Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಉದ್ವಿಗ್ನತೆ ಹೆಚ್ಚಳದ ನಡುವೆ ಇರಾನ್’ನಿಂದ ‘ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ’ ಆರಂಭ

16/06/2025 8:24 PM

BIG NEWS : ರಾಜ್ಯದ ಗ್ರಾ.ಪಂ ಆಸ್ತಿ ತೆರಿಗೆದಾರರಿಗೆ ಗುಡ್ ನ್ಯೂಸ್ : ಮೊಬೈಲ್ `UPI’ ಮೂಲಕವೂ ಪಾವತಿಗೆ ಅವಕಾಶ

16/06/2025 8:23 PM

RTE ಸೀಟಿಗಾಗಿ ಅರ್ಜಿ ಸಲ್ಲಿಸಿದ್ದ ಪೋಷಕರಿಗೆ ಮಹತ್ವದ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟ | RTE Seat

16/06/2025 8:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್: ಪುಂಡರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಬಿ.ವೈ.ವಿಜಯೇಂದ್ರ ಆಗ್ರಹ
KARNATAKA

ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್: ಪುಂಡರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಬಿ.ವೈ.ವಿಜಯೇಂದ್ರ ಆಗ್ರಹ

By kannadanewsnow0924/02/2025 3:16 PM

ಮೈಸೂರು: ಕನ್ನಡಿಗರ ಭಾವನೆಗೆ ಧಕ್ಕೆ ತರುವ ಪುಂಡರ ವಿರುದ್ಧ ರಾಜ್ಯ ಸರಕಾರವು ದೃಢತೆಯಿಂದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂಬ ಅಪೇಕ್ಷೆ ಕನ್ನಡಿಗರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಇಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮರಾಠಿಗರ ಪುಂಡಾಟದ ಕುರಿತು ಗಮನ ಸೆಳೆದ ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು. ಕನ್ನಡಿಗರ ವಿಚಾರದಲ್ಲಿ ಈ ಭಂಡ ಸರಕಾರ ರಾಜಕಾರಣ ಮಾಡುತ್ತದೆ ಎಂದು ಅನಿಸುತ್ತಿಲ್ಲ ಎಂದ ಅವರು, ಪ್ರಚೋದನಕಾರಿ ಹೇಳಿಕೆ ಕೊಡುವುದು ಮತ್ತು ಪುಂಡಾಟಿಕೆ ಮಾಡುವವರಿಂದ ಎರಡೂ ರಾಜ್ಯಗಳಲ್ಲಿ ಕಾನೂನು- ಸುವ್ಯವಸ್ಥೆ ಹದಗೆಡುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕನ್ನಡಿಗರನ್ನು ಬೆದರಿಸುವವರು, ಪುಂಡಾಟಿಕೆ ಮಾಡುವವರ ವಿರುದ್ಧ ರಾಜ್ಯ ಸರಕಾರವು ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು. ಇಲ್ಲವಾದರೆ ಇದು ರಾಜ್ಯಕ್ಕೇ ಹರಡುವ ಸಾಧ್ಯತೆ ಇದೆ ಎಂದು ಆತಂಕದಿಂದ ತಿಳಿಸಿದರು.

ಉಚಿತ ವಿದ್ಯುತ್ ಹಣವನ್ನು ಸರಕಾರ ಭರಿಸಬೇಕಿದೆ. ಇಲ್ಲದಿದ್ದರೆ, ಸಾರ್ವಜನಿಕರಿಂದ ಹಣ ವಸೂಲಿಗೆ ಅವಕಾಶ ಕೊಡುವಂತೆ ಎಸ್ಕಾಂಗಳು ಕೆಇಆರ್‍ಸಿಗೆ ಮನವಿ ಸಲ್ಲಿಸಿವೆ ಎಂದು ಮಾಧ್ಯಮ ಪ್ರತಿನಿಧಿಗಳು ಗಮನ ಸೆಳೆದರು. ನಾನು ಇವತ್ತು ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ವೇಳೆ ಕೊಟ್ಟ ಗ್ಯಾರಂಟಿ ಯೋಜನೆಗಳ ಕುರಿತ ವಾಗ್ದಾನ ಈಡೇರುತ್ತಿಲ್ಲ; ಗ್ಯಾರಂಟಿಗಳು ಜನರಿಗೆ ಸರಿಯಾಗಿ ತಲುಪುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಪಿಡಬ್ಲ್ಯುಡಿ, ನೀರಾವರಿ ಇಲಾಖೆಗಳು ವಿದ್ಯುತ್ ಕಂಪೆನಿಗಳಿಗೆ 6 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡಿದ್ದಾಗಿ ಸಚಿವರೇ ಹೇಳಿದ್ದಾರೆ. ಇನ್ನೊಂದು ಕಡೆ ಶಕ್ತಿ ಯೋಜನೆ ಪ್ರಯುಕ್ತ ರಾಜ್ಯ ಸರಕಾರವು ಕೆಎಸ್‍ಆರ್‍ಟಿಸಿಗೆ 7 ಸಾವಿರ ಕೋಟಿ ಬಾಕಿ ಕೊಡಬೇಕಾಗಿದೆ. ಮತ್ತೊಂದು ಕಡೆ ವಿದ್ಯುತ್ ಕಂಪೆನಿಗಳು ಹಣಕ್ಕಾಗಿ ತಾಕೀತು ಮಾಡಿವೆ. ರಾಜ್ಯ ಸರಕಾರ ಹಣ ಕೊಡಬೇಕು; ಇಲ್ಲವೇ ಗ್ರಾಹಕರ ಮೇಲೆ ಈ ಭಾರ ಹೊರಿಸಬೇಕಾಗುತ್ತದೆ ಎಂದು ಹೇಳಿದ್ದಾಗಿ ಗಮನ ಸೆಳೆದರು.

ಮುಖ್ಯಮಂತ್ರಿಗಳು ಮತ್ತು ಸಚಿವರು ಈ ಕುರಿತಂತೆ ಜನರ ಕಿವಿಗೆ ಹೂವು ಮುಡಿಸುವುದನ್ನು ಬಿಟ್ಟು ವಾಸ್ತವಿಕ ಸತ್ಯವನ್ನು ತಿಳಿಸಬೇಕು ಎಂದು ಒತ್ತಾಯಿಸಿದರು. ಕರ್ನಾಟಕದ ಆರ್ಥಿಕ ಸ್ಥಿತಿಗತಿ, ಸಂಕಷ್ಟದ ಕುರಿತು ಮುಖ್ಯಮಂತ್ರಿಗಳು ಉತ್ತರಿಸಬೇಕಿದೆ ಎಂದು ಆಗ್ರಹಿಸಿದರು.

ಗ್ರಾಮೀಣ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ದಿಗೆ ಸಹಕಾರ ಇರಲಿ: ಸಚಿವ ಮಧು ಬಂಗಾರಪ್ಪ

BREAKING : ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆ ಮಾ.31ರವರೆಗೆ ವಿಸ್ತರಣೆ

BREAKING : ಬೆಂಗಳೂರಲ್ಲಿ ‘RTO’ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 100ಕ್ಕೂ ಹೆಚ್ಚು ಶಾಲಾ ವಾಹನಗಳು ಸೀಜ್!

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಗ್ರಾ.ಪಂ ಆಸ್ತಿ ತೆರಿಗೆದಾರರಿಗೆ ಗುಡ್ ನ್ಯೂಸ್ : ಮೊಬೈಲ್ `UPI’ ಮೂಲಕವೂ ಪಾವತಿಗೆ ಅವಕಾಶ

16/06/2025 8:23 PM1 Min Read

RTE ಸೀಟಿಗಾಗಿ ಅರ್ಜಿ ಸಲ್ಲಿಸಿದ್ದ ಪೋಷಕರಿಗೆ ಮಹತ್ವದ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟ | RTE Seat

16/06/2025 8:10 PM1 Min Read

BIG NEWS : `GST’ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ : CM ಸಿದ್ದರಾಮಯ್ಯ

16/06/2025 8:04 PM2 Mins Read
Recent News

BREAKING : ಉದ್ವಿಗ್ನತೆ ಹೆಚ್ಚಳದ ನಡುವೆ ಇರಾನ್’ನಿಂದ ‘ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ’ ಆರಂಭ

16/06/2025 8:24 PM

BIG NEWS : ರಾಜ್ಯದ ಗ್ರಾ.ಪಂ ಆಸ್ತಿ ತೆರಿಗೆದಾರರಿಗೆ ಗುಡ್ ನ್ಯೂಸ್ : ಮೊಬೈಲ್ `UPI’ ಮೂಲಕವೂ ಪಾವತಿಗೆ ಅವಕಾಶ

16/06/2025 8:23 PM

RTE ಸೀಟಿಗಾಗಿ ಅರ್ಜಿ ಸಲ್ಲಿಸಿದ್ದ ಪೋಷಕರಿಗೆ ಮಹತ್ವದ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟ | RTE Seat

16/06/2025 8:10 PM

BIG NEWS : `GST’ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ : CM ಸಿದ್ದರಾಮಯ್ಯ

16/06/2025 8:04 PM
State News
KARNATAKA

BIG NEWS : ರಾಜ್ಯದ ಗ್ರಾ.ಪಂ ಆಸ್ತಿ ತೆರಿಗೆದಾರರಿಗೆ ಗುಡ್ ನ್ಯೂಸ್ : ಮೊಬೈಲ್ `UPI’ ಮೂಲಕವೂ ಪಾವತಿಗೆ ಅವಕಾಶ

By kannadanewsnow5716/06/2025 8:23 PM KARNATAKA 1 Min Read

ಬೆಂಗಳೂರು : 2025-26ನೇ ಸಾಲಿನ ಸಂಪೂರ್ಣ ಗ್ರಾಮ ಪಂಚಾಯತಿ  ಆಸ್ತಿ ತೆರಿಗೆಯನ್ನು ಜೂನ್ 30 ರೊಳಗೆ ಪಾವತಿಸಿ ಶೇ 5%…

RTE ಸೀಟಿಗಾಗಿ ಅರ್ಜಿ ಸಲ್ಲಿಸಿದ್ದ ಪೋಷಕರಿಗೆ ಮಹತ್ವದ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟ | RTE Seat

16/06/2025 8:10 PM

BIG NEWS : `GST’ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ : CM ಸಿದ್ದರಾಮಯ್ಯ

16/06/2025 8:04 PM

BIG NEWS : `SSLC ಪರೀಕ್ಷೆ-3’ ನೋಂದಣಿ : ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

16/06/2025 7:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.