ಉಡುಪಿ : ಬಸ್ ರಿಪೇರಿಗೆ ಎಂದು ಗ್ಯಾರೇಜಿಗೆ ತೆಗೆದುಕೊಂಡ ಹೋದ ಸಂದರ್ಭದಲ್ಲಿ ಮೆಕ್ಯಾನಿಕ್ ಅಜಾಗರೂಕತೆಯಿಂದ ತನ್ನ ಬಸ್ಸಿನ ಅಡಿಯಲ್ಲಿ ಸಿಲುಕಿ ಬಸ್ ಮಾಲೀಕ ತಾನೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯಲ್ಲಿ ನಡೆದಿದೆ. ದಯಾನಂದ ಶೆಟ್ಟಿ ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಕಾಂಗ್ರೆಸ್ ತೊರೆದು ‘ಕಮಲ’ ಹಿಡಿದಿದ್ದ ಜಗದೀಶ್ ಶೆಟ್ಟರ್ ಗೆ ‘ಕೈ’ ಕೊಟ್ಟ ಬಿಜೆಪಿ : ಮುಂದಿನ ನಡೆ ಏನು?

ದಯಾನಂದ ಶೆಟ್ಟಿ ಅವರ ಬಸ್ ಅನ್ನು ರಿಪೇರಿಗಾಗಿ ಅತ್ರಾಡಿಯ ಗ್ಯಾರೇಜ್​ಗೆ ಕೊಂಡೊಯ್ಯಲಾಗಿತ್ತು. ಹೀಗಾಗಿ ತಮ್ಮ ಬಸ್​ನ ದುರಸ್ತಿ ಕಾರ್ಯ ನೋಡಿಕೊಳ್ಳಲು ಸ್ವತಃ ದಯಾನಂದ ಅವರೇ ಗ್ಯಾರೇಜ್​ಗೆ ಹೋಗಿದ್ದರು. ಅದರಂತೆ ಬಸ್ ಮುಂಭಾಗದಲ್ಲಿ ನಿಂತಿದ್ದರು. ಈ ವೇಳೆ, ಗ್ಯಾರೇಜ್​ನ ಮೆಕ್ಯಾನಿಕ್ ಅಜಾಗರೂಕತೆಯಿಂದ ಎಂಜಿನ್ ಸ್ಟಾರ್ಟ್ ಮಾಡಿದಾ ಬಸ್ ಮುಂದಕ್ಕೆ ಚಲಿಸಿದೆ.

ʻಹುಂಡಿ ಹಣ ದೇಗುಲ ಬಿಟ್ಟು ಬೇರೆಲ್ಲೂ ಹೋಗಲ್ಲʼ : ರಾಜ್ಯ ಸರ್ಕಾರ ಸ್ಪಷ್ಟನೆ

ಬಸ್ ಮುಂದಕ್ಕೆ ಚಲಿಸುತ್ತಿದ್ದಂತೆ ದಯಾನಂದ ಅವರು ಬಸ್ ಅಡಿ ಬಿದ್ದು ಚಕ್ರಕ್ಕೆ ಸಿಲುಕಿಕೊಂಡಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ದಯಾನಂದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ದೂರದೃಷ್ಟಿ ಪ್ರಧಾನಿ ಮೋದಿಗೆ ಇದೆ: ಅಮಿತ್ ಶಾ

Share.
Exit mobile version