ಬೆಂಗಳೂರು : ಬೇಲಿಯೇ ಎದ್ದು ಹೊಲ ಮೇಯ್ದಂತೆ ಪೊಲೀಸರೇ ಜನರಿಂದ ಹಣ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ. ಸಂಪಿಗೆಹಳ್ಳಿ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.
ಸಂಪಿಗೆ ಹಳ್ಳಿ ಠಾಣೆಯ ರಾಜೇಶ್ ಹೆಚ್ ಸಿ, ಪಿಸಿ ನಾಗೇಶ್ ಹಾಗೂ ಸಿಬ್ಬಂದಿಯೋರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾನ್ಯತಾ ಟೆಕ್ಪಾರ್ಕ್ ಬಳಿ ಕಾರ್ತಿಕ್ ಎಂಬುವವರು ಹಾಗೂ ಪತ್ನಿ ಸ್ನೇಹಿತರ ಜೊತೆ ಪಾರ್ಟಿ ಮುಗಿಸಿ ಮಧ್ಯರಾತ್ರಿ ವಾಪಸ್ ಆಗುತ್ತಿದ್ದರು. ಈ ವೇಳೆ ದಂಪತಿಯನ್ನು ತಡೆದ ಹೊಯ್ಸಳ ಸಿಬ್ಬಂದಿ 3,000 ರೂ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ. ಇದನ್ನು ದಂಪತಿ ನಿರಾಕರಿಸಿದಾಗ ಪೊಲೀಸರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದ್ದು, ನಂತರ ಕ್ಯೂ ಆರ್ ಕೋಡ್ ಮೂಲಕ 1000 ರೂ ಹಣ ನೀಡಿದ್ದಾರೆ ಎಂದು ತಿಳಿದು ಬಂದಿದೆ.ನಂತರ ಕಾರ್ತಿಕ್ ಟ್ವೀಟ್ ಮೂಲಕ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಸಂಪಿಗೆ ಹಳ್ಳಿ ಠಾಣೆಯ ರಾಜೇಶ್ ಹೆಚ್ ಸಿ, ಪಿಸಿ ನಾಗೇಶ್ ಹಾಗೂ ಸಿಬ್ಬಂದಿಯೋರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
BREAKING NEWS : ರಾಜ್ಯಪಾಲ ‘ಥಾವರ್ ಚಂದ್ ಗೆಹ್ಲೋಟ್’ ಕಾರು ಚಾಲಕ ಹೃದಯಾಘಾತದಿಂದ ಸಾವು