ಉಡುಪಿ : ಸಾಮಾಜಿಕ ಜಾಲತಾಣದ ಮೂಲಕ ದ್ವೇಷ ಹರಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಶಿಕ್ಷಕರ ಸಹಕಾರ ಬ್ಯಾಂಕ್ ಮ್ಯಾನೇಜರ್ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಉದ್ಯಮಿ ಕೆ.ನಾಗರಾಜ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.
ಇಬ್ಬರು ಆರೋಪಗಳನ್ನು ಬ್ರಹ್ಮಾವರ ಟಾನಿಕ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವಾಟ್ಸಪ್ ಗ್ರೂಪ್ ನಲ್ಲಿ ಇಬ್ಬರ ಆರೋಪಿಗಳು ವಿಡಿಯೋ ಶೇರ್ ಮಾಡಿದ್ದಾರೆ. ಸಮುದಾಯಗಳ ನಡುವೆ ದ್ವೇಷ ಹುಟ್ಟಿಸುವ ವಿಡಿಯೋ ಶೇರ್ ಮಾಡಿದ್ದಾರೆ. ಪೊಲೀಸರು ಸದ್ಯ ಇಬ್ಬರನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.








