ಉತ್ತರಪ್ರದೇಶ: ಬರೇಲಿಯಿಂದ ವೇಗವಾಗಿ ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಿಯಂತ್ರಣ ಕಳೆದುಕೊಂಡ ಬೈಕ್ ಬಿದಿ ಬದಿ ಇದ್ದ ಗೂಡಂಗಡಿಗೆ ಗುದ್ದಿದೆ. ಘಟನೆಯಲ್ಲಿ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿರುವ ಘಟನೆ ಬರೇಲಿ-ನೈನಿತಾಲ್ ಹೆದ್ದಾರಿಯಲ್ಲಿ ನಡೆದಿದೆ.
ಕಪ್ಪ ಕೊಡುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದ್ದು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಘಟನೆಯಲ್ಲಿ ಗಾಯಗೊಂಡ ಮೂವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ದೇಹತ್) ರಾಜ್ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ.
ಗೂಡಂಗಡಿ ಹೊರಗೆ ಕುಳಿತಿದ್ದ ಮೂವರು ಗ್ರಾಮಸ್ಥರಿಗೆ ಗಾಯಗಳಾಗಿದ್ದು, ಮತ್ತೋರ್ವ ಗ್ರಾಮದ ಕಮಲ್ ಸಿಂಗ್ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರಲ್ಲಿ ಒಬ್ಬರಾದ ಜಗನ್ (35) ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿವೆ. ಘರ್ಷಣೆ ಎಷ್ಟು ತೀವ್ರವಾಗಿದೆ ಎಂದರೆ ಕಾರಿನ ಮುಂಭಾಗದ ಭಾಗವು ಹೆಚ್ಚು ಹಾನಿಗೊಳಗಾಗಿದೆ ಎಂದು ಅಗರ್ವಾಲ್ ಹೇಳಿದರು.
ಎರಡೂ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
‘ರಾಹುಲ್ ಗಾಂಧಿ’ ಎಂಟ್ರಿ ವೇಳೆ ಮೊಳಕಾಲ್ಮೂರಲ್ಲಿ ‘ಪವರ್ ಕಟ್’ : ಕತ್ತಲಿನಲ್ಲೇ ರಾಗಾ ‘ಜೋಡೋ ಯಾತ್ರೆ’