Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪುತ್ತಿಲ್, ಪ್ರಭಾಕರ್ ಭಟ್ ಗೆ ನೋಟಿಸ್ ವಿಚಾರ : ತಾಲಿಬಾನಿ ಸರಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ : ಮಾಜಿ ಸಂಸದ ಪ್ರತಾಪ್ ಸಿಂಹ

02/06/2025 4:28 PM

ಬಾನು ಮುಷ್ತಾಕ್, ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

02/06/2025 4:17 PM

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,138 ಗ್ರಾಮಗಳಿಗೆ ‘ತುಂಗಭದ್ರ’ ಹಿನ್ನೀರು ಪೂರೈಕೆ
KARNATAKA

GOOD NEWS: ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,138 ಗ್ರಾಮಗಳಿಗೆ ‘ತುಂಗಭದ್ರ’ ಹಿನ್ನೀರು ಪೂರೈಕೆ

By kannadanewsnow0910/07/2024 4:42 PM

ಪಾವಗಡ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆ ಹಮ್ಮಿಕೊಂಡಿರುವ ಪಾವಗಡ ಬಹುಗ್ರಾಮ ನೀರು ಪೂರೈಕೆ ಕಾರ್ಯಕ್ರಮದಡಿ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿನ 1,138 ಗ್ರಾಮಗಳು ಹಾಗೂ 2 ಪಟ್ಟಣಗಳಿಗೆ ಶೀಘ್ರದಲ್ಲಿಯೇ ಕುಡಿಯುವ ನೀರು ಸರಬರಾಜು ಮಾಡುವ ಪ್ರಕ್ರಿಯೆಗೆ ಚಾಲನೆ ಸಿಗಲಿದ್ದು, ಈ ಭಾಗದ ಜನರ ಬಹು ದಿನಗಳ ಕನಸು ನನಸಾಗಲಿದೆ.

ತುಮಕೂರು ಜಿಲ್ಲೆಯ ಪಾವಗಡ ಹಾಗೂ ಕ್ವಾದಿಗುಂಟೆ ಬಳಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಬಹುಗ್ರಾಮ ನೀರು ಸರಬರಾಜು ಯೋಜನೆ ಮೂಲಕ ತುಂಗಭದ್ರ ಹಿನ್ನೀರು ಬಳಸಿ ಚಿಲಕನಹಟ್ಟಿ, ಕೂಡ್ಲಿಗಿ, ಮೊಳಕಾಲ್ಮೂರು, ಚಳ್ಳಕೆರೆ, ತುರವನೂರು ತಾಲ್ಲೂಕುಗಳ 1,138 ಗ್ರಾಮಗಳು ಹಾಗೂ ಎರಡು ಪಟ್ಟಣಗಳ 17.21 ಲಕ್ಷ ಜನಕ್ಕೆ ನೀರು ಪೂರೈಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಚಿಲಕನಹಟ್ಟಿ ಮತ್ತು 14 ಗ್ರಾಮೀಣ ವಸತಿ ಪ್ರದೇಶಗಳು ಹಾಗೂ ಕೂಡ್ಲಿಗಿ ತಾಲ್ಲೂಕಿನ ಉಜ್ಜಿನಿ ಮತ್ತು 215 ಗ್ರಾಮೀಣ ವಸತಿ ಪ್ರದೇಶಗಳು; ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣ ಮತ್ತು 132 ಗ್ರಾಮೀಣ ವಸತಿ ಪ್ರದೇಶಗಳು, ಚಳ್ಳಕೆರೆ ತಾಲ್ಲೂಕಿನ 360 ಗ್ರಾಮೀಣ ವಸತಿ ಪ್ರದೇಶಗಳು ಹಾಗೂ ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ತಾಲ್ಲೂಕಿನ ತುರವನೂರು ಮತ್ತು 58 ಗ್ರಾಮೀಣ ವಸತಿ ಪ್ರದೇಶಗಳು ಹಾಗೂ ಪಾವಗಡ ಪಟ್ಟಣ ಹಾಗೂ ತಾಲ್ಲೂಕಿನ 357 ಗ್ರಾಮೀಣ ವಸತಿ ಪ್ರದೇಶಗಳು ಸೇರಿದಂತೆ 1,138 ಗ್ರಾಮಗಳು ಹಾಗೂ 2 ಪಟ್ಟಣಗಳು ತುಂಗಭದ್ರ ನೀರಿನ ಸೌಲಭ್ಯ ಪಡೆಯಲಿವೆ ಎಂದು ಸಚಿವರು ತಿಳಿಸಿದರು.

ಚಿಲಕನಹಟ್ಟಿ, ಕೂಡ್ಲಿಗಿ, ಮೊಳಕಾಲ್ಮೂರು, ಚಳ್ಳಕೆರೆ, ತುರವನೂರು ಹಾಗೂ ಪಾವಗಡ ನೀರು ಸರಬರಾಜು ಯೋಜನೆಯ ಕಾಮಗಾರಿಗಳು ಶೇ.95 ಭಾಗದಷ್ಟು ಮುಕ್ತಾಯಗೊಂಡಿದ್ದು, ಕೊಳವೆ ಮಾರ್ಗಗಳ ಅಳವಡಿಕೆ ಕಾಮಗಾರಿಗಳು ಪೂರ್ಣಗೊಂಡಿರುತ್ತದೆ. ಎಲ್ಲ ಯೋಜನೆಗಳ ವಿದ್ಯುತ್‌ ಸರಬರಾಜು ಮಂಜೂರಾತಿಗಳು (ಸಿಇಐಜಿ ಮತ್ತು ಬೆಸ್‌ಕಾಂ) ದೊರೆತಿದ್ದು, ಈ ಬೃಹತ್‌ ಯೋಜನೆಯಡಿ ಮೂರು ಜಿಲ್ಲೆಗಳ ಲಕ್ಷಾಂತರ ಜನರು ಆರೋಗ್ಯಕರ ನೀರು ಪಡೆಯಲಿದ್ದಾರೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

₹2,132.02 ಕೋಟಿ ರೂ. ವೆಚ್ಚದ ಯೋಜನೆಯ ಕಾಮಗಾರಿಗಳು ಕಳೆದ ವರ್ಷದಿಂದ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಮೇ 2024ರವರೆಗೆ ₹1,852.15 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದೂ ಸಚಿವರು ಹೇಳಿದ್ದಾರೆ. ಗ್ರಾಮೀಣ ಭಾಗದ ಜನರಿಗೆ ಅಂತರರಾಷ್ಟ್ರೀಯ ಮಾನದಂಡಗಳಂತೆ ಪ್ರತಿಯೊಬ್ಬರಿಗೂ ಪ್ರತಿ ನಿತ್ಯ 85 ಲೀಟರ್‌ ನೀರು ಒದಗಿಸಲಾಗುವುದು, ಪಟ್ಟಣದ ಜನರು ಪ್ರತಿ ನಿತ್ಯ 135 ಲೀಟರ್‌ ನೀರು ಪಡೆಯುವರು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ನೀರು ಸಂಸ್ಕರಣ ಘಟಕಗಳ ಕಾಮಗಾರಿಗಳು ಮುಕ್ತಾಯಗೊಂಡಿದ್ದು, ಕೊಳವೆ ಮಾರ್ಗಗಳನ್ನು ಅಳವಡಿಸುವ ಕಾಮಗಾರಿಗಳು ಮುಕ್ತಾಯಗೊಂಡಿವೆ ಎಂದೂ ಹೇಳಿರುವ ಸಚಿವರು 568 ಒವರ್‌ಹೆಡ್‌ ಟ್ಯಾಂಕ್‌ಗಳ ನಿರ್ಮಾಣ ಕಾಮಗಾರಿಗಳು ಮುಕ್ತಾಯ ಹಂತದಲ್ಲಿವೆ ಎಂದೂ ತಿಳಿಸಿದ್ದಾರೆ.

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 961 ಹುದ್ದೆಗಳ ಭರ್ತಿಗೆ ಅಧಿಸೂಚನೆ | Job Alert

BREAKING : ವಾಲ್ಮೀಕಿ ಹಗರಣ ಕೇಸ್ : ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ ಸಾಧ್ಯತೆ!

Share. Facebook Twitter LinkedIn WhatsApp Email

Related Posts

ಪುತ್ತಿಲ್, ಪ್ರಭಾಕರ್ ಭಟ್ ಗೆ ನೋಟಿಸ್ ವಿಚಾರ : ತಾಲಿಬಾನಿ ಸರಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ : ಮಾಜಿ ಸಂಸದ ಪ್ರತಾಪ್ ಸಿಂಹ

02/06/2025 4:28 PM1 Min Read

ಬಾನು ಮುಷ್ತಾಕ್, ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

02/06/2025 4:17 PM1 Min Read

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM1 Min Read
Recent News

ಪುತ್ತಿಲ್, ಪ್ರಭಾಕರ್ ಭಟ್ ಗೆ ನೋಟಿಸ್ ವಿಚಾರ : ತಾಲಿಬಾನಿ ಸರಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ : ಮಾಜಿ ಸಂಸದ ಪ್ರತಾಪ್ ಸಿಂಹ

02/06/2025 4:28 PM

ಬಾನು ಮುಷ್ತಾಕ್, ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

02/06/2025 4:17 PM

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM

ಮನೆಯಲ್ಲಿ ಪಕ್ಷಿಗಳು ಗೂಡು ಕಟ್ಟಿದ್ರೆ ಶುಭವೋ.? ಅಶುಭವೇ.? ತಿಳಿಯದಿದ್ರೆ ನಿಮ್ಗೆ ತೊಂದ್ರೆ.!

02/06/2025 4:11 PM
State News
KARNATAKA

ಪುತ್ತಿಲ್, ಪ್ರಭಾಕರ್ ಭಟ್ ಗೆ ನೋಟಿಸ್ ವಿಚಾರ : ತಾಲಿಬಾನಿ ಸರಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ : ಮಾಜಿ ಸಂಸದ ಪ್ರತಾಪ್ ಸಿಂಹ

By kannadanewsnow0502/06/2025 4:28 PM KARNATAKA 1 Min Read

ಮೈಸೂರು : ದಕ್ಷಿಣ ಕನ್ನಡದಲ್ಲಿ ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಒಟ್ಟು 15 ಜನರ ವಿರುದ್ಧ FIR ದಾಖಲಾದ…

ಬಾನು ಮುಷ್ತಾಕ್, ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

02/06/2025 4:17 PM

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM

ಬೆಂಗಳೂರಲ್ಲಿ ‘ಇವಿ ಹಬ್’ ಲೋಕಾರ್ಪಣೆ: ಚಾರ್ಜ್ ಮಾಡುವುದು ಹೇಗೆ? ದರ ಎಷ್ಟು ಗೊತ್ತಾ?

02/06/2025 4:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.