Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

08/08/2025 7:27 PM

ಬಿಜೆಪಿ ಮತಪ್ರಮಾಣ ಏರಿಕೆಗೆ ರಾಹುಲ್‍ಗೆ ಅಸಮಾಧಾನ ಯಾಕೆ: ಅರವಿಂದ ಲಿಂಬಾವಳಿ ಪ್ರಶ್ನೆ

08/08/2025 7:26 PM

ವಿಪಕ್ಷದ ನಾಯಕರಿಗೆ ಕಿರುಕುಳ ನೀಡಲು ಪೊಲೀಸರ ಬಳಕೆ, ಸಂಸದ ಡಾ.ಕೆ.ಸುಧಾಕರ್‌ ಅವರನ್ನು ಗುರಿಯಾಗಿಸಿ ಎಫ್‌ಐಆರ್:‌ ಆರ್‌.ಅಶೋಕ

08/08/2025 7:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಪಕ್ಷದ ನಾಯಕರಿಗೆ ಕಿರುಕುಳ ನೀಡಲು ಪೊಲೀಸರ ಬಳಕೆ, ಸಂಸದ ಡಾ.ಕೆ.ಸುಧಾಕರ್‌ ಅವರನ್ನು ಗುರಿಯಾಗಿಸಿ ಎಫ್‌ಐಆರ್:‌ ಆರ್‌.ಅಶೋಕ
KARNATAKA

ವಿಪಕ್ಷದ ನಾಯಕರಿಗೆ ಕಿರುಕುಳ ನೀಡಲು ಪೊಲೀಸರ ಬಳಕೆ, ಸಂಸದ ಡಾ.ಕೆ.ಸುಧಾಕರ್‌ ಅವರನ್ನು ಗುರಿಯಾಗಿಸಿ ಎಫ್‌ಐಆರ್:‌ ಆರ್‌.ಅಶೋಕ

By kannadanewsnow0908/08/2025 7:22 PM

ಬೆಂಗಳೂರು: ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ನೀಡಲು ಸರ್ಕಾರ ಪೊಲೀಸರನ್ನು ಬಳಸುತ್ತಿದೆ. ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ, ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್‌ ಅವರ ಪಾತ್ರ ಇಲ್ಲದಿದ್ದರೂ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಡಾ.ಕೆ.ಸುಧಾಕರ್‌ ವಿರುದ್ಧ ಎಫ್‌ಐಆರ್‌ ಮಾಡಿ ಎ1 ಆರೋಪಿ ಮಾಡಿದ್ದಾರೆ. ಆತ್ಮಹತ್ಯೆಗೆ ಅವರೇ ಸಂಪೂರ್ಣ ಒತ್ತಡ ಹೇರಿದರೆ ಮಾತ್ರ ಈ ರೀತಿ ಎಫ್‌ಐಆರ್‌ ಮಾಡಬೇಕಾಗುತ್ತದೆ. ಆದರೆ ಸುಧಾಕರ್‌ ಚಾಲಕ ಬಾಬು ಅವರ ಜೊತೆ ಆಪ್ತ ಸಂಬಂಧವೇನೂ ಇಲ್ಲ. ಅಲ್ಲದೆ, ಈ ಪ್ರಕರಣದಲ್ಲಿ ಜಾತಿ ನಿಂದನೆಯ ಆರೋಪ ಬರುವುದೇ ಇಲ್ಲ. ಸುಧಾಕರ್‌ ಆ ವ್ಯಕ್ತಿಯನ್ನು ಎದುರಿಗೆ ನಿಲ್ಲಿಸಿಕೊಂಡು ನಿಂದಿಸಿಲ್ಲ, ಅಥವಾ ಸಂದೇಶ ಕಳುಹಿಸಿಲ್ಲ. ಕಾಂಗ್ರೆಸ್‌ ಸರ್ಕಾರ ವಿಪಕ್ಷಗಳ ನಾಯಕರನ್ನು ಗುರಿಯಾಗಿಸುವುದು ಸ್ಪಷ್ಟವಾಗಿದೆ ಎಂದರು.

ಈ ಹಿಂದೆ ಶಾಸಕ ಬೈರತಿ ಬಸವರಾಜ್‌ ಅವರ ಮೇಲೂ ಇದೇ ರೀತಿ ಕ್ರಮ ಕೈಗೊಳ್ಳಲಾಗಿದೆ. ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಡೆತ್‌ನೋಟ್‌ ಬರೆದಿಟ್ಟು ಸತ್ತಿದ್ದರು. ಆದರೆ ಕಾಂಗ್ರೆಸ್‌ ಶಾಸಕರಾದ ಎ.ಎಸ್‌.ಪೊನ್ನಣ್ಣ ಹಾಗೂ ಮಂಥರ್‌ ಗೌಡ ಅವರ ಹೆಸರು ಎಫ್‌ಐಆರ್‌ನಲ್ಲಿ ಬರಲೇ ಇಲ್ಲ. ಪೊಲೀಸರು ಎಲ್ಲರಿಗೂ ಸಮಾನವಾಗಿ ಕೆಲಸ ಮಾಡಬೇಕು ಎಂದರು.

ಚಾಲಕ ಬಾಬು ಬೇರೆ ಬೇರೆ ಕಾರಣಗಳಿಂದ ಸಾಲ ಮಾಡಿದ್ದರು. ಅವರಿಗೆ ಕೆಲವರು ವಂಚನೆ ಮಾಡಿದ್ದರು. ಆದರೆ ಇದರಲ್ಲಿ ಡಾ.ಕೆ.ಸುಧಾಕರ್‌ ಪಾತ್ರವೇನು ಎಂಬುದು ಸ್ಪಷ್ಟವಾಗಿಲ್ಲ. ವಿರೋಧ ಪಕ್ಷದವರಿಗೆ ಕಿರುಕುಳ ಕೊಡಲು ಸರ್ಕಾರ ಹೀಗೆ ಮಾಡುತ್ತಿದೆ. ಈ ಪ್ರಕರಣದಲ್ಲಿ ಡೆತ್‌ನೋಟ್‌ ಮುಂಚಿತವಾಗಿಯೇ ಸಿಕ್ಕರೂ ಅದನ್ನು ಪೊಲೀಸರಿಗೆ ತಿಳಿಸಿಲ್ಲ. ಚಾಲಕ ಬಾಬು ಅವರ ಕುಟುಂಬದವರು ಡಾ.ಕೆ.ಸುಧಾಕರ್‌ ಹೆಸರು ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದ್ದರೂ, ಅವರನ್ನು ಎ1 ಆರೋಪಿ ಮಾಡಿದ್ದಾರೆ ಎಂದು ದೂರಿದರು.

ಬಿಜೆಪಿ ಟಾರ್ಗೆಟ್‌

ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಶಾಸಕರಾದ ಮುನಿರತ್ನ, ಸಿ.ಟಿ.ರವಿ, ರವಿಕುಮಾರ್‌ ಮೊದಲಾದ ಬಿಜೆಪಿ ನಾಯಕರನ್ನು ಕಾಂಗ್ರೆಸ್‌ ಟಾರ್ಗೆಟ್‌ ಮಾಡಿದೆ. ಮಂಜುನಾಥ್‌ ಹಾಗೂ ನಾಗೇಶ್‌ ಹಣ ಪಡೆದು ಮೋಸ ಮಾಡಿದ್ದಾರೆ ಎಂದು ಚಾಲಕ ಬಾಬು ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾರೆ. ಹಾಗೆಯೇ ಆನ್‌ಲೈನ್‌ ಗೇಮ್‌ನಿಂದಲೂ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಇಲ್ಲಿ ಎಲ್ಲೂ ಸಂಸದ ಡಾ.ಕೆ.ಸುಧಾಕರ್‌ ಅವರ ಬಗ್ಗೆ ಆರೋಪ ಮಾಡಿಲ್ಲ. ನಮ್ಮ ಬಳಿ ಯಾರೇ ಬಂದರೂ ಸಹಾಯ ಮಾಡುತ್ತೇವೆ. ಆದರೆ ಹಾಗೆ ಸಹಾಯ ಕೇಳಿ ಹೋದವರು ಸುಸೈಡ್‌ ಮಾಡಿಕೊಂಡರೆ ಅದಕ್ಕೆ ನಾವೇ ಕಾರಣರಾಗುವುದಿಲ್ಲ ಎಂದರು.

ಈ ಹಿಂದೆ ಕೊಡಗು ಶಾಸಕರಾದ ಮಂಥರ್‌ ಗೌಡ ಹಾಗೂ ಎ.ಎಸ್‌.ಪೊನ್ನಣ್ಣ, ಸಚಿವ ಪ್ರಿಯಾಂಕ್‌ ಖರ್ಗೆ ಹೆಸರುಗಳು ಆತ್ಮಹತ್ಯೆ ಪ್ರಕರಣದಲ್ಲಿ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಪ್ರಬಲವಾದ ಸಾಕ್ಷ್ಯಾಧಾರಗಳೂ ಇತ್ತು. ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಅನೇಕ ಬಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಭೇಟಿ ಮಾಡಿದ್ದರು. ಸಚಿನ್‌ ಸಚಿವರ ಜೊತೆಗೆ ಮಾತಾಡಿದ್ದರು. ಅಷ್ಟೆಲ್ಲ ಸಾಕ್ಷಿಗಳಿದ್ದರೂ ಸಚಿವರ ವಿರುದ್ಧ ಪೊಲೀಸರು ಕ್ರಮ ವಹಿಸಲಿಲ್ಲ ಎಂದರು.

ಚಾಲಕನಿಗೆ ಕೆಲಸ ಕೊಡಿಸಲು ಸಂಸದ ಡಾ.ಕೆ.ಸುಧಾಕರ್‌ಗೆ ಅಧಿಕಾರವಿಲ್ಲ. ಅವರ ವಿರುದ್ಧ ವಿನಾಕಾರಣ ಸಂಚು ಮಾಡಲಾಗಿದೆ. ಆದ್ದರಿಂದ ಈ ಎಫ್‌ಐಆರ್‌ ನಿಂದ ಹೆಸರು ಕೈ ಬಿಡಬೇಕು. ಇಲ್ಲವಾದರೆ ಕೋರ್ಟ್‌ನಲ್ಲಿ ನಮಗೆ ನ್ಯಾಯ ದೊರೆತು ಸರ್ಕಾರಕ್ಕೆ ಮುಖಭಂಗವಾಗುತ್ತದೆ ಎಂದರು.

ಜಾತಿ ನಿಂದನೆ ಪ್ರಕರಣದಲ್ಲಿ ವ್ಯಕ್ತಿಗೆ ಸಾರ್ವಜನಿಕ ಸ್ಥಳದಲ್ಲಿ ನಿಂದಿಸಿದ ಉದಾಹರಣೆ ಇರಬೇಕಾಗುತ್ತದೆ. ಅದಕ್ಕೆ ಬೇರೆಯವರ ಸಾಕ್ಷಿ ಇರಬೇಕು. ಈ ಪ್ರಕರಣದಲ್ಲಿ ಇಂತಹ ನಿದರ್ಶನಗಳೇ ಇಲ್ಲವೆಂದ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲಿಸುವುದು ತಪ್ಪು. ಸರ್ಕಾರಕ್ಕೆ ಈ ಮಾಹಿತಿ ಇಲ್ಲವೇ? ಕಾಂಗ್ರೆಸ್‌ ಸರ್ಕಾರ ತಂತ್ರಗಾರಿಕೆಯ ಮೂಲಕ ಬಿಜೆಪಿ ನಾಯಕರನ್ನು ಟಾರ್ಗೆಟ್‌ ಮಾಡುತ್ತಿದೆ ಎಂದರು.

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

08/08/2025 7:27 PM1 Min Read

ಬಿಜೆಪಿ ಮತಪ್ರಮಾಣ ಏರಿಕೆಗೆ ರಾಹುಲ್‍ಗೆ ಅಸಮಾಧಾನ ಯಾಕೆ: ಅರವಿಂದ ಲಿಂಬಾವಳಿ ಪ್ರಶ್ನೆ

08/08/2025 7:26 PM4 Mins Read
vidhana soudha

BIGG NEWS: ಪದವಿ ಪೂರ್ವಕಾರ್ಯಕ್ರಮದಲ್ಲಿ ‘ಲೈಂಗಿಕ ಶಿಕ್ಷಣ’ ಪರಿಚಯಕ್ಕೆ ರಾಜ್ಯ ನೀತಿ ಶಿಕ್ಷಣ ಆಯೋಗ ಶಿಫಾರಸ್ಸು…!

08/08/2025 7:06 PM8 Mins Read
Recent News

ಬೆಂಗಳೂರಲ್ಲಿ ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

08/08/2025 7:27 PM

ಬಿಜೆಪಿ ಮತಪ್ರಮಾಣ ಏರಿಕೆಗೆ ರಾಹುಲ್‍ಗೆ ಅಸಮಾಧಾನ ಯಾಕೆ: ಅರವಿಂದ ಲಿಂಬಾವಳಿ ಪ್ರಶ್ನೆ

08/08/2025 7:26 PM

ವಿಪಕ್ಷದ ನಾಯಕರಿಗೆ ಕಿರುಕುಳ ನೀಡಲು ಪೊಲೀಸರ ಬಳಕೆ, ಸಂಸದ ಡಾ.ಕೆ.ಸುಧಾಕರ್‌ ಅವರನ್ನು ಗುರಿಯಾಗಿಸಿ ಎಫ್‌ಐಆರ್:‌ ಆರ್‌.ಅಶೋಕ

08/08/2025 7:22 PM

ಪೋಸ್ಟ್ ಆಫೀಸ್ ಅದ್ಭುತ ಯೋಜನೆ ; 12,500 ರೂ. ಠೇವಣಿ ಇಟ್ಟರೆ 70 ಲಕ್ಷ ರೂ. ಪಡೆಯ್ಬೋದು, ಹೇಗೆ ಗೊತ್ತಾ?

08/08/2025 7:18 PM
State News
KARNATAKA

ಬೆಂಗಳೂರಲ್ಲಿ ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

By kannadanewsnow0908/08/2025 7:27 PM KARNATAKA 1 Min Read

ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಚುನಾವಣಾ ಅಕ್ರಮ ಸಂಬಂಧಿತ ಹೇಳಿಕೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಇಂದು ಪಕ್ಷದ ರಾಜ್ಯ…

ಬಿಜೆಪಿ ಮತಪ್ರಮಾಣ ಏರಿಕೆಗೆ ರಾಹುಲ್‍ಗೆ ಅಸಮಾಧಾನ ಯಾಕೆ: ಅರವಿಂದ ಲಿಂಬಾವಳಿ ಪ್ರಶ್ನೆ

08/08/2025 7:26 PM

ವಿಪಕ್ಷದ ನಾಯಕರಿಗೆ ಕಿರುಕುಳ ನೀಡಲು ಪೊಲೀಸರ ಬಳಕೆ, ಸಂಸದ ಡಾ.ಕೆ.ಸುಧಾಕರ್‌ ಅವರನ್ನು ಗುರಿಯಾಗಿಸಿ ಎಫ್‌ಐಆರ್:‌ ಆರ್‌.ಅಶೋಕ

08/08/2025 7:22 PM
vidhana soudha

BIGG NEWS: ಪದವಿ ಪೂರ್ವಕಾರ್ಯಕ್ರಮದಲ್ಲಿ ‘ಲೈಂಗಿಕ ಶಿಕ್ಷಣ’ ಪರಿಚಯಕ್ಕೆ ರಾಜ್ಯ ನೀತಿ ಶಿಕ್ಷಣ ಆಯೋಗ ಶಿಫಾರಸ್ಸು…!

08/08/2025 7:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.