ತುಮಕೂರು: ಇಂದು ಶಿರಾ ತಾಲೂಕಿನ ಬಾಲೇನಹಳ್ಳಿ ಬಳಿಯಲ್ಲಿ ನಡೆದಿದ್ದಂತ ಕ್ರೂಸರ್ –ಲಾರಿ ಮಧ್ಯದ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಮತ್ತೊಬ್ಬರು ಸಾವಿನ್ನಪ್ಪಿದ್ದು, ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

BIG NEWS: ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧವಿಲ್ಲ – ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬಾಲೇನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದ್ದಂತ ಕ್ರೂಸರ್-ಲಾರಿ ನಡುವಿನ ಭೀಕರ ಅಪಘಾತದಲ್ಲಿ, ಸ್ಥಳದಲ್ಲಿಯೇ 9 ಮಂದಿ ಸಾವನ್ನಪ್ಪಿದ್ದರು. ಈ ಅಪಘಾತದಲ್ಲಿ ಗಾಯಗೊಂಡಿದ್ದಂತ ಇಬ್ಬರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಹೀಗೆ ಚಿಕಿತ್ಸೆ ಪಡೆಯುತ್ತಿದ್ದಂತ ಓರ್ವ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

BIGG NEWS : ಬಿಜೆಪಿ ಸರ್ಕಾರ 40% ಕಮಿಷನ್ ಅನ್ನು 50% ಗೆ ಏರಿಸಿ ಭ್ರಷ್ಟಾಚಾರದಲ್ಲಿ ಪ್ರಮೋಷನ್ ಪಡೆದಿದೆ : ರಣದೀಪ್ ಸಿಂಗ್ ಸುರ್ಜೆವಾಲಾ

ಅಂದಹಾಗೇ ಇಂದು ಶಿರಾ ಬಳಿ ನಡೆದಿದ್ದಂತ ಕ್ರೂಸರ್ ಕಾರಿನ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೇ 13 ಮಂದಿಗಾಯಗೊಂಡಿದ್ದರು. ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಸೇರಿದಂತೆ ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

BIG NEWS: ತುಮಕೂರು ಅಪಘಾತದಲ್ಲಿ 9 ಜನರ ಸಾವಿನ ಹಿಂದಿನ ರಹಸ್ಯ ಬಯಲು: ಏನದು ಗೊತ್ತಾ.? | Tumkur Accident

ಮೃತರನ್ನು ಶಿರಾ ತಾಲೂಕಿನ ಕರಕುಂದಾ ಗ್ರಾಮದ ಸುಜಾತಾ(25) ಮತ್ತು ವಿನೋದ (3), ವಡವಟ್ಟಿ ಗ್ರಾಮದ ಕ್ರೂಸರ್ ಚಾಲಕ ಕೃಷ್ಣಪ್ಪ(25), ಮೀನಾಕ್ಷಿ (28), ಕಸನದೊಡ್ಡಿ ಗ್ರಾಮದ ಬಸಮ್ಮ(50), ಪ್ರಭು ಎಂದು ಗುರುತಿಸಲಾಗಿದೆ. ಒಟ್ಟು 10 ಮಂದಿ ಈ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

Share.
Exit mobile version