು ಕಟಾವು ಮಾಡಿದ ನಂತರ ಮರದ ದಿಮ್ಮಿಗಳು, ರೆಂಬೆ, ಕೊಂಬೆಗಳ ವಿಲೇವಾರಿಗಾಗಿ ವಲಯಕ್ಕೆ ಒಂದರಂತೆ ಆಯಾ ವಲಯಗಳಲ್ಲಿ 8 ಡಂಪಿಂಗ್ ಯಾರ್ಡ್ಗಳಿದ್ದು, ಹೆಚ್ಚುವರಿಯಾಗಿ ತಾತ್ಕಾಲಿಕವಾಗಿ 6 ಕಡೆ ಡಂಪಿಂಗ್ ಯಾರ್ಡ್ಗಳನ್ನು ಗುರುತಿಸಲಾಗಿದೆ. ಈ ಸ್ಥಳಗಳಲ್ಲಿ ಮರದ ದಿಮ್ಮಿ/ರೆಂಬೆ/ಕೊಂಬೆಗಳನ್ನು ವಿಲೇವಾರಿ ಮಾಡಲಾಗುತ್ತದೆ.

271 ಮರ, 483 ರೆಂಬೆ/ಕೊಂಬೆಗಳ ತೆರವು

ನಗರದಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದ್ದು, ದಿನಾಂಕ: 06.05.2024 ರಿಂದ 10.05.2024 ರವರೆಗೆ 271 ಮರ ಹಾಗೂ 483 ರೆಂಬೆ/ಕೊಂಬೆಗಳು ಧರೆಗುರುಳಿದಿವೆ. ಮರ ಕಟಾವು ತಂಡಗಳ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ನಾಗರೀಕರಿಂದ ದೂರುಗಳು ಬಂದ ಕೂಡಲೆ ಸ್ಥಳಕ್ಕೆ ತೆರಳಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮರ, ಮರದ ರೆಂಬೆ/ಕೊಂಬೆ ತೆರವುಗೊಳಿಸಿರುವ ಹಾಗೂ ಮರ ಕಟಾವು ತಂಡಗಳ ವಿವರ ಪ್ರತಿಯನ್ನು ಲಗತ್ತಿಸಲಾಗಿದೆ.

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಸರ್ಕಾರದ `ಸೌಲಭ್ಯ’ ಪಡೆಯಲು ನಿಮ್ಮ ಬಳಿ ಇರಲೇಬೇಕಾದ 4 `ಕಾರ್ಡ್’ ಗಳು ಇವು.!

10/01/2026 1:19 PM2 Mins Read

ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ನೆನಪುಗಳ ಖಜಾನೆಯಾಗಲಿ: ಮದ್ದೂರು ಶಾಸಕ ಕೆ.ಎಂ.ಉದಯ್

10/01/2026 1:16 PM2 Mins Read

ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರ ಪದ್ಮನಾಭನಗರದಲ್ಲಿ : ಮಾಜಿ ಸಂಸದ ಡಿಕೆ ಸುರೇಶ್ ಸ್ಪೋಟಕ ಆರೋಪ!

10/01/2026 1:07 PM1 Min Read
Recent News

ಸಾರ್ವಜನಿಕರೇ ಗಮನಿಸಿ : ಸರ್ಕಾರದ `ಸೌಲಭ್ಯ’ ಪಡೆಯಲು ನಿಮ್ಮ ಬಳಿ ಇರಲೇಬೇಕಾದ 4 `ಕಾರ್ಡ್’ ಗಳು ಇವು.!

10/01/2026 1:19 PM

ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ನೆನಪುಗಳ ಖಜಾನೆಯಾಗಲಿ: ಮದ್ದೂರು ಶಾಸಕ ಕೆ.ಎಂ.ಉದಯ್

10/01/2026 1:16 PM

ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರ ಪದ್ಮನಾಭನಗರದಲ್ಲಿ : ಮಾಜಿ ಸಂಸದ ಡಿಕೆ ಸುರೇಶ್ ಸ್ಪೋಟಕ ಆರೋಪ!

10/01/2026 1:07 PM

BREAKING: ಜೈಪುರದಲ್ಲಿ ಮೃತ್ಯು ರೂಪದಲ್ಲಿ ಬಂದ ಐಷಾರಾಮಿ ಕಾರು: ಡಿವೈಡರ್‌ಗೆ ಡಿಕ್ಕಿಯಾಗಿ 16 ಜನರ ಮೇಲೆ ಹರಿದ ವಾಹನ | Accident

10/01/2026 1:06 PM
State News
KARNATAKA

ಸಾರ್ವಜನಿಕರೇ ಗಮನಿಸಿ : ಸರ್ಕಾರದ `ಸೌಲಭ್ಯ’ ಪಡೆಯಲು ನಿಮ್ಮ ಬಳಿ ಇರಲೇಬೇಕಾದ 4 `ಕಾರ್ಡ್’ ಗಳು ಇವು.!

By kannadanewsnow5710/01/2026 1:19 PM KARNATAKA 2 Mins Read

ಭಾರತ ಸರ್ಕಾರವು ಎಲ್ಲಾ ಜನರಿಗೆ ಅನೇಕ ರೀತಿಯ ಕಾರ್ಡ್‌ಗಳನ್ನು ನೀಡುತ್ತದೆ. ವಿವಿಧ ಸರ್ಕಾರಿ ಯೋಜನೆಗಳು ಮತ್ತು ಸೇವೆಗಳ ಪ್ರಯೋಜನಗಳನ್ನು ಪಡೆಯಲು…

ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ನೆನಪುಗಳ ಖಜಾನೆಯಾಗಲಿ: ಮದ್ದೂರು ಶಾಸಕ ಕೆ.ಎಂ.ಉದಯ್

10/01/2026 1:16 PM

ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರ ಪದ್ಮನಾಭನಗರದಲ್ಲಿ : ಮಾಜಿ ಸಂಸದ ಡಿಕೆ ಸುರೇಶ್ ಸ್ಪೋಟಕ ಆರೋಪ!

10/01/2026 1:07 PM

ALERT : ಮಹಿಳೆಯರು ತಪ್ಪದೇ ಓದಲೇಬೇಕು : `ಯೋನಿ’ ಆರೋಗ್ಯದ ಬಗ್ಗೆ ನೀವು ತಿಳಿದುಕೊಳ್ಳಬೇಕಾದ 10 ಪ್ರಮುಖ ವಿಷಯಗಳು..!

10/01/2026 12:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.