Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 2026ರ ಮಹಿಳಾ ‘ಟಿ20 ವಿಶ್ವಕಪ್’ ವೇಳಾಪಟ್ಟಿ ಪ್ರಕಟ ; ಜೂನ್ 14ಕ್ಕೆ ಭಾರತ-ಪಾಕ್ ಮುಖಾಮುಖಿ

18/06/2025 3:36 PM

ಬೆಂಗಳೂರಲ್ಲಿ ಶಾಲೆಯ ಕಟ್ಟಡದಿಂದ ಬಿದ್ದು, ವಿದ್ಯಾರ್ಥಿನಿಗೆ ಗಂಭೀರ ಗಾಯ : ಶಾಸಕ ಅಶ್ವಥ್ ನಾರಾಯಣ ಭೇಟಿ

18/06/2025 3:31 PM

2026ರ ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟಿಸಿದ ಐಸಿಸಿ | Women’s T20 World Cup 2026

18/06/2025 3:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜಧಾನಿ ಎಕ್ಸ್ ಪ್ರೆಸ್ ರೈಲು ಯಾದಗಿರಿ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಕೇಂದ್ರ ಸಚಿವ ವಿ.ಸೋಮಣ್ಣ ಹಸಿರು ನಿಶಾನೆ
KARNATAKA

ರಾಜಧಾನಿ ಎಕ್ಸ್ ಪ್ರೆಸ್ ರೈಲು ಯಾದಗಿರಿ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಕೇಂದ್ರ ಸಚಿವ ವಿ.ಸೋಮಣ್ಣ ಹಸಿರು ನಿಶಾನೆ

By kannadanewsnow0929/01/2025 6:04 PM

ಯಾದಗಿರಿ: ಇಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ರೈಲು ಸಂಖ್ಯೆ 22692 ಹಜರತ್ ನಿಜಾಮುದ್ದೀನ್ – ಕೆಎಸ್ಆರ್ ಬೆಂಗಳೂರು ರಾಜಧಾನಿ ಎಕ್ಸ್ಪ್ರೆಸ್ ರೈಲಿಗೆ ಇಂದು  ಜನವರಿ 28, 2025 ರಂದು ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ರಿಮೋಟ್ ವಿಡಿಯೋ ಲಿಂಕ್ ಮೂಲಕ ಹಸಿರು ನಿಶಾನೆ ತೋರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ವಿ.ಸೋಮಣ್ಣ ಅವರು, ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕರ್ನಾಟಕ ರಾಜ್ಯವು ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಅಭಿವೃದ್ಧಿಯನ್ನು ಕಾಣುತ್ತಿದೆ. 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯಕ್ಕೆ ರೈಲ್ವೆ ಬಜೆಟ್ ಅನುದಾನ 7,560 ಕೋಟಿ ರೂ ಆಗಿದ್ದು. ಕಳೆದ ಕೆಲವು ವರ್ಷಗಳಲ್ಲಿ, ಕರ್ನಾಟಕದ ರೈಲ್ವೆ ಜಾಲವು ಹೊಸ ಮಾರ್ಗಗಳು, ವಿದ್ಯುದ್ದೀಕರಣ, ಸಾಮರ್ಥ್ಯ ವರ್ಧನೆ ಇತ್ಯಾದಿಗಳ ವಿಷಯದಲ್ಲಿ ಭಾರಿ ಅಭಿವೃದ್ಧಿಯನ್ನು ಕಂಡಿದೆ ಎಂದು ಹೇಳಿದರು.

ಯಾದಗಿರಿ ರೈಲು ನಿಲ್ದಾಣದಲ್ಲಿ ರಾಜಧಾನಿ ಎಕ್ಸ್‌ಪ್ರೆಸ್ ನಿಲುಗಡೆಯಿಂದ ಜನರ ಬಹುಕಾಲದ ಆಕಾಂಕ್ಷೆ ನನಸಾಗಿದೆ ಎಂದು ಹೇಳಿದರು. ಯಾದಗಿರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರು ದೇಶದ ವಿವಿಧ ಸ್ಥಳಗಳಿಗೆ ಪ್ರಯಾಣಿಸಲು ಮುಖ್ಯವಾಗಿ ರೈಲು ಸಾರಿಗೆಯನ್ನು ಅವಲಂಭಿಸಿದ್ದಾರೆ  ಹಾಗೂ ಹೆಚ್ಚಿನವರು ವಿವಿಧ ಉದ್ದೇಶಗಳಿಗಾಗಿ ಬೆಂಗಳೂರಿಗೆ ತೆರಳುತ್ತಾರೆ ಎಂದು ಉಲ್ಲೇಖಿಸಿದರು. ರಾಜಧಾನಿ ಎಕ್ಸ್‌ಪ್ರೆಸ್ ರೈಲು ಈ ಪ್ರದೇಶದ ಜನರಿಗೆ ದೆಹಲಿ ಮತ್ತು ಬೆಂಗಳೂರಿಗೆ ಪ್ರಯಾಣಿಸಲು ಅನುಕೂಲಕರ ಆಯ್ಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.

ಗೌರವಾನ್ವಿತ ಪ್ರಧಾನಮಂತ್ರಿ ಮತ್ತು ರೈಲ್ವೆ ಸಚಿವರ ಮಾರ್ಗದರ್ಶನದಲ್ಲಿ, ಈ ಪ್ರದೇಶದ ಮೂರು ಪ್ರಮುಖ ರೈಲು ನಿಲ್ದಾಣಗಳಾದ ಯಾದಗಿರಿ, ರಾಯಚೂರು ಮತ್ತು ಬೀದರ್ ನಿಲ್ದಾಣಗಳನ್ನು ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿಯಲ್ಲಿ ಪುನರಾಭಿರುದ್ಧಿ ಮಾಡಲಾಗುತ್ತಿದೆ ಎಂದು ಮಾನ್ಯ ಸಚಿವರು ಹೇಳಿದರು. ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು, ನಿಲ್ದಾಣದಲ್ಲಿ ಎಸ್ಕಲೇಟರ್‌ಗಳು, ಲಿಫ್ಟ್‌ಗಳು, ಪಾರ್ಕಿಂಗ್, ಶೌಚಾಲಯಗಳು, ವಿಶ್ರಾಂತಿ ಕೊಠಡಿಗಳು ಮತ್ತು ಪಾದಚಾರಿ ಮೇಲ್ಸೇತುವೆಗಳಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು. ಇದರೊಂದಿಗೆ, ಕಲ್ಬುರ್ಗಿ-ಎಸ್‌ಎಂವಿಟಿ ಬೆಂಗಳೂರು ನಡುವೆ ಚಲಿಸುವ ದೇಶೀಯವಾಗಿ ವಿನ್ಯಾಸಗೊಳಿಸಿದ ಅತ್ಯಾಧುನಿಕ ವಂದೇ ಭಾರತ್ ರೈಲಿಗೆ ಯಾದಗಿರಿ ನಿಲ್ದಾಣದಲ್ಲಿ ನಿಲುಗಡೆ ನೀಡಲಾಗಿದೆ ಎಂದು  ಹೇಳಿದರು.

ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ: 

  1. ರೈಲು ಸಂಖ್ಯೆ 22692 ಹಜರತ್ ನಿಜಾಮುದ್ದೀನ್-ಕೆಎಸ್ಆರ್ ಬೆಂಗಳೂರು ರಾಜಧಾನಿ ಎಕ್ಸ್ಪ್ರೆಸ್ ಪ್ರಯಾಣ ದಿನಾಂಕ 27.01.2025 ರಂದು ಪ್ರಾರಂಭವಾಗಿ (ಮರುದಿನ ಯಾದಗಿರಿ ರೈಲ್ವೆ ನಿಲ್ದಾಣವನ್ನು ತಲುಪುತ್ತದೆ / ನಿರ್ಗಮಿಸುತ್ತದೆ).
  2. ರೈಲು ಸಂಖ್ಯೆ 22691 ಕೆಎಸ್ಆರ್ ಬೆಂಗಳೂರು-ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್ಪ್ರೆಸ್ ಪ್ರಯಾಣ ದಿನಾಂಕ 28.01.2025 ರಂದು ಪ್ರಾರಂಭವಾಗಿ (ಮರುದಿನ ಯಾದಗಿರಿ ರೈಲ್ವೆ ನಿಲ್ದಾಣವನ್ನು ತಲುಪುತ್ತದೆ / ನಿರ್ಗಮಿಸುತ್ತದೆ).

ಸಮಯ

ರೈಲು ಸಂಖ್ಯೆ. 22691 ಕೆ ಎಸ್ ರ್  ಬೆಂಗಳೂರು-ಹಜರತ್ ನಿಜಾಮುದ್ದೀನ್  ರಾಜಧಾನಿ ಎಕ್ಸ್ಪ್ರೆಸ್ (ಪ್ರತಿದಿನ ) ನಿಲ್ದಾಣ ರೈಲು ಸಂಖ್ಯೆ. 22692 -ಹಜರತ್ ನಿಜಾಮುದ್ದೀನ್-ಕೆಎಸ್ ರ್  ಬೆಂಗಳೂರು  ರಾಜಧಾನಿ ಎಕ್ಸ್ಪ್ರೆಸ್ (ಪ್ರತಿದಿನ )
ಆಗಮನ ನಿರ್ಗಮನ ಆಗಮನ ನಿರ್ಗಮನ
02.23 02.25 ರಾಯಚೂರು 21.38 21.40
03.03 03.05 ಯಾದಗಿರಿ 20.38 20.40
03.59 04.00 ಸೇಡಂ 19.29 19.30

ರಾಯಚೂರಿನ ಮಾನ್ಯ ಸಂಸದರಾದ ಜಿ.ಕುಮಾರ್ ನಾಯಕ್ ಅವರು ವಿಡಿಯೋ ಲಿಂಕ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ಗುರುಮಠಕಲ್ ನ ವಿಧಾನಸಭೆ ಸದಸ್ಯರಾದ ಶರಣಗೌಡ ಕಂದಕೂರು, ಯಾದಗಿರಿಯ  ವಿಧಾನಸಭೆ ಸದಸ್ಯರಾದ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ಗುಂತಕಲ್ ವಿಭಾಗದ ಡಿ ಆರ್ ಎಮ್  ರಾಮಕೃಷ್ಣ, (ಉಸ್ತುವಾರಿ) ಮತ್ತು ಇತರ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.

BREAKING: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ ‘ಸಹಾಯವಾಣಿ ಸಂಖ್ಯೆ’ ಆರಂಭ

ದೆಹಲಿಯಲ್ಲಿ ಎಎಪಿ-ಕಾಂಗ್ರೆಸ್ ಚುನಾವಣೋತ್ತರ ಮೈತ್ರಿ ಸಾಧ್ಯತೆ : ಮೋದಿ ಎಚ್ಚರಿಕೆ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಶಾಲೆಯ ಕಟ್ಟಡದಿಂದ ಬಿದ್ದು, ವಿದ್ಯಾರ್ಥಿನಿಗೆ ಗಂಭೀರ ಗಾಯ : ಶಾಸಕ ಅಶ್ವಥ್ ನಾರಾಯಣ ಭೇಟಿ

18/06/2025 3:31 PM1 Min Read

BREAKING : ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ : ವಿದ್ಯುತ್ ಶಾಕ್ ನಿಂದ ವ್ಯಕ್ತಿ ಸಾವು!

18/06/2025 3:30 PM1 Min Read

ಜೂ.20ರಂದು ಆದಿಚುಂಚನಗಿರಿ ವಿವಿ ಬೆಂಗಳೂರು ಕ್ಯಾಂಪಸ್ ಉದ್ಘಾಟನೆ: ಉಪಕುಲಪತಿ ಡಾ.ಎಂ.ಎ.ಶೇಖರ್

18/06/2025 3:21 PM3 Mins Read
Recent News

BREAKING : 2026ರ ಮಹಿಳಾ ‘ಟಿ20 ವಿಶ್ವಕಪ್’ ವೇಳಾಪಟ್ಟಿ ಪ್ರಕಟ ; ಜೂನ್ 14ಕ್ಕೆ ಭಾರತ-ಪಾಕ್ ಮುಖಾಮುಖಿ

18/06/2025 3:36 PM

ಬೆಂಗಳೂರಲ್ಲಿ ಶಾಲೆಯ ಕಟ್ಟಡದಿಂದ ಬಿದ್ದು, ವಿದ್ಯಾರ್ಥಿನಿಗೆ ಗಂಭೀರ ಗಾಯ : ಶಾಸಕ ಅಶ್ವಥ್ ನಾರಾಯಣ ಭೇಟಿ

18/06/2025 3:31 PM

2026ರ ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟಿಸಿದ ಐಸಿಸಿ | Women’s T20 World Cup 2026

18/06/2025 3:31 PM

‘ಭಾರತ-ಪಾಕ್ ಯುದ್ಧ ನಿಲ್ಲಿಸುವಲ್ಲಿ ಅಮೆರಿಕದ ಪಾತ್ರವಿಲ್ಲ’ ; ಟ್ರಂಪ್ ಜೊತೆಗಿನ 35 ನಿಮಿಷಗಳ ಕರೆಯಲ್ಲಿ ‘ಪ್ರಧಾನಿ ಮೋದಿ’ ಹೇಳಿದ್ದೇನು?

18/06/2025 3:30 PM
State News
KARNATAKA

ಬೆಂಗಳೂರಲ್ಲಿ ಶಾಲೆಯ ಕಟ್ಟಡದಿಂದ ಬಿದ್ದು, ವಿದ್ಯಾರ್ಥಿನಿಗೆ ಗಂಭೀರ ಗಾಯ : ಶಾಸಕ ಅಶ್ವಥ್ ನಾರಾಯಣ ಭೇಟಿ

By kannadanewsnow0518/06/2025 3:31 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಘೋರ ಘಟನೆ ನಡೆದಿದ್ದು, ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ…

BREAKING : ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ : ವಿದ್ಯುತ್ ಶಾಕ್ ನಿಂದ ವ್ಯಕ್ತಿ ಸಾವು!

18/06/2025 3:30 PM

ಜೂ.20ರಂದು ಆದಿಚುಂಚನಗಿರಿ ವಿವಿ ಬೆಂಗಳೂರು ಕ್ಯಾಂಪಸ್ ಉದ್ಘಾಟನೆ: ಉಪಕುಲಪತಿ ಡಾ.ಎಂ.ಎ.ಶೇಖರ್

18/06/2025 3:21 PM

SHOCKIG : ಮೊಬೈಲ್ ನಲ್ಲಿತ್ತು 13,500 ಮಹಿಳೆಯರ ಅಶ್ಲೀಲ ವಿಡಿಯೋ, ಫೋಟೋ : ಮೋಸ್ಟ್ ವಾಂಟೆಡ್ ಕಾಮುಕ ಅರೆಸ್ಟ್

18/06/2025 3:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.