ಕೊಪ್ಪಳ : ಜಿಲ್ಲೆಯಲ್ಲಿ ಮಳೆಯಿಂದಾಗಿ ಗಂಗಾವತಿ ತಾಲೂಕಿನ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಡ್ಯಾಂನಿಂದ 1 ಲಕ್ಷ 20 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ.
ಚಿಕ್ಕಜಂತಗಲ್- ಕಂಪ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಗಂಗಾವತಿ, ಬಳ್ಳಾರಿ ಜಿಲ್ಲೆ ಸಂಪರ್ಕ ಕಲ್ಪಿಸೋ ಸೇತುವೆಯಾಗಿತ್ತು. ಬ್ಯಾರಿಕೇಟ್ ಹಾಕಿ ವಾಹನ ಸಂಚಾರಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಅಪಾರ ಪ್ರಮಾಣ ನೀರು ನುಗ್ಗಿ ಅನಾಹುತ ಸೃಷ್ಠಿಯಾಗಿದೆ.