ಉಡುಪಿ : ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ತಾಯಿಯನ್ನು ರಕ್ಷಣೆ ಮಾಡಲಾಗಿದೆ. ಘಟನೆಯು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕರಡಿ ಗ್ರಾಮದ ನಂದ್ರೋಳಿ ಎಂಬಲ್ಲಿ ಈ ಘಟನೆ ನಡೆದಿದೆ.

ಕೆರೆ ನೀರಿನಲ್ಲಿ ಮುಳುಗಿ ದನರಾಜ (13) ಛಾಯಾ (7) ಸಾವನ್ನಪ್ಪಿರುವ ದುರ್ದೈವಿ ಮಕ್ಕಳು ಎಂದು ಹೇಳಲಾಗುತ್ತಿದೆ. ರಕ್ಷಿಸಲ್ಪಟ್ಟ ತಾಯಿಯ ಸ್ಥಿತಿ ಗಂಭೀರವಾಗಿದ್ದು, ತಕ್ಷಣ ಆಕೆಯನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.

Share.
Exit mobile version