Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ : 1.2 ಕೋಟಿ ಮೌಲ್ಯದ ಡ್ರಗ್ಸ್, ಆನೆದಂತದ ವಿಗ್ರಹ ಜಪ್ತಿ!

15/01/2026 5:06 AM

ಪ್ರತಿಭಾ ಕಾರಂಜಿ ಸ್ಪರ್ಧೆ: ಮದ್ದೂರಿನ ಪೂರ್ಣ ಪ್ರಜ್ಞಾ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

14/01/2026 10:24 PM

ಸರ್ಕಾರಿ ಜಮೀನು ಕಬಳಿಕೆ : ಮಂಡ್ಯದ ನಾಗಮಂಗಲ ತಾಲೂಕು ಕಛೇರಿಯ ನಾಲ್ವರು ಸರ್ಕಾರಿ ನೌಕರರು ಅಮಾನತು

14/01/2026 10:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GST ಸಂಗ್ರಹಣೆಯಲ್ಲಿ ದೇಶದಲ್ಲಿ ಪ್ರಥಮ ಸ್ಥಾನ ಗಳಿಸಲು ಪ್ರಯತ್ನಿಸಿ: ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ
KARNATAKA

GST ಸಂಗ್ರಹಣೆಯಲ್ಲಿ ದೇಶದಲ್ಲಿ ಪ್ರಥಮ ಸ್ಥಾನ ಗಳಿಸಲು ಪ್ರಯತ್ನಿಸಿ: ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ

By kannadanewsnow0917/05/2025 4:17 PM

ಬೆಂಗಳೂರು : ಜಿಎಸ್ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಎರಡನೇ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ತಿಳಿಸಿದರು.

ಅವರು ಇಂದು ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ

ಸಂಘವು 50 ವರ್ಷಗಳ ಮೈಲಿಗಲ್ಲನ್ನು ಸಾಧಿಸಿದ್ದು, ಇದಕ್ಕಾಗಿ ಶ್ರಮಿಸಿದ ಸಂಘದ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆಗಳು. ನಿಮ್ಮೆಲ್ಲರ ಸಹಕಾರದಿಂದ ನಾನು ಆರ್ಥಿಕ ಇಲಾಖೆಯ ಜವಾಬ್ದಾರಿಯನ್ನು ದೀರ್ಘ ಕಾಲದವರೆಗೆ ನಿಭಾಯಿಸಲು ಸಾಧ್ಯವಾಯಿತು. ನಾನು ಹಣಕಾಸು ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿ ಹಣಕಾಸು ಇಲಾಖೆಯ ಕಾರ್ಯಭಾರವನ್ನು ನಿರ್ವಹಿಸಿದ್ದೇನೆ. ಈಗ ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ ಪೂರೈಸಿದ್ದು, ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದರು.

ತೆರಿಗೆ ಸಂಗ್ರಹಣೆಯಲ್ಲಿ ಗುರಿ ಸಾಧನೆ ಆಗಬೇಕು

ತೆರಿಗೆ ಸಂಗ್ರಹಣೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಪ್ರಮುಖ ಪಾತ್ರ ವಹಿಸುತ್ತಿದ್ದು, ಇದಕ್ಕಾಗಿ ಎಲ್ಲ ಅಧಿಕಾರಿಗಳಿಗೆ ಅಭಿನಂದನೆಗಳು. ಜವಾಬ್ದಾರಿಯುತ ಅಧಿಕಾರಿಗಳಿಂದ ಉತ್ತಮ ತೆರಿಗೆ ಸಂಗ್ರಹಣೆಯಾಗುತ್ತದೆ. ವಾಣಿಜ್ಯ ತೆರಿಗೆ ಇಲಾಖೆಯಿಂದ ಹೆಚ್ಚಿನ ಮೊತ್ತದ ತೆರಿಗೆ ಸಂಗ್ರಹಣೆ ಸಾಧ್ಯವಾಗುತ್ತದೆ. ಕಳೆದ ವರ್ಷ ತೆರಿಗೆ ಸಂಗ್ರಹಣೆಗೆ 1,03,000 ಕೋಟಿಗಳ ಗುರಿನಿಗದಿಪಡಿಸಲಾಗಿದ್ದು, ಹೆಚ್ಚುವರಿ 17000 ಕೋಟಿಗಳ ತೆರಿಗೆ ಸಂಗ್ರಹಣೆಯನ್ನು ಸಾಧಿಸಲಾಗಿತ್ತು. ಈ ವರ್ಷ ತೆರಿಗೆ ಸಂಗ್ರಹಣೆಗೆ 1,20,000 ಕೋಟಿಗಳ ಗುರಿಯನ್ನು ನೀಡಲಾಗಿದ್ದು, ಅಧಿಕಾರಿಗಳು ಗುರಿಮೀರಿ ಸಾಧನೆ ಮಾಡಬೇಕಿದೆ. ಈ ವರ್ಷ 409000 ಕೋಟಿ ರೂ. ಗಳ ಬಜೆಟ್ ಮಂಡಿಸಲಾಗಿದ್ದು, ಇದರಲ್ಲಿ ಗ್ಯಾರಂಟಿ ಯೋಜನೆಗಳಿಗೆ 50,018 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಈವರೆಗೆ 90,000 ಕೋಟಿ ರೂ.ಗಳನ್ನು ಗ್ಯಾರಂಟಿಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ಗ್ಯಾರಂಟಿಗಳಿಗೆ ಹಣ ಪೂರೈಸಲಾಗದೇ ರಾಜ್ಯ ಆರ್ಥಿಕ ದಿವಾಳಿಯಾಗುತ್ತದೆ ಎಂದು ವಿರೋಧಪಕ್ಷದವರು ಟೀಕಿಸಿದ್ದರು. ಸರ್ಕಾರದ ಈ ಯಶಸ್ಸಿಗೆ ಇಲಾಖೆಯ ಅಧಿಕಾರಿಗಳ ಶ್ರಮ ಅಡಗಿದೆ ಎಂದರು.

ತೆರಿಗೆ ಪ್ರಕ್ರಿಯೆಯಲ್ಲಿ ಸುಧಾರಣೆ ತರಲು ಸರ್ಕಾರ ಬದ್ಧ

ನಾನು ಹಣಕಾಸಿನ ಮಂತ್ರಿಯಾಗಿದ್ದರೂ ಸಹ ತೆರಿಗೆ ಅಧಿಕಾರಿಗಳ ಕಾರ್ಯನಿರ್ವಹಣೆಯಲ್ಲಿ ಅನಗತ್ಯ ಮದ್ಯಪ್ರವೇಶ ಮಾಡಲು ಬಯಸುವುದಿಲ್ಲ. ಆದರೆ ಅಧಿಕಾರಿಗಳು ಇಲಾಖೆಗೆ ನೀಡಿರುವ ತೆರಿಗೆ ಸಂಗ್ರಹಣೆಯ ಗುರಿಯನ್ನು ಸಾಧಿಸಲು ಪ್ರಯತ್ನಿಸಬೇಕು. ಬೆಂಗಳೂರಿನಲ್ಲಿ ತೆರಿಗೆ ಸೋರಿಕೆ ಹೆಚ್ಚಿನ ಮಟ್ಟದಲ್ಲಿದೆ. ಕರ್ನಾಟಕ ತೆರಿಗೆ ಸಂಗ್ರಹಣೆಯಲ್ಲಿ ಮುಂಚೂಣಿಯಲ್ಲಿದೆ. ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ಹೆಚ್ಚಿನ ಸುಧಾರಣೆಗಳನ್ನು ತರಲು ಸರ್ಕಾರ ಬದ್ಧವಾಗಿದೆ. ತೆರಿಗೆ ಅಧಿಕಾರಿಗಳ ಸಂಘದ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸಲಾಗುವುದು. ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಎಂದಿಗೂ ಸ್ಪಂದಿಸುತ್ತದೆ. ಅಂತೆಯೇ ಕರ್ತವ್ಯಲೋಪ ಎಸಗುವ ಅಧಿಕಾರಿ ನೌಕರರ ಮೇಲೆ ಶಿಸ್ತಿನ ಕ್ರಮವನ್ನೂ ಸರ್ಕಾರ ತೆಗೆದುಕೊಳ್ಳುತ್ತದೆ ಎಂದರು.

ಗಾಯಗೊಂಡಿದ್ದ ನಾಯಿಯನ್ನು ಕೈಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹುಡುಗರು: ಇಲ್ಲಿದೆ ನೋಡಿ ವೀಡಿಯೋ

BIG NEWS : ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ‘ರೇಷನ್ ಕಾರ್ಡ್’ನಲ್ಲಿ ಹೆಸರು, ಸೇರ್ಪಡೆ ತಿದ್ದುಪಡಿಗೆ ಮತ್ತೆ ಅವಕಾಶ | Ration Card

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ : 1.2 ಕೋಟಿ ಮೌಲ್ಯದ ಡ್ರಗ್ಸ್, ಆನೆದಂತದ ವಿಗ್ರಹ ಜಪ್ತಿ!

15/01/2026 5:06 AM1 Min Read

ಪ್ರತಿಭಾ ಕಾರಂಜಿ ಸ್ಪರ್ಧೆ: ಮದ್ದೂರಿನ ಪೂರ್ಣ ಪ್ರಜ್ಞಾ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

14/01/2026 10:24 PM1 Min Read

ಸರ್ಕಾರಿ ಜಮೀನು ಕಬಳಿಕೆ : ಮಂಡ್ಯದ ನಾಗಮಂಗಲ ತಾಲೂಕು ಕಛೇರಿಯ ನಾಲ್ವರು ಸರ್ಕಾರಿ ನೌಕರರು ಅಮಾನತು

14/01/2026 10:21 PM1 Min Read
Recent News

BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ : 1.2 ಕೋಟಿ ಮೌಲ್ಯದ ಡ್ರಗ್ಸ್, ಆನೆದಂತದ ವಿಗ್ರಹ ಜಪ್ತಿ!

15/01/2026 5:06 AM

ಪ್ರತಿಭಾ ಕಾರಂಜಿ ಸ್ಪರ್ಧೆ: ಮದ್ದೂರಿನ ಪೂರ್ಣ ಪ್ರಜ್ಞಾ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

14/01/2026 10:24 PM

ಸರ್ಕಾರಿ ಜಮೀನು ಕಬಳಿಕೆ : ಮಂಡ್ಯದ ನಾಗಮಂಗಲ ತಾಲೂಕು ಕಛೇರಿಯ ನಾಲ್ವರು ಸರ್ಕಾರಿ ನೌಕರರು ಅಮಾನತು

14/01/2026 10:21 PM

ಶಿವಮೊಗ್ಗ: ‘ಸಿಗಂದೂರು ಜಾತ್ರಾ ಮಹೋತ್ಸವ’ಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ವಿದ್ಯುಕ್ತ ಚಾಲನೆ

14/01/2026 10:07 PM
State News
KARNATAKA

BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ : 1.2 ಕೋಟಿ ಮೌಲ್ಯದ ಡ್ರಗ್ಸ್, ಆನೆದಂತದ ವಿಗ್ರಹ ಜಪ್ತಿ!

By kannadanewsnow0515/01/2026 5:06 AM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಕೇಸ್ ನಲ್ಲಿ ಮಾದಕ ವಸ್ತುಗಳು ಮತ್ತು ಆನೆದಂತ ವಿಗ್ರಹಗಳನ್ನು…

ಪ್ರತಿಭಾ ಕಾರಂಜಿ ಸ್ಪರ್ಧೆ: ಮದ್ದೂರಿನ ಪೂರ್ಣ ಪ್ರಜ್ಞಾ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

14/01/2026 10:24 PM

ಸರ್ಕಾರಿ ಜಮೀನು ಕಬಳಿಕೆ : ಮಂಡ್ಯದ ನಾಗಮಂಗಲ ತಾಲೂಕು ಕಛೇರಿಯ ನಾಲ್ವರು ಸರ್ಕಾರಿ ನೌಕರರು ಅಮಾನತು

14/01/2026 10:21 PM

ಶಿವಮೊಗ್ಗ: ‘ಸಿಗಂದೂರು ಜಾತ್ರಾ ಮಹೋತ್ಸವ’ಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ವಿದ್ಯುಕ್ತ ಚಾಲನೆ

14/01/2026 10:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.