ತುಮಕೂರು : ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿಯೊಬ್ಬ ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಕೆರೆಯಲ್ಲಿ ಸಾವನ್ನಪ್ಪಿರುವ ಘಟನೆ ಘಟನೆ ತುಮಕೂರು ತಾಲೂಕಿನ ಕೊಡಿಗೇನಹಳ್ಳಿ ಬಳಿ ನಡೆದಿದೆ.
ರಂಗನಹಳ್ಳಿ ಗ್ರಾಮದ ಹರ್ಷವರ್ಧನ (14) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಹರ್ಷವರ್ಧನ ಕೊಡಿಗೇನಹಳ್ಳಿ ಸರ್ವೋದಯ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಎನ್ನಲಾಗಿದೆ. ಇಂದು ಮಧ್ಯಾಹ್ನ ಶಾಲೆಯಲ್ಲಿ ಚಿತ್ರಕಲೆ ಪರೀಕ್ಷೆ ಬರೆದಿದ್ದ.
ಮಧ್ಯಾಹ್ನ 1.30ಕ್ಕೆ ಶಾಲೆ ಬಿಟ್ಟ ನಂತರ ಸ್ನೇಹಿತರ ಜೊತೆಗೂಡಿ ಜಯಮಂಗಲಿ ಸಮೀಪದಲ್ಲಿರುವ ಸುಮಾರು 15ರಿಂದ 20 ಅಡಿ ಆಳದ ಗುಂಡಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ, ನ್ಯಾಯ ಒದಗಿಸಬೇಕು ಎಂದು ಹರ್ಷವರ್ಧನನ ಪೋಷಕರು ಪೊಲೀಸರನ್ನು ಒತ್ತಾಯಿಸಿದರು.