Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

ದೇಶದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ.! ಭಾರತದಲ್ಲಿ ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

04/07/2025 9:42 PM

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ‘ಗಣೇಶೋತ್ಸವ ಆಚರಣೆ’ಗೆ ಏಕಗವಾಕ್ಷಿ ಪದ್ದತಿಯಲ್ಲಿ ಒಂದೇ ಸೂರಿನಡಿ ಅನುಮತಿ ಪತ್ರ: ತುಷಾರ್ ಗಿರಿನಾಥ್
KARNATAKA

ಬೆಂಗಳೂರಲ್ಲಿ ‘ಗಣೇಶೋತ್ಸವ ಆಚರಣೆ’ಗೆ ಏಕಗವಾಕ್ಷಿ ಪದ್ದತಿಯಲ್ಲಿ ಒಂದೇ ಸೂರಿನಡಿ ಅನುಮತಿ ಪತ್ರ: ತುಷಾರ್ ಗಿರಿನಾಥ್

By kannadanewsnow0921/08/2024 5:51 PM

ಬೆಂಗಳೂರು: ನಗರದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಛೇರಿಗಳಲ್ಲಿ ಏಕಗವಾಕ್ಷಿ ಪದ್ದತಿಯಲ್ಲಿ ಒಂದೇ ಸೂರಿನಡಿ(Single Window System) ಅನುಮತಿ ಪತ್ರವನ್ನು ಪಡೆಯಬಹುದಾಗಿದೆ ಎಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ತಿಳಿಸಿದರು.

ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ನಗರ ಪೊಲೀಸ್ ಜಂಟಿ ಸಹಯೋಗದಲ್ಲಿ ಇಂದು ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ ನಡೆದ “ಶಾಂತಿ ಸೌಹಾರ್ದತೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಛೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುಗುವುದು. 63 ಏಕಗವಾಕ್ಷಿ ಕೇಂದ್ರಗಳ ವಿಳಾಸ ಹಾಗೂ ಏಕಗವಾಕ್ಷಿ ಕೇಂದ್ರಗಳಲ್ಲಿರುವ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಇಲಾಖೆಯ ನೋಡಲ್ ಅಧಿಕಾರಿಗಳ ವಿವರವಾದ ಮಾಹಿತಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುತ್ತದೆ. ಅದರನುಸಾರ ಗಣೇಶ ಮೂರ್ತಿಗಳನ್ನಿಡುವವರು ಏಕಗವಾಕ್ಷಿ ಸ್ಥಳಕ್ಕೆ ಭೇಟಿ ನೀಡಿ ಒಂದೇ ಸ್ಥಳದಲ್ಲಿ ಅನುಮತಿ ಪಡೆಯಬಹುದೆಂದು ಹೇಳಿದರು.

ಕೆರೆಗಳ ಬಳಿಯಿರುವ ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆಗಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿರುತ್ತದೆ. ಪಿಒಪಿ ಗಣೇಶ ಮೂರ್ತಿಗಳನ್ನು ನಿಷೇಧಿಸಲಾಗಿದ್ದು, ಯಾರೂ ಕೂಡಾ ಪಿಒಪಿ ಗಣೇಶ ಮೂರ್ತಿಗಳನ್ನು ಖರೀದಿಸದೆ ಪರಿಸರ ಸ್ಹೇಹಿ ಗಣೇಶ ಮೂರ್ತಿಗಳನ್ನಿಟ್ಟು ಪೂಜಿಸಲು ತಿಳಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ವರ್ಷದಂತೆ ಪಾಲಿಕೆ ವತಿಯಿಂದ ಗಣೇಶ ವಿಸರ್ಜನೆಗೆ ಹಲಸೂರು ಕೆರೆ ಸೇರಿದಂತೆ ಇನ್ನಿತರೆ ಪ್ರಮುಖ ಕೆರೆಗಳ ಕಲ್ಯಾಣಿಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಂಡು ಸರಿಯಾಗಿ ವಿಸರ್ಜನೆ ಮಾಡಲು ಅವಕಾಶ ಮಾಡಿಕೊಡಲಾಗುವುದು. ಪ್ರಮುಖ ಸ್ಥಳ/ಜಂಕ್ಷನ್ ಮತ್ತು ಅವಶ್ಯಕತೆ ಇರುವ ಕಡೆ ವಾರ್ಡ್ ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ(ಮೊಬೈಲ್ ಟ್ಯಾಂಕ್)ಗಳನ್ನು ಪ್ರತಿ ವರ್ಷದಂತೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.

ಗಣೇಶ ಮೂರ್ತಿಗಳ ವಿಸರ್ಜನೆಗೆ ಗುರುತಿಸಿರುವ ಕೆರೆಗಳ ಕಲ್ಯಾಣಿಗಳ ಬಳಿ ಭದ್ರತೆಯ ದೃಷ್ಠಿಯಿಂದ ಪೊಲೀಸ್ ವ್ಯವಸ್ಥೆಯ ಜೊತೆಗೆ ಬ್ಯಾರಿಕೇಡಿಂಗ್, ಸಿಸಿಟಿವಿ, ವಿದ್ಯುತ್ ದ್ವೀಪ, ನುರಿತ ಈಜುಗಾರರ ವ್ಯವಸ್ಥೆ, ಕ್ರೇನ್ ಗಳ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಬಿ. ದಯಾನಂದ್ ರವರು ಮಾತನಾಡಿ, ಪ್ರತಿ ವರ್ಷದಂತೆ ಶಾಂತಿ ಸೌಹಾರ್ದತೆಯಿಂದ ಗಣೇಶ ಹಬ್ಬವನ್ನು ಆಚರಿಸಬೇಕು. ಈಗಾಗಲೇ ಎಲ್ಲಾ ಕಡೆ ಶಾಂತಿ ಸಭೆಗಳನ್ನು ನಡೆಸಲಾಗಿದೆ. ಈ ಬಾರಿ ಯಾವುದೇ ರೀತಿಯ ಅನಾನುಕೂಲವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪಾಲಿಕೆ, ಪೊಲೀಸ್ ಇಲಾಖೆಯಿಂದ ಬರುವ ಸಲಹೆ, ಸೂಚನೆಗಳನ್ನು ಎಲ್ಲರೂ ತಪ್ಪದೆ ಪಾಲಿಸಬೇಕು. ಮೆರವಣಿಗೆ, ಮೆರವಣಿಗೆಯ ಮಾರ್ಗಕ್ಕೆ ಎಲ್ಲರೂ ಸಹಕಾರ ನೀಡಬೇಕು. ಹಬ್ಬದ ವೇಳೆ ಅನಾನುಕೂಲ, ಅಚಾತುರ್ಯ ನಡೆಯದಂತೆ ನೋಡಿಕೋಳ್ಳಲಾಗುವುದು. ಎಲ್ಲಿಯೂ ಸಂಚಾರ ದಟ್ಟಣೆಯಾಗದಂತೆ ಪೊಲೀಸ್ ಅಧಿಕರಿಗಳು ಸೂಕ್ರ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ರಸ್ತೆಗಳ ನಡುವೆ ಗಣೇಶ ಮೂರ್ತಿಗಳನ್ನಿಡುವುದನ್ನು ನಿಯಂತ್ರಿಸಿ ಸೂಕ್ತವಾದ ಜಾಗವನ್ನು ಗುರುತಿಸಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ, ಇದರಿಂದ ನಾಗರೀಕರಿಗೆ ಅನುಕೂಲವಾಗಲಿದೆ. ಕಾನೂನು ವ್ಯವಸ್ಥೆಯಲ್ಲಿ ಯಾವುದೇ ರೀತಿಯ ದಕ್ಕೆಯಾಗದಂತೆ ಸಂಭ್ರಮದಿಂದ, ಶಾಂತಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸೋಣ ಎಂದು‌ ಹೇಳಿದರು.

ಗಣೇಶ ಪ್ರತಿಷ್ಠಾನದ ಆಯೋಜನಕರಿಂದ ಸಭೆಯಲ್ಲಿ ಬಂದಂತಹ ಪ್ರಮುಖ ಸಲಹೆಗಳು

* ಗಣಪತಿ ವಿಸರ್ಜನೆ ಮಾಡಲು ಸೂಕ್ತವಾದ ಸ್ಥಳ ನಿಗಧಿಪಡಿಸಿ, ವಿಸರ್ಜನೆಗೆ ಅವಕಾಶ ಮಾಡಿಕೊಡಲು ಮನವಿ
* ಸೂಕ್ಷ್ಮ ಪ್ರದೇಶಗಳಲ್ಲಿ ಸರಿಯಾದ ಪೊಲೀಸ್ ಭದ್ರತೆ ನೀಡಲು ಮನವಿ.
* ಧಾರ್ಮಿಕ ಆಚರಣೆಗಳು ನಡೆಸುವಾಗ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಮನವಿ.
* ಪಿಒಪಿ ಗಣೇಶ ಮೂರ್ತಿಗಳನ್ನು ಕಡ್ಡಾಯವಾಗಿ ನಿಷೇಧಿಸಿ.
* ಏಕ ಗವಾಕ್ಷಿ ಪದ್ದತಿಯನ್ನು ಸರಿಯಾಗಿ ಜಾರಿಗೊಳಿಸಿ.
* ಗಣೇಶ ವಿಸರ್ಜನೆಯ ಮೆರವಣಿಗೆಯ ವೇಳೆ ಸಂಚಾರದಟ್ಟಣೆಯಾಗದಂತೆ ಕ್ರಮವಹಿಸಲು ಮನವಿ.
* ಗಣೇಶ ವಿಸರ್ಜನಾ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿಕೊಡಲು ಮನವಿ.
* ಗಣೇಶ ಪ್ರತಿಷ್ಠಾಪನೆಯ ಸ್ಥಳದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸಲು ಅನುಮತಿ ನೀಡಲು ಮನವಿ.
* ಮೊಬೈಲ್ ಟ್ಯಾಂಕರ್‌ಗಳನ್ನು ಹೆಚ್ಚಾಗಿ ನಿಯೋಜನೆ ಮಾಡಲು ಮನವಿ.
* ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ಬೆಸ್ಕಾಂ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಂಡು ಯಾವುದೇ ವಿದ್ಯುತ್ ಅವಘಡ ನಡೆಯದಂತೆ ನೋಡಿಕೊಳ್ಳಬೇಕು.
* ಹೆಚ್ಚು ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶ ನೀಡಬಾರದು.
* ಕೆರೆಗಳ ಬಳಿಯಿರುವ ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡುವ ವೇಳೆ ಸಾಕಷ್ಟು ಗಣೇಶ ಮೂರ್ತಿಗಳನ್ನು ರಸ್ತೆ ಬದಿಯೇ ಇಟ್ಟು ಹೋಗುತ್ತಾರೆ. ಅದನ್ನು ತಪ್ಪಿಸಿ.
* ಮೆರವಣಿಗೆ ಹೋಗುವ ರಸ್ತೆಗಳನ್ನು ಸರಿಯಾಗಿ ದುರಸ್ತಿಪಡಿಸಿಕೊಡಲು ಮನವಿ.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮಣ ಗುಪ್ತಾ, ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಅನುಚೇತ್, ಬೆಸ್ಕಾಂ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಗಣೇಶ ಪ್ರತಿಷ್ಠಾನದ ಆಯೋಜಕರು, ವಿವಿಧ ಸಮುದಾಯದ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

BIG NEWS: ‘ಸಿಎಂ ಸಿದ್ಧರಾಮಯ್ಯ’ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ‘ಈ ಚಾಲೆಂಜ್’

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ನಿಮಗೆ ಸಿಗಲಿರುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ

BIG NEWS : ರಾಜ್ಯದಲ್ಲಿ ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 2 ಲಕ್ಷ ದಂಡ ಜೊತೆಗೆ 7 ವರ್ಷ ಜೈಲು ಶಿಕ್ಷೆ ಫಿಕ್ಸ್

Share. Facebook Twitter LinkedIn WhatsApp Email

Related Posts

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM2 Mins Read

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM1 Min Read

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM1 Min Read
Recent News

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

ದೇಶದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ.! ಭಾರತದಲ್ಲಿ ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

04/07/2025 9:42 PM

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM

BREAKING : ‘ಪ್ರಧಾನಿ ಮೋದಿ’ಗೆ ಟ್ರಿನಿಡಾಡ್ ಮತ್ತು ಟೊಬಾಗೋದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ |VIDEO

04/07/2025 9:21 PM
State News
KARNATAKA

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

By kannadanewsnow0904/07/2025 9:44 PM KARNATAKA 2 Mins Read

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ…

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.