ಬೆಂಗಳೂರು: ಇಂಡಿಯನ್ ಆಯಿಲ್ ಕಾರ್ಪೋರೇಶನ್ ಸಂಸ್ಥೆಯು  ನಾಗರೀಕ ನಿವೇಶನವನ್ನು ಹಂಚಿಕೆ ಮಾಡಲಾಗಿತ್ತು. ಆದ್ರೇ ಈ ನಿವೇಶನಗಳ ಮೇಲೆ ಭೂಗಳ್ಳರ ಕಣ್ಣಬಿದ್ದಿದ್ದು, ಬಳಕೆಗೆ ಅಡ್ಡಿ ಪಡಿಸುತ್ತಿದ್ದಾರೆ. ಇದಕ್ಕೆ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸಪೋರ್ಟ್ ಮಾಡುತ್ತಿದ್ದಾರೆ. ಅಂತವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. IOCL ನಿವೇಶನಗಳನ್ನು ಮುಕ್ತವಾಗಿ ಉಪಯೋಗಿಸಿಕೊಳ್ಳಲು ಅನುವು ಮಾಡಿಕೊಡುವಂತೆ ಸರ್ಕಾರ ನಿರ್ದೇಶ ನೀಡಬೇಕು ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಒತ್ತಾಯಿಸಿದ್ದಾರೆ.

ತಂಗಿ ತಂಗಿ ಎನುತ್ತಲೇ…. ಹಿಂದೂ ಹುಡುಗಿ ಪಟಾಯಿಸಿ ಎಸ್ಕೇಪ್‌ ಆದ ಮುಸ್ಲಿಂ ಹುಡುಗ

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು,  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಗೆ   ನೊಂದಾಯಿತ ದಾಖಲೆ ಸಂಖ್ಯೆ.BDA-1-05288-2019-20, CD No. BDAD458 ರ ಪ್ರಕಾರ 04-11-19 ರಂದು IOCL ಗೆ ಲೀಸ್ ಮೊತ್ತಕ್ಕೆ BDA 30 ವರ್ಷಗಳ ಅವಧಿಗೆ ಮೇಲ್ಕಂಡ 12/1 ನಂಬರಿನ  CA ಸೈಟ್ ಅನ್ನು ಗುತ್ತಿಗೆ ನೀಡಿದೆ. 07-11-2019 ರ ಸ್ವಾಧೀನ ಪತ್ರದ ಮೂಲಕ  ಸ್ವಾಧೀನಕ್ಕೆ ನೀಡಿದೆ. ಸದರಿ ನಿವೇಶನದಲ್ಲಿ  ಪೆಟ್ರೋಲಿಯಂ ಸಂಗ್ರಹಣೆ, ಅನುಮೋದನೆಯಂತಹ ಎಲ್ಲಾ ಅಗತ್ಯ ಅನುಮತಿಗಳು, ಸ್ಫೋಟಕಗಳ ಉಪ ನಿಯಂತ್ರಕರಿಂದ ಅನುಮತಿ  ಪತ್ರ, ಕಟ್ಟಡ ಮಂಜೂರಾತಿ ಯೋಜನೆ  ಇತ್ಯಾದಿಗಳನ್ನು ಪಡೆದು IOCL ಅಭಿವೃದ್ಧಿ ಕಾರ್ಯವನ್ನು ಪ್ರಾರಂಭಿಸಿದೆ. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಸಂಸ್ಥೆಗೆ ಹಂಚಿಕೆ ಮಾಡಿರುವ ಸಿಎ ನಿವೇಶನವನ್ನು ಯಾವುದೇ ವ್ಯಾಜ್ಯ ಅಥವಾ ಅಡೆತಡೆಗಳಿಲ್ಲದೆ ನೀಡಬೇಕು. ಸರ್ಕಾರದ ಯೋಜನೆಗಳಿಗೆ ಅಡ್ಡಿಪಡಿಸುವ ಭೂಗಳ್ಳರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಸರ್ಕಾರೀ ಸ್ವತ್ತುಗಳನ್ನು ಕಬಳಿಸುವ ಭೂಗತ ಚಟುವಟಿಕೆಗಳು ವ್ಯವಸ್ಥಿತವಾಗಿ ನಡೆಯುತ್ತಿದ್ದು, ಇದರಲ್ಲಿ ಸರ್ಕಾರೀ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ, ಅದರ ಅವಶ್ಯಕತೆಯೂ ನನಗಿಲ್ಲ – ಸಚಿವ ವಿ.ಸೋವಣ್ಣ

BDA ಹಂಚಿಕೆ ಮಾಡಿರುವ ನಾಗರೀಕ  ನಿವೇಶನದಲ್ಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರೀ ಸ್ವತ್ತನ್ನು ಕಬಳಿಸುವ ವ್ಯವಸ್ಥಿತ ಹುನ್ನಾರ ಬೆಂಗಳೂರಿನಲ್ಲಿ ನಡೆಯುತ್ತಿದೆ. IOCLಗೆ ಹಂಚಿಕೆ ಆಗಿರುವ ಮೇಲಿನ ನಿವೇಶನವು ಕೋಟ್ಯಂತರ ರೂಪಾಯಿಗಳ ಬೆಲೆಬಾಳುತ್ತಿದ್ದು, ಅದನ್ನು ಕಬಳಿಸಲು ಮಾಜಿ ಕಾರ್ಪೊರೇಟರ್ ಗಳು ಮತ್ತು ಕೆಲವು ಭೂಗಳ್ಳರು ದಾಖಲೆಗಳನ್ನು ಸೃಷ್ಟಿ ಮಾಡಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಂಸ್ಥೆಗೆ ತಡೆಯೊಡ್ಡಿ ಅಲ್ಲಿನ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ. 28-07-2022ರಲ್ಲಿ ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಸದರಿ ನಾಗರೀಕ ನಿವೇಶನದ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಸೂಕ್ತ ರಕ್ಷಣೆ ನೀಡಲು ಪತ್ರ ಬರೆದಿರುತ್ತೇನೆ. ಮಾನ್ಯ ಮುಖ್ಯಮಂತ್ರಿಗಳು ನನ್ನ ಪತ್ರದ ಮೇಲೆ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು  ಸೂಚನೆ ನೀಡಿರುತ್ತಾರೆ. ಆದರೆ ನಗರಾಭಿವೃದ್ಧಿ ಇಲಾಖೆಯ ಕೆಲವು ಅಧಿಕಾರಿಗಳು ಈ ದಂದೆಯಲ್ಲಿ ಭಾಗಿಯಾಗಿರುವುದರಿಂದ IOCL ಸಂಸ್ಥೆಗೆ ಯಾವುದೇ ಸಹಕಾರವನ್ನು ನೀಡುತ್ತಿಲ್ಲ. ನಗರಾಭಿವೃದ್ಧಿ ಇಲಾಖೆಯ ಶಾಮೀಲು ಅಧಿಕಾರಿಗಳನ್ನು ತನಿಖೆ ಮೂಲಕ ದಂಡಿಸದಿದ್ದರೆ ಬೆಂಗಳೂರಿನ ಭೂಗಳ್ಳರ ಕ್ರಮವನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕರ್ನಾಟಕದ ಗೌರವಾನ್ವಿತ ಉಚ್ಚ ನ್ಯಾಯಾಲಯದ ನಿರ್ದೇಶನದಂತೆ, ಸರ್ವೇ ಇಲಾಖೆಯ  ಎಡಿಎಲ್‌ಆರ್ ಮತ್ತು  ಬಿಡಿಎ ಸರ್ವೇಯರ್‌ಗಳು ಜಂಟಿ ಸಮೀಕ್ಷೆ ಮಾಡಿ  ಐಒಸಿಎಲ್ ಗುತ್ತಿಗೆ ಪಡೆದ ಸಿಎ ಸೈಟ್‌ಗೆ ಕ್ಲೀನ್ ಚಿಟ್ ನೀಡಿದೆ . ಆದರೂ ಭೂಗಳ್ಳರು ಐಒಸಿಎಲ್ ಸಂಸ್ಥೆಯು ಸದರಿ ನಿವೇಶನದಲ್ಲಿ ಕೆಲಸ ಮಾಡಲು ಅಡ್ಡಿಪಡಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

BREAKING NEWS: ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಜನರು, ಶಾಲಾ ವಿದ್ಯಾರ್ಥಿಗಳು

IOCL ಇಲ್ಲಿ  ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದೆ. ಕಾರ್ಯಾಚರಣೆಯ ವೆಚ್ಚ, ಭೂಗತ ಸಂಗ್ರಹಣೆ / ಟ್ಯಾಂಕ್‌ನಲ್ಲಿನ ಡೀಸೆಲ್, ವೇಳಾಪಟ್ಟಿ ಆಸ್ತಿ, ಸಂಬಳ ಇತ್ಯಾದಿ ಸೇರಿದಂತೆ ಘಟಕಕ್ಕೆ ಭಾರಿ ಮೊತ್ತವನ್ನು ಹೂಡಿಕೆ ಮಾಡಿದೆ.   ಅಧಿಕಾರಿಗಳ ನಿಷ್ಕ್ರಿಯತೆಯಿಂದಾಗಿ ನಾಗರಿಕ ಸೌಲಭ್ಯದ ನಿವೇಶನ ನೀಡುವ ಸಂಪೂರ್ಣ ಉದ್ದೇಶ ಮತ್ತು ಕಾರ್ಯ  ವಿಫಲವಾಗಿದೆ.  ಅನೇಕ ಉದ್ಯೋಗಿಗಳು ಸಂಸ್ಥೆಯನ್ನು  ಅವಲಂಬಿಸಿದ್ದಾರೆ.  ಭೂಗಳ್ಳರು  ಅಕ್ರಮವಾಗಿ ಅತಿಕ್ರಮಿಸಲು ನಿರಂತರ ಅಡಚಣೆಯನ್ನು ಉಂಟುಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಇಂಡಿಯನ್ ಆಯಿಲ್ ಕಾರ್ಪೋರೇಶನ್ ಸಂಸ್ಥೆಯು  ನಾಗರೀಕ ನಿವೇಶನವನ್ನು ಮುಕ್ತವಾಗಿ ಉಪಯೋಗಿಸಿಕೊಳ್ಳಲು ಅನುವು ಮಾಡಿಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕಾಗಿ ಕೋರುತ್ತೇನೆ. 2019ರಲ್ಲಿ ಸಂಸ್ಥೆಗೆ ನಿವೇಶನ ಹಂಚಿಕೆಯಾಗಿದ್ದು, ಸದರಿ ಸಂಸ್ಥೆಯು ನಿವೇಶನ ಉಪಯೋಗಿಸಿಕೊಳ್ಳಲು ಅಡ್ಡಿಪಡಿಸಿರುವ ಭೂಗಳ್ಳರ ಮೇಲೆ ಮತ್ತು ಭೂಗಳ್ಳರಿಗೆ ಪರೋಕ್ಷವಾಗಿ ಸಹಕಾರ ನೀಡಿರುವ ನಗರಾಭಿವೃದ್ಧಿ ಇಲಾಖೆಯ ಶಾಮೀಲಾಗಿರುವ ಅಧಿಕಾರಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಬೆಂಗಳೂರು ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಲು ಕೋರಿದ್ದಾರೆ.

Share.
Exit mobile version