Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಮೆರಿಕ ಮಹತ್ವದ ಹೆಜ್ಜೆ ; ಮಾ.6ರಂದು ನಾಲ್ವರು ಗಗನಯಾತ್ರಿಗಳ ಸಹಿತ ‘ಚಂದ್ರಯಾನ’ಕ್ಕೆ ಸಜ್ಜು

20/02/2026 10:23 PM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

20/02/2026 9:39 PM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

20/02/2026 9:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕೇಂದ್ರ ಬಜೆಟ್’ ಬಗ್ಗೆ ವಿನಾಕಾರಣ ಟೀಕೆ ಸರಿಯಲ್ಲ: ಹೆಚ್.ಡಿ.ಕುಮಾರಸ್ವಾಮಿ
KARNATAKA

‘ಕೇಂದ್ರ ಬಜೆಟ್’ ಬಗ್ಗೆ ವಿನಾಕಾರಣ ಟೀಕೆ ಸರಿಯಲ್ಲ: ಹೆಚ್.ಡಿ.ಕುಮಾರಸ್ವಾಮಿ

By kannadanewsnow0924/02/2025 9:51 PM

ಮೈಸೂರು: ಕೇಂದ್ರ ಬಜೆಟ್ ಬಗ್ಗೆ ಟೀಕೆ ಸರಿಯಲ್ಲ. ವಿಶಾಲ ತಳಹದಿಯ, ದೂರದೃಷ್ಟಿಯ ಬಜೆಟ್ ಇದಾಗಿದೆ. ಬಡವರು, ಮಹಿಳೆಯರು, ರೈತರು ಹಾಗೂ ಯುವ ಜನರ ಶ್ರೇಯೋಭಿವೃದ್ಧಿಗೆ ಅತಿ ಹೆಚ್ಚು ಒತ್ತು ನೀಡಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದ ಸರ್ವರ ವಿಕಾಸ ಆಗುತ್ತಿದೆ. ಎಲ್ಲರಿಗೂ ಕೇಂದ್ರ ಸರ್ಕಾರದ ಯೋಜನೆಗಳು ಮುಟ್ಟುತ್ತಿವೆ ಎಂದು ಅವರು ಹೇಳಿದರು.

ಮೈಸೂರಿನಲ್ಲಿ ಸೋಮವಾರ ಕೇಂದ್ರ ಬಜೆಟ್ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿದ ಅವರು; ಮಧ್ಯಮ ವರ್ಗಕ್ಕೆ ತೆರಿಗೆಯ ಹೊರೆ ಇಳಿಸಲಾಗಿದೆ. ರೈತರ ಆರ್ಥಿಕ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಬಜೆಟ್ ನಲ್ಲಿ ಅನೇಕ ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗಿದೆ. ಯಾವ ಕಾರ್ಯಕ್ರಮವೂ ಘೋಷಣೆಯಾಗಿ ಉಳಿಯುವುದಿಲ್ಲ, ಎಲ್ಲವೂ ಜಾರಿಗೆ ಬರುತ್ತವೆ ಎಂದು ಕೇಂದ್ರ ಸಚಿವರು ಹೇಳಿದರು.

ರೈತರು, ಮಹಿಳೆಯರು, ಯುವಕರು, ಮಧ್ಯಮ ವರ್ಗದ ಜನರಿಗೆ ಅನುಕೂಲ ಮಾಡುವುದೇ ಈ ಬಜೆಟ್ ಆಶಯವಾಗಿದೆ. ಈ ಬಾರಿ ₹50 ಲಕ್ಷ ಕೋಟಿ ಆಯವ್ಯಯ ಮಂಡನೆ ಮಾಡಲಾಗಿದೆ. ₹11.20 ಲಕ್ಷ ಕೋಟಿ ಕ್ಯಾಪಿಟಲ್ ಎಕ್ಸ್‌ಪೆಂಡಿಚರ್ ಮಾಡುವ ಘೋಷಣೆ ಮಾಡಲಾಗಿದೆ. ಕೃಷಿ ವಲಯಕ್ಕೆ ₹1.72 ಲಕ್ಷ ಅನುದಾನ ಕೊಡಲಾಗಿದೆ. ಪ್ರಧಾನಮಂತ್ರಿ ಧನಧಾನ್ಯ ಯೋಜನೆಗೆ ಹಿಂದುಳಿದ ನೂರು‌ ಜಿಲ್ಕೆಗಳ ಆಯ್ಕೆ ಮಾಡಿಕೊಳ್ಳಲಾಗಿದೆ. ಮೀನುಗಾರಿಕೆ, ಹೈನುಗಾರಿಕೆ, ಚರ್ಮೋದ್ಯಮಕ್ಕೆ ಒತ್ತು ನೀಡಲಾಗಿದೆ. ಚರ್ಮೋದ್ಯಮದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಗುರಿ ಹೊಂದಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜಗತ್ತಿನ ಎಲ್ಲಾ ಪ್ರಮುಖ ಆರ್ಥಿಕತೆಗಳಲ್ಲಿಯೇ ಭಾರತದ ಆರ್ಥಿಕತೆ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಕಳೆದ 10 ವರ್ಷಗಳಲ್ಲಿ ನರೇಂದ್ರ ಮೋದಿ ಅವರ ಸರ್ಕಾರದ ಅಭಿವೃದ್ಧಿ ಟ್ರ್ಯಾಕ್ ರೆಕಾರ್ಡ್ ಮತ್ತು ರಚನಾತ್ಮಕ ಸುಧಾರಣೆಗಳು ಗಮನಾರ್ಹವಾಗಿ ಅಂತಾರಾಷ್ಟ್ರೀಯ ಗಮನ ಸೆಳೆದಿವೆ. ಮೋದಿ ಅವರ ಸರ್ಕಾರದ ಮೊದಲ 2 ಅವಧಿಯಲ್ಲಿನ ಪರಿವರ್ತನಾಶೀಲ ಕಾರ್ಯಕ್ರಮಗಳು ಅತ್ಯುತ್ತಮ. ಈ ಸರ್ಕಾರವು ದೃಢಸಂಕಲ್ಪದೊಂದಿಗೆ ಜನರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಬಡವರು, ಯುವಕರು, ರೈತರು ಮತ್ತು ಮಹಿಳೆಯರು ಬಜೆಟ್ ನ ಕೇಂದ್ರ ಬಿಂದುವಾಗಿದ್ದಾರೆ. ಇವರೆಲ್ಲರ ಶ್ರೇಯೋಭಿವೃದ್ಧಿಗೆ ಒತ್ತು ಕೊಡಲಾಗಿದೆ. ದುಡಿಯುವ ಜನರು, ಅದರಲ್ಲಿಯೂ ಮಧ್ಯಮ ವರ್ಗದ ಜನರಿಗೆ ಬಜೆಟ್ ಸ್ಪಂದಿಸಿದೆ. ₹12 ಲಕ್ಷದ ವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ಘೋಷಣೆ ಮಾಡಲಾಗಿದೆ. 2047ನೇ ವರ್ಷಕ್ಕೆ ವಿಕಸಿತ ಭಾರತ, ಅಂದರೆ ಅಭಿವೃದ್ಧಿ ಹೊಂದಿದ ಭಾರತ ಕನಸು ನಮಸು ಮಾಡಬೇಕು ಎನ್ನುವುದು ನಮ್ಮ ಪ್ರಧಾನಿಗಳ ಬಹುದೊಡ್ಡ ಗುರಿಯಾಗಿದೆ ಎಂದು ಅವರು ಪ್ರತಿಪಾದಿಸಿದರು.

ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ರಾಷ್ಟ್ರ ನಿರ್ಮಾಣದಲ್ಲಿ ಮಧ್ಯಮ ವರ್ಗದ ಮಹೋನ್ನತ ಶಕ್ತಿ ಮತ್ತು ಸಾಮರ್ಥ್ಯದಲ್ಲಿ ನಂಬಿಕೆ ಇಟ್ಟಿದೆ. ಈ ಕಾರಣಕ್ಕೆ ಅವರ ತೆರಿಗೆ ಹೊರೆಯನ್ನು ಕಡಿಮೆ ಮಾಡಿದೆ. 2014ರ ನಂತರ, ‘ತೆರಿಗೆ ರಹಿತ’ (Nil Tax) ಸ್ಲ್ಯಾಬ್ ಅನ್ನು ₹2.5 ಲಕ್ಷಕ್ಕೆ ಏರಿಸಲಾಯಿತು. ಅದನ್ನು 2019 ರಲ್ಲಿ ₹5 ಲಕ್ಷಕ್ಕೆ ಮತ್ತು 2023ರಲ್ಲಿ ₹7 ಲಕ್ಷಕ್ಕೆ ಹೆಚ್ಚಿಸಲಾಯಿತು. ಈ ಬಜೆಟ್‌ನಲ್ಲಿ ಸರ್ಕಾರವು ಹೊಸ ಆಡಳಿತದ ಅಡಿಯಲ್ಲಿ 12 ಲಕ್ಷ ಆದಾಯದವರೆಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದೆ. ಸಂಬಳ ಪಡೆಯುವ ವರ್ಗಕ್ಕೆ, 12.75 ಲಕ್ಷ ವಾರ್ಷಿಕ ಆದಾಯದವರೆಗೆ ಯಾವುದೇ ಆದಾಯ ತೆರಿಗೆ ಅನ್ವಯಿಸುವುದಿಲ್ಲ. ವೇತನ ವರ್ಗಕ್ಕೆ ಮೋದಿ ಸರ್ಕಾರ ನೀಡಿರುವ ಬಹುದೊಡ್ಡ ಕೊಡುಗೆ ಇದಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಕೇಂದ್ರ ಸರ್ಕಾರವು ‘ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆಯನ್ನು ಕೈಗೊಳ್ಳುತ್ತದೆ. ಈ ಯೋಜನೆಯು ಕಡಿಮೆ ಉತ್ಪಾದಕತೆ, ಮಧ್ಯಮ ಪ್ರಮಾಣದ ಬೆಳೆ ಮತ್ತು ಸರಾಸರಿಗಿಂತ ಕಡಿಮೆ ಸಾಲ ಸೌಲಭ್ಯ ದೊರೆತಿರುವ ದೇಶದ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ. 1.7 ಕೋಟಿ ರೈತರಿಗೆ ನೆರವಾಗಲಿದೆ. ಬೇಳೆಕಾಲುಗಳಲ್ಲಿ ಸ್ವಾವಲಂಬನೆ ಸಾಧಿಸಲು ಬಜೆಟ್ ಗಮನ ಕೊಟ್ಟಿದೆ. ತೊಗರಿ, ಉದ್ದಿನ ಬೇಳೆ ಮತ್ತು ಮಸೂರ್ (ಕೆಂಪು ತೊಗರಿ ಬೇಕೆ) ಮೇಲೆ ವಿಶೇಷ ಗಮನಹರಿಸುವುದರೊಂದಿಗೆ ಸರ್ಕಾರವು ಈಗ 6 ವರ್ಷಗಳ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟಿದೆ ಎಂದು ಕೇಂದ್ರ ಸಚಿವರು ಮಾಹಿತಿ ಹಂಚಿಕೊಂಡರು.

ಬೆಳೆಗಳ ಉತ್ಪಾದಕತೆಯನ್ನು ಸುಧಾರಿಸುವುದು, ದೇಶೀಯ ಬೇಳೆಕಾಳುಗಳ ಉತ್ಪಾದನೆ, ರೈತರಿಗೆ ಲಾಭದಾಯಕ ಬೆಲೆಗಳನ್ನು ಖಾತರಿಪಡಿಸುವುದು ಮತ್ತು ಆಯಾ ಪ್ರದೇಶಗಳ ಹವಾಮಾನಕ್ಕೆ ಪೂರಕವಾದ ಬೀಜಗಳ ಅಭಿವೃದ್ಧಿಯ ಮೇಲೆ ಗಮನ ಕೇಂದ್ರೀಕರಿಸುತ್ತದೆ ಎಂದ ಅವರು; ಕಿಸಾನ್ ಕ್ರೆಡಿಟ್ ಕಾರ್ಡ್‌ಗಳು (ಕೆಸಿಸಿ) 7.7 ಕೋಟಿ ರೈತರು, ಮೀನುಗಾರರು ಮತ್ತು ಹೈನುಗಾರರಿಗೆ ಅಲ್ಪಾವಧಿ ಸಾಲವನ್ನು ಒದಗಿಸುತ್ತವೆ. ಬದಲಾವಣೆ ಮಾಡಲಾದ ಬಡ್ಡಿ ಯೋಜನೆಯಡಿಯಲ್ಲಿ ಸಾಲಕ್ಕಾಗಿ ಈ ಸಾಲದ ಮಿತಿಯನ್ನು ₹3 ಲಕ್ಷದಿಂದ ₹5 ಲಕ್ಷಕ್ಕೆ ಹೆಚ್ಚಿಸಲಾಗುತ್ತದೆ ಎಂದು ವಿವರಣೆ ನೀಡಿದರು.q

ರಾಜ್ಯಗಳ ಸಹಭಾಗಿತ್ವದಲ್ಲಿ ಸಮಗ್ರ ಬಹು-ವಲಯಗಳ ಗ್ರಾಮೀಣ ಸಮೃದ್ಧಿ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಇದು ಕೌಶಲ್ಯ, ಹೂಡಿಕೆ, ತಂತ್ರಜ್ಞಾನ ಮತ್ತು ಗ್ರಾಮೀಣ ಆರ್ಥಿಕತೆಯನ್ನು ಉತ್ತೇಜಿಸುವ ಮೂಲಕ ಕೃಷಿಯಲ್ಲಿನ ಉದ್ಯೋಗ ಸಮಸ್ಯೆಯನ್ನು ಪರಿಹರಿಸುತ್ತದೆ. ಗ್ರಾಮಾಂತರ ಪ್ರದೇಶಗಳಲ್ಲಿ ಸಾಕಷ್ಟು ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವುದು ಹಾಗೂ ವಲಸೆಯನ್ನು ತಡೆಯುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

ಗಿಗ್ ಕಾರ್ಮಿಕರಿಗೆ ಗುರುತಿನ ಚೀಟಿಗಳು ಮತ್ತು ಪೋರ್ಟಲ್‌ನಲ್ಲಿ ಅವರ ನೋಂದಣಿಗಾಗಿ ಸರ್ಕಾರವು ವ್ಯವಸ್ಥೆ ಮಾಡುತ್ತದೆ. ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ ಗಿಗ್ ಕಾರ್ಮಿಕರಿಗೆ ಆರೋಗ್ಯ ಸೇವೆ ಒದಗಿಸಲಾಗುವುದು. ಸುಮಾರು 1 ಕೋಟಿ ಗಿಗ್ ಗಿಗ್ ಕಾರ್ಮಿಕರಿಗೆ ಸಹಾಯವಾಗುತ್ತದೆ ಎಂದು ಕೇಂದ್ರ ಸಚಿವರು ಹೇಳಿದರು.

ಮೈಸೂರು ಕೊಡಗು ಕ್ಷೇತ್ರದ ಲೋಕಸಭೆ ಸದಸ್ಯರಾದ ಯದುವೀರ ಚಾಮರಾಜ ಒಡೆಯರ್, ಮಾಜಿ ಸಚಿವರಾದ ಸಾ.ರಾ. ಮಹೇಶ್, ಸಿ.ಎಸ್. ಪುಟ್ಟರಾಜು, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ಮಾಜಿ ಶಾಸಕ ಅಶ್ವಿನ್ ಕುಮಾರ್, ಮಾಜಿ ಮೇಯರ್ ರವಿ ಕುಮಾರ್, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಮಹೇಶ್ ಸೇರಿದಂತೆ ಅನೇಕ ಗಣ್ಯರು ಮಾಧ್ಯಮಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಉದಯಗಿರಿ ಗಲಭೆಯ ಆರೋಪಿಗಳನ್ನು ಕಠಿಣವಾಗಿ ಶಿಕ್ಷಿಸಬೇಕು: HDK ಆಗ್ರಹ

ಸಿಎಂ ಅನುಕೂಲಕ್ಕೆ ತಕ್ಕಂತೆ ಲೋಕಾಯುಕ್ತ ವರದಿ: ಹೆಚ್.ಡಿ. ಕುಮಾರಸ್ವಾಮಿ ಟೀಕೆ

Share. Facebook Twitter LinkedIn WhatsApp Email

Related Posts

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

20/02/2026 8:43 PM1 Min Read

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM1 Min Read

KSOUನಿಂದ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

20/02/2026 8:34 PM1 Min Read
Recent News

BREAKING : ಅಮೆರಿಕ ಮಹತ್ವದ ಹೆಜ್ಜೆ ; ಮಾ.6ರಂದು ನಾಲ್ವರು ಗಗನಯಾತ್ರಿಗಳ ಸಹಿತ ‘ಚಂದ್ರಯಾನ’ಕ್ಕೆ ಸಜ್ಜು

20/02/2026 10:23 PM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

20/02/2026 9:39 PM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

20/02/2026 9:34 PM

ಪತ್ನಿ ಇಶಾನಿ ಜೋಹರ್ ಅವರಿಂದ ಬೇರ್ಪಡುವುದಾಗಿ ಭಾರತೀಯ ಕ್ರಿಕೆಟಿಗ ರಾಹುಲ್ ಚಾಹರ್ ಘೋಷಣೆ | Rahul Chahar

20/02/2026 8:51 PM
State News
KARNATAKA

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

By kannadanewsnow0920/02/2026 8:43 PM KARNATAKA 1 Min Read

ಬೆಂಗಳೂರು: ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-2ಎ ನಲ್ಲಿ ಮಡಿವಾಳ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ…

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM

KSOUನಿಂದ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

20/02/2026 8:34 PM

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

20/02/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.