Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘PSLV-C62’ ರಾಕೆಟ್ ನಿಂದ ಇಂದು ಇಸ್ರೋದಿಂದ, 16 ಉಪಗ್ರಹಗಳ ಉಡಾವಣೆ | ISRO

12/01/2026 7:43 AM

ಇರಾನ್‌ನಲ್ಲಿ ರಕ್ತದ ಕೋಡಿ: ಆರ್ಥಿಕ ಬಿಕ್ಕಟ್ಟಿನ ಕಿಚ್ಚಿಗೆ 538 ಬಲಿ, ಮುಂದುವರಿದ ಜನಾಕ್ರೋಶ!

12/01/2026 7:35 AM

BREAKING : ಡೇಟಿಂಗ್ ಆಪ್ ಬಳಸೋ ಮುನ್ನ ಎಚ್ಚರ : ‘AI’ ಹುಡುಗಿ ಮಾತಿಗೆ ಬೆತ್ತಲಾದ ಯುವಕನಿಂದ 1.5ಲಕ್ಷ ವಸೂಲಿ!

12/01/2026 7:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಎಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳ ಸಮೀಕ್ಷೆ ನಡೆಸಿ ವರದಿ ನೀಡಲು ತುಷಾರ್ ಗಿರಿ ನಾಥ್ ಸೂಚನೆ
KARNATAKA

ಬೆಂಗಳೂರಿನ ಎಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳ ಸಮೀಕ್ಷೆ ನಡೆಸಿ ವರದಿ ನೀಡಲು ತುಷಾರ್ ಗಿರಿ ನಾಥ್ ಸೂಚನೆ

By kannadanewsnow0917/02/2025 4:51 PM

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮೀಕ್ಷೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆಯ 8 ವಲಯಗಳಲ್ಲಿ ಎಷ್ಟು ಶುದ್ಧ ಕುಡಿಯುವ ನೀರಿನ ಘಟಕಗಳಿವೆ, ಎಷ್ಟು ಸುಸ್ಥಿತಿಯಲ್ಲಿವೆ, ಎಷ್ಟು ಸ್ಥಗಿತವಾಗಿವೆ ಎಂಬುದರ ಕುರಿತು ಸಮೀಕ್ಷೆ ನಡೆಸಿ ವಾರದೊಳಗಾಗಿ ವರದಿ ನೀಡಲು ಸೂಚಿಸಲಾಗಿದೆ ಎಂದರು.

ನಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಸಂಬಂಧಿಸಿದಂರೆ ಎಲ್ಲಾ ವಲಯಗಳಲ್ಲಿ ಟೆಂಡರ್ ಕರೆದು ಗುತ್ತಿಗೆದಾರರನ್ನು ನಿಯೋಜಿಸಿದ್ದು, ಅವರ ಮೂಲಕ ಘಟಕಗಳನ್ನು ನಿರ್ವಹಣೆ ಮಾಡಲಾಗುತ್ತಿದೆ. ಈ ಸಂಬಂಧ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿ-ಗತಿಗಳ ಕುರಿತು ವರದಿ ನೀಡಲು ಸೂಚಿಸಲಾಗಿದೆ ಎಂದು ಹೇಳಿದರು.

ನಗರದಲ್ಲಿ ಕಾವೇರಿ 5 ಹಂತವು ಈಗಾಗಲೇ ಚಾಲ್ತಿಯಲ್ಲಿರುವುದರಿಂದ, 1ನೇ ಏಪ್ರಿಲ್ 2025 ರಿಂದ ಕುಡಿಯುವ ನೀರಿನ ಸಂಪೂರ್ಣ ಜವಾಬ್ದಾರಿ ಜಲಮಂಡಳಿ ಇಲಾಖೆಯದ್ದೇ ಆಗಿರುತ್ತದೆ. ಈ ಸಂಬಂಧ ಪಾಲಿಕೆಯ ಒಡೆತನದಲ್ಲಿದ್ದ ಬೋರ್ ವೆಲ್ ಗಳನ್ನು ಹಸ್ತಾಂತರಿಸುವ ಸಂಬಂಧ ಜಲಮಂಡಳಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ಅದರ ಜೊತೆಗೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಾ 1ನೇ ಏಪ್ರಿಲ್ 2025 ವೇಳೆಗೆ ಜಲಮಂಡಿಗೆ ಹಸ್ತಾಂತರಿಸಲಾಗುವುದೆಂದು ತಿಳಿಸಿದರು.

ಕುಡಿಯುವ ನೀರಿನ ವಿಚಾರವನ್ನು ಇನ್ನು ಮುಂದೆ ಸಂಪೂರ್ಣವಾಗಿ ಜಲಮಂಡಳಿಯೇ ನಿರ್ವಹಣೆ ಮಾಡಲಿದೆ. ಕುಡಿಯುವ ನೀರಿನ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಹಣಕಾಸು ಆಯೋಗದಿಂದ ಪಾಲಿಕೆಗೆ ಬರುವ ಅನುದಾನವನ್ನು ಜಲಮಂಡಳಿಗೆ ವರ್ಗಾಯಿಸಲಾಗುವುದೆಂದು ಹೇಳಿದರು.

ಆಸ್ತಿ ತೆರಿಗೆಯಿಂದ ಹೊರಗುಳಿದ ಆಸ್ತಿಗಳ ಸೇರ್ಪಡೆ:

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದ(ಇದುವರೆಗೆ ಖಾತೆ ಮಾಡಿಸಿಕೊಳ್ಳದಿರುವವರು) ಆಸ್ತಿಗಳನ್ನು ಹೊಸದಾಗಿ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ. ಈ ಸಂಬಂಧ ಹೊಸ ಖಾತಾ ಪಡೆಯುವ ಸಲುವಾಗಿ ವೆಬ್ ಸೈಟ್(https://BBMP.karnataka.gov.in/NewKhata)ಕೂಡಾ ಬಿಡುಗಡೆಗೊಳಿಸಿದ್ದು, ಅದರ ಮೂಲಕ ಹೊಸದಾಗಿ ಖಾತಾ ಪಡೆದುಕೊಳ್ಳಬಹುದಾಗಿದೆ. ಅದರಂತೆ ಈಗಾಗಲೇ ಸದರಿ ವೆಬ್ ಸೈಟ್ ಮೂಲಕ ಹೊಸದಾಗಿ 10 ಸಾವಿರ ಆಸ್ತಿ ಮಾಲೀಕರು ಖಾತಾ ಪಡೆದಿದ್ದಾರೆ.

ಅದರಂತೆ, ಒಂದು ಪರಿಹಾರ ಯೋಜನೆ(OTS) ಜಾರಿಯಿದ್ದ ವೇಳೆಯೂ ಖಾತೆ ಮಾಡಿಕೊಳ್ಳಲು ಅವಕಾಶ ನೀಡಿದ್ದ ವೇಳೆ ಸುಮಾರು 80 ಸಾವಿರ ಆಸ್ತಿ ಮಾಲೀಕರು ಖಾತೆ ಮಾಡಿಸಿಕೊಂಡಿದ್ದಾರೆ.

ನಗರದಲ್ಲಿ ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಆಯಾ ವಲಯಗಳಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಈ ಪೈಕಿ 1 ಲಕ್ಷ ಆಸ್ತಿಗಳನ್ನು ಸೇರ್ಪಡೆ ಮಾಡಿದಲ್ಲಿ ಸುಮಾರು 100 ಕೋಟಿ ರೂ. ಆಸ್ತಿ ತೆರಿಗೆ ಪಾಲಿಗೆಗೆ ಬರಲಿದೆ ಎಂದು ತಿಳಿಸಿದರು.

ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರಾದ ಸತೀಶ್, ಸ್ನೇಹಲ್, ರಮ್ಯಾ, ಕರೀಗೌಡ, ದಿಗ್ವಿಜಯ್ ಬೋಡ್ಕೆ, ಎಲ್ಲಾ ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

BIG NEWS: ರಾಜ್ಯದಲ್ಲಿ ‘ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ’ಗೆ ಮುಹೂರ್ತ ಫಿಕ್ಸ್ | ZP, TP Election

BREAKING : ಆಭರಣ ಪ್ರಿಯರಿಗೆ ಶಾಕ್ : ದೇಶಾದ್ಯಂತ ಇಂದು ಮತ್ತೆ ಚಿನ್ನದ ಬೆಲೆ 10 ಗ್ರಾಂಗೆ 550 ರೂ. ಏರಿಕೆ | Gold Price Hike

Share. Facebook Twitter LinkedIn WhatsApp Email

Related Posts

BREAKING : ಡೇಟಿಂಗ್ ಆಪ್ ಬಳಸೋ ಮುನ್ನ ಎಚ್ಚರ : ‘AI’ ಹುಡುಗಿ ಮಾತಿಗೆ ಬೆತ್ತಲಾದ ಯುವಕನಿಂದ 1.5ಲಕ್ಷ ವಸೂಲಿ!

12/01/2026 7:23 AM1 Min Read

BIG NEWS : ಬೆಂಗಳೂರಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ, ಬ್ಯಾರಿಕೇಡ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

12/01/2026 7:14 AM1 Min Read

BREAKING : ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಗೈರು : ಶಾಸಕ ಯತ್ನಾಳ್ ವಿರುದ್ಧ ಬೇಲ್ ರಹಿತ ಬಂಧನ ವಾರೆಂಟ್

12/01/2026 7:11 AM1 Min Read
Recent News

BREAKING : ‘PSLV-C62’ ರಾಕೆಟ್ ನಿಂದ ಇಂದು ಇಸ್ರೋದಿಂದ, 16 ಉಪಗ್ರಹಗಳ ಉಡಾವಣೆ | ISRO

12/01/2026 7:43 AM

ಇರಾನ್‌ನಲ್ಲಿ ರಕ್ತದ ಕೋಡಿ: ಆರ್ಥಿಕ ಬಿಕ್ಕಟ್ಟಿನ ಕಿಚ್ಚಿಗೆ 538 ಬಲಿ, ಮುಂದುವರಿದ ಜನಾಕ್ರೋಶ!

12/01/2026 7:35 AM

BREAKING : ಡೇಟಿಂಗ್ ಆಪ್ ಬಳಸೋ ಮುನ್ನ ಎಚ್ಚರ : ‘AI’ ಹುಡುಗಿ ಮಾತಿಗೆ ಬೆತ್ತಲಾದ ಯುವಕನಿಂದ 1.5ಲಕ್ಷ ವಸೂಲಿ!

12/01/2026 7:23 AM

BIG NEWS : ಬೆಂಗಳೂರಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ, ಬ್ಯಾರಿಕೇಡ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

12/01/2026 7:14 AM
State News
KARNATAKA

BREAKING : ಡೇಟಿಂಗ್ ಆಪ್ ಬಳಸೋ ಮುನ್ನ ಎಚ್ಚರ : ‘AI’ ಹುಡುಗಿ ಮಾತಿಗೆ ಬೆತ್ತಲಾದ ಯುವಕನಿಂದ 1.5ಲಕ್ಷ ವಸೂಲಿ!

By kannadanewsnow0512/01/2026 7:23 AM KARNATAKA 1 Min Read

ಬೆಂಗಳೂರು : ಇತ್ತೀಚಿಗೆ ಈ ಒಂದು AI ಎನ್ನುವ ಆಪ್ ನಿಂದ ನಮಗೆ ಯಾವ ರೀತಿ ಬೇಕು ಆ ರೀತಿ…

BIG NEWS : ಬೆಂಗಳೂರಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ, ಬ್ಯಾರಿಕೇಡ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

12/01/2026 7:14 AM

BREAKING : ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಗೈರು : ಶಾಸಕ ಯತ್ನಾಳ್ ವಿರುದ್ಧ ಬೇಲ್ ರಹಿತ ಬಂಧನ ವಾರೆಂಟ್

12/01/2026 7:11 AM

GOOD NEWS: ಯಶಸ್ವಿನಿ ಯೋಜನೆಯಡಿ 5 ಲಕ್ಷ ರೂ.ವರೆಗೆ ಚಿಕಿತ್ಸೆ ಉಚಿತ: ಹೊಸ ಸದಸ್ಯರ ನೋಂದಣಿ ಆಂರಭ

12/01/2026 6:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.