ಕೆಎನ್‌ಎನ್‌ಡಿಜಿಟಲ್‌ ಡೆಸ್ಕ್‌ : ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಭಾನುವಾರ ಮಧ್ಯ ರಾತ್ರಿ ಸಮಾಜವಾದಿ ಪಕ್ಷದ ಜಿಲ್ಲಾ ಅಧ್ಯಕ್ಷ ದೇವೇಂದ್ರ ಸಿಂಗ್ ಯಾದವ್ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದ್ದು, ಸುಮಾರು 500 ಮೀಟರ್ ದೂರ ಎಳೆದೊಯ್ದಿದೆ. ಸಧ್ಯ ಈ ವಿಡಿಯೋ ಸಾಮಾಜೀಕ ತಾಣದಲ್ಲಿ ವೈರಲ್‌ ಆಗ್ತಿದೆ.

ಅಪಘಾತದ ಸಮಯದಲ್ಲಿ ರಾಜಕಾರಣಿ ಕಾರಿನಲ್ಲಿ ಒಬ್ಬರೇ ಇದ್ದು, ಯಾವುದೇ ಗಂಭೀರ ಗಾಯಗಳಾಗಿಲ್ಲ. ಆದಾಗ್ಯೂ, ಪೊಲೀಸರು ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದು, ಟ್ರಕ್ ಚಾಲಕನನ್ನ ಬಂಧಿಸಿದ್ದಾರೆ.

“ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ, ನಂತರ ಆ ಕಾರನ್ನ 500 ಮೀಟರ್ʼಗಿಂತಲೂ ಹೆಚ್ಚು ದೂರಕ್ಕೆ ಎಳೆದುಕೊಂಡು ಹೋಗಿದೆ. ಟ್ರಕ್ ಚಾಲಕನನ್ನ ಬಂಧಿಸಲಾಗಿದೆ” ಎಂದು ಮೈನ್ಪುರಿಯ ಪೊಲೀಸ್ ಅಧೀಕ್ಷಕ (ಎಸ್ಪಿ) ಕಮಲೇಶ್ ದೀಕ್ಷಿತ್ ತಿಳಿಸಿದ್ದಾರೆ.

ಇನ್ನು ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಡಿಯೋ ನೋಡಿ..!

Share.
Exit mobile version