Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2 ಹಂತದಲ್ಲಿ ಸಂಪುಟ ವಿಸ್ತರಣೆ ಆಗಲಿದ್ದು, ಡಿಸಿಎಂ ಸ್ಥಾನಕ್ಕೆ ಇನ್ನೂ ಪ್ರೊಪೋಸಲ್ ಬಂದಿಲ್ಲ : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

ವಾಸ್ತು ಶಾಸ್ತ್ರ : ಕುರ್ಚಿ ಮೇಲೆ ಬಟ್ಟೆಗಳನ್ನು ಹಾಗೇ ಬಿಟ್ಟರೆ ಹೆಚ್ಚಾಗುತ್ತೆ ಸಾಲದ ಬಾಧೆ!

Money

ಭಾರತದಲ್ಲಿ ಪ್ಲಾಸ್ಟಿಕ್ ಕರೆನ್ಸಿ ಚಲಾವಣೆ? RBI ಹೊಸ ಚಿಂತನೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯದ ಗೆಜ್ಜಲಗೆರೆ ಗ್ರಾಮಕ್ಕೆ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
KARNATAKA

ಮಂಡ್ಯದ ಗೆಜ್ಜಲಗೆರೆ ಗ್ರಾಮಕ್ಕೆ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

By ವಸಂತ ಬಿ ಈಶ್ವರಗೆರೆ

ಮಂಡ್ಯ: ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮಕ್ಕೆ ಕಳೆದ ಮೂರ್ನಾಲ್ಕು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಟ್ಯಾಂಕರ್ ಗಳ ಮೂಲಕ ನೀರಿನ ವ್ಯವಸ್ಥೆ ಮಾಡಿದ್ದಾರೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು.

ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಸುಮಾರು 123 ದಿನಗಳಿಂದ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಗುರುವಾರ ರಾತ್ರಿ ಆಗಮಿಸಿ ಧರಣಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.

ಅಧಿಕಾರಿಗಳು ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡದ ಹಿನ್ನೆಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಿರುವುದರಿಂದ ಇದನ್ನು ಮನಗಂಡು ಎಚ್.ಡಿ.ಕುಮಾರಸ್ವಾಮಿ ಅವರು ಟ್ಯಾಂಕರ್ ಗಳ ಮೂಲಕ ನೀರಿನ ವ್ಯವಸ್ಥೆ ಮಾಡಿದ್ದು, ಗ್ರಾಮದ ಜನತೆ ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಧೈರ್ಯ ತುಂಬಿದರು.

ಗ್ರಾಮದಲ್ಲಿ ಕುಡಿಯುವ ನೀರಿನ ಸರಬರಾಜು ಮಾಡುತ್ತಿದ್ದ, ಬೋರ್ ವೆಲ್ ಮೂರ್ನಾಲ್ಕು ದಿನಗಳಿಂದ ಕೆಟ್ಟು ಹೋಗಿದ್ದು, ಗ್ರಾಮದ ಜನತೆ ಸಾಕಷ್ಟು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ನಿರ್ವಹಣೆಯನ್ನು ತಾಲೂಕು ಅಥವಾ ಜಿಲ್ಲಾಡಳಿತ ಮಾಡಬೇಕು. ಅದು ಬಿಟ್ಟು ನಗರಸಭೆ ಅಧಿಕಾರಿಗಳು ಮಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು ಜಿಲ್ಲಾಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಮಾಡಿದರು.

ಹೀಗಾಗಿ ಇಡೀ ಗ್ರಾಮಕ್ಕೆ ಕುಡಿಯುವ ನೀರು ಸೇರಿದಂತೆ ದಿನ ಬಳಕೆಗೆ ಬೇಕಾಗುವ ನೀರಿನ ವ್ಯವಸ್ಥೆಯನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಟ್ಯಾಂಕರ್ ಗಳ ಮೂಲಕವೇ ಪೂರೈಸುವ ಭರವಸೆ ನೀಡಿದ್ದು, ಈಗಾಗಲೇ ಗ್ರಾಮಕ್ಕೆ ಎರಡು ಟ್ಯಾಂಕರ್ ಗಳ ಮೂಲಕ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಮುಗಿಯುವವರೆಗೂ ಜನತೆಗೆ ಯಾವುದೇ ರೀತಿಯ ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ರೈತ ನಾಯಕಿ ಸುನಂದ ಜಯರಾಂ, ತಾ.ಪಂ ಮಾಜಿ ಅಧ್ಯಕ್ಷ ಜಿ.ಪಿ.ಯೋಗೇಶ್, ಮುಖಂಡರಾದ ಲಿಂಗಪ್ಪಾಜಿ, ಜಿ.ಎ.ಶಂಕರ್, ಗುರು, ವೀರಪ್ಪ, ಮೋಹನ್, ಚಂದ್ರಶೇಖರ್, ಶಿವನಂಜು, ಪ್ರತಾಪ್ ಸೇರಿದಂತೆ ಇತರರು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

BREAKING: ಎಡಗೈ 5.25, ಬಲಗೈ 5.25, ಇತರರಿಗೆ ಶೇ.4.5ರಷ್ಟು ಒಳ ಮೀಸಲಾತಿ ಕಲ್ಪಿಸಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ ಘೋಷಣೆ

SHOCKING: ರಾಜ್ಯದಲ್ಲಿ ಘೋರ ದುರಂತ: ಜೋಕಾಲಿ ಕುತ್ತಿಗೆಗೆ ಬಿಗಿದು 9 ವರ್ಷದ ಬಾಲಕಿ ಸಾವು

Share. Facebook Twitter LinkedIn WhatsApp Email

Related Posts

2 ಹಂತದಲ್ಲಿ ಸಂಪುಟ ವಿಸ್ತರಣೆ ಆಗಲಿದ್ದು, ಡಿಸಿಎಂ ಸ್ಥಾನಕ್ಕೆ ಇನ್ನೂ ಪ್ರೊಪೋಸಲ್ ಬಂದಿಲ್ಲ : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

2 Mins Read

ಡಿಕೆ ಶಿವಕುಮಾರ್ ಗೆ ಅಧಿಕಾರ ಸಿಕ್ಕರೆ ನನಗೆ ಸಿಕ್ಕಂತೆ, ನನಗೆ ಸಚಿವ ಸ್ಥಾನದ ಆಸೆ ಇಲ್ಲ : ಶಾಸಕ ಗಣಿಗ ರವಿಕುಮಾರ್

1 Min Read

BIG NEWS : ಹಾಸನದಲ್ಲಿ ಡೆತ್ ನೋಟ್ ಬರೆದಿಟ್ಟು ಉಪತಹಶೀಲ್ದಾರ್ ಆತ್ಮಹತ್ಯೆಗೆ ಶರಣು!

1 Min Read
Recent News

2 ಹಂತದಲ್ಲಿ ಸಂಪುಟ ವಿಸ್ತರಣೆ ಆಗಲಿದ್ದು, ಡಿಸಿಎಂ ಸ್ಥಾನಕ್ಕೆ ಇನ್ನೂ ಪ್ರೊಪೋಸಲ್ ಬಂದಿಲ್ಲ : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

ವಾಸ್ತು ಶಾಸ್ತ್ರ : ಕುರ್ಚಿ ಮೇಲೆ ಬಟ್ಟೆಗಳನ್ನು ಹಾಗೇ ಬಿಟ್ಟರೆ ಹೆಚ್ಚಾಗುತ್ತೆ ಸಾಲದ ಬಾಧೆ!

Money

ಭಾರತದಲ್ಲಿ ಪ್ಲಾಸ್ಟಿಕ್ ಕರೆನ್ಸಿ ಚಲಾವಣೆ? RBI ಹೊಸ ಚಿಂತನೆ!

ಡಿಕೆ ಶಿವಕುಮಾರ್ ಗೆ ಅಧಿಕಾರ ಸಿಕ್ಕರೆ ನನಗೆ ಸಿಕ್ಕಂತೆ, ನನಗೆ ಸಚಿವ ಸ್ಥಾನದ ಆಸೆ ಇಲ್ಲ : ಶಾಸಕ ಗಣಿಗ ರವಿಕುಮಾರ್

State News
KARNATAKA

2 ಹಂತದಲ್ಲಿ ಸಂಪುಟ ವಿಸ್ತರಣೆ ಆಗಲಿದ್ದು, ಡಿಸಿಎಂ ಸ್ಥಾನಕ್ಕೆ ಇನ್ನೂ ಪ್ರೊಪೋಸಲ್ ಬಂದಿಲ್ಲ : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

By ಸುರೇಶ್‌ KARNATAKA 2 Mins Read

ಕಲಬುರ್ಗಿ:ಕರ್ನಾಟಕದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಹಾಗೂ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳ ಸೃಷ್ಟಿ ಕುರಿತಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

ಡಿಕೆ ಶಿವಕುಮಾರ್ ಗೆ ಅಧಿಕಾರ ಸಿಕ್ಕರೆ ನನಗೆ ಸಿಕ್ಕಂತೆ, ನನಗೆ ಸಚಿವ ಸ್ಥಾನದ ಆಸೆ ಇಲ್ಲ : ಶಾಸಕ ಗಣಿಗ ರವಿಕುಮಾರ್

BIG NEWS : ಹಾಸನದಲ್ಲಿ ಡೆತ್ ನೋಟ್ ಬರೆದಿಟ್ಟು ಉಪತಹಶೀಲ್ದಾರ್ ಆತ್ಮಹತ್ಯೆಗೆ ಶರಣು!

5 AM Club: ಮುಂಜಾನೆ 5 ಗಂಟೆಗೆ ಹಾಸಿಗೆಯಿಂದ ಎದ್ದರೆ ಸಾಕು.. ನಿಮ್ಮ ಲೈಫ್ ಚೇಂಜ್ ಆಗೋದು ಗ್ಯಾರಂಟಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.